ರಾಜ್ಯ ಬಿಜೆಪಿ ಸರ್ಕಾರ ದಕ್ಷವಾಗಿರುವುದರಿಂದಲೇ ಪಕ್ಷದ ಶಾಸಕರ ಮನೆಗಳ ಮೇಲೂ ಲೋಕಾಯುಕ್ತ ದಾಳಿ ನಡೆಯುತ್ತಿವೆ | JANATA NEWS
ಚಿಕ್ಕಮಗಳೂರು : ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷ ಪುತ್ರನ ಮನೆ ಮೇಲೆ ಲೋಕಾಯುಕ್ತ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಸಿಟಿ ರವಿ ಪ್ರತಿಕ್ರಿಯೆ ನೀಡಿದ್ದಾರೆ.
ಗುತ್ತಿಗೆದಾರನಿಗೆ ಗುತ್ತಿಗೆ ಕೊಡಿಸೋದಕ್ಕೆ ಲಂಚಕ್ಕೆ ಬೇಡಿಕೆ ಇಟ್ಟಂತ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರನ ಮೇಲೆ ಲೋಕಾಯುಕ್ತ ದಾಳಿಯಾಗಿದೆ. ಈ ಪ್ರಕರಣದಲ್ಲಿ ಶಾಸಕ ಹಾಗೂ ಪುತ್ರನ ವಿರುದ್ಧ ಎಫ್ಐಆರ್ ಕೂಡ ಆಗಿದೆ.
ಇಂತಹ ಕೇಸ್ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಆಗಿದ್ದರೇ ರೇಡ್ ಆಗುತ್ತಿರಲಿಲ್ಲ. ಹಿಂದೆ ಕಾಂಗ್ರೆಸ್ ಆಡಳಿತವಿದ್ದಾಗ ಎಸಿಬಿಯ ಮೂಲಕ 54 ಪ್ರಕರಣಗಳಿಗೆ ಕ್ಲೀನ್ ಚಿಟ್ ಕೊಟ್ಟರು. ಮಕ್ಕಳ ಹಾಸಿಗೆ ದಿಂಬು ಪ್ರಕರಣ, ಸಣ್ಣ ನೀರಾವರಿ ಕೇಸ್, ಮರಳು ದಂಧೆಯ ಆರೋಪಿಗಳಿಗೆ ಕ್ಲೀನ್ ಚಿಟ್ ನೀಡಲಾಗಿದೆ. ಕೇಸ್ ಮುಚ್ಚಿ ಹಾಕೋ ಕೆಲಸವನ್ನು ಮಾಡುತ್ತಿದ್ದರು ಎಂಬುದಾಗಿ ಶಾಸಕ ಸಿ.ಟಿ ರವಿ ಹೇಳಿದ್ದಾರೆ.