ಸಿ.ಟಿ.ರವಿ ವಿರುದ್ಧ ಮಾಂಸಾಹಾರ ಸೇವಿಸಿ ದೇವಾಲಯ ಪ್ರವೇಶ ಆರೋಪ | JANATA NEWS
ಕಾರವಾರ : ಮಾಂಸಾಹಾರ ಸೇವಿಸಿ ದೇವಾಲಯ ಪ್ರವೇಶದ ಆರೋಪವನ್ನ ಕಾಂಗ್ರೆಸ್ ನಾಯಕರು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಮೇಲೆ ಮಾಡಿದ್ದಾರೆ.
ಫೆಬ್ರವರಿ 19 ರಂದು ಭಾನುವಾರ ಉತ್ತರ ಕನ್ನಡ ಜಿಲ್ಲೆಗೆ ಸಿ.ಟಿ.ರವಿ ಆಗಮಿಸಿದ್ದರು. ಕಾರವಾರದ ಶಿವಾಜಿ ಜಯಂತಿಯಲ್ಲಿ ಭಾಗವಹಿಸಿ ಭಟ್ಕಳಕ್ಕೆ ಸಿ.ಟಿ.ರವಿ ಆಗಮಿಸಿದ್ದರು. ಭಟ್ಕಳದ ಶಿರಾಲಿಯಲ್ಲಿರುವ ಶಾಸಕ ಸುನಿಲ್ ನಾಯ್ಕ್ ಮನೆಯಲ್ಲಿ ಸಿ.ಟಿ.ರವಿ ಬಾಡೂಟ ಸವಿದಿದ್ದರು. ಬಾಡೂಟ ಸವಿದಿರುವ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಬಾಡೂಟ ಸವಿದು ಭಟ್ಕಳ ನಗರದ ಹಳೇ ಬಸ್ ನಿಲ್ದಾಣ ಸಮೀಪ ಇರುವ ನಾಗಬನ ಹಾಗೂ ಕರಿಬಂಟ ಹನುಮ ದೇವಸ್ಥಾನಕ್ಕೆ ಸಿ.ಟಿ.ರವಿ ಭೇಟಿ ನೀಡಿದ್ದರು. ಭಟ್ಕಳ ಶಾಸಕ ಸುನಿಲ್ ನಾಯ್ಕ್ ಹಾಗೂ ದೇವಸ್ಥಾನದ ಕಮಿಟಿ ಸದಸ್ಯರೊಂದಿಗೆ ಸಿ.ಟಿ.ರವಿ ದೇವಸ್ಥಾನಕ್ಕೆ ತೆರಳಿದ್ದರು. ನಾಗಬನದ ಬಾಗಿಲು ಹಾಕಿದ್ದರಿಂದ ಗೇಟ್ ಮುಂಭಾಗದಲ್ಲಿ ದೇವರಿಗೆ ಸಿ.ಟಿ.ರವಿ ನಮಸ್ಕಾರ ಸಲ್ಲಿಸಿದ್ದರು.
ಶಾಸಕರ ಮನೆಯಲ್ಲಿ ಮಾಂಸಾಹಾರ ಸೇವಿಸಿದ್ದ ಸಿ.ಟಿ ರವಿ ಆಮೇಲೆ ಭಟ್ಕಳ ನಗರದ ನಾಗಬನ, ಕರಿಬಂಟ ಹನುಮ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಭಟ್ಕಳ ಶಾಸಕ ಸುನಿಲ್ ನಾಯ್ಕ್ ಹಾಗೂ ದೇವಸ್ಥಾನದ ಕಮಿಟಿ ಸದಸ್ಯರು ಅವರಿಗೆ ಸಾಥ್ ನೀಡಿದ್ದಾರೆ. ಹೀಗಾಗಿ ಮಾಂಸ ತಿಂದು ಸಿ.ಟಿ.ರವಿ ಅವರು ದೇವರ ದರ್ಶನ ಮಾಡಿದ್ರಾ ಎಂದು ಕಾಂಗ್ರೆಸ್ ನಾಯಕರು ಪ್ರಶ್ನಿಸುತ್ತಿದ್ದಾರೆ.
ಸಿ.ಟಿ.ರವಿ ಅವರು ಮಾಂಸಾಹಾರ ಸೇವಿಸಿ ಹನುಮ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ ಎನ್ನಲಾಗುತ್ತಿದೆ. ಸಿ.ಟಿ.ರವಿ ಅವರ ಮಾಂಸಾಹಾರದ ಫೋಟೋ ಭಟ್ಕಳದಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿದೆ.