Mon,May20,2024
ಕನ್ನಡ / English

ಶಿವಾಜಿ ಪ್ರತಿಮೆಯನ್ನು ಮತ್ತೊಮ್ಮೆ ಅನಾವರಣಗೊಳಿಸಿದ ಲಕ್ಷ್ಮಿ ಹೆಬ್ಬಾಳ್ಕರ್ | JANATA NEWS

05 Mar 2023
1652

ಬೆಳಗಾವಿ : ರಾಜಹಂಸಗಡ ಕೋಟೆಯಲ್ಲಿ ಇಂದು ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್​​ ಮತ್ತೊಮ್ಮೆ ಶಿವಾಜಿ ಪ್ರತಿಮೆ ಅನಾವರಣಗೊಳಿಸಿದ್ದಾರೆ.

ಬೆಳಗಾವಿ ಗ್ರಾಮೀಣ ಕ್ಷೇತ್ರದ ರಾಜಹಂಸಗಡ ಕೋಟೆ ಆವರಣದಲ್ಲಿರುವ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಯನ್ನು ಉದ್ಘಾಟಿಸಿ ಬಳಿಕ ಮಾತನಾಡಿದ ಲಕ್ಷ್ಮೀ ಹೆಬ್ಬಾಳ್ಕರ್​ , ನಿಮ್ಮೆಲ್ಲರ ಮಗಳಾಗಿ 2018ರಲ್ಲಿ ಪ್ರಮಾಣ ಮಾಡಿದ್ದೆ. ಧೈರ್ಯಕ್ಕೆ ಏನೂ ಲಕ್ಷ್ಮೀ ಹೆಬ್ಬಾಳ್ಕರ್ ಕಡಿಮೆ ಇಲ್ಲ. ಆದ್ರೇ ಇವತ್ತು ಭಾವುಕ ಆಗಿದ್ದೇನೆ. ಕೊಡಬಾರದಷ್ಟು ಕಷ್ಟ ಕೊಡುತ್ತಿದ್ದಾರೆ. ಹೀಗಾಗಿ ಭಾವುಕ ಆಗಿದ್ದೇನೆ.

ನನ್ನ ಮೇಲೆ ಬಿಜೆಪಿ ಸರ್ಕಾರ ಎರಡು ಕೇಸ್ ಹಾಕಿದೆ, ನಾನು ಏನು ಮಾತನಾಡಲಿಲ್ಲ. ಬಹಳ ವಿನಮ್ರತೆಯಿಂದ ಸತ್ಯಮೇವ ಜಯತೇ ಅಂತಾ ಕೆಲಸ ಮಾಡಿದೆ. ಬಹಳ ಜನ ಬರ್ತಾರೆ, ಪಹಣಿ ಮಾಡ್ತಾರಂತೆ. ಶಿಷ್ಟಾಚಾರದ ಪ್ರಕಾರ ಉದ್ಘಾಟನೆ ಮಾಡ್ತಾರಂತೆ. ಸಿಎಂ ಮೇಲೆ ನನಗೆ ಹೆಚ್ಚಿನ ಗೌರವ ಇದೆ, ಅವರದ್ದೇನು ತಪ್ಪಿಲ್ಲ. ಅವರ ಮೇಲೆ ರಾಜಕೀಯ ಒತ್ತಡ ಹಾಕಿ ಶಿವಾಜಿ ಪ್ರತಿಮೆ ಲೋಕಾರ್ಪಣೆ ಮಾಡಿಸಿದ್ದಾರೆ.

