Fri,Mar31,2023
ಕನ್ನಡ / English

ಆಸ್ತಿಗಾಗಿ ತಂದೆ ಕೊಲೆಗೆ ಸಪಾರಿ ನೀಡಿದ್ದ ಮಗ ಸೇರಿ ಮೂವರ ಬಂಧನ | JANATA NEWS

27 Feb 2023
613

ಬೆಂಗಳೂರು : ತಂದೆಯ ಕೊಲೆಗೆ ಮಗನೇ 1 ಕೋಟಿ ರೂ. ಸುಪಾರಿ ಕೊಟ್ಟಿದ್ದ ಘಟನೆ ಬೆಳಕಿಗೆ ಬಂದಿದೆ. ಮಗ ಮೂವರು ಆರೋಪಿಗಳನ್ನ ಮಾರತ್ ಹಳ್ಳಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

70 ವರ್ಷದ ನಾರಾಯಣಸ್ವಾಮಿ ಎಂಬುವರ ಕೊಲೆಗೆ ಸುಪಾರಿ ನೀಡಿದ ಪುತ್ರ ಮಣಿಕಂಠ, ಸುಪಾರಿ ಪಡೆದ ರೌಡಿಶೀಟರ್ ಶಿವಕುಮಾರ್ ಹಾಗೂ ನವೀನ್ ಎಂಬುವರನ್ನ ಬಂಧಿಸಲಾಗಿದೆ.

ಪುತ್ರ, ತನ್ನ ತಂದೆ ನಾರಾಯಣಸ್ವಾಮಿಯ (70) ಕೊಲೆ ಮಾಡಿಸಲು 1 ಕೋಟಿ ರೂ. ಸುಪಾರಿ ನೀಡಿದ್ದ. ಆದರೆ ಅದರಲ್ಲಿ ವಿಚಿತ್ರ ವಿಚಾರ ಏನೆಂದರೆ ಕೇವಲ ಒಂದು ಲಕ್ಷ ಅಡ್ವಾನ್ಸ್ ಪಡೆದ ಹಂತಕರು ಅಪಾರ್ಟ್​ಮೆಂಟ್​ನ ಪಾರ್ಕಿಂಗ್ ಲಾಟ್​ನಲ್ಲಿ‌ ಮಾರಕಾಸ್ತ್ರಗಳಿಂದ ಬರ್ಬರವಾಗಿ ಕೊಚ್ಚಿ ಕೊಲೆ‌ ಮಾಡಿ ಪರಾರಿಯಾಗಿದ್ದರು.

ಪ್ರಕರಣ ದಾಖಲಿಸಿಕೊಂಡ ಪೊಲೀಸರು ಪುತ್ರ ಮಣಿಕಂಠನನ್ನ ವಶಕ್ಕೆ‌ ಪಡೆದು ವಿಚಾರಣೆ ನಡೆಸಿದಾಗ ಸುಪಾರಿ ನೀಡಿದ ಸಂಗತಿ ಬೆಳಕಿಗೆ ಬಂದಿತ್ತು. ಅಪ್ಪ-ಮಗನ ನಡುವೆ ಆಸ್ತಿ ವಿಚಾರಕ್ಕೆ ಗಲಾಟೆ ನಡೆಯುತ್ತಿತ್ತು. ಹೀಗಾಗಿ ತಂದೆ ಮುಗಿಸಲು 1 ಕೋಟಿ ಸುಪಾರಿ ನೀಡಿ ಮಾತುಕತೆ ನಡೆಸಿ ಮುಂಗಡವಾಗಿ 1 ಲಕ್ಷ ನೀಡಿರುವುದು ಗೊತ್ತಾಗಿದೆ.

