Fri,Mar31,2023
ಕನ್ನಡ / English

ಹಿಂದುಳಿದ ವರ್ಗಗಳ 1.14 ಲಕ್ಷ ಫಲಾನುಭವಿಗಳಿಗೆ 900 ಕೋಟಿ ರೂ. ಹಣ ಬಿಡುಗಡೆ | JANATA NEWS

11 Mar 2023
440

ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹಿಂದುಳಿದ ವರ್ಗಗಳ ವಿವಿಧ ನಿಗಮಗಳ ವತಿಯಿಂದ 1.14 ಲಕ್ಷ ಫಲಾನುಭವಿಗಳಿಗೆ 900 ಕೋಟಿ ರೂ.ಗಳನ್ನು ಇಂದು ಬಿಡುಗಡೆ ಮಾಡಿದರು.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯ ವಿವಿಧ ಕಟ್ಟಡ ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಿಸಿ ವಿವಿಧ ಅಭಿವೃದ್ಧಿ ನಿಗಮದ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಿ ಮಾತನಾಡಿದ ಅವರು, ಯಾರಿಗೋಸ್ಕರ ಈ ಶಕ್ತಿ ಸೌಧ ಕಟ್ಟಿದ್ದಾರೆ ಅವರು ಸರ್ಕಾರದ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಅದರ ಲಾಭವನ್ನು ಪಡೆಯುವುದು ವ್ಯವಸ್ಥೆ ನಿಜವಾದ ಪ್ರಜಾಪ್ರಭುತ್ವದ ವ್ಯವಸ್ಥೆ ಎಂದರು.

ಸರ್ಕಾರ ಜನರಿಂದ ಸ್ಥಾಪಿತವಾಗಿದ್ದು, ಇದರ ಅರಿವಿನಿಂದ ಈ ಸೌಧದಲ್ಲಿ ಕೆಲಸ ಮಾಡಬೇಕು. ನ್ಯಾಯ ಕೊಡುವ ಭ್ರಮೆ ಹುಟ್ಟಿಸುವುದರಿಂದ ಬದುಕು ಬಂಗಾರವಾಗೋಲ್ಲ. ಹುಸಿ ಭರವಸೆಯನ್ನ ಕೊಟ್ಟು ನ್ಯಾಯವನ್ನು ನೀಡಲಾಗದು. ವಸ್ತುನಿಷ್ಠವಾಗಿ ಬದುಕಿನಲ್ಲಿ ಸ್ವಾಭಿಮಾನ ಬದುಕನ್ನ ಬದಕಲು ಸಾಧ್ಯವೆಂದು ಮನಗಂಡು ಸರ್ಕಾರ ಕಾರ್ಯಕ್ರಮ ರೂಪಿಸಿದಾಗ ಮಾತ್ರ ಬದಲಾವಣೆ ಸಾಧ್ಯ ಎಂದರು.

ಹಿಂದುಳಿದವರ ಬದುಕು ಹಸನಾದಾಗ ಪ್ರಜಾಪ್ರಭುತ್ವದ ಗೆಲುವು ಆಗುತ್ತದೆ. ಸಮಯ ಬಂದಾಗ ನಿಮ್ಮ ಪರವಾದ ನಿರ್ಣಯ ತೆಗೆದುಕೊಳ್ಳುವವರೇ ನಿಜವಾದ ಹಿಂದುಳಿದ ವರ್ಗಗಳ ನಾಯಕರು ಎಂದರು.

