Fri,Mar31,2023
ಕನ್ನಡ / English

ನಾನು ಯಾವತ್ತೂ ಜಾತಿ ರಾಜಕಾರಣ ಮಾಡಿಲ್ಲ, ಯಾವುದೇ ಸಮುದಾಯವನ್ನು ಅವಮಾನಿಸಿಲ್ಲ | JANATA NEWS

07 Feb 2023
568

ಬೆಂಗಳೂರು : ನಾನು ಯಾವತ್ತೂ ಜಾತಿ ರಾಜಕಾರಣ ಮಾಡಿಲ್ಲ. ಸಾರ್ವಜನಿಕರಿಂದ ಅಹವಾಲು ಕೇಳುವಾಗಲೂ ಜಾತಿ ಕೇಳಿಲ್ಲ. ನಾನು ಯಾವತ್ತೂ ಜಾತಿ ರಾಜಕಾರಣಕ್ಕೆ ಪ್ರಾಶಸ್ತ್ಯವನ್ನು ನೀಡಿಲ್ಲ. ಯಾವುದೇ ಸಮುದಾಯಕ್ಕೂ ನಾನು ಅವಮಾನ ಮಾಡಿಲ್ಲ ಎಂಬುದಾಗಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಸ್ಪಷ್ಟ ಪಡಿಸಿದ್ದಾರೆ.

ಬಿಜೆಪಿ ನಾಯಕರ ಟೀಕೆಯನ್ನು ನಾನು ಗಮನಿಸಿದ್ದೇನೆ. ನಾನು ಸಿಟಿ ರವಿ ವಿಚಾರಕ್ಕೆ ಹೋಗಿಲ್ಲ, ಆದರೂ ನನ್ನ ಬಗ್ಗೆ ಟೀಕೆ ಮಾಡ್ತಾರೆ. ಸಿಟಿ ರವಿ ಇತಿಹಾಸ ಏನು ಅಂತ ರಾಜ್ಯದ ಜನರಿಗೆ ಗೊತ್ತಿದೆ ಎಂದರು.

ನಾನು ಯಾವತ್ತೂ ಜಾತಿ ರಾಜಕಾರಣಕ್ಕೆ ಪ್ರಾಶಸ್ತ್ಯ ನೀಡಿದನವಲ್ಲ. ಯಾವುದೇ ಸಮುದಾಯಕ್ಕೂ ನಾನು ಅವಮಾನ ಮಾಡಿಲ್ಲ. ಈ ಬಗ್ಗೆ ಈಗಾಗಲೇ ನಾನು ಸ್ಪಷ್ಟವಾಗಿ ಹೇಳಿದ್ದೇನೆ ಎಂದರು.

ಬ್ರಾಹ್ಮಣ ಮಹಾಸಭಾಕ್ಕೆ ನಾನು ಮನವಿ ಮಾಡುತ್ತೇನೆ. ಬ್ರಾಹ್ಮಣ ಸಮುದಾಯದ ವಿರುದ್ಧ ನಾನು ಹೇಳಿಕೆ ಕೊಟ್ಟಿಲ್ಲ. ಬ್ರಾಹ್ಮಣ ಸಮಾಜಕ್ಕೆ ಅವಹೇಳನ ಮಾಡಿಲ್ಲ ಎಂದರು. ನಾನು ಸಿಎಂ ಆಗಿದ್ದಾಗಲೇ ಬ್ರಾಹ್ಮಣ ಮಹಾಸಭಾಗೆ ಬನಶಂಕರಿ ಬಳಿ ಜಾಗ ಕೊಟ್ಟಿರುವುದಾಗಿದೆ. ಎರಡನೇ ಬಾರಿ ಸಿಎಂ ಆಗಿದ್ದಾಗ ಬ್ರಾಹ್ಮಣ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಿರುವುದು. ಯಾವುದೇ ಸಮಾಜದಿಂದಾದರೂ ಸಿಎಂ ಆಗಲಿ. ಅದಕ್ಕೆ ನನ್ನ ವಿರೋಧ ಇಲ್ಲ. ನಾನು ಸಹ ಇದಕ್ಕೆ ಬೆಂಬಲ ಕೊಡುತ್ತೇನೆ ಎಂದು ಸ್ಪಷ್ಟನೆ ನೀಡಿದರು.

ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಪಠ್ಯ ಪುಸ್ತಕ ತಿರುಚಿದರು. ಟಿಪ್ಪು ಬಗ್ಗೆ ಪ್ರಸ್ತಾಪ ಮಾಡಿದರು. ಕಲುಷಿತ ವಾತಾವರಣ ನಿರ್ಮಾಣ ಮಾಡಿದರು. ಆ ಕಾರಣಕ್ಕಾಗಿ ನಾನು ಕೆಲ ವ್ಯಕ್ತಿಗಳ ಬಗ್ಗೆ ಎಚ್ಚರಿಕೆಯಿಂದ ಇರಿ ಅಂತ ಹೇಳಿದೆ. ಶೃಂಗೇರಿ ಚಂದ್ರಮೌಳೇಶ್ವರ ದೇವಾಲಯ ಒಡೆದವರು ಯಾರು..?, ಗಾಂಧೀಜಿ ಕೊಂದವರು ಯಾರು..?. ಪೇಶ್ವೆ ವಂಶದವರು ಅಂತ ಹೇಳಿದೆ. ಇಂತಹವರನ್ನು ಸಿಎಂ ಮಾಡುವ ಹುನ್ನಾರ ನಡೆದಿದೆ ಅಂತ ಹೇಳಿದೆ. ನಮ್ಮ ಬ್ರಾಹ್ಮಣ ಸಮಾಜ ಸರ್ವೇಜನೋ ಸುಖಿನೋ ಭವಂತು ಅಂತಾರೆ. ಆದರೆ ಪೇಶ್ವೆ ಬ್ರಾಹ್ಮಣರು ನಾಶೋ ಬಹುಂತು ಅಂತಾರೆ. ಇದು ಕುವೆಂಪು ಹೇಳಿದಂತೆ ಸರ್ವ ಜನಾಂಗದ ತೋಟ ನಮ್ಮ ರಾಜ್ಯ ಎಂದರು.

RELATED TOPICS:
English summary :I have never done caste politics, never insulted any community

ಸಿದ್ದರಾಮಯ್ಯ ಕುರಿತು ಸಿನಿಮಾ, ಪೋಸ್ಟರ್ ಔಟ್
ಸಿದ್ದರಾಮಯ್ಯ ಕುರಿತು ಸಿನಿಮಾ, ಪೋಸ್ಟರ್ ಔಟ್
ಮಚ್ಚು ಹಿಡಿದು ಪತ್ನಿಯ ಕೊಲೆಗೆ ಯತ್ನಿಸಿದ ಕುಡುಕ ಗಂಡ
ಮಚ್ಚು ಹಿಡಿದು ಪತ್ನಿಯ ಕೊಲೆಗೆ ಯತ್ನಿಸಿದ ಕುಡುಕ ಗಂಡ
ರಸ್ತೆ ದಾಟುವಾಗ ಖಾಸಗಿ ಬಸ್ ಡಿಕ್ಕಿ ಹೊಡೆದು ಮಹಿಳೆ ಸಾವು
ರಸ್ತೆ ದಾಟುವಾಗ ಖಾಸಗಿ ಬಸ್ ಡಿಕ್ಕಿ ಹೊಡೆದು ಮಹಿಳೆ ಸಾವು
ವರುಣಾದಲ್ಲೂ ಸಿದ್ದರಾಮಯ್ಯ ಗೆಲುವು ಅಷ್ಟು ಸುಲಭವಲ್ಲ : ಬಿ.ಎಸ್.ಯಡಿಯೂರಪ್ಪ
ವರುಣಾದಲ್ಲೂ ಸಿದ್ದರಾಮಯ್ಯ ಗೆಲುವು ಅಷ್ಟು ಸುಲಭವಲ್ಲ : ಬಿ.ಎಸ್.ಯಡಿಯೂರಪ್ಪ
ನಂದಿನಿ ಮೊಸರು ಪಾಕೆಟ್ ಮೇಲೆ ದಹಿ ಪದ: ಇದು ಕನ್ನಡಿಗರ ಮೇಲೆ ಬಿಜೆಪಿಯ ದಮ್ಮು ತಾಕತ್ತಿನ ಪ್ರದರ್ಶನವೇ?
ನಂದಿನಿ ಮೊಸರು ಪಾಕೆಟ್ ಮೇಲೆ ದಹಿ ಪದ: ಇದು ಕನ್ನಡಿಗರ ಮೇಲೆ ಬಿಜೆಪಿಯ ದಮ್ಮು ತಾಕತ್ತಿನ ಪ್ರದರ್ಶನವೇ?
ದೈವನರ್ತನ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ದೈವ ನರ್ತಕ‌ ಸಾವು
ದೈವನರ್ತನ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ದೈವ ನರ್ತಕ‌ ಸಾವು
ಮುಸ್ಲಿಂ ಸಮುದಾಯಕ್ಕೆ ನಾವು ಅನ್ಯಾಯ ಮಾಡಿಲ್ಲ: ಬಿಎಸ್​ ಯಡಿಯೂರಪ್ಪ
ಮುಸ್ಲಿಂ ಸಮುದಾಯಕ್ಕೆ ನಾವು ಅನ್ಯಾಯ ಮಾಡಿಲ್ಲ: ಬಿಎಸ್​ ಯಡಿಯೂರಪ್ಪ
ಮಧ್ಯಾಹ್ನದ ಬಿಸಿ ಊಟ ಸೇವಿಸಿ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಅಸ್ವಸ್ಥ
ಮಧ್ಯಾಹ್ನದ ಬಿಸಿ ಊಟ ಸೇವಿಸಿ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಅಸ್ವಸ್ಥ
ನವಜಾತ ಶಿಶುವನ್ನು ದೇವಾಲಯದ ‌ಬಳಿ ಬಿಟ್ಟು ಹೋದ ಪಾಪಿಗಳು!
ನವಜಾತ ಶಿಶುವನ್ನು ದೇವಾಲಯದ ‌ಬಳಿ ಬಿಟ್ಟು ಹೋದ ಪಾಪಿಗಳು!
ಕಳೆದ ಬಾರಿಯಂತೆ ಈ ಬಾರಿಯೂ ಜೆಡಿಎಸ್​-ಬಿಜೆಪಿ ಮ್ಯಾಚ್​ ಫಿಕ್ಸಿಂಗ್
ಕಳೆದ ಬಾರಿಯಂತೆ ಈ ಬಾರಿಯೂ ಜೆಡಿಎಸ್​-ಬಿಜೆಪಿ ಮ್ಯಾಚ್​ ಫಿಕ್ಸಿಂಗ್
ಮೇ 10 ಮತದಾನದ ದಿನ ಅಲ್ಲ, ಭ್ರಷ್ಟಾಚಾರ ತೆಗೆದುಹಾಕುವ ದಿನ: ಡಿ ಕೆ ಶಿವಕುಮಾರ್​
ಮೇ 10 ಮತದಾನದ ದಿನ ಅಲ್ಲ, ಭ್ರಷ್ಟಾಚಾರ ತೆಗೆದುಹಾಕುವ ದಿನ: ಡಿ ಕೆ ಶಿವಕುಮಾರ್​
ಚುನಾವಣೆ ಘೋಷಣೆ ಬೆನ್ನಲ್ಲೇ ನೀತಿ ಸಂಹಿತೆ ಉಲ್ಲಂಘನೆ!
ಚುನಾವಣೆ ಘೋಷಣೆ ಬೆನ್ನಲ್ಲೇ ನೀತಿ ಸಂಹಿತೆ ಉಲ್ಲಂಘನೆ!

ನ್ಯೂಸ್ MORE NEWS...