ಸುಪುತ್ರ ಮಣಿಕಂಠ 2013ರಲ್ಲಿ ತನ್ನ ಪತ್ನಿಯನ್ನ ಕೊಲೆ ಮಾಡಿದ್ದ. ಕಳೆದ ಐದು ತಿಂಗಳ ಹಿಂದೆ ಈತನ ವಿರುದ್ಧ ಮಾರತ್ ಹಳ್ಳಿ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣ ದಾಖಲಾಗಿತ್ತು. ಜಾಮೀನು ಪಡೆದು ಹೊರಬಂದು ಎರಡನೇ ವಿವಾಹವಾಗಿ ಒಂದು ಹೆಣ್ಣು ಮಗುವಿದೆ.ಹೀಗಿದ್ದರೂ ಮತ್ತೊಬ್ಬ ಮಹಿಳೆಯೊಂದಿಗೆ ಸಲುಗೆ ಬೆಳೆಸಿಕೊಂಡಿದ್ದ‌. ಈ ವಿಚಾರ ಗೊತ್ತಾಗುತ್ತಿದ್ದಂತೆ ಎರಡನೇ ಪತ್ನಿ ಮಣಿಕಂಠನಿಂದ ದೂರವಾಗಿ ವಿಚ್ಚೇದನದ ಮಾತುಕತೆ ನಡೆಯುತಿತ್ತು.

ಇದನ್ನು ತಿಳಿದ ನಾರಾಯಣಸ್ವಾಮಿ ತನ್ನ ಹೆಸರಿನಲ್ಲಿದ್ದ ಪ್ಲ್ಯಾಟ್ ನ್ನ ಸೊಸೆಗೆ ರಿಜಿಸ್ಟರ್ ಮಾಡಲು ಮುಂದಾಗಿದ್ದ. ತಂದೆ ಕೊಂದರೆ ಆಸ್ತಿ ತನ್ನ ಹೆಸರಿಗೆ ಇರುತ್ತೆ ಸುಖವಾಗಿ ಇರಬಹುದು ಎಂದು ಪ್ಲಾನ್ ಮಾಡಿದ ಮಣಿಕಂಠ ತಂದೆಯ ಹತ್ಯೆಗೆ ಸುಪಾರಿ ನೀಡಿದ್ದ.

RELATED TOPICS:
English summary :Arrest of three including the son, whose father had offered to kill him for property

