Wed,May06,2026
ಕನ್ನಡ / English

ಅಂತರ್ಜಾತಿ ವಿವಾಹ ಆಗಿದ್ದಕ್ಕೆ ಬಹಿಷ್ಕಾರ ಪ್ರಕರಣ: 12 ಮಂದಿ ಬಂಧನ | JANATA NEWS

10 Mar 2023

ಚಾಮರಾಜನಗರ : ಅಂತರ್ಜಾತಿ ವಿವಾಹ ಆಗಿದ್ದಕ್ಕೆ ಗ್ರಾಮದ ಮುಖಂಡರು ಅಮಾನವೀಯವಾಗಿ ನಡೆದುಕೊಂಡು ದಂಪತಿಗೆ ಬಹಿಷ್ಕಾರ ಹಾಕಿದ್ದ ಘಟನೆಗೆ ಸಂಬಂದಿಸಿದಂತೆ 12 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

ಕೊಳ್ಳೇಗಾಲ ತಾಲೂಕಿನ ಕುಣಗಳ್ಳಿ ಗ್ರಾಮದಲ್ಲಿ ಇತ್ತೀಚೆಗೆ ಈ ಘಟನೆ ನಡೆದಿದೆ. ಈ ಸಂಬಂಧ ಪೊಲೀಸರು ಈ ಹಿಂದೆ ನಾಲ್ವರನ್ನು ಬಂಧಿಸಿದ್ದರು ಮತ್ತು ಎಂಟು ಆರೋಪಿಗಳು ಶುಕ್ರವಾರ ಪೊಲೀಸರ ಮುಂದೆ ಶರಣಾಗಿದ್ದಾರೆ.

ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಕುಣಗಳ್ಳಿಯಲ್ಲಿ ಪ್ರೇಮಿಗಳಿಬ್ಬರು ಅಂತರ್ ಜಾತಿ ವಿವಾಹ ಆಗಿದ್ದಕ್ಕೆ ಗ್ರಾಮದ ಯಜಮಾನರು 3 ಲಕ್ಷ ದಂಡ ಹಾಕಿ ಗ್ರಾಮದಿಂದ ಹೊರ ಉಳಿಯುವಂತೆ ಬಹಿಷ್ಕಾರ ಹಾಕಿದ್ದಾರೆ ಎಂದು ಕೊಳ್ಳೇಗಾಲ ಡಿ.ವೈ.ಎಸ್.ಪಿ ಕಚೇರಿಗೆ ಗೋವಿಂದರಾಜು ಹಾಗೂ ಶ್ವೇತಾ ದೂರು ಕೊಟ್ಟು ಅಳಲು ತೋಡಿಕೊಂಡಿದ್ದರು.

ಗೋವಿಂದರಾಜು ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಹೂವಿನ ಕೊಪ್ಪಲು ಗ್ರಾಮದ ದಲಿತ ಜನಾಂಗಕ್ಕೆ ಸೇರಿದ ಪ್ರಕಾಶ್ ಎಂಬುವರ ಮಗಳಾದ ಶ್ವೇತಾ ಜೊತೆ ಪರಸ್ಪರ ಪ್ರೀತಿಸಿ ಮನೆಯವರ ಸಮ್ಮುಖದಲ್ಲಿ 5 ವರ್ಷಗಳ ಹಿಂದೆ ಮಳವಳ್ಳಿಯ ಸಬ್ ರಿಜಿಸ್ಟರ್ ಕಚೇರಿಯಲ್ಲಿ ವಿವಾಹ ನೊಂದಣಿ ಮಾಡಿಸಿಕೊಂಡಿದ್ದರು.

ಗೋವಿಂದರಾಜು ಮಳವಳ್ಳಿಯಲ್ಲಿ ಮನೆ ಮಾಡಿಕೊಂಡು ಕೆಲಸ ನಿರ್ವಹಿಸುತ್ತಿದ್ದರು. ಆಗಾಗ ಗೋವಿಂದರಾಜು ಹಾಗೂ ಶ್ವೇತ ಕುಣಗಳ್ಳಿ ಗ್ರಾಮಕ್ಕೆ ಬಂದು ಹೋಗುತ್ತಿದ್ದು ಐದು ವರ್ಷದಿಂದ ಒಟ್ಟಿಗೆ ಜೀವನ ನಡೆಸುತ್ತಿದ್ದಾರೆ. ಗೋವಿಂದರಾಜು ಅವರ ಮನೆಯಲ್ಲಿ ಅಂತರ್ ಜಾತಿ ವಿವಾಹ ತಿಳಿದಿದ್ದರೂ ಸಹ ಮನೆಯವರು ಯಾರು ಸಹ ತೊಂದರೆ ನೀಡಲಿಲ್ಲ. ತಿಂಗಳಿಗೆ 2 ರಿಂದ 3 ಬಾರಿ ಗ್ರಾಮಕ್ಕೆ ಬಂದು ಹೋಗುತ್ತಿದ್ದರು.

ಆದರೆ ಗೋವಿಂದರಾಜು ಅವರ ಅಕ್ಕಪಕ್ಕದ ನಿವಾಸಿಗಳು ಅಂತರ್ ಜಾತಿ ವಿವಾಹದ ಬಗ್ಗೆ ಮಾಹಿತಿಯನ್ನು ಪಡೆದು ಶ್ವೇತಾ ನಮ್ಮ ಜಾತಿಯವಳಲ್ಲ, ಅವಳು ದಲಿತ ಜನಾಂಗಕ್ಕೆ ಸೇರಿದವಳು ಎಂದು ಪಕ್ಕದ ಮನೆಯವರಾದ ಜಯಲಕ್ಷ್ಮಿ, ಮಧು, ರಂಗಸ್ವಾಮಿ, ಕುಳ್ಳ, ಮಹದೇವಪ್ಪ ಮಹದೇವ ಶೆಟ್ಟಿ ಇವರುಗಳು ಗ್ರಾಮದ ಯಜಮಾನರುಗಳಿಗೆ ಮಾಹಿತಿ ನೀಡಿ ಎರಡರಿಂದ ಮೂರು ಬಾರಿ ಪಂಚಾಯಿತಿ ನಡೆಸಿ ದಂಡ ಕಟ್ಟಬೇಕು ಎಂದು ಸೂಚಿಸಿದ್ದರು.

ದಂಪತಿ ಡಿವೈಎಸ್ಪಿ ಕಚೇರಿಗೆ ದೂರು ನೀಡಿದ್ದಾರೆ. ಆದರೆ, ದೂರಿನ ವಿಷಯ ತಿಳಿದ ಹಿರಿಯರು ದಂಡದ ಮೊತ್ತವನ್ನು 6 ಲಕ್ಷಕ್ಕೆ ಹೆಚ್ಚಿಸಿ ಗ್ರಾಮದಲ್ಲಿ ಗೋವಿಂದರಾಜು ಕುಟುಂಬಕ್ಕೆ ಬಹಿಷ್ಕಾರ ಹಾಕಿದ್ದಾರೆ. ಗ್ರಾಮಸ್ಥರು ಕುಟುಂಬವನ್ನು ಗ್ರಾಮದಿಂದ ಹೊರಗೆ ಕಳುಹಿಸಿ, ಗ್ರಾಮದಿಂದ ಪಡಿತರ, ತರಕಾರಿ, ಹಾಲು ಖರೀದಿಸಬಾರದು ಮತ್ತು ನೀರು ತೆಗೆದುಕೊಳ್ಳಬಾರದು ಎಂದು ಆದೇಶಿಸಿದ್ದಾರೆ ಮತ್ತು ಅವರ ಈ ಆದೇಶವನ್ನು ಉಲ್ಲಂಘಿಸಿದರೆ ದಂಪತಿಯನ್ನು ಜೀವಂತ ಸುಟ್ಟು ಹಾಕುವುದಾಗಿ ಬೆದರಿಕೆ ಹಾಕಿದ್ದಾರೆ.

ಈ ಸಂಬಂಧ ಕೊಳ್ಳೇಗಾಲ ಡಿವೈಎಸ್ಪಿ ದೂರು ಪಡೆದು ಮಾಂಬಳ್ಳಿ ಪೊಲೀಸರಿಗೆ ಎಸ್ಸಿಎಸ್ಟಿ ದೌರ್ಜನ್ಯದಡಿ ಪ್ರಕರಣ ದಾಖಲಿಸುವಂತೆ ಸೂಚಿಸಿ ತನಿಖೆ ಕೈಗೊಂಡಿದ್ದರು. ಅದರಂತೆ, ಈಗ 12 ಮಂದಿ ಬಂಧನವಾಗಿದೆ.

RELATED TOPICS:
English summary :Excommunication case for inter-caste marriage: 12 arrested

ಸಚಿವ ಡಿ. ಸುಧಾಕರ್‌ ಆರೋಗ್ಯದ ವಿಚಾರದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ರಹಸ್ಯ - ಜೆಡಿಎಸ್ ಗಂಭೀರ ಆರೋಪ
ಸಚಿವ ಡಿ. ಸುಧಾಕರ್‌ ಆರೋಗ್ಯದ ವಿಚಾರದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ರಹಸ್ಯ - ಜೆಡಿಎಸ್ ಗಂಭೀರ ಆರೋಪ
ಉರ್ದು ಕೈಬಿಡಲು ಮುಂದಾದ ಜಮ್ಮು ಕಾಶ್ಮೀರ : ಪಿಡಿಪಿ ನಾಯಕಿ ಇಲ್ತಿಜಾ ಮುಫ್ತಿ ಪ್ರತಿಭಟನೆ
ಉರ್ದು ಕೈಬಿಡಲು ಮುಂದಾದ ಜಮ್ಮು ಕಾಶ್ಮೀರ : ಪಿಡಿಪಿ ನಾಯಕಿ ಇಲ್ತಿಜಾ ಮುಫ್ತಿ ಪ್ರತಿಭಟನೆ
ಮಾಲಿಯಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಭಾರತ ಖಂಡಿಸುತ್ತದೆ; ರಕ್ಷಣಾ ಸಚಿವರ ನಿಧನಕ್ಕೆ ಸಂತಾಪ ಸೂಚಿಸಿದೆ.
ಮಾಲಿಯಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಭಾರತ ಖಂಡಿಸುತ್ತದೆ; ರಕ್ಷಣಾ ಸಚಿವರ ನಿಧನಕ್ಕೆ ಸಂತಾಪ ಸೂಚಿಸಿದೆ.
ಮೆಹ್ಸಾನಾ ಸ್ಥಳೀಯ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಕಚೇರಿ ಸಿಬ್ಬಂದಿ ರಮೇಶ್ ಭಿಲ್ ಅಭ್ಯರ್ಥಿಯಾಗಿ ಕಣಕ್ಕೆ
ಮೆಹ್ಸಾನಾ ಸ್ಥಳೀಯ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಕಚೇರಿ ಸಿಬ್ಬಂದಿ ರಮೇಶ್ ಭಿಲ್ ಅಭ್ಯರ್ಥಿಯಾಗಿ ಕಣಕ್ಕೆ
ದಾವೂದ್ ಇಬ್ರಾಹಿಂನ ಆಪ್ತ ಸಹಾಯಕ ಸಲೀಂ ಡೋಲಾ ಬಂಧನ : ದೆಹಲಿಯಲ್ಲಿಳಿದ ವಿಶೇಷ ವಿಮಾನ
ದಾವೂದ್ ಇಬ್ರಾಹಿಂನ ಆಪ್ತ ಸಹಾಯಕ ಸಲೀಂ ಡೋಲಾ ಬಂಧನ : ದೆಹಲಿಯಲ್ಲಿಳಿದ ವಿಶೇಷ ವಿಮಾನ
ಪಹಲ್ಗಾಮ್‌ನಂತೆ ಆಘಾತಕಾರಿ ಘಟನೆ : ಧರ್ಮ ಪ್ರಶ್ನಿಸಿ ಹಲ್ಲೆ ಸಿಬ್ಬಂದಿಗಳನ್ನು ಇರಿದು ಹಲ್ಲೆ ಮಾಡಿದ ಅನ್ಸಾರಿ
ಪಹಲ್ಗಾಮ್‌ನಂತೆ ಆಘಾತಕಾರಿ ಘಟನೆ : ಧರ್ಮ ಪ್ರಶ್ನಿಸಿ ಹಲ್ಲೆ ಸಿಬ್ಬಂದಿಗಳನ್ನು ಇರಿದು ಹಲ್ಲೆ ಮಾಡಿದ ಅನ್ಸಾರಿ
ಯುಎಇ ಅಧ್ಯಕ್ಷರನ್ನು ಭೇಟಿಯಾದ ಎನ್‌ಎಸ್‌ಎ ಅಜಿತ್ ದೋವಲ್ : ಪ್ರಾದೇಶಿಕ ಭದ್ರತೆಯ ಕುರಿತು ಚರ್ಚೆ
ಯುಎಇ ಅಧ್ಯಕ್ಷರನ್ನು ಭೇಟಿಯಾದ ಎನ್‌ಎಸ್‌ಎ ಅಜಿತ್ ದೋವಲ್ : ಪ್ರಾದೇಶಿಕ ಭದ್ರತೆಯ ಕುರಿತು ಚರ್ಚೆ
ಅಪರಿಚಿತ ಬಂದೂಕುಧಾರಿಗಳಿಂದ ಪಾಕ್ ನ ಭಯೋತ್ಪಾದಕ ಸಂಸ್ಥೆ ಎಲ್‌ಇಟಿ ಟಾಪ್ ಕಮಾಂಡರ್ ಶೇಖ್ ಯೂಸುಫ್ ಅಫ್ರಿದಿ ಹತ್ಯೆ.
ಅಪರಿಚಿತ ಬಂದೂಕುಧಾರಿಗಳಿಂದ ಪಾಕ್ ನ ಭಯೋತ್ಪಾದಕ ಸಂಸ್ಥೆ ಎಲ್‌ಇಟಿ ಟಾಪ್ ಕಮಾಂಡರ್ ಶೇಖ್ ಯೂಸುಫ್ ಅಫ್ರಿದಿ ಹತ್ಯೆ.
ಎಎಪಿಯ ಏಳು ರಾಜ್ಯಸಭಾ ಸಂಸದರು ಪಕ್ಷ ತೊರೆದರು; ಬಿಜೆಪಿ ಸೇರಿದ್ದಾರೆ
ಎಎಪಿಯ ಏಳು ರಾಜ್ಯಸಭಾ ಸಂಸದರು ಪಕ್ಷ ತೊರೆದರು; ಬಿಜೆಪಿ ಸೇರಿದ್ದಾರೆ
ಭಾರತ, ಚೀನಾ ಮತ್ತು ಇತರ ಹಲವಾರು ರಾಷ್ಟ್ರಗಳನ್ನು ನರಕ ಕುಳಿಗಳು - ಮತ್ತೊಮ್ಮೆ ವಿವಾದ ಹುಟ್ಟುಹಾಕಿದ ಅಮೆರಿಕ ಅಧ್ಯಕ್ಷ ಟ್ರಂಪ್
ಭಾರತ, ಚೀನಾ ಮತ್ತು ಇತರ ಹಲವಾರು ರಾಷ್ಟ್ರಗಳನ್ನು ನರಕ ಕುಳಿಗಳು - ಮತ್ತೊಮ್ಮೆ ವಿವಾದ ಹುಟ್ಟುಹಾಕಿದ ಅಮೆರಿಕ ಅಧ್ಯಕ್ಷ ಟ್ರಂಪ್
ಭಾರತದ ದೊಡ್ಡ ಭಾಗಗಳಲ್ಲಿ ಶಾಖದ ಅಲೆಯ ಹಿಡಿತ; ಜಾರ್ಸುಗುಡದಲ್ಲಿ 44.6°C ದಾಖಲು
ಭಾರತದ ದೊಡ್ಡ ಭಾಗಗಳಲ್ಲಿ ಶಾಖದ ಅಲೆಯ ಹಿಡಿತ; ಜಾರ್ಸುಗುಡದಲ್ಲಿ 44.6°C ದಾಖಲು
ಭಯೋತ್ಪಾದಕ ಪದ ಬಳಕೆ : ಬಿಜೆಪಿ ನಿಯೋಗದಿಂದ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು
ಭಯೋತ್ಪಾದಕ ಪದ ಬಳಕೆ : ಬಿಜೆಪಿ ನಿಯೋಗದಿಂದ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು

ನ್ಯೂಸ್ MORE NEWS...