ಇಂದು ಫಲಾನುಭವಿಗಳಿಗೆ ಸೌಲಭ್ಯ ವಿತರಣೆ ಮಾಡುತ್ತಿದ್ದು, ಇದನ್ನ 75 ವರ್ಷಗಳಿಂದ ಮಾಡಿದ್ದರೆ ಇಂದು ಇದರ ಅವಶ್ಯಕತೆ ಇರಲಿಲ್ಲ. ದೊಡ್ಡ ಪ್ರಮಾಣದ ಉನ್ನತ ಶಿಕ್ಷಣಕ್ಕೆ ಈ ಅನುದಾನ ಬಳಕೆ ಮಾಡಬಹುದಿತ್ತು. ಎಲ್ಲರಿಗೂ ಸೂರು ಸಿಕ್ಕಿದ್ದರೆ ಮನೆ ಕಟ್ಟುವ ಅವಕಾಶವಿರುತ್ತಿರಲಿಲ್ಲ. ಸ್ವಯಂ ಉದ್ಯೋಗ ಸಿಕ್ಕಿದ್ದಾರೆ ಇತರರಿಗೆ ಸಹಾಯ ಮಾಡಬಹುದಿತ್ತು. ಇದ್ಯಾವುದು ಆಗಲಿಲ್ಲ.

ಇನ್ನು ಮುಂದಾದರೂ ಬದಲಾವಣೆಯಾಗಬೇಕು.ನಾವು ನೀಡುವ ಕಾರ್ಯಕ್ರಮಗಳು ನಿಮ್ಮ ಹಕ್ಕು. ನಾವು ಯಾವುದೇ ಉಪಕಾರ ಮಾಡುತ್ತಿಲ್ಲ. ಒಂದು ಸರ್ಕಾರ ಸ್ಪಂದನಾಶೀಲ ಹಾಗೂ ಸೂಕ್ಷ್ಮವಾಗಿದ್ದರೆ ನಿಮ್ಮ ಸಮಸ್ಯೆಗಳನ್ನು ಅರ್ಥ ಮಾಡಿಕೊಂಡು ಸರಿಯಾದ ಕಾರ್ಯಕ್ರಮ ಕೊಡಬಹುದು ಎಂದರು.

ಗಂಗಾ ಕಲ್ಯಾಣ ಯೋಜನೆಯಡಿ 19 ಸಾವಿರ ಫಲಾನುಭವಿಗಳಿಗೆ ಬೇರೆ ಬೇರೆ ನಿಗಮಗಳ ವತಿಯಿಂದ ಕೊಳವೆಬಾವಿ ಮಂಜೂರು ಮಾಡಲಾಗಿದೆ. ಪಂಚವಾರ್ಷಿಕ ಯೋಜನೆಯಂತೆ ಗಂಗಾ ಕಲ್ಯಾಣ ಯೋಜನೆಯನ್ನು ಅನುಷ್ಠಾನ ಮಾಡುತ್ತಿದ್ದರು. ಐದು ತಿಂಗಳಲ್ಲಿ ಆಗೋದನ್ನು ಐದು ವರ್ಷ ಮಾಡುತ್ತಿದ್ದರು. ನಾವು ನೇರವಾಗಿ ಫಲಾನುಭವಿಗಳ ಖಾತೆಗೆ ಅನುದಾನವನ್ನು ವರ್ಗಾಯಿಸುವ ಕೆಲಸವನ್ನು ಮಾಡುತ್ತಿದ್ದೇವೆ. ಗುತ್ತಿಗೆದಾರನಿಗೆ ಸಹಾಯ ಮಾಡೋ ಕೆಲಸ ನಾವು ಮಾಡಿಲ್ಲ ಎಂದರು.