ಸಿದ್ದರಾಮಯ್ಯ ಕುರಿತು ಸಿನಿಮಾ, ಪೋಸ್ಟರ್ ಔಟ್
ಸಿದ್ದರಾಮಯ್ಯ ಕುರಿತು ಸಿನಿಮಾ, ಪೋಸ್ಟರ್ ಔಟ್
ಮಚ್ಚು ಹಿಡಿದು ಪತ್ನಿಯ ಕೊಲೆಗೆ ಯತ್ನಿಸಿದ ಕುಡುಕ ಗಂಡ
ಮಚ್ಚು ಹಿಡಿದು ಪತ್ನಿಯ ಕೊಲೆಗೆ ಯತ್ನಿಸಿದ ಕುಡುಕ ಗಂಡ
ರಸ್ತೆ ದಾಟುವಾಗ ಖಾಸಗಿ ಬಸ್ ಡಿಕ್ಕಿ ಹೊಡೆದು ಮಹಿಳೆ ಸಾವು
ರಸ್ತೆ ದಾಟುವಾಗ ಖಾಸಗಿ ಬಸ್ ಡಿಕ್ಕಿ ಹೊಡೆದು ಮಹಿಳೆ ಸಾವು
ವರುಣಾದಲ್ಲೂ ಸಿದ್ದರಾಮಯ್ಯ ಗೆಲುವು ಅಷ್ಟು ಸುಲಭವಲ್ಲ : ಬಿ.ಎಸ್.ಯಡಿಯೂರಪ್ಪ
ವರುಣಾದಲ್ಲೂ ಸಿದ್ದರಾಮಯ್ಯ ಗೆಲುವು ಅಷ್ಟು ಸುಲಭವಲ್ಲ : ಬಿ.ಎಸ್.ಯಡಿಯೂರಪ್ಪ
ನಂದಿನಿ ಮೊಸರು ಪಾಕೆಟ್ ಮೇಲೆ ದಹಿ ಪದ: ಇದು ಕನ್ನಡಿಗರ ಮೇಲೆ ಬಿಜೆಪಿಯ ದಮ್ಮು ತಾಕತ್ತಿನ ಪ್ರದರ್ಶನವೇ?
ನಂದಿನಿ ಮೊಸರು ಪಾಕೆಟ್ ಮೇಲೆ ದಹಿ ಪದ: ಇದು ಕನ್ನಡಿಗರ ಮೇಲೆ ಬಿಜೆಪಿಯ ದಮ್ಮು ತಾಕತ್ತಿನ ಪ್ರದರ್ಶನವೇ?
ದೈವನರ್ತನ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ದೈವ ನರ್ತಕ‌ ಸಾವು
ದೈವನರ್ತನ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ದೈವ ನರ್ತಕ‌ ಸಾವು
ಮುಸ್ಲಿಂ ಸಮುದಾಯಕ್ಕೆ ನಾವು ಅನ್ಯಾಯ ಮಾಡಿಲ್ಲ: ಬಿಎಸ್​ ಯಡಿಯೂರಪ್ಪ
ಮುಸ್ಲಿಂ ಸಮುದಾಯಕ್ಕೆ ನಾವು ಅನ್ಯಾಯ ಮಾಡಿಲ್ಲ: ಬಿಎಸ್​ ಯಡಿಯೂರಪ್ಪ
ಮಧ್ಯಾಹ್ನದ ಬಿಸಿ ಊಟ ಸೇವಿಸಿ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಅಸ್ವಸ್ಥ
ಮಧ್ಯಾಹ್ನದ ಬಿಸಿ ಊಟ ಸೇವಿಸಿ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಅಸ್ವಸ್ಥ
ನವಜಾತ ಶಿಶುವನ್ನು ದೇವಾಲಯದ ‌ಬಳಿ ಬಿಟ್ಟು ಹೋದ ಪಾಪಿಗಳು!
ನವಜಾತ ಶಿಶುವನ್ನು ದೇವಾಲಯದ ‌ಬಳಿ ಬಿಟ್ಟು ಹೋದ ಪಾಪಿಗಳು!
ಕಳೆದ ಬಾರಿಯಂತೆ ಈ ಬಾರಿಯೂ ಜೆಡಿಎಸ್​-ಬಿಜೆಪಿ ಮ್ಯಾಚ್​ ಫಿಕ್ಸಿಂಗ್
ಕಳೆದ ಬಾರಿಯಂತೆ ಈ ಬಾರಿಯೂ ಜೆಡಿಎಸ್​-ಬಿಜೆಪಿ ಮ್ಯಾಚ್​ ಫಿಕ್ಸಿಂಗ್
ಮೇ 10 ಮತದಾನದ ದಿನ ಅಲ್ಲ, ಭ್ರಷ್ಟಾಚಾರ ತೆಗೆದುಹಾಕುವ ದಿನ: ಡಿ ಕೆ ಶಿವಕುಮಾರ್​
ಮೇ 10 ಮತದಾನದ ದಿನ ಅಲ್ಲ, ಭ್ರಷ್ಟಾಚಾರ ತೆಗೆದುಹಾಕುವ ದಿನ: ಡಿ ಕೆ ಶಿವಕುಮಾರ್​
ಚುನಾವಣೆ ಘೋಷಣೆ ಬೆನ್ನಲ್ಲೇ ನೀತಿ ಸಂಹಿತೆ ಉಲ್ಲಂಘನೆ!
ಚುನಾವಣೆ ಘೋಷಣೆ ಬೆನ್ನಲ್ಲೇ ನೀತಿ ಸಂಹಿತೆ ಉಲ್ಲಂಘನೆ!

ನ್ಯೂಸ್ MORE NEWS...