Sun,Jun21,2026
ಕನ್ನಡ / English

ಅಧಿಕಾರಿಗಳ ಕಿರುಕುಳ ​​ತಾಳಲಾರದೆ ಶಿಕ್ಷಕ ಆತ್ಮಹತ್ಯೆ! | JANATA NEWS

13 Feb 2023

ವಿಜಯಪುರ : ನನಗಿಂತಲೂ ನನ್ನ ವಿದ್ಯಾರ್ಥಿಗಳ ಭವಿಷ್ಯ ಮುಖ್ಯ ಎಂದು ಡೆತ್​ನೋಟ್ ಬರೆದಿಟ್ಟು ಸಿಂದಗಿ ತಹಶೀಲ್ದಾರ್ ಕಚೇರಿಯ ಆವರಣದ ಮರಕ್ಕೆ ಶಿಕ್ಷಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸಾಸಾಬಳ ಗ್ರಾಮದ ಸರ್ಕಾರಿ ಶಾಲೆಯ ಶಿಕ್ಷಕ ಬಸವರಾಜ್ (55) ಆತ್ಮಹತ್ಯೆಗೆ ಶರಣಾದವರು. ಶಿಕ್ಷಕ ಡೆತ್ ನೋಟ್ ಬರೆದಿಟ್ಟು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಶಾಲೆಯ ಹಿಂದಿನ ಮುಖ್ಯ ಶಿಕ್ಷಕ ಎಸ್.ಎಲ್.ಭಜಂತ್ರಿ, ಸಿಂದಗಿ ಬಿಇಓ, ಸಿಆರ್​ಪಿ ಜಿ.ಎನ್.ಪಾಟೀಲ್ ಅವರ ಕಿರುಕುಳವೇ ಆತ್ಮಹತ್ಯೆಗೆ ಕಾರಣ ಎಂದು ಡೆತ್​ನೋಟ್​ನಲ್ಲಿ ಉಲ್ಲೇಖ ಮಾಡಿದ್ದಾರೆ.

ಡೆತ್​ ನೋಟ್​ನಲ್ಲಿ ಏನಿದೆ?

ಎಸ್​ ಎಲ್ ಭಜಂತ್ರಿ ಮುಖ್ಯಶಿಕ್ಷಕ ಹುದ್ದೆಯನ್ನು, ಶಿಕ್ಷಕ ಬಸವರಾಜಗೆ ವರ್ಗಾಯಿಸಿದ್ದರು. ಈ ವೇಳೆ ಶಿಕ್ಷಕರ, ಹಾಗೂ ಮಕ್ಕಳ ಹಾಜರಾತಿ ದಾಖಲಿಸುವ 1ನೇ ನಂಬರ್ ರಿಜಿಸ್ಟರ್​ನ್ನು ಹಸ್ತಾಂತರ ಮಾಡಿದ್ದರು. ಆದರೆ ಭಜಂತ್ರಿ ವಿದ್ಯಾರ್ಥಿಗಳ ದಾಖಲಾತಿ ವಿವರ, ಜಾತಿ, ಜನ್ಮ ದಿನಾಂಕಗಳನ್ನು 1ನೇ ನಂಬರ್ ರಿಜಿಸ್ಟರ್​ ಸರಿಯಾಗಿ ದಾಖಲಿಸದೇ,​ ಅಪೂರ್ಣ ರೀತಿಯಲ್ಲಿ ವರ್ಗಾಯಿಸಿದ್ದರು.

ಈ ಸಂಬಂಧ ಎಸ್​ ಎಲ್ ಭಜಂತ್ರಿಯನ್ನು, ಶಿಕ್ಷಕ ಬಸವರಾಜ್​ ಪ್ರಶ್ನಿಸಿದರೇ “ನಾನು ಸಿಆರ್​ಪಿ ಆಗುತ್ತೇನೆ, ಆಗಾಗ ಬಂದು 1ನೇ ನಂಬರ್ ರಿಜಿಸ್ಟರ್ ಸರಿಪಡಿಸುವುದಾಗಿ ಹೇಳಿದ್ದರು. ಆದರೆ ಹಿಂದಿನ ಮುಖ್ಯ ಶಿಕ್ಷಕ ಎಸ್ ಎಲ್ ಭಜಂತ್ರಿ ರಿಜಿಸ್ಟರ್​ನ್ನು ಸರಿಪಡಿಸದೇ ಸತಾಯಿಸುತ್ತಿದ್ದರು. ಈ ಬಗ್ಗೆ ಸಿಂದಗಿ ಬಿಇಓ ಗಮನಕ್ಕೂ ತಂದಿದ್ದರೂ ಪ್ರಯೋಜನವಾಗಿಲ್ಲ. ಇದಕ್ಕೆ ಪ್ರತಿಯಾಗಿ ಬಿಇಓ ಹೆಚ್ ಎಂ ಹರಿನಾಳ ಟಾರ್ಚರ್ ನೋಟಿಸ್ ಕೊಡುತ್ತಿದ್ದನು. ಸಾಸಾಬಳ ಶಾಲೆಯ ಸಹಶಿಕ್ಷಕ ಶಿಕ್ಷಕ ಬಿಎಂ ತಳವಾರ ನಿಂದಲೂ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಿದ್ದಾರೆ.

ಅಲ್ಲದೇ ನನ್ನ ಮೇಲೆ ಅಲಿಗೆಷನ್ ಮಾಡಿ, ಗ್ರಾಮದ ಸಂಗಮೇಶ್ ಚಿಂಚೋಳಿ ಎಂಬುವರು ಹಾಗೂ ಸಿಆರ್​ಪಿ ​​ನನ್ನಿಂದ ಹಣ ಪಡೆದಿದ್ದರು. ಹಾಗೇ ಬಿಸಿಯೂಟ ಯೋಜನೆಯಗೆ ಹೆಚ್ಚುವರಿ ವಿದ್ಯಾರ್ಥಿಗಳ ದಾಖಲಾತಿ ತೋರಿಸಿ ಹಣ ಲಪಟಾಯಿಸುತ್ತಿದ್ದರು. ಶಿಕ್ಷಕ ಬಸವರಾಜ್ ವಿರುದ್ಧ ಸಂಗಮೇಶ್ ಚಿಂಚೋಳಿ ಬಿಇಓಗೆ ದೂರು ಕೊಟ್ಟಿದ್ದರು. ನನಗಿಂತಲೂ ನನ್ನ ವಿದ್ಯಾರ್ಥಿಗಳ ಭವಿಷ್ಯ ಮುಖ್ಯ. ನನ್ನ ಹೆಂಡತಿ ಓರ್ವ ಮಗಳಿಗೆ ನ್ಯಾಯ ಒದಗಿಸಿಕೊಡಬೇಕು ಎಂದು ಡೆತ್ ನೋಟ್​​ನಲ್ಲಿ ಮನವಿ ಮಾಡಿದ್ದಾರೆ.

ಈ ಕುರಿತು ಡೆತ್ ನೋಟಿನಲ್ಲಿ ಬಸವರಾಜ ಉಲ್ಲೇಖಿಸಿದ ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎಂ.ಹರನಾಳ, ಜಿ.ಎನ್ ಪಾಟೀಲ, ಎಸ್.ಎಲ್.ಬಜಂತ್ರಿ, ಸಂಗಮೇಶ ಚಿಂಚೊಳ್ಳಿ, ಎಸ್.ಎಲ್.ಬಜಂತ್ರಿ, ಬಿ.ಎಂ.ತಳವಾರ ಅವರುಗಳೇ ನನ್ನ ಗಂಡನ ಸಾವಿಗೆ ನೇರ ಕಾರಣ ಎಂದು ಪತ್ನಿ ಮಹಾದೇವಿ ಬಸವರಾಜ ನಾಯಕಲ್ ಸಿಂದಗಿ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