ದೇವರಾಜ ಅರಸು ಹಿಂದುಳಿದ ಆಯೋಗ ರಚಿಸಿ ಹಿಂದುಳಿದವರಿಗೆ ಮೀಸಲಾತಿ ನೀಡಿದ ನಾಯಕ ಡಿ.ದೇವರಾಜ ಅರಸು ಅವರು. ರೈತ ಕಾರ್ಮಿಕರಿಗೆ ವಿದ್ಯಾ ನಿಧಿ ವಿಸ್ತರಿಸಲಾಗಿದೆ. ಸಫಾಯಿ ಕರ್ಮಚಾರಿಗಳಿಗೆ 11, 141 ಜನರೊಗೆ ಖಾಯಂ ಗೊಳಿಸಿ ಒಟ್ಟು 24 ಸಾವಿರ ಪೌರ ಕಾರ್ಮಿಕರಿಗೆ ಖಾಯಂ ಮಾಡಿದಲಾಗಿದೆ. ಸ್ಮಶಾನ ಕಾರ್ಮಿಕರ ಜೀವನಕ್ಕೆ ಭದ್ರತೆ ನೀಡಿದೆ. ಕುರಿಗಾಹಿಗಳಿಗೆ 350 ಕೋಟಿ ವೆಚ್ಚದಲ್ಲಿ ಸಹಾಯ, ಲಮಾಣಿ ಜನಾಂಗಕ್ಕೆ ಹಕ್ಕು ಪತ್ರ ನೀಡಿದೆ. ೫೦ ಸಾವಿರ ಜನರಿಗೆ ಪ್ರಧಾನಿ ನರೇಂದ್ರ ಮೋದಿಯವರು ಕೊಟ್ಟಿದ್ದಾರೆ.

ಕುರುಬರಹಟ್ಟಿ ಗೊಲ್ಲರ ಹಟ್ಟಿ ಲಮಾಣಿ ಸಮುದಾಯಕ್ಕೆ ಒಂದು ವಾರದೊಳಗೆ 1.ಲಕ್ಷ ಜನರಿಗೆ ಹಕ್ಕು ಪತ್ರ ನೀಡಲಾಗುವುದು.ಹೊಲದಲ್ಲಿ ಕೆಲಸ ಮಾಡುವ ಮಹಿಳೆಯರಿಗೆ ಒಂದು ಸಾವಿರ ರೂಪಾಯಿ ಕೊಡುತ್ತೇವೆ. ವಿದ್ಯಾರ್ಥಿನಿಯರಿಗೆ ಉಚಿತ ಪಾಸ್ ನೀಡುವ ಕಾರ್ಯಕ್ರಮ ಜಾರಿಯಾಗಿದೆ ಬಜೆಟ್ ನಂತರ 850 ಕೋಟಿ ರೂಪಾಯಿ ಎಲ್ಲಾ ನಿಗಮಗಳಿಗೆ ನೀಡಲಾಗಿದೆ ಎಂದರು.

RELATED TOPICS:
English summary :900 crores to 1.14 lakh beneficiaries belonging to backward classes. Release of funds

ಸಿದ್ದರಾಮಯ್ಯ ಕುರಿತು ಸಿನಿಮಾ, ಪೋಸ್ಟರ್ ಔಟ್
ಸಿದ್ದರಾಮಯ್ಯ ಕುರಿತು ಸಿನಿಮಾ, ಪೋಸ್ಟರ್ ಔಟ್
ಮಚ್ಚು ಹಿಡಿದು ಪತ್ನಿಯ ಕೊಲೆಗೆ ಯತ್ನಿಸಿದ ಕುಡುಕ ಗಂಡ
ಮಚ್ಚು ಹಿಡಿದು ಪತ್ನಿಯ ಕೊಲೆಗೆ ಯತ್ನಿಸಿದ ಕುಡುಕ ಗಂಡ
ರಸ್ತೆ ದಾಟುವಾಗ ಖಾಸಗಿ ಬಸ್ ಡಿಕ್ಕಿ ಹೊಡೆದು ಮಹಿಳೆ ಸಾವು
ರಸ್ತೆ ದಾಟುವಾಗ ಖಾಸಗಿ ಬಸ್ ಡಿಕ್ಕಿ ಹೊಡೆದು ಮಹಿಳೆ ಸಾವು
ವರುಣಾದಲ್ಲೂ ಸಿದ್ದರಾಮಯ್ಯ ಗೆಲುವು ಅಷ್ಟು ಸುಲಭವಲ್ಲ : ಬಿ.ಎಸ್.ಯಡಿಯೂರಪ್ಪ
ವರುಣಾದಲ್ಲೂ ಸಿದ್ದರಾಮಯ್ಯ ಗೆಲುವು ಅಷ್ಟು ಸುಲಭವಲ್ಲ : ಬಿ.ಎಸ್.ಯಡಿಯೂರಪ್ಪ
ನಂದಿನಿ ಮೊಸರು ಪಾಕೆಟ್ ಮೇಲೆ ದಹಿ ಪದ: ಇದು ಕನ್ನಡಿಗರ ಮೇಲೆ ಬಿಜೆಪಿಯ ದಮ್ಮು ತಾಕತ್ತಿನ ಪ್ರದರ್ಶನವೇ?
ನಂದಿನಿ ಮೊಸರು ಪಾಕೆಟ್ ಮೇಲೆ ದಹಿ ಪದ: ಇದು ಕನ್ನಡಿಗರ ಮೇಲೆ ಬಿಜೆಪಿಯ ದಮ್ಮು ತಾಕತ್ತಿನ ಪ್ರದರ್ಶನವೇ?
ದೈವನರ್ತನ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ದೈವ ನರ್ತಕ‌ ಸಾವು
ದೈವನರ್ತನ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ದೈವ ನರ್ತಕ‌ ಸಾವು
ಮುಸ್ಲಿಂ ಸಮುದಾಯಕ್ಕೆ ನಾವು ಅನ್ಯಾಯ ಮಾಡಿಲ್ಲ: ಬಿಎಸ್​ ಯಡಿಯೂರಪ್ಪ
ಮುಸ್ಲಿಂ ಸಮುದಾಯಕ್ಕೆ ನಾವು ಅನ್ಯಾಯ ಮಾಡಿಲ್ಲ: ಬಿಎಸ್​ ಯಡಿಯೂರಪ್ಪ
ಮಧ್ಯಾಹ್ನದ ಬಿಸಿ ಊಟ ಸೇವಿಸಿ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಅಸ್ವಸ್ಥ
ಮಧ್ಯಾಹ್ನದ ಬಿಸಿ ಊಟ ಸೇವಿಸಿ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಅಸ್ವಸ್ಥ
ನವಜಾತ ಶಿಶುವನ್ನು ದೇವಾಲಯದ ‌ಬಳಿ ಬಿಟ್ಟು ಹೋದ ಪಾಪಿಗಳು!
ನವಜಾತ ಶಿಶುವನ್ನು ದೇವಾಲಯದ ‌ಬಳಿ ಬಿಟ್ಟು ಹೋದ ಪಾಪಿಗಳು!
ಕಳೆದ ಬಾರಿಯಂತೆ ಈ ಬಾರಿಯೂ ಜೆಡಿಎಸ್​-ಬಿಜೆಪಿ ಮ್ಯಾಚ್​ ಫಿಕ್ಸಿಂಗ್
ಕಳೆದ ಬಾರಿಯಂತೆ ಈ ಬಾರಿಯೂ ಜೆಡಿಎಸ್​-ಬಿಜೆಪಿ ಮ್ಯಾಚ್​ ಫಿಕ್ಸಿಂಗ್
ಮೇ 10 ಮತದಾನದ ದಿನ ಅಲ್ಲ, ಭ್ರಷ್ಟಾಚಾರ ತೆಗೆದುಹಾಕುವ ದಿನ: ಡಿ ಕೆ ಶಿವಕುಮಾರ್​
ಮೇ 10 ಮತದಾನದ ದಿನ ಅಲ್ಲ, ಭ್ರಷ್ಟಾಚಾರ ತೆಗೆದುಹಾಕುವ ದಿನ: ಡಿ ಕೆ ಶಿವಕುಮಾರ್​
ಚುನಾವಣೆ ಘೋಷಣೆ ಬೆನ್ನಲ್ಲೇ ನೀತಿ ಸಂಹಿತೆ ಉಲ್ಲಂಘನೆ!
ಚುನಾವಣೆ ಘೋಷಣೆ ಬೆನ್ನಲ್ಲೇ ನೀತಿ ಸಂಹಿತೆ ಉಲ್ಲಂಘನೆ!

ನ್ಯೂಸ್ MORE NEWS...