Tue,Aug04,2026
ಕನ್ನಡ / English

ಅವನಿಗೆ ಮಾನಸಿಕ ಖಾಯಿಲೆ ಇರಬೇಕು. ಅವನು ಅಶ್ವಥ್ ನಾರಾಯಣ ಅಲ್ಲ, ಅಸ್ವಸ್ಥ ನಾರಾಯಣ ಇರಬೇಕು | JANATA NEWS

18 Feb 2023

ಕೊಪ್ಪಳ : ಅವನಿಗೆ ಮಾನಸಿಕ ಖಾಯಿಲೆ ಇರಬೇಕು. ಅವನು ಅಶ್ವಥ್ ನಾರಾಯಣ ಅಲ್ಲ, ಅಸ್ವಸ್ಥ ನಾರಾಯಣ ಇರಬೇಕು. ಅವನು ನನ್ನ ಬಗ್ಗೆ ಹೇಳುತ್ತಾನೆ, ಅವನಿಗೆ ತಲೆ ಸರಿಯಲ್ಲ. ಇವರೆಲ್ಲಾ ನಾಲಾಯಕ್ ರಾಜಕಾರಣಿಗಳು. ಇಂಥವರು ಅಧಿಕಾರದಲ್ಲಿ ಇರಬೇಕಾ ಎಂದರು.

ಈ ಕುರಿತು ಕೊಪ್ಪಳದಲ್ಲಿ ಮಾತನಾಡಿದ ಅವರು, ಸಚಿವ ಅಶ್ವಥ್ ನಾರಾಯಣ ಎನ್ನುವಾತ ಟಿಪ್ಪುವನ್ನು ಹೊಡೆದು ಹಾಕಿದಂತೆ ನನ್ನನ್ನು ಹೊಡೆದಾಕಬೇಕು ಎಂದು ಹೇಳಿದ್ದಾನೆ. ಅವನು ಅಶ್ವಥ್ ನಾರಾಯಣ ಅಲ್ಲ, ಅವನೊಬ್ಬ ಅಸ್ವಸ್ಥ ನಾರಾಯಣ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.

ಬಿಜೆಪಿಯವರು ಅಭಿವೃದ್ಧಿ ಬಗ್ಗೆ ಮಾತನಾಡುತ್ತಿಲ್ಲ. ರಸ್ತೆ, ನೀರು ರೈತರ ಬಗ್ಗೆ ಮಾತನಾಡುತ್ತಿಲ್ಲ. ಲವ್ ಜಿಹಾದ್ ಬಗ್ಗೆ ಮಾತನಾಡು ಎಂದು ಕಟೀಲ್ ಹೇಳ್ತಾನೆ. ಅಮಿತಾ ಶಾ ಅಂತಾ ರಾಜ್ಯಕ್ಕೆ ಬಂದು ಟಿಪ್ಪು ಸುಲ್ತಾನ್ ವರ್ಸಸ್ ಅಬ್ಬಕ್ಕ ಅಂತ ಹೇಳುತ್ತಾನೆ.

ಜನರು ಸಾಮರಸ್ಯದಿಂದ ಇರಬೇಕಾಗಿರುವುದು ಬಿಜೆಪಿಗೆ ಬೇಕಾಗಿಲ್ಲ. ಜನರು ಬಡೆದಾಡುಕೊಂಡು ಇರಬೇಕು. ಒಡೆದಾಳುವ ನೀತಿ ಇರುವುದು ಬಿಜೆಪಿಯಲ್ಲಿದೆ. ಬಿಜೆಪಿಯವರು ಸಮಾಜ ಸೇವೆ ಮರೆತಿದ್ದಾರೆ. ಲೂಟಿ ಹೊಡೆಯುವುದರಲ್ಲಿ ನಿರತರಾಗಿದ್ದಾರೆ ಎಂದರು.

ರಾಜ್ಯವನ್ನು ಹಾದಿ ತಪ್ಪಿ ಸುತ್ತಿರುವ ಕೋಮುವಾದಿ ಬಿಜೆಪಿ ಸರಕಾರವನ್ನು ಮುಂದಿನ ಚುನಾವಣೆಯಲ್ಲಿ ಸೋಲಿಸಿ ಮನೆಗೆ ಕಳುಹಿಸಿ. ಕರ್ನಾಟಕದಲ್ಲಿ ಕಾಂಗ್ರೆಸ್ ಪರವಾದ ಅಲೆಯಿದೆ. ಬಿಜೆಪಿ, ಜೆಡಿಎಸ್ ನ ಹಲವರು ಕಾಂಗ್ರೆಸ್ ಸೇರುತ್ತಿದ್ದಾರೆ. ಬಿಜೆಪಿ, ಜೆಡಿಎಸ್ ಬಗ್ಗೆ ಜನತೆಗೆ ಭ್ರಮ ನಿರಸನವಾಗಿದೆ. ಕೋಮುವಾದಿ ಬಿಜೆಪಿ ದೂರವಿಡಲು ಕಳೆದ ಬಾರಿ ನಾವು 80 ಸ್ಥಾನ ಪಡೆದಿದ್ದರೂ 37 ಸ್ಥಾನ ಪಡೆದಿದ್ದ ಜೆಡಿಎಸ್ ಗೆ ಸಿಎಂ ಸ್ಥಾನ ಬಿಟ್ಟು ಕೊಟ್ಟಿದ್ದೇವು. ಆದರೆ, ಜೆಡಿಎಸ್ ಕೂಡ ಹೇಳಿ ಕೊಳ್ಳುವಂತ ಕೆಲಸ ಮಾಡಲಿಲ್ಲ. ಬಿಜೆಪಿ ಕೋಮುವಾದಿ ಪಕ್ಷವಾಗಿದ್ದು, ದ್ವೇಷದ ರಾಜಕಾರಣ, ಸಾಮರಸ್ಯವನ್ನು ಹಾಳು ಮಾಡುತ್ತಿದೆ ಎಂದು ಕಿಡಿಕಾರಿದರು.

ಈ ಬಾರಿ ಕಾಂಗ್ರೆಸ್ ರಾಜ್ಯದಲ್ಲಿ ಬರುತ್ತದೆ. ಜನರು ಈ ಬಾರಿ ಸಾಕಷ್ಟು ಪ್ರೀತಿ ಕಾಂಗ್ರೆಸ್ ನ ಮೇಲೆ ತೋರಿಸುತ್ತಿದ್ದಾರೆ. ಕಾಂಗ್ರೆಸ್ ಪರವಾದ ಅಲೆಯಿದೆ. ಈ ಬಾರಿ ನೂರಕ್ಕೆ ನೂರು ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದರು.

RELATED TOPICS:
English summary :He must have mental illness. He is not Aswath Narayana, he should be Asvastha Narayana