ಶಿವಾಜಿ ಪ್ರತಿಮೆ ಇನ್ನೂ ಪೂರ್ಣಗೊಂಡಿರಲಿಲ್ಲ. ಸಂಜಯ್ ಪಾಟೀಲ್, ಗೋಕಾಕ್‌ ಶಾಸಕ ಇಲ್ಲಿ ಭೇಟಿ ನೀಡಿ ಹೋದ ಬಳಿಕ ಒಂದು ದಿನ ಬರಲಿಲ್ಲ. ಅವರು ಪ್ರಧಾನಿ ಮೋದಿ ಕಾರ್ಯಕ್ರಮದಲ್ಲಿ ನಿರತರಾಗಿದ್ದರು. ಅಷ್ಟೇ ಅಲ್ಲದೇ ಅಂದು ನಮ್ಮ ಮಹಾರಾಜರ ಪ್ರತಿಮೆ ಪಕ್ಕದಲ್ಲಿಯೇ ಪೊರಕೆ, ಪೇಂಟ್ ಬಕೆಟ್ ಇತ್ತು. ಕೇವಲ 12 ನಿಮಿಷದಲ್ಲಿ ಅಪೂರ್ಣ ಮೂರ್ತಿ ಉದ್ಘಾಟನೆ ಮಾಡಿ ಅಪಮಾನ ಮಾಡಿದ್ದರು. ಶಿವಭಕ್ತರ ಅಪಮಾನ ಮಾಡಿದ್ರು, ರಾಜಕಾರಣ ಮಾಡಿದ್ದಾರೆ‌ ಎಂದು ಕಿಡಿಕಾರಿದರು.

ಯಾರಾರೋ ಬಂದು ಶಿಷ್ಟಾಚಾರ ಬಂದು ಮಾತನಾಡುತ್ತಾರೆ. ಸಿಎಂ ಬಸವರಾಜ ಬೊಮ್ಮಾಯಿ ಬಗ್ಗೆ ಗೌರವ ಇದೆ. ಅವರ ದಿಕ್ಕು ತಪ್ಪಿಸಿ, ಕರೆದುಕೊಂಡು ಬಂದು ಉದ್ಘಾಟನೆ ಮಾಡಿಸಿದ್ರು. ಅರ್ಧ ಬಣ್ಣ ಬಳಿದ ಮೂರ್ತಿಯನ್ನು 12 ನಿಮಿಷದಲ್ಲಿ ಉದ್ಘಾಟನೆ ಮಾಡಿದ್ರು. ಶಿವಾಜಿ ಮಹಾರಾಜರಿಗೆ ಮಾಡಿದ ದೊಡ್ಡ ಅಪಮಾನ ಎಂದು ಹೆಸರು ಹೇಳದೇ ರಮೇಶ್ ಜಾರಕಿಹೊಳಿ ವಿರುದ್ಧ ಕಿಡಿಕಾರಿದರು.

ತಪ್ಪು ಮಾಡಿದ್ರು, ಪ್ರತಿಷ್ಠಾಪನೆ ವಿಚಾರದಲ್ಲಿ ಅವರು ರಾಜಕೀಯ ಮಾಡಿದ್ರು. ಸಿದ್ದೇಶ್ವರನ ಮೇಲೆ ಪ್ರಮಾಣ ಮಾಡುತ್ತೇನೆ. ಈ ವಿಚಾರದಲ್ಲಿ ನಾನು ರಾಜಕೀಯ ಮಾಡಿಲ್ಲ. ಡಿಕೆ ಶಿವಕುಮಾರ್​ ಮಂತ್ರಿಯಾಗಿದ್ದ ವೇಳೆಯಲ್ಲಿ ಮೂರು ತಿಂಗಳಲ್ಲಿ ಅನುದಾನ ಬಿಡುಗಡೆ ಮಾಡಿಸಿದ್ದೆ. ನಂತರ ಕೊವಿಡ್, ಪ್ರವಾಹದಿಂದ ವಿಳಂಬವಾಯಿತು. ಈಗ ಚುನಾವಣೆ ಬಂದಿದೆ. ಪ್ರತಿಮೆ ಉದ್ಘಾಟನೆಯನ್ನ ಚುನಾವಣೆ ಬಳಸುವ ಅವಶ್ಯಕತೆ ನನಗೆ ಇಲ್ಲ. ಪುಣ್ಯದ ಕೆಲಸ ಮಾಡಲು ನನಗೆ ಅವಕಾಶ ಕೊಟ್ಟರಿ ಇದು ನಮ್ಮ ಭಾಗ್ಯ ಎಂದರು. ಈ ಕೆಲಸ ನಾನಲ್ಲ ನಾವು ಎಲ್ಲರೂ ಸೇರಿ ಮಾಡಿದ್ದೇವೆ ಎಂಬ ಅಭಿಮಾನವಿದೆ ಎಂದು ಹೇಳಿದರು.

RELATED TOPICS:
English summary :Lakshmi Hebbalkar unveiled the statue of Shivaji again

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...