RELATED TOPICS:
English summary :Unable to bear the harassment of the authorities, the teacher committed suicide

ನಾನು ಮತ್ತು ಇಟಲಿ ಎಂದಿಗೂ ಬೇಡುವುದಿಲ್ಲ  - ಟ್ರಂಪ್ ಹೇಳಿಕೆಗೆ ಮೆಲೋನಿ ತಿರುಗೇಟು
ನಾನು ಮತ್ತು ಇಟಲಿ ಎಂದಿಗೂ ಬೇಡುವುದಿಲ್ಲ - ಟ್ರಂಪ್ ಹೇಳಿಕೆಗೆ ಮೆಲೋನಿ ತಿರುಗೇಟು
ಎನ್‌ಡಿಎ ಶಾಸಕರ ಅಡ್ಡ ಮತದಾನ ಆರೋಪ : ಕರ್ನಾಟಕದ ನಾಯಕರಿಗೆ ಬಿಜೆಪಿ ಹೈಕಮಾಂಡ್ ಸಮನ್ಸ್
ಎನ್‌ಡಿಎ ಶಾಸಕರ ಅಡ್ಡ ಮತದಾನ ಆರೋಪ : ಕರ್ನಾಟಕದ ನಾಯಕರಿಗೆ ಬಿಜೆಪಿ ಹೈಕಮಾಂಡ್ ಸಮನ್ಸ್
ಅವರು ತಿರುಮಲ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ಸಿಎಂ ಡಿ.ಕೆ. ಶಿವಕುಮಾರ್
ಅವರು ತಿರುಮಲ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ಸಿಎಂ ಡಿ.ಕೆ. ಶಿವಕುಮಾರ್
ಮೋದಿ ನಾಯಕರಾಗಿದ್ದಾಗ ಭಾರತದ ಮೇಲೆ ದಾಳಿ ನಡೆದರೆ ಅಮೆರಿಕ ಭಾರತವನ್ನು ರಕ್ಷಿಸುತ್ತದೆ - ಅಧ್ಯಕ್ಷ ಟ್ರಂಪ್
ಮೋದಿ ನಾಯಕರಾಗಿದ್ದಾಗ ಭಾರತದ ಮೇಲೆ ದಾಳಿ ನಡೆದರೆ ಅಮೆರಿಕ ಭಾರತವನ್ನು ರಕ್ಷಿಸುತ್ತದೆ - ಅಧ್ಯಕ್ಷ ಟ್ರಂಪ್
ಭಾರತದ 3 ನಾವಿಕರ ಸಾವಿನ ವಿಷಯ ಟ್ರಂಪ್ ಎದುರು ಪ್ರಸ್ತಾವ ಮಾಡಿದ ಪ್ರಧಾನಿ ಮೋದಿ
ಭಾರತದ 3 ನಾವಿಕರ ಸಾವಿನ ವಿಷಯ ಟ್ರಂಪ್ ಎದುರು ಪ್ರಸ್ತಾವ ಮಾಡಿದ ಪ್ರಧಾನಿ ಮೋದಿ
 ಜಿ7 ಶೃಂಗಸಭೆಯಲ್ಲಿ ಗಮನ ಸೆಳೆಯುತ್ತದ ಪ್ರಧಾನಿ ಮೋದಿ ಅವರ ವಿಶ್ವಾಸಾರ್ಹತೆಯ ಕೊರತೆ ಹೇಳಿಕೆ
ಜಿ7 ಶೃಂಗಸಭೆಯಲ್ಲಿ ಗಮನ ಸೆಳೆಯುತ್ತದ ಪ್ರಧಾನಿ ಮೋದಿ ಅವರ ವಿಶ್ವಾಸಾರ್ಹತೆಯ ಕೊರತೆ ಹೇಳಿಕೆ