 ದೆಹಲಿ ಪೊಲೀಸ್ ಕ್ರಮವನ್ನು ಸಮರ್ಥಿಸಿಕೊಂಡ ದೆಹಲಿ ಪೊಲೀಸ್ ಮಹಾಸಂಘ; ರಾಜಕೀಯ ನಿರ್ದೇಶನದ ಆರೋಪ ಸುಳ್ಳು
ದೆಹಲಿ ಪೊಲೀಸ್ ಕ್ರಮವನ್ನು ಸಮರ್ಥಿಸಿಕೊಂಡ ದೆಹಲಿ ಪೊಲೀಸ್ ಮಹಾಸಂಘ; ರಾಜಕೀಯ ನಿರ್ದೇಶನದ ಆರೋಪ ಸುಳ್ಳು
ಪ್ರತಿಭಟನೆಯ ವೇಳೆ ನಡೆದ ಸಂಘರ್ಷದಲ್ಲಿ ಗಾಯಗೊಂಡ ದೆಹಲಿ ಪೊಲೀಸ್ ಸಿಬ್ಬಂದಿಯ ಕುಟುಂಬಗಳಿಂದ ನ್ಯಾಯಕ್ಕಾಗಿ ಆಗ್ರಹ
ಪ್ರತಿಭಟನೆಯ ವೇಳೆ ನಡೆದ ಸಂಘರ್ಷದಲ್ಲಿ ಗಾಯಗೊಂಡ ದೆಹಲಿ ಪೊಲೀಸ್ ಸಿಬ್ಬಂದಿಯ ಕುಟುಂಬಗಳಿಂದ ನ್ಯಾಯಕ್ಕಾಗಿ ಆಗ್ರಹ
ಸಿಜೆಪಿ ಕಾನೂನು ಬೆಂಬಲಕ್ಕೆ ನಿಂತ ಕಪಿಲ್ ಸಿಬಲ್ ಶಿಕ್ಷಣ ಮಂತ್ರಿಯಾಗಿದ್ದಾಗ ಹೆಚ್ಚು ಪೇಪರ್ ಲೀಕ್ - ಬಿಜೆಪಿಯ ಸುಧಾಂಶು ತ್ರಿವೇದಿ
ಸಿಜೆಪಿ ಕಾನೂನು ಬೆಂಬಲಕ್ಕೆ ನಿಂತ ಕಪಿಲ್ ಸಿಬಲ್ ಶಿಕ್ಷಣ ಮಂತ್ರಿಯಾಗಿದ್ದಾಗ ಹೆಚ್ಚು ಪೇಪರ್ ಲೀಕ್ - ಬಿಜೆಪಿಯ ಸುಧಾಂಶು ತ್ರಿವೇದಿ
ಸಂಸತ್ತಿನಲ್ಲಿ ಆಧಾರರಹಿತ ಹೇಳಿಕೆ : ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕೆಂದು ಎನ್‌ಡಿಎ ಸಂಸದರ ಆಗ್ರಹ
ಸಂಸತ್ತಿನಲ್ಲಿ ಆಧಾರರಹಿತ ಹೇಳಿಕೆ : ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕೆಂದು ಎನ್‌ಡಿಎ ಸಂಸದರ ಆಗ್ರಹ
ಪಿಒಜೆಕೆಯಲ್ಲಿ ನಾಗರಿಕರ ಮೇಲೆ ಗುಂಡಿನ ಸುರಿಮಳೆ ಖಂಡಿಸಿ, ಪಾಕಿಸ್ತಾನ ಬೆಂಬಲಿತ ಚುನಾವಣೆಗಳನ್ನು ತೋರಿಕೆಯ ವ್ಯಾಯಾಮ ಎಂದ ಭಾರತ
ಪಿಒಜೆಕೆಯಲ್ಲಿ ನಾಗರಿಕರ ಮೇಲೆ ಗುಂಡಿನ ಸುರಿಮಳೆ ಖಂಡಿಸಿ, ಪಾಕಿಸ್ತಾನ ಬೆಂಬಲಿತ ಚುನಾವಣೆಗಳನ್ನು ತೋರಿಕೆಯ ವ್ಯಾಯಾಮ ಎಂದ ಭಾರತ
6 ಪ್ರಶ್ನೆ ಪತ್ರಿಕೆಗಳ ಸೋರಿಕೆ : ಪಂಜಾಬ್ ಸಚಿವರ ರಾಜೀನಾಮೆಗೆ ಎನ್‌ಡಿಎ ಸಂಸದರ ಆಗ್ರಹ; ಸಂಸತ್ತಿನಲ್ಲಿ ರಾಜಕೀಯ ಜಟಾಪಟಿ
6 ಪ್ರಶ್ನೆ ಪತ್ರಿಕೆಗಳ ಸೋರಿಕೆ : ಪಂಜಾಬ್ ಸಚಿವರ ರಾಜೀನಾಮೆಗೆ ಎನ್‌ಡಿಎ ಸಂಸದರ ಆಗ್ರಹ; ಸಂಸತ್ತಿನಲ್ಲಿ ರಾಜಕೀಯ ಜಟಾಪಟಿ
