Fri,Mar31,2023
ಕನ್ನಡ / English

ರಾಮನಗರದಿಂದ ಡಿಕೆ ಸುರೇಶ್ ಅವರನ್ನು ಕಣಕ್ಕಿಳಿಸುವ ಬಗ್ಗೆ ಹೈಕಮಾಂಡ್​​ ಮಟ್ಟದಲ್ಲಿಯೂ ಚರ್ಚೆ ಆಗಿರುವುದು ನಿಜ! | JANATA NEWS

14 Mar 2023
396

ರಾಮನಗರ : ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್​​ನಿಂದ ರಾಮನಗರದಲ್ಲಿ ಸಂಸದ ಡಿಕೆ ಸುರೇಶ್ ಅವರನ್ನು ಕಣಕ್ಕಿಳಿಸುವ ಬಗ್ಗೆ ಹೈಕಮಾಂಡ್​​ ಮಟ್ಟದಲ್ಲಿಯೂ ಚರ್ಚೆ ಆಗಿರುವುದು ನಿಜ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.

ಬೆಂಗಳೂರಿನ ಸದಾಶಿವನಗರ ನಿವಾಸದಲ್ಲಿ ಮಾತನಾಡಿ, ಡಿ ಕೆ ಸುರೇಶ್​ ಸ್ಪರ್ಧೆ ವಿಚಾರವಾಗಿ ಕೂತು ಮಾತನಾಡಬೇಕು. ನನಗೆ ಈ ಬಗ್ಗೆ ಸಂದೇಶ ಸಿಕ್ಕಿದೆ. ಹೈಕಮಾಂಡ್ ನಿಂದ ಸಂದೇಶ ಬಂದಿದ್ದು ಹೌದು. ಈ ಕುರಿತು ಪಾರ್ಟಿ ಹೇಳುತ್ತಿದೆ, ನಾವಿನ್ನು ತೀರ್ಮಾನ ಮಾಡಿಲ್ಲ.

ಈ ಹಿಂದೆ ಇದೇ ವಿಚಾರದ ಬಗ್ಗೆ ಚರ್ಚೆ ಆಗಿತ್ತು. ಕಾರ್ಯಕರ್ತರೂ ಇದಕ್ಕೆ ಒತ್ತಾಯ ಮಾಡಿದ್ದರು. ಆದರೆ ನಾವು ಅದರ ಬಗ್ಗೆ ಯಾವುದೇ ತೀರ್ಮಾನ ಮಾಡಿಲ್ಲ ಮತ್ತೆ ಬೈ ಎಲೆಕ್ಷನ್ ಎಲ್ಲಾ ಮಾಡುವುದು ನನಗೆ ಇಷ್ಟ ಇಲ್ಲಾ. ಡಿ.ಕೆ. ಸುರೇಶ್ ಅರ್ಜಿಯನ್ನು ಹಾಕಿಲ್ಲ, ಅದರ ಬಗ್ಗೆ ಚರ್ಚೆಯನ್ನೂ ಮಾಡಿಲ್ಲ ಎಂದು ಸ್ಪಷ್ಟಪಡಿಸಿದರು.

ಈ‌ ಕ್ಷೇತ್ರದಲ್ಲಿ ಒಂದು ಇತಿಹಾಸ ಇದೆ. ಪಕ್ಷ ಸೂಚಿಸಿದ ಮೇಲೆ ಏನೂ ಮಾಡಲಾಗದು. ನಾನು ಸಚಿವನಾಗಿದ್ದವನು ಜೆಡಿಎಸ್ ವರಿಷ್ಠ ದೇವೇಗೌಡರ ವಿರುದ್ಧ ಸ್ಪರ್ಧೆ ಮಾಡಿರಲಿಲ್ಲವೇ? ರಾಜಕೀಯದಲ್ಲಿ ಕೆಲವು ಸಂದರ್ಭಗಳಲ್ಲಿ ಅನಿವಾರ್ಯ ಎದುರಾಗುತ್ತದೆ ಎಂದು ಅವರು ಹೇಳಿದ್ದಾರೆ.