ಅಮೆರಿಕ ಅಧ್ಯಕ್ಷ ಟ್ರಂಪ್ ಗೆ ಫ್ರಾನ್ಸ್‌ ನಲ್ಲಿ ಕೆಂಪು ಹಾಸಿಗೆ ಸ್ವಾಗತದ ಅನುಪಸ್ಥಿತಿ : ಟ್ರಂಪ್ ಅಸಮಾಧಾನ
ಅಮೆರಿಕ ಅಧ್ಯಕ್ಷ ಟ್ರಂಪ್ ಗೆ ಫ್ರಾನ್ಸ್‌ ನಲ್ಲಿ ಕೆಂಪು ಹಾಸಿಗೆ ಸ್ವಾಗತದ ಅನುಪಸ್ಥಿತಿ : ಟ್ರಂಪ್ ಅಸಮಾಧಾನ
ಎರಡೂ ಕಡೆಯ ವಾದ ಆಲಿಸಿ ಟಿಎಂಸಿಯ ಬಂಡಾಯ ಸಂಸದರ ವಿಷಯದಲ್ಲಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ನಿರ್ಧಾರ
ಎರಡೂ ಕಡೆಯ ವಾದ ಆಲಿಸಿ ಟಿಎಂಸಿಯ ಬಂಡಾಯ ಸಂಸದರ ವಿಷಯದಲ್ಲಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ನಿರ್ಧಾರ
ಅಮೆರಿಕದ ಒಪ್ಪಂದವನ್ನು ತಿರಸ್ಕರಿಸಿದ ಇಸ್ರೇಲಿ ಸಚಿವರು, ಇರಾನ್ ದಾಳಿಗೆ ಬಲವಾದ ಪ್ರತಿಕ್ರಿಯೆ ನೀಡುವ ಪ್ರತಿಜ್ಞೆ
ಅಮೆರಿಕದ ಒಪ್ಪಂದವನ್ನು ತಿರಸ್ಕರಿಸಿದ ಇಸ್ರೇಲಿ ಸಚಿವರು, ಇರಾನ್ ದಾಳಿಗೆ ಬಲವಾದ ಪ್ರತಿಕ್ರಿಯೆ ನೀಡುವ ಪ್ರತಿಜ್ಞೆ
ಇರಾನ್ ಒಪ್ಪಂದವನ್ನು ಘೋಷಿಸಿದ ಟ್ರಂಪ್, ಹಾರ್ಮುಜ್ ಜಲಸಂಧಿಯನ್ನು ಪುನಃ ತೆರೆಯಲು ಆದೇಶ
ಇರಾನ್ ಒಪ್ಪಂದವನ್ನು ಘೋಷಿಸಿದ ಟ್ರಂಪ್, ಹಾರ್ಮುಜ್ ಜಲಸಂಧಿಯನ್ನು ಪುನಃ ತೆರೆಯಲು ಆದೇಶ
ಎನ್‌ಡಿಎಗೆ ಟಿಎಂಸಿಯ ಬಂಡಾಯ ಸಂಸದರ ಬೆಂಬಲ : ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಗೆ ಭೇಟಿ
ಎನ್‌ಡಿಎಗೆ ಟಿಎಂಸಿಯ ಬಂಡಾಯ ಸಂಸದರ ಬೆಂಬಲ : ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಗೆ ಭೇಟಿ
 ಫ್ರಾನ್ಸ್ ಜೊತೆ ನಡೆಯುತ್ತಿರುವ ರಫೇಲ್ ಚರ್ಚೆಯಲ್ಲಿ ಮೇಕ್ ಇನ್ ಇಂಡಿಯಾ ಗೆ ಒತ್ತು ನೀಡಿದ  ಭಾರತ
ಫ್ರಾನ್ಸ್ ಜೊತೆ ನಡೆಯುತ್ತಿರುವ ರಫೇಲ್ ಚರ್ಚೆಯಲ್ಲಿ ಮೇಕ್ ಇನ್ ಇಂಡಿಯಾ ಗೆ ಒತ್ತು ನೀಡಿದ ಭಾರತ

ನ್ಯೂಸ್ MORE NEWS...