ಸಿದ್ದರಾಮಯ್ಯ ವಿರುದ್ಧ ವಿವಾದಾತ್ಮಕ ಹೇಳಿಕೆ: ಅಶ್ವತ್ಥ್ ನಾರಾಯಣ ಭಾವಚಿತ್ರಕ್ಕೆ ಚಪ್ಪಲಿ ಏಟು | JANATA NEWS
ಚಿತ್ರದುರ್ಗ : ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿರುವ ವಿಚಾರವಾಗಿ ಸಚಿವ ಅಶ್ವತ್ಥ್ ನಾರಾಯಣ ವಿರುದ್ಧ ಕಾಂಗ್ರೆಸ್ ಕಿಡಿಕಾರಿದ್ದಾರೆ.
ಸಚಿವ ಅಶ್ವತ್ಥ್ ನಾರಾಯಣ್ ಹೊಡೆದು ಹಾಕುವ ಮಾತುಗಳನ್ನಾಡಿ ನಾಲಿಗೆ ಹರಿಬಿಟ್ಟಿದ್ದಾರೆ. ಟಿಪ್ಪು ವಿಚಾರವನ್ನ ತೆಗೆದು ಸಿದ್ದರಾಮಯ್ಯರನ್ನ ಹೊಡೆದ ಹಾಕಬೇಕ್ಬೇಕು ಅಂತಾ ಬೆದರಿಕೆ ಮಾತನ್ನಾಡಿದ್ದಾರೆ.
ಈ ವಿಚಾರವಾಗಿ ಚಿತ್ರದುರ್ಗದಲ್ಲಿ ರೊಚ್ಚಿಗೆದ್ದ ಕಾಂಗ್ರೆಸ್ ಕಾರ್ಯಕರ್ತರು ಚಿತ್ರದುರ್ಗ ನಗರದಲ್ಲಿ ಪ್ರತಿಭಟನೆ ನಡೆಸಿದರು.
ಈ ವೇಳೆ ಕಾರ್ಯಕರ್ತರು ಆಕ್ರೋಶಗೊಂಡಿದ್ದಾರೆ.ಚಿತ್ರದುರ್ಗದ ಒನಕೆ ಓಬವ್ವ ವೃತ್ತದಲ್ಲಿ ಜಮಾಯಿಸಿದ ಕಾರ್ಯಕರ್ತರು, ಸಚಿವ ಅಶ್ವಥ್ ನಾರಾಯಣ ಭಾವಚಿತ್ರಕ್ಕೆ ಚಪ್ಪಲಿಯಿಂದ ಹೊಡೆದು ಕಿಡಿಕಾರಿದ್ದಾರೆ.
ನಂತರ ಸಚಿವರ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.ಸಚಿವ ಅಶ್ವತ್ಥ ನಾರಾಯಣ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಕಾರ್ಯಕರ್ತರು ಒತ್ತಾಯಿಸಿದ್ದಾರೆ.
ಮಂಡ್ಯ ಜಿಲ್ಲೆಯ ಸಾತನೂರು ಹೊರವಲಯದ ಕಂಬದ ನರಸಿಂಹಸ್ವಾಮಿ ದೇವಾಲಯದ ಆವರಣದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಕಾರ್ಯಕ್ರಮದಲ್ಲಿ ಸಚಿವ ಅಶ್ವತ್ಥ ನಾರಾಯಣ್ ಟಿಪ್ಪು ಸುಲ್ತಾನ್ ಅವರನ್ನು ನಿಂದಿಸುವ ಬರದಲ್ಲಿ ಸಿದ್ದರಾಮಯ್ಯ ಅವರ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ್ದರು.
"ನಿಮಗೆ ಟಿಪ್ಪು ಬೇಕಾ..? ಸಾವರ್ಕರ್ ಬೇಕಾ..? ಟಿಪ್ಪು ಬೇಡಾ ಅಂದ್ರೆ ಸಿದ್ದರಾಮಯ್ಯ ಅವರನ್ನು ಟಿಪ್ಪು ಕಳುಹಿಸಿದ ಹಾಗೆ ಕಳಿಸಬೇಕು. ಉರಿಗೌಡ ಮತ್ತು ನಂಜೇಗೌಡ ಏನ್ ಮಾಡಿದ್ದರು. ಹಾಗೇಯೇ ಸಿದ್ದರಾಮಯ್ಯ ಅವರನ್ನು ಹೊಡೆದು ಹಾಕಬೇಕು" ಎಂದು ಹೇಳಿದ್ದರು.