Wed,Feb04,2026
ಕನ್ನಡ / English

ಅವನಿಗೆ ಮಾನಸಿಕ ಖಾಯಿಲೆ ಇರಬೇಕು. ಅವನು ಅಶ್ವಥ್ ನಾರಾಯಣ ಅಲ್ಲ, ಅಸ್ವಸ್ಥ ನಾರಾಯಣ ಇರಬೇಕು | JANATA NEWS

18 Feb 2023

ಕೊಪ್ಪಳ : ಅವನಿಗೆ ಮಾನಸಿಕ ಖಾಯಿಲೆ ಇರಬೇಕು. ಅವನು ಅಶ್ವಥ್ ನಾರಾಯಣ ಅಲ್ಲ, ಅಸ್ವಸ್ಥ ನಾರಾಯಣ ಇರಬೇಕು. ಅವನು ನನ್ನ ಬಗ್ಗೆ ಹೇಳುತ್ತಾನೆ, ಅವನಿಗೆ ತಲೆ ಸರಿಯಲ್ಲ. ಇವರೆಲ್ಲಾ ನಾಲಾಯಕ್ ರಾಜಕಾರಣಿಗಳು. ಇಂಥವರು ಅಧಿಕಾರದಲ್ಲಿ ಇರಬೇಕಾ ಎಂದರು.

ಈ ಕುರಿತು ಕೊಪ್ಪಳದಲ್ಲಿ ಮಾತನಾಡಿದ ಅವರು, ಸಚಿವ ಅಶ್ವಥ್ ನಾರಾಯಣ ಎನ್ನುವಾತ ಟಿಪ್ಪುವನ್ನು ಹೊಡೆದು ಹಾಕಿದಂತೆ ನನ್ನನ್ನು ಹೊಡೆದಾಕಬೇಕು ಎಂದು ಹೇಳಿದ್ದಾನೆ. ಅವನು ಅಶ್ವಥ್ ನಾರಾಯಣ ಅಲ್ಲ, ಅವನೊಬ್ಬ ಅಸ್ವಸ್ಥ ನಾರಾಯಣ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.

ಬಿಜೆಪಿಯವರು ಅಭಿವೃದ್ಧಿ ಬಗ್ಗೆ ಮಾತನಾಡುತ್ತಿಲ್ಲ. ರಸ್ತೆ, ನೀರು ರೈತರ ಬಗ್ಗೆ ಮಾತನಾಡುತ್ತಿಲ್ಲ. ಲವ್ ಜಿಹಾದ್ ಬಗ್ಗೆ ಮಾತನಾಡು ಎಂದು ಕಟೀಲ್ ಹೇಳ್ತಾನೆ. ಅಮಿತಾ ಶಾ ಅಂತಾ ರಾಜ್ಯಕ್ಕೆ ಬಂದು ಟಿಪ್ಪು ಸುಲ್ತಾನ್ ವರ್ಸಸ್ ಅಬ್ಬಕ್ಕ ಅಂತ ಹೇಳುತ್ತಾನೆ.

ಜನರು ಸಾಮರಸ್ಯದಿಂದ ಇರಬೇಕಾಗಿರುವುದು ಬಿಜೆಪಿಗೆ ಬೇಕಾಗಿಲ್ಲ. ಜನರು ಬಡೆದಾಡುಕೊಂಡು ಇರಬೇಕು. ಒಡೆದಾಳುವ ನೀತಿ ಇರುವುದು ಬಿಜೆಪಿಯಲ್ಲಿದೆ. ಬಿಜೆಪಿಯವರು ಸಮಾಜ ಸೇವೆ ಮರೆತಿದ್ದಾರೆ. ಲೂಟಿ ಹೊಡೆಯುವುದರಲ್ಲಿ ನಿರತರಾಗಿದ್ದಾರೆ ಎಂದರು.

