Thu,Apr25,2024
ಕನ್ನಡ / English

ದಶಪಥ ಹೆದ್ದಾರಿ ಉದ್ಘಾಟನೆಗೆ ನನ್ನನ್ನು ಆಹ್ವಾನಿಸಬೇಕೆಂಬ ಕನಿಷ್ಟ ಸೌಜನ್ಯ ಇಲ್ಲವೇ? | JANATA NEWS

12 Mar 2023
2048

ಬೆಂಗಳೂರು : ದಶಪಥ ಹೆದ್ದಾರಿ ಉದ್ಘಾಟನೆ ಕಾರ್ಯಕ್ರಮಕ್ಕೆ ನನ್ನನ್ನು ಆಹ್ವಾನಿಸುವ ಕನಿಷ್ಟ ಸೌಜನ್ಯ ತೋರದಿರುವುದಕ್ಕೆ ನಾನು ತಮಗೆ ಹೃತ್ಪೂರ್ವಕ ಧನ್ಯವಾದ ಅರ್ಪಿಸುತ್ತೇನೆ ಎಂದು ಸಂಸದ ಡಿ.ಕೆ ಸುರೇಶ್ ಟ್ವೀಟ್ ನಲ್ಲಿ ಆಕ್ರೋಶ ಹೊರ ಹಾಕಿದ್ದಾರೆ.

ಮಾನ್ಯ ಪ್ರಧಾನ ಮಂತ್ರಿಗಳೇ, ತಾವು ಈ ದಿನ ಬೆಂಗಳೂರು - ಮೈಸೂರು ರಾಷ್ಟ್ರೀಯ ಹೆದ್ದಾರಿ ಉದ್ಘಾಟಿಸಿದ್ದೀರಿ. ಈ ಕಾರ್ಯಕ್ರಮಕ್ಕೆ ನನ್ನನ್ನು ಆಹ್ವಾನಿಸುವ ಕನಿಷ್ಟ ಸೌಜನ್ಯ ತೋರದಿರುವುದಕ್ಕೆ ತಮಗೆ ಹೃತ್ಪೂರ್ವಕ ಧನ್ಯವಾದ ಅರ್ಪಿಸುತ್ತೇನೆ.

ಈ ರಾಷ್ಟ್ರೀಯ ಹೆದ್ದಾರಿಯ ಬಹುಭಾಗವು ನಾನು ಪ್ರತಿನಿಧಿಸುವ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಹಾದುಹೋಗಿದ್ದು, ಇಲ್ಲಿನ ಜನತೆ ನನ್ನನ್ನು ತಮ್ಮ ಸಂಸದನಾಗಿ ಆಯ್ಕೆ ಮಾಡಿದ್ದಾರೆ. ಆದರೆ ನಿಮ್ಮ ಕ್ಷುಲ್ಲಕ ರಾಜಕಾರಣವು ಸಂವಿಧಾನಾತ್ಮಕ ಶಿಷ್ಟಾಚಾರವನ್ನು ಮರೆಮಾಚಿದೆ ಎಂದಿದ್ದಾರೆ. ಈ ರಾಷ್ಟ್ರೀಯ ಹೆದ್ದಾರಿಯ ಸುಮಾರು ಶೇ. 30 ರಷ್ಟುಕಾಮಗಾರಿಯು ಇನ್ನೂ ಬಾಕಿ ಇರುವುದು ನಿಮ್ಮ ಗಮನದಲ್ಲಿದೆ ಎಂದು ಭಾವಿಸಿದ್ದೇನೆ.

ಆದರೂ ನೀವು ಈ ಅಪೂರ್ಣ ಯೋಜನೆಯನ್ನು ಕೇವಲ ಚುನಾವಣಾ ಗಿಮಿಕ್ ಗಾಗಿ ಇಂದು ಉದ್ಘಾಟಿಸಿದ್ದೀರಿ. 2013 ರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರದ ಅವಧಿಯಲ್ಲಿ ಈ ರಸ್ತೆಯನ್ನು ಮೇಲ್ದರ್ಜೆಗೆ ಏರಿಸಿ ಅಭಿವೃದ್ಧಿ ಪಡಿಸಲು ಮೊದಲು ಪ್ರಸ್ತಾವನೆ ಸಲ್ಲಿಸಿದ್ದನ್ನು ತಮಗೆ ನೆನಪಿಸಬಯಸುತ್ತೇನೆ.

