ಸಿಲಿಂಡರ್ ಸ್ಫೋಟ: ಅಂಗಡಿ ಎದುರು ಆಟವಾಡುತ್ತಿದ್ದ ಬಾಲಕನ ದಾರುಣ ಸಾವು | JANATA NEWS

ಬೆಂಗಳೂರು : ಬೆಂಗಳೂರಿನ ಹೆಬ್ಬಾಳದ ಗುಡ್ಡದಹಳ್ಳಿಯ ಅಂಗಡಿಯೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡು, 13 ವರ್ಷದ ಮಹೇಶ್ ಎಂಬ ಬಾಲಕ ಸಾವಿಗೀಡಾಗಿದ್ದಾನೆ.
ಯಾದಗಿರಿಯ ರಾಮಸಮುದ್ರ ಮೂಲದ ಮಲ್ಲಪ್ಪ ಹಾಗೂ ಸರಸ್ಪತಿ ದಂಪತಿ ಎರಡನೇ ಮಗ ಮಹೇಶ್, ಚೋಳನಾಯನಕಹಳ್ಳಿಯ ಸರ್ಕಾರಿ ಶಾಲೆಯಲ್ಲಿ ಆರನೇ ತರಗತಿ ವ್ಯಾಸಂಗ ಮಾಡುತ್ತಿದ್ದ.
ಮೃತನ ದಂಪತಿ ಹಲವು ವರ್ಷಗಳಿಂದ ಕೂಲಿ ಕೆಲಸ ಮಾಡುತ್ತಿದ್ದರು. ದೇವರಾಜ್ ಎಂಬುವರಿಗೆ ಸೇರಿದ ಸಿಲಿಂಡರ್ ಅಂಗಡಿಯೊಂದರಲ್ಲಿ ಲಿಯಾಕತ್ ಎಂಬಾತ ಸಿಲಿಂಡರ್ ರಿಫಿಲ್ಲಿಂಗ್ ಮಾಡುವಾಗ ಉಂಟಾದ ಅನಿಲ ಸೋರಿಕೆಯಿಂದ ಸ್ಫೋಟಗೊಂಡಿದೆ.
ಅಂಗಡಿ ಬಳಿ ಆಟವಾಡುತ್ತಿದ್ದ ಮಹೇಶ್ ಗೆ ಸ್ಫೋಟದ ರಭಸಕ್ಕೆ ಬಾಲಕನ ದೇಹ ಛಿದ್ರಗೊಂಡಿದೆ.ಕೂಡಲೇ ಸ್ಥಳೀಯರು ನೆರವಿನಿಂದ ಪೋಷಕರು ಖಾಸಗಿ ಆಸ್ಪತ್ರೆಯಲ್ಲಿ ಸೇರಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಮೃತದೇಹದ ಮುಂದೆ ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ.
ಈ ಘಟನೆ ಬಳಿಕ ರಿಯಾಕತ್ ಎಸ್ಕೇಪ್ ಆಗಿದ್ದು, ಆತನ ವಿರುದ್ಧ ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.