ರಾಜ್ಯವನ್ನು ಹಾದಿ ತಪ್ಪಿ ಸುತ್ತಿರುವ ಕೋಮುವಾದಿ ಬಿಜೆಪಿ ಸರಕಾರವನ್ನು ಮುಂದಿನ ಚುನಾವಣೆಯಲ್ಲಿ ಸೋಲಿಸಿ ಮನೆಗೆ ಕಳುಹಿಸಿ. ಕರ್ನಾಟಕದಲ್ಲಿ ಕಾಂಗ್ರೆಸ್ ಪರವಾದ ಅಲೆಯಿದೆ. ಬಿಜೆಪಿ, ಜೆಡಿಎಸ್ ನ ಹಲವರು ಕಾಂಗ್ರೆಸ್ ಸೇರುತ್ತಿದ್ದಾರೆ. ಬಿಜೆಪಿ, ಜೆಡಿಎಸ್ ಬಗ್ಗೆ ಜನತೆಗೆ ಭ್ರಮ ನಿರಸನವಾಗಿದೆ. ಕೋಮುವಾದಿ ಬಿಜೆಪಿ ದೂರವಿಡಲು ಕಳೆದ ಬಾರಿ ನಾವು 80 ಸ್ಥಾನ ಪಡೆದಿದ್ದರೂ 37 ಸ್ಥಾನ ಪಡೆದಿದ್ದ ಜೆಡಿಎಸ್ ಗೆ ಸಿಎಂ ಸ್ಥಾನ ಬಿಟ್ಟು ಕೊಟ್ಟಿದ್ದೇವು. ಆದರೆ, ಜೆಡಿಎಸ್ ಕೂಡ ಹೇಳಿ ಕೊಳ್ಳುವಂತ ಕೆಲಸ ಮಾಡಲಿಲ್ಲ. ಬಿಜೆಪಿ ಕೋಮುವಾದಿ ಪಕ್ಷವಾಗಿದ್ದು, ದ್ವೇಷದ ರಾಜಕಾರಣ, ಸಾಮರಸ್ಯವನ್ನು ಹಾಳು ಮಾಡುತ್ತಿದೆ ಎಂದು ಕಿಡಿಕಾರಿದರು.

ಈ ಬಾರಿ ಕಾಂಗ್ರೆಸ್ ರಾಜ್ಯದಲ್ಲಿ ಬರುತ್ತದೆ. ಜನರು ಈ ಬಾರಿ ಸಾಕಷ್ಟು ಪ್ರೀತಿ ಕಾಂಗ್ರೆಸ್ ನ ಮೇಲೆ ತೋರಿಸುತ್ತಿದ್ದಾರೆ. ಕಾಂಗ್ರೆಸ್ ಪರವಾದ ಅಲೆಯಿದೆ. ಈ ಬಾರಿ ನೂರಕ್ಕೆ ನೂರು ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದರು.

RELATED TOPICS:
English summary :He must have mental illness. He is not Aswath Narayana, he should be Asvastha Narayana

ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್, ಭಾರತೀಯ ಸರಕುಗಳ ಮೇಲಿನ ಸುಂಕ ಕಡಿತ ಘೋಷಣೆ
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್, ಭಾರತೀಯ ಸರಕುಗಳ ಮೇಲಿನ ಸುಂಕ ಕಡಿತ ಘೋಷಣೆ
ಸರ್ಕಾರಿ ಸಂಸ್ಥೆಗಳಿಗೆ ನೆಹರು-ಗಾಂಧಿ ಕುಟುಂಬದ ಹೆಸರಿಡುವ ವಿಚಾರವಾಗಿ ವಿಧಾನಸಭೆಯಲ್ಲಿ ಗದ್ದಲ
ಸರ್ಕಾರಿ ಸಂಸ್ಥೆಗಳಿಗೆ ನೆಹರು-ಗಾಂಧಿ ಕುಟುಂಬದ ಹೆಸರಿಡುವ ವಿಚಾರವಾಗಿ ವಿಧಾನಸಭೆಯಲ್ಲಿ ಗದ್ದಲ
ಭದ್ರತಾ ಪಡೆಗಳು ಕಾರ್ಯಾಚರಣೆ ಹೆಚ್ಚಿಸಿದ ನಂತರವೂ ಬಲೂಚಿಸ್ತಾನದಲ್ಲಿ ಪಾಕ್ ಸೇನೆಯ ಹಿನ್ನಡೆ ಮುಂದುವರೆದಿದೆ
ಭದ್ರತಾ ಪಡೆಗಳು ಕಾರ್ಯಾಚರಣೆ ಹೆಚ್ಚಿಸಿದ ನಂತರವೂ ಬಲೂಚಿಸ್ತಾನದಲ್ಲಿ ಪಾಕ್ ಸೇನೆಯ ಹಿನ್ನಡೆ ಮುಂದುವರೆದಿದೆ
 ಹಣಕ್ಕಾಗಿ ಭಿಕ್ಷೆ ಬೇಡಲು ನಮಗೆ ನಾಚಿಕೆಯಾಗುತ್ತಿದೆ - ಆರ್ಥಿಕ ಸಂಕಷ್ಟ ಒಪ್ಪಿಕೊಂಡ ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್
ಹಣಕ್ಕಾಗಿ ಭಿಕ್ಷೆ ಬೇಡಲು ನಮಗೆ ನಾಚಿಕೆಯಾಗುತ್ತಿದೆ - ಆರ್ಥಿಕ ಸಂಕಷ್ಟ ಒಪ್ಪಿಕೊಂಡ ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್
ಮೈಸೂರಿನಲ್ಲಿ ರಹಸ್ಯ ಡ್ರಗ್ಸ್ ಪ್ರಯೋಗಾಲಯ ಬಯಲು :ಪ್ರಮುಖ ಅಂತರರಾಜ್ಯ ಮಾದಕ ವಸ್ತುಗಳ ಸಿಂಡಿಕೇಟ್ ಮೇಲೆ ಎನ್‌ಸಿಬಿ ದಾಳಿ
ಮೈಸೂರಿನಲ್ಲಿ ರಹಸ್ಯ ಡ್ರಗ್ಸ್ ಪ್ರಯೋಗಾಲಯ ಬಯಲು :ಪ್ರಮುಖ ಅಂತರರಾಜ್ಯ ಮಾದಕ ವಸ್ತುಗಳ ಸಿಂಡಿಕೇಟ್ ಮೇಲೆ ಎನ್‌ಸಿಬಿ ದಾಳಿ
ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿಜೆ ರಾಯ್ ಶವವಾಗಿ ಪತ್ತೆಯಾಗಿದ್ದಾರೆ : ಆತ್ಮಹತ್ಯೆ ಶಂಕೆ
ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿಜೆ ರಾಯ್ ಶವವಾಗಿ ಪತ್ತೆಯಾಗಿದ್ದಾರೆ : ಆತ್ಮಹತ್ಯೆ ಶಂಕೆ
ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿಜೆ ರಾಯ್ ಶವವಾಗಿ ಪತ್ತೆಯಾಗಿದ್ದಾರೆ : ಆತ್ಮಹತ್ಯೆ ಶಂಕೆ
ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿಜೆ ರಾಯ್ ಶವವಾಗಿ ಪತ್ತೆಯಾಗಿದ್ದಾರೆ : ಆತ್ಮಹತ್ಯೆ ಶಂಕೆ
ಟಿಎಂಸಿ ಸರ್ಕಾರಕ್ಕೆ ಭಾರಿ ಹಿನ್ನಡೆ : ಗಡಿ ಭೂಮಿ ಬಿಎಸ್‌ಎಫ್‌ಗೆ ಹಸ್ತಾಂತರಿಸುವಂತೆ ಪ.ಬಂ.ಸರ್ಕಾರಕ್ಕೆ ಕಲ್ಕತ್ತಾ ಹೈಕೋರ್ಟ್ ಆದೇಶ
ಟಿಎಂಸಿ ಸರ್ಕಾರಕ್ಕೆ ಭಾರಿ ಹಿನ್ನಡೆ : ಗಡಿ ಭೂಮಿ ಬಿಎಸ್‌ಎಫ್‌ಗೆ ಹಸ್ತಾಂತರಿಸುವಂತೆ ಪ.ಬಂ.ಸರ್ಕಾರಕ್ಕೆ ಕಲ್ಕತ್ತಾ ಹೈಕೋರ್ಟ್ ಆದೇಶ
ಹೊಸ ಯುಜಿಸಿ ಸಮಾನತೆ ನಿಯಮಗಳಿಗೆ ಸುಪ್ರೀಂ ಕೋರ್ಟ್ ವಿರಾಮ: ಏನು ಮತ್ತು ಹೇಗೆ?
ಹೊಸ ಯುಜಿಸಿ ಸಮಾನತೆ ನಿಯಮಗಳಿಗೆ ಸುಪ್ರೀಂ ಕೋರ್ಟ್ ವಿರಾಮ: ಏನು ಮತ್ತು ಹೇಗೆ?
ಖಾಸಗಿ ವಿಮಾನ ಅಪಘಾತದಲ್ಲಿ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನ: ದೇಶಾದ್ಯಂತ ಶೋಕ
ಖಾಸಗಿ ವಿಮಾನ ಅಪಘಾತದಲ್ಲಿ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನ: ದೇಶಾದ್ಯಂತ ಶೋಕ
ರಾಜ್ಯದಲ್ಲಿ ಮತ್ತೊಂದು ಸ್ಲೀಪರ್ ನೈಟ್ ಬಸ್ ಬೆಂಕಿಗೆ ಆಹುತಿ
ರಾಜ್ಯದಲ್ಲಿ ಮತ್ತೊಂದು ಸ್ಲೀಪರ್ ನೈಟ್ ಬಸ್ ಬೆಂಕಿಗೆ ಆಹುತಿ
ಜಗತ್ತಿನ ಎಲ್ಲಾ ಒಪ್ಪಂದಗಳ ತಾಯಿ : ಭಾರತ-ಇಯು ವ್ಯಾಪಾರ ಒಪ್ಪಂದವು ಕಾರ್ಯತಂತ್ರದ ಸಹಭಾಗಿತ್ವದಲ್ಲಿ ಪ್ರಮುಖ ಹೆಜ್ಜೆ
ಜಗತ್ತಿನ ಎಲ್ಲಾ ಒಪ್ಪಂದಗಳ ತಾಯಿ : ಭಾರತ-ಇಯು ವ್ಯಾಪಾರ ಒಪ್ಪಂದವು ಕಾರ್ಯತಂತ್ರದ ಸಹಭಾಗಿತ್ವದಲ್ಲಿ ಪ್ರಮುಖ ಹೆಜ್ಜೆ

ನ್ಯೂಸ್ MORE NEWS...