ಸ್ಥಳೀಯ ಕಾರ್ಯಕರ್ತರು, ಮುಖಂಡರು ಬಹಳ ದಿನದಿಂದ ಒತ್ತಾಯ ಮಾಡುತ್ತಿದ್ದಾರೆ. ನನಗೆ ಬೈ ಎಲೆಕ್ಷನ್ ಮಾಡುವುದು ಇಷ್ಟ ಇಲ್ಲ. ಈಗ ಪಾರ್ಟಿ ಹೇಳ್ತಿದೆ, ಅದನ್ನ ಇನ್ನೂ ಚರ್ಚೆ ಮಾಡಿಲ್ಲ. ಡಿ.ಕೆ.ಸುರೇಶ್ ಇನ್ನೂ ಅರ್ಜಿ ಹಾಕಿಲ್ಲ ಎಂದಿದ್ದಾರೆ.

ಧ್ರುವನಾರಾಯಣ್ ಪುತ್ರ ದರ್ಶನ್​ಗೆ ಟಿಕೇಟ್ ನೀಡುವ ವಿಚಾರದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೇ ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದರು.

RELATED TOPICS:
English summary :It is true that there is a discussion at the high command level about fielding DK Suresh from Ramanagara!

ಸಿದ್ದರಾಮಯ್ಯ ಕುರಿತು ಸಿನಿಮಾ, ಪೋಸ್ಟರ್ ಔಟ್
ಸಿದ್ದರಾಮಯ್ಯ ಕುರಿತು ಸಿನಿಮಾ, ಪೋಸ್ಟರ್ ಔಟ್
ಮಚ್ಚು ಹಿಡಿದು ಪತ್ನಿಯ ಕೊಲೆಗೆ ಯತ್ನಿಸಿದ ಕುಡುಕ ಗಂಡ
ಮಚ್ಚು ಹಿಡಿದು ಪತ್ನಿಯ ಕೊಲೆಗೆ ಯತ್ನಿಸಿದ ಕುಡುಕ ಗಂಡ
ರಸ್ತೆ ದಾಟುವಾಗ ಖಾಸಗಿ ಬಸ್ ಡಿಕ್ಕಿ ಹೊಡೆದು ಮಹಿಳೆ ಸಾವು
ರಸ್ತೆ ದಾಟುವಾಗ ಖಾಸಗಿ ಬಸ್ ಡಿಕ್ಕಿ ಹೊಡೆದು ಮಹಿಳೆ ಸಾವು
ವರುಣಾದಲ್ಲೂ ಸಿದ್ದರಾಮಯ್ಯ ಗೆಲುವು ಅಷ್ಟು ಸುಲಭವಲ್ಲ : ಬಿ.ಎಸ್.ಯಡಿಯೂರಪ್ಪ
ವರುಣಾದಲ್ಲೂ ಸಿದ್ದರಾಮಯ್ಯ ಗೆಲುವು ಅಷ್ಟು ಸುಲಭವಲ್ಲ : ಬಿ.ಎಸ್.ಯಡಿಯೂರಪ್ಪ
ನಂದಿನಿ ಮೊಸರು ಪಾಕೆಟ್ ಮೇಲೆ ದಹಿ ಪದ: ಇದು ಕನ್ನಡಿಗರ ಮೇಲೆ ಬಿಜೆಪಿಯ ದಮ್ಮು ತಾಕತ್ತಿನ ಪ್ರದರ್ಶನವೇ?
ನಂದಿನಿ ಮೊಸರು ಪಾಕೆಟ್ ಮೇಲೆ ದಹಿ ಪದ: ಇದು ಕನ್ನಡಿಗರ ಮೇಲೆ ಬಿಜೆಪಿಯ ದಮ್ಮು ತಾಕತ್ತಿನ ಪ್ರದರ್ಶನವೇ?
ದೈವನರ್ತನ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ದೈವ ನರ್ತಕ‌ ಸಾವು
ದೈವನರ್ತನ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ದೈವ ನರ್ತಕ‌ ಸಾವು
ಮುಸ್ಲಿಂ ಸಮುದಾಯಕ್ಕೆ ನಾವು ಅನ್ಯಾಯ ಮಾಡಿಲ್