Thu,Apr25,2024
ಕನ್ನಡ / English

ವಿವಾಹವಾದ ಮರುದಿನವೇ ಬೆಂಗ್ಳೂರು ಟ್ರಾಫಿಕ್​ನಲ್ಲಿ ಪತ್ನಿ ಬಿಟ್ಟು ಪತಿ ಎಸ್ಕೇಪ್​! | JANATA NEWS

09 Mar 2023
1957

ಬೆಂಗಳೂರು : ನವವಿವಾಹಿತ ಮಹಾನಗರಿಯ ಟ್ರಾಫಿಕ್​ನಲ್ಲೇ ಹೆಂಡತಿಯನ್ನು ಕಾರಿನಲ್ಲಿ ಬಿಟ್ಟು ಓಡಿ ಹೋಗಿರುವ ಘಟನೆ ಮಹದೇವಪುರದಲ್ಲಿ ನಡೆದಿದೆ.

ಪರಾರಿಯಾದವನ ಹೆಸರು ವಿಜಯ್​ ಜಾರ್ಜ್​. ಚಿಕ್ಕಬಳ್ಳಾಪುರ ಮೂಲದವನು. ಗೋವಾದಲ್ಲಿರುವ ತನ್ನ ಕಂಪನಿಯನ್ನು ನೋಡುಕೊಂಡು ತಂದೆಗೆ ಸಹಾಯ ಮಾಡಿಕೊಂಡು ಹೋಗುತ್ತಿದ್ದನು.

ಮದುವೆ ಮುಗಿಸಿ ಚರ್ಚ್​ನಿಂದ ಮನೆಗೆ ಮರಳುತ್ತಿದ್ದರು. ಈ ವೇಳೆ ಕಾರು ಟ್ರಾಫಿಕ್​ ಜಾಮ್​ನಲ್ಲಿ ಸಿಲುಕಿಕೊಂಡಿತು. ಈ ವೇಳೆ ಕಾರಿನಿಂದ ಕೆಳಗೆ ಇಳಿದು ಜಾರ್ಜ್​ ಎಸ್ಕೇಪ್​ ಆಗಿದ್ದು, ಆತನಿಗಾಗಿ ಪೊಲೀಸರು ಕಳೆದ ಎರಡು ವಾರಗಳಿಂದ ಹುಡುಕಾಟ ನಡೆಸುತ್ತಿದ್ದಾರೆ.

ಫೆಬ್ರವರಿ 15ರಂದು ವಿಜಯ್​ ಮದುವೆಯಾಗಿದ್ದಾನೆ. ಆದರೆ ಫೆಬ್ರವರಿ 16 ರಂದು ಟ್ರಾಫಿಕ್​ನಲ್ಲಿ ಹೆಂಡತಿಯನ್ನು ಬಿಟ್ಟು ಕಾರಿನಿಂದ ಇಳಿದು ಓಡಿ ಹೋಗಿದ್ದಾನೆ. ಅಷ್ಟಕ್ಕೂ ಆತ ಓಡಿ ಹೋಗಿದ್ದೇಕೆ ಗೊತ್ತಾ..

ಈ ಹಿಂದೆ ವಿಜಯ್ ಮಹಿಳೆಯೊಬ್ಬಳ ಜೊತೆ ಸಂಬಂಧ ಇಟ್ಟುಕೊಂಡಿದ್ದ. ತನ್ನ ತಂದೆಯ ಕಂಪನಿಯಲ್ಲಿ ಕೆಲಸ ಮಾಡುವ ಆಟೋ ಚಾಲಕನ ಪತ್ನಿಯೊಂದಿಗಿ ವಿಜಯ್​, ಲವ್ವಿಡವ್ವಿ ಇಟ್ಟುಕೊಂಡಿದ್ದ. ಮಹಿಳೆ ಇಬ್ಬರು ಮಕ್ಕಳಿದ್ದು ಅದೇ ಕಂಪನಿಯಲ್ಲಿ ಕ್ಲರ್ಕ್​ ಆಗಿ ಕೆಲಸ ಮಾಡುತ್ತಿದ್ದಳು.

ಮದುವೆಗು ಮುನ್ನ ವಿಜಯ್​, ತನ್ನ ತಪ್ಪನ್ನು ಪತ್ನಿಯ ಮುಂದೆ ಹೇಳಿಕೊಂಡಿದ್ದ. ಎಲ್ಲವನ್ನು ಕ್ಷಮಿಸಿ ಆತನನ್ನು ಮದುವೆ ಆಗಿದ್ದಳು. ಆದರೆ, ಬೇರೊಬ್ಬಳನ್ನು ಮದುವೆ ಆದರೆ, ಖಾಸಗಿ ಫೋಟೋ ಮತ್ತು ವಿಡಿಯೋಗಳನ್ನು ಹರಿಬಿಡುವುದಾಗಿ ಮಾಜಿ ಪ್ರೇಯಸಿ ಬೆದರಿಸುತ್ತಿದ್ದಳು. ಇದರಿಂದ ಜಾರ್ಜ್​ ತುಂಬಾ ಒತ್ತಡಕ್ಕೆ ಒಳಗಾಗಿದ್ದ.

ಜಾರ್ಜ್​ ಪತ್ನಿ ಘಟನೆಯ ಬಗ್ಗೆ ಮಾತನಾಡಿ, ಚರ್ಚ್​ನಿಂದ ಮನೆಗೆ ಬರುವಾಗ ಕಾರು ಟ್ರಾಫಿಕ್​ ಜಾಮ್​ನಲ್ಲಿ ಸಿಲುಕಿಕೊಂಡಿತು. ಈ ವೇಳೆ ಜಾರ್ಜ್​ ಕಾರಿನ ಬಾಗಿಲು ತೆರೆದು ಓಡಿ ಹೋದ. ಇದನ್ನು ನೋಡಿ ನಾನು ಆಘಾತಕ್ಕೆ ಒಳಗಾದೆ. ಆತನನ್ನು ಹಿಂಬಾಲಿಸಲು ಯತ್ನಿಸಿದೆ. ಆದರೆ, ಆತ ಸಿಗಲಿಲ್ಲ. ಆತನ ಪರವಾಗಿ ನಿಲ್ಲುವುದಾಗಿ ನಾನು ಮತ್ತು ನನ್ನ ಕುಟುಂಬದವರು ಭರವಸೆ ನೀಡಿದ್ದೆವು. ಆದರೂ ಆತ ಓಡಿ ಹೋಗಿದ್ದಾನೆ ಎಂದು ಹೆಂಡತಿ ದೂರಿನಲ್ಲಿ ತಿಳಿಸಿದ್ದಾಳೆ.

RELATED TOPICS:
English summary :The day after the wedding, the husband left his wife in Bangalore traffic and escaped!

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ನ್ಯೂಸ್ MORE NEWS...