ಪರೀಕ್ಷಾ ಸುಧಾರಣೆಗಳ ಕುರಿತು ಉನ್ನತ ಅಧಿಕಾರದ ಕಾರ್ಯಪಡೆ ಘೋಷಿಸಿದ ಪ್ರಧಾನಿ ಮೋದಿ : ನೇತೃತ್ವ ವಹಿಸಲು ನಂದನ್ ನಿಲೇಕಣಿ ಆಯ್ಕೆ
ಪರೀಕ್ಷಾ ಸುಧಾರಣೆಗಳ ಕುರಿತು ಉನ್ನತ ಅಧಿಕಾರದ ಕಾರ್ಯಪಡೆ ಘೋಷಿಸಿದ ಪ್ರಧಾನಿ ಮೋದಿ : ನೇತೃತ್ವ ವಹಿಸಲು ನಂದನ್ ನಿಲೇಕಣಿ ಆಯ್ಕೆ
ಅಣೆಕಟ್ಟುಗಳ ಹೂಳೆತ್ತುವಿಕೆ, ಮೇಕೆದಾಟು ಮತ್ತು ಮಹದಾಯಿ ಯೋಜನೆಗಳಿಗೆ ಕೇಂದ್ರದ ಬೆಂಬಲದ ಭರವಸೆ
ಅಣೆಕಟ್ಟುಗಳ ಹೂಳೆತ್ತುವಿಕೆ, ಮೇಕೆದಾಟು ಮತ್ತು ಮಹದಾಯಿ ಯೋಜನೆಗಳಿಗೆ ಕೇಂದ್ರದ ಬೆಂಬಲದ ಭರವಸೆ
ಲೋಕಸಭೆಯಲ್ಲಿ ವಿರೋಧ ಪಕ್ಷಗಳ ಗದ್ದಲ: ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ತಡೆ ಮಸೂದೆ ಮೇಲಿನ ಚರ್ಚೆ ಮುಂದೂಡಿಕೆ
ಲೋಕಸಭೆಯಲ್ಲಿ ವಿರೋಧ ಪಕ್ಷಗಳ ಗದ್ದಲ: ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ತಡೆ ಮಸೂದೆ ಮೇಲಿನ ಚರ್ಚೆ ಮುಂದೂಡಿಕೆ
 ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪ: ಕುನಾಲ್ ಕಮ್ರಾ, ವಾಂಗ್‌ಚುಕ್ ಮತ್ತು ಡಿಪ್ಕೆ ವಿರುದ್ಧ ದೂರು ದಾಖಲು
ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪ: ಕುನಾಲ್ ಕಮ್ರಾ, ವಾಂಗ್‌ಚುಕ್ ಮತ್ತು ಡಿಪ್ಕೆ ವಿರುದ್ಧ ದೂರು ದಾಖಲು
ಪ್ರಶ್ನೆ ಪತ್ರಿಕೆ ಸೋರಿಕೆ ಆದರೆ ಜಿಲ್ಲಾಧಿಕಾರಿಗಳೇ ಹೊಣೆ ಎನ್ನುವುದು ಹೊಣೆಗೇಡಿತನ - ಶಾಸಕ ಯತ್ನಾಳ್
ಪ್ರಶ್ನೆ ಪತ್ರಿಕೆ ಸೋರಿಕೆ ಆದರೆ ಜಿಲ್ಲಾಧಿಕಾರಿಗಳೇ ಹೊಣೆ ಎನ್ನುವುದು ಹೊಣೆಗೇಡಿತನ - ಶಾಸಕ ಯತ್ನಾಳ್
ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ
ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ

ನ್ಯೂಸ್ MORE NEWS...