Mon,May20,2024
ಕನ್ನಡ / English

ಹೊಡಿ, ಬಡಿ, ಕಡಿ ಅನ್ನೋದು ಬಿಜೆಪಿ ಸಂಸ್ಕೃತಿ, ಮಹಾತ್ಮ ಗಾಂಧೀಜಿಯವರನ್ನೇ ಕೊಂದವರು ಇವರು | JANATA NEWS

16 Feb 2023
2506

ಹುಬ್ಬಳ್ಳಿ : ಟಿಪ್ಪು ಸುಲ್ತಾನ್​ನನ್ನು ಹೊಡೆದು ಹಾಕಿದಂತೆ ಸಿದ್ದರಾಮಯ್ಯ ಅವರನ್ನೂ ಹೊಡೆದು ಹಾಕಬೇಕು ಎಂದಿರುವ ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ್ ವಿರುದ್ಧ ಮಾಜಿ ಮುಖ್ಯಮಂತ್ರಿ ಕಿಡಿಕಾರಿದ್ದಾರೆ.

ಹೊಡಿ, ಬಡಿ, ಕಡಿ ಅನ್ನೋದು ಬಿಜೆಪಿ ಸಂಸ್ಕೃತಿ. ಮಹಾತ್ಮ ಗಾಂಧೀಜಿಯವರನ್ನೇ ಕೊಂದವರು ಇವರು. ಆರ್​ಎಸ್​ಎಸ್​ನವರು ಸಚಿವ ಅಶ್ವತ್ಥನಾರಾಯಣ್​ ಬಾಯಿಯಿಂದ ಹೀಗೆ ಹೇಳಿಸಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಡಾ ಅಶ್ವತ್ಥನಾರಾಯಣ್​ ಅವರ ಹೇಳಿಕೆ ವಿರುದ್ಧ ಹರಿಹಾಯ್ದಿದ್ದಾರೆ.

ರಾಜ್ಯದಲ್ಲಿ ಚರ್ಚೆಯಾಗಬೇಕಿರುವುದು ಅಭಿವೃದ್ಧಿ ವಿಚಾರ. ರೈತರ, ಬಡವರ ದಲಿತರು ಅಲ್ಪಸಂಖ್ಯಾತರ ಸಮಸ್ಯೆಗಳ ಕುರಿತು ಚರ್ಚೆಯಾಗಬೇಕು. ಅದನ್ನು ಬಿಟ್ಟು ಇಂತಹ ಹೇಳಿಕೆ ನೀಡಿ ಸಮಾಜದಲ್ಲಿ ಗೊಂದಲ ಹುಟ್ಟಿಸುತ್ತಿದ್ದಾರೆ. ಇವರು ಚುನಾವಣಾ ಪ್ರಣಾಳಿಕೆಯಲ್ಲಿ ಬೇಕಿದ್ದರೆ, ಈ ಚುನಾವಣೆ ಟಿಪ್ಪು ವರ್ಸಸ್ ಸಾವರ್ಕರ್ ನಡುವೆ ಎಂದು ಬರೆದುಕೊಳ್ಳಲಿ. ಈ ಬಗ್ಗೆ ಜನ ತೀರ್ಮಾನ ಮಾಡಲಿ. ಜನ ಇಂತಹದಕ್ಕೆಲ್ಲ ಪ್ರೋತ್ಸಾಹ ಕೊಡೋಕೆ ಆಗುತ್ತಾ..? ಎಂದು ಪ್ರಶ್ನಿಸಿದ್ದಾರೆ.

"ಸಿದ್ಧರಾಮಯ್ಯನನ್ನು ಮುಗಿಸಲಿ ಎಂದರೆ ಏನರ್ಥ, ಎಲ್ಲರೂ ಇದನ್ನು ಖಂಡಿಸಬೇಕು. ಒಬ್ಬ ಸಚಿವನಾಗಿ ಈ ರೀತಿ ಹೇಳಿಕೆ ಕೊಡೋದು ಎಷ್ಟರ ಮಟ್ಟಿಗೆ ಸರಿ? ಪ್ರಜೆಗಳಿಗೆ ರಕ್ಷಣೆ ಕೊಡೋದು ಸಚಿವರು ಹಾಗೂ ಸರ್ಕಾರದ ಜವಾಬ್ದಾರಿ. ಟಿಪ್ಪುವನ್ನು ಮುಗಿಸಿದ ಹಾಗೆ ಸಿದ್ಧರಾಮಯ್ಯನನ್ನು ಮುಗಿಸಿ ಎಂದರೆ ಏನರ್ಥ. ಪೊಲೀಸರು ಇದನ್ನು ಸ್ವ ಮೋಟೋ ಪ್ರಕರಣ ದಾಖಲಿಸಿಕೊಳ್ಳಬೇಕು. ಪ್ರಧಾನಿ, ಅಮಿತ್ ಶಾ ಹೇಳಲಿ ಇದು ಸರೀನಾ ಅಂತಾ. ಸಿದ್ಧರಾಮಯ್ಯನನ್ನು ರಕ್ಷಿಸಬೇಕಾದವರೇ ಮುಗಿಸಿ ಅಂತಾ ಕರೆ ಕೊಟ್ಟರೆ ಏನರ್ಥ? ನಾನು ದೂರು ಕೊಡೋಕೆ ಹೋಗಲ್ಲ ಎಲ್ಲ ಸರ್ಕಾರಕ್ಕೆ ಬಿಟ್ಟಿದ್ದೇನೆ" ಎಂದರು.

ಸರಣಿ ಟ್ವೀಟ್​ ಮಾಡಿರುವ ಸಿದ್ದರಾಮಯ್ಯ.. ನನ್ನನ್ನು ಕೊಲ್ಲಬೇಕು ಎಂದು ಮನವಿ ಮಾಡಿರುವ ಮಾನಸಿಕ ಅಸ್ವಸ್ಥ ಅಶ್ವಥ್ ನಾರಾಯಣ್ ವಿರುದ್ಧ ಕನ್ನಡಿಗರಿಗೆ ಕೋಪ ಬಂದಿದೆ ಅಂತಾ ನನಗೆ ಗೊತ್ತು. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸಂಪುಟದಿಂದ ಅವರನ್ನು ವಜಾ ಮಾಡಬೇಕು. ಕೂಡಲೇ ಕರ್ನಾಟಕ ಸರ್ಕಾರ ಅಶ್ವಥ್ ನಾರಾಯಣ್​​ರನ್ನು ಬಂಧಿಸಬೇಕು. ಒಂದು ವೇಳೆ ಯಾವುದೇ ಕ್ರಮ ತೆಗೆದುಕೊಳ್ಳದಿದ್ದರೆ ಅಶ್ವಥ್ ನಾರಾಯಣ್​​ ಮಾತಿಗೆ ಬಿಜೆಪಿಯ ಸಹಮತ ಇದೆ ಎಂದರ್ಥ. ಅಥವಾ ಅಶ್ವಥ್ ನಾರಾಯಣ್ ಮಾನಸಿಕವಾಗಿ ಸರಿ ಇಲ್ಲ ಎಂದು. ಯಾಕೆ ನೀವು ಜನರನ್ನು ಪ್ರಚೋದಿಸುತ್ತೀರಿ. ನೀವು ಗನ್ ತೆಗೆದುಕೊಳ್ಳಿ ಎಂದು ವಾಗ್ದಾಳಿ ನಡೆಸಿದ್ದಾರೆ.


RELATED TOPICS:
English summary :Hodi, Badi, Kadi, BJP culture, they are the ones who killed Mahatma Gandhi

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...