Tue,May21,2024
ಕನ್ನಡ / English

ಅತ್ತೆಯ ಕತ್ತು ಕೊಯ್ದು ಬರ್ಬರವಾಗಿ ಕೊಲೆಗೈದ ಅಳಿಯ! | JANATA NEWS

25 Feb 2023
2609

ಬೆಂಗಳೂರು : ಅತ್ತೆಯನ್ನೇ ಅಳಿಯ ಕೊಚ್ಚಿ ಕೊಲೆಗೈದಿರುವ ಘಟನೆ ಕೆಂಗೇರಿ ಠಾಣಾ ವ್ಯಾಪ್ತಿಯ ನಾಗದೇವನಹಳ್ಳಿಯ ಬೃಂದಾವನ ಲೇಔಟ್​ನಲ್ಲಿ ನಡೆದಿದೆ.

ಏಳರಸಿ (48) ತನ್ನ ಅಳಿಯ ದಿವಾಕರ್ (38) ನಿಂದ ಕೊಲೆಯಾದ ಮಹಿಳೆಯಾಗಿದ್ದಾರೆ. ದಿವಾಕರ್​ ಕೊಲೆಗೈದು ಪರಾರಿಯಾಗಿರುವ ಆರೋಪಿಯಾಗಿದ್ದಾನೆ.

ಮೃತ ಏಳರಸಿಯ ಮೊದಲನೇ ಮಗಳು ತಮಿಳರಸಿಯ ಜೊತೆಗೆ ದಿವಾಕರ್ ವಿವಾಹವಾಗಿದ್ದು, ಕೆಜಿಎಫ್ ಬಳಿ ವಾಸವಿದ್ದನು. ಮದುವೆಯಾಗಿ 12 ವರ್ಷಗಳಾಗಿದ್ದು, ದಂಪತಿಗೆ ಇಬ್ಬರು ಹೆಣ್ಣು ಮಕ್ಕಳು ಕೂಡ ಇದ್ದಾರೆ. ಈ ಹಿಂದೆಯೂ ಸಾಕಷ್ಟು ಬಾರಿ ಹಲವು ಕಾರಣಗಳಿಗೆ ಇಬ್ಬರ ಮಧ್ಯೆ ಗಲಾಟೆಗಳಾಗಿ, ಕೋರ್ಟ್​ವರೆಗೂ ಹೋಗಿತ್ತು. ನಂತರ ಕಾಂಪ್ರಮೈಸ್​ ಆಗಿ ಇಬ್ಬರು ಜೊತೆಯಾಗಿಯೇ ಜೀವನ ನಡೆಸುತ್ತಿದ್ದರು ಎನ್ನಲಾಗಿದೆ.

ಶಿವರಾತ್ರಿ ಹಬ್ಬಕ್ಕೆಂದು ತವರಿಗೆ ತೆರಳಿದ್ದ ಪತ್ನಿ ಮನೆಗೆ ಬರುವುದು ವಿಳಂಬವಾಯಿತು ಎಂಬ ಕಾರಣಕ್ಕೆ ಆತ ಹಾಗೂ ಆತನ ಪತ್ನಿ ಮಧ್ಯೆ ಜಗಳವಾಗಿದೆ. ಪತ್ನಿಯ ಮೇಲೆ ಕೋಪಗೊಂಡಿದ್ದ ದಿವಾಕರ್ ಒಬ್ಬಳು ಮಗಳನ್ನು ಬೆಂಗಳೂರಿನ ಬೃಂದಾವನ ಲೇಔಟ್​ನಲ್ಲಿರುವ ತನ್ನ ಸಹೋದರಿಯ ಮನೆಗೆ ಕರೆದುಕೊಂಡು ಬಂದಿದ್ದ‌ನು. ಎಕ್ಸಾಂ ಇದೆ, ಆದ್ದರಿಂದ ಮಗಳನ್ನು ಕಳುಹಿಸಿಕೊಡುವಂತೆ ಕೇಳಿದ್ದಾರೆ. ಆದರೆ, ಆತ ಕಳುಹಿಸಿಕೊಟ್ಟಿಲ್ಲ.

ದಿವಾಕರ್​ ಅವರ ಅತ್ತೆ ಹಾಗೂ ಅವರ ಇನ್ನಿಬ್ಬರು ಮಕ್ಕಳು ಸೇರಿ, ಕೆಂಗೇರಿ ವ್ಯಾಪ್ತಿಯಲ್ಲಿರುವ ದಿವಾಕರ್​ನ ತಂಗಿ ಮನೆಗೆ ಬಂದಿದ್ದರು. ಆಗಲೂ ಮಗಳನ್ನು ತಮ್ಮೊಂದಿಗೆ ಕಳುಹಿಸಿಕೊಡುವಂತೆ ಕೇಳಿಕೊಂಡಿದ್ದಾರೆ. ದಿವಾಕರ ಒಪ್ಪದ ಕಾರಣ ಅಳಿಯ ದಿವಾಕರ್ ಹಾಗೂ ಏಳಲ್​ ಅರಸಿ ಜೊತೆ ಜಗಳ ನಡೆದಿದೆ. ಮಾತಿಗೆ ಮಾತು ಬೆಳೆದು, ಏಳರಸಿಯ ಕುತ್ತಿಗೆಗೆ ಚಾಕುವಿನಿಂದ ಇರಿದಿದ್ದಾನೆ, ಆಕೆ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ತಡೆಯಲು ಬಂದಿದ್ದ ಆಕೆಯ ಮಗಳ ಕೈಗೆ ಕೂಡ ಗಾಯವಾಗಿತ್ತು. ಘಟನೆ ಸಂಬಂಧ ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

RELATED TOPICS:
English summary :The son-in-law brutally murdered his mother-in-law

ಲೋಕಸಭೆ ಚುನಾವಣೆ ನಂತರ ಸಚಿವ ಸಂಪುಟ ಪುನಾರಚನೆ ಬಗ್ಗೆ ಯೋಚಿಸುತ್ತಿಲ್ಲ - ಸಿಎಂ ಸಿದ್ದರಾಮಯ್ಯ
ಲೋಕಸಭೆ ಚುನಾವಣೆ ನಂತರ ಸಚಿವ ಸಂಪುಟ ಪುನಾರಚನೆ ಬಗ್ಗೆ ಯೋಚಿಸುತ್ತಿಲ್ಲ - ಸಿಎಂ ಸಿದ್ದರಾಮಯ್ಯ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ನ್ಯೂಸ್ MORE NEWS...