ತೇಜಸ್ವೀ ಸೂರ್ಯನನ್ನು ನಾನು ಅಮವಾಸ್ಯೆ ಅಂತಲೇ ಕರೆಯೋದು | JANATA NEWS
ಕಲಬುರಗಿ : ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅಮಾವಾಸ್ಯೆ, ಅದಕ್ಕೆ ನಾನು ಅಮಾವಾಸ್ಯೆ ಎಂದು ಕರೆಯುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಕಲಬುರಗಿ ಜಿಲ್ಲೆಯ ಚಿತಾಪುರ ತಾಲೂಕಿನಲ್ಲಿ ಹಮ್ಮಿಕೊಂಡಿದ್ದ ಪ್ರಜಾಧ್ವನಿ ಸಮಾವೇಶದಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿಯವರ ಕೇಂದ್ರ ಸರ್ಕಾರ ಕೇವಲ ದೊಡ್ಡ ಉದ್ದಿಮೆದಾರರ, ಬಂಡವಾಳಶಾಹಿಗಳ ರೂ. 14 ಲಕ್ಷ ಕೋಟಿ ಮೊತ್ತದಷ್ಟು ಸಾಲ ಮನ್ನಾ ಮಾಡಿದೆ ಎಂದರು. ಆದರೆ ಕೇಂದ್ರ ಮತ್ತು ಬಿಜೆಪಿ ಅಧಿಕಾರದಲ್ಲಿರುವ ಯಾವುದೇ ರಾಜ್ಯ ಸರ್ಕಾರ ರೈತರ ಒಂದೇ ಒಂದು ರೂಪಾಯಿ ಸಾಲಮನ್ನಾ ಮಾಡಿಲ್ಲ ಎಂದು ಅವರು ಹೇಳಿದರು.
ರೈತರ ಸಾಲ ಮನ್ನಾ ಮಾಡುವುದರಿಂದ ದೇಶಕ್ಕೆ ನಷ್ಟ ಆಗುತ್ತದೆ. ಆರ್ಥಿಕ ಪರಿಸ್ಥಿತಿ ಮೇಲೆ ದುಷ್ಪರಿಣಾಮ ಬೀರುತ್ತದೆ ಎಂಬ ಹೇಳಿಕೆಯನ್ನು ತೇಜಸ್ವಿ ಸೂರ್ಯ ಅವರು ನೀಡಿದ್ದು, ಈ ಮಾತನ್ನು ಯಾರು ಸಹ ಖಂಡಿಸಿಲ್ಲ? ಎಂದು ತೇಜಸ್ವಿ ವಿರುದ್ಧ ವಾಗ್ದಾಳಿ ನಡೆಸಿದರು.
ಬಿಜೆಪಿ ಸಂಸದ ತೇಜಸ್ವೀ ಸೂರ್ಯ ಅವರನ್ನು ತಾನು ಅಮವಾಸ್ಯೆ ಅಂತಲೇ ಕರೆಯೋದು ಎಂದು ಲೇವಡಿ ಮಾಡಿದಾಗ ನೆರೆದಿದ್ದ ಜನ ಜೋರಾಗಿ ಶಿಳ್ಳೆ ಹಾಕಿ ಚಪ್ಪಾಳೆ ತಟ್ಟಿದರು.