Fri,Apr26,2024
ಕನ್ನಡ / English

ಡಿ.ರೂಪಾ ಕೇಳಿರುವ ಪ್ರಶ್ನೆಗಳು ನೈತಿಕವಾಗಿವೆ, ಸಂಬಂಧಪಟ್ಟವರು ಉತ್ತರ ನೀಡಲಿ: ಪ್ರತಾಪ್‌ ಸಿಂಹ | JANATA NEWS

20 Feb 2023
2265

ಮೈಸೂರು : ಐಪಿಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಐಜಿಪಿ ಡಿ.ರೂಪ ಅವರು ಕೇಳಿರುವ ಪ್ರಶ್ನೆಗಳು ನೈತಿಕವಾಗಿವೆ. ಇದಕ್ಕೆ ರೋಹಿಣಿ ಸಿಂಧೂರಿ ಮತ್ತು ಸಂಬಂಧಪಟ್ಟವರು ಉತ್ತರ ಕೊಡಬೇಕು ಎಂದು ಸಂಸದ ಪ್ರತಾಪ್‌ ಸಿಂಹ ಒತ್ತಾಯಿಸಿದರು.

ಐಪಿಎಸ್ ಅಧಿಕಾರಿ ರೂಪಾ ಮತ್ತು ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಜಟಪಟಿ ವಿಚಾರಕ್ಕೆ ಸಂಬಂಧಿಸಿದಂತೆ ಇದೀಗ ಸಂಸದ ಪ್ರತಾಪ್ ಸಿಂಹ ಪ್ರತಿಕ್ರಿಯಿಸಿದ್ದು, ಡಿ. ರೂಪಾ ಎತ್ತಿರುವ ಪ್ರಶ್ನೆಗಳು ನೈತಿಕವಾಗಿ ಹಾಗೂ ಕಾನೂನಾತ್ಮಕವಾಗಿವೆ.

ಹೀಗಾಗಿ ಆರೋಪಗಳಿಗೆ ಸಂಬಂಧಿಸಿದಂತೆ ವಾಸ್ತವ ಏನು ನಡೆದಿದೆ ಎಂಬುದರ ಬಗ್ಗೆ ಪತ್ರಕರ್ತರು ಸತ್ಯಶೋಧನೆ ಮಾಡಬೇಕಿದೆ ಎಂದು ಹೇಳಿದ್ದಾರೆ.

ಐಎಎಸ್, ಐಪಿಎಸ್ ಅಧಿಕಾರಗಳ ಮೇಲೆ ರಾಜ್ಯ ಸರ್ಕಾರಕ್ಕೆ ನಿಯಂತ್ರಣ ಇಲ್ಲ ಎಂಬ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್‌ಸಿಂಗ್ ಸುರ್ಜೇವಾಲಾ ಹೇಳಿಕೆ ಬಗ್ಗೆ ಮಾತನಾಡಿದ ಪ್ರತಾಪ್‌ ಸಿಂಹ, ಹಾಸನದಲ್ಲಿ ಮಹಾಮಸ್ತಕಾಭಿಷೇಕ ಆದಾಗ ಯಾರ ಸರ್ಕಾರವಿತ್ತು? ರೋಹಿಣಿ ಸಿಂಧೂರಿ ಅವರು ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಎ.ಮಂಜು ಅವರೊಂದಿಗೆ ಬೀದಿ ರಂಪ ಆಗಿತ್ತು.

ಮೈಸೂರಿನ ರಶ್ಮಿ ಮಹೇಶ್ ಮೇಲೆ ಹಲ್ಲೆ ಮಾಡಿದಾಗ, ಜಿಲ್ಲಾಧಿಕಾರಿ ಶಿಖಾ ಅವರನ್ನು ನಿಂದಿಸಿದಾಗ, ಗಣಪತಿ ಆತ್ಮಹತ್ಯೆ ಮಾಡಿಕೊಂಡಾಗ ರಾಜ್ಯದಲ್ಲಿ ಅಧಿಕಾರಿಗಳ ಸ್ಥಿತಿ ಏನಾಗಿತ್ತು? ರೋಹಿಣಿ ಸಿಂಧೂರಿ ಅವರನ್ನು ತಲೆ ಮೇಲೆ ಕೂರಿಸಿಕೊಂಡವರು ಯಾರು? ರೂಪ ಎತ್ತಿರುವ ನೈತಿಕ, ಕಾನೂನಾತ್ಮಕ ಪ್ರಶ್ನೆಗಳಿಗೆ ಉತ್ತರ ಕಂಡುಕೊಳ್ಳಬೇಕು. ಪತ್ರಕರ್ತರು ಸತ್ಯಶೋಧ ಮಾಡಬೇಕು ಎಂದು ಹೇಳಿದರು.

ಅಧಿಕಾರಿಗಳ ಬಗ್ಗೆ ಹೇಳುವ ಕಾಂಗ್ರೆಸ್ಸಿಗರು ಮೈಸೂರಿನ ಎಟಿಐನಲ್ಲಿ ರಶ್ಮಿ ಮಹೇಶ್ ಮೇಲೆ ಆಕ್ರಮಣವಾಗಿತ್ತು. ಅವತ್ತು ಅಧಿಕಾರಿಗಳ ಪರಿಸ್ಥಿತಿ ಏನಾಗಿತ್ತು? ಐಎಎಸ್ ಸಿ.ಶಿಖಾ ಅವರ ಮೇಲೆ ಕೆ.ಮರೀಗೌಡ ಅವಾಚ್ಯ ಶಬ್ದ ಬಳಸಿದಾಗ ಸಿದ್ದರಾಮಯ್ಯ ಸರ್ಕಾರ ಏನು ಮಾಡಿತ್ತು? ಮಲ್ಲಿಕಾರ್ಜುನ ಬಂಡೆಯನ್ನು ಡ್ರಾಗಾರ್​ನಲ್ಲಿ ಕೊಂದಿದ್ದಾಗ ಯಾವ ಸರ್ಕಾರವಿತ್ತು? ಪೊಲೀಸ್ ಅಧಿಕಾರಿ ಗಣಪತಿ ಆತ್ಮಹತ್ಯೆಯಾದಾಗ ಅಧಿಕಾರಿಗಳ ಸ್ಥಿತಿ ಏನಾಗಿತ್ತು? ಎಂದು ಕಾಂಗ್ರೆಸ್ ಉಸ್ತುವಾರಿ ಸುರ್ಜೆವಾಲ ಅವರಿಗೆ ಮರು ಪ್ರಶ್ನೆ ಹಾಕಿದ್ದಾರೆ.

RELATED TOPICS:
English summary :Questions asked by D. Rupa are ethical, let the concerned answer: Pratap Singh

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ನ್ಯೂಸ್ MORE NEWS...