ಅಲ್ಲದೇ ರೈತರ ಭೂಮಿ ಸುಗಮ ಸ್ವಾಧೀನಕ್ಕೆ ಭೂ ಸ್ವಾಧೀನ ಕಾಯಿದೆಗೆ ತಿದ್ದುಪಡಿ ತರದೇ ಹೋಗಿದ್ದರೆ ಈ ಯೋಜನೆ ಇಷ್ಟು ಸುಲಭವಾಗಿ ಕಾರ್ಯಸಾಧು ಆಗುತ್ತಿರಲಿಲ್ಲ ಎಂಬುದನ್ನು ನಾವು ಮರೆಯಬಾರದು. ಇದರ ಸಂಪೂರ್ಣ ಶ್ರೇಯಸ್ಸು ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರಕ್ಕೆ ಸಲ್ಲಬೇಕು ಎಂದು ತಿಳಿಸಿದ್ದಾರೆ.

ಇನ್ನು ಕೇಂದ್ರಕ್ಕೆ ಅತಿಹೆಚ್ಚು ತೆರಿಗೆ ಪಾವತಿಸುವ ಎರಡನೇ ದೊಡ್ಡ ರಾಜ್ಯ ಕರ್ನಾಟಕದ ಸುಮಾರು 5,200 ಕಿ.ಮೀ ಉದ್ದದ ರಾಜ್ಯ ಹೆದ್ದಾರಿಗಳನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಮೇಲ್ದರ್ಜೆಗೇರಿಸುವ ಪ್ರಸ್ತಾವನೆಯು ಪ್ರಧಾನಿ ಕಚೇರಿ ಹಾಗೂ ನೀತಿ ಆಯೋಗದ ಮುಂದೆ ಕಳೆದ 8 ವರ್ಷಗಳಿಂದ ಧೂಳು ಹಿಡಿಯುತ್ತಾ ಕೂತಿದೆ. ಈ ಕುರಿತು ನಿಮ್ಮ ಸರ್ಕಾರ ಯಾವುದೇ ಕ್ರಮ ಕೈಗೊಳ್ಳದೇ ಇರುವುದು ಕರ್ನಾಟಕ ಅಭಿವೃದ್ಧಿ ವಿರುದ್ದದ ನಿಮ್ಮ ನಿಲುವು ಹಾಗೂ ಮಲತಾಯಿ ಧೋರಣೆಗೆ ಹಿಡಿದ ಕೈಗನ್ನಡಿ.

ಕರ್ನಾಟಕದ ಅಪೂರ್ಣ ಯೋಜನೆಗಳನ್ನು ಉದ್ಘಾಟಿಸುತ್ತಿರುವುದು ಕರ್ನಾಟಕದ ಜನತೆಯನ್ನು ಹೇಗಾದರೂ ವಂಚಿಸಿ ಚುನಾವಣಾ ಗೆಲುವು ಸಾಧಿಸಬಹುದು ಎನ್ನುವ ನಿಮ್ಮ ಹತಾಶ ಪ್ರಯತ್ನಕ್ಕೆ ಹಿಡಿದ ಕೈಗನ್ನಡಿ. ನಿಮ್ಮ ಈ ವಿಕೃತ ಪ್ರಯತ್ನಗಳಿಗೆ ಶುಭ ಹಾರೈಸುತ್ತೇನೆ. ಎಂದು ಫೇಸ್ ಬುಕ್ ಪೋಸ್ಟ್ ನಲ್ಲಿ ಬರೆದಿದ್ದಾರೆ.

RELATED TOPICS:
English summary :Do not you at least have the courtesy to invite me to the inauguration of the Daspatha highway?

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ನ್ಯೂಸ್ MORE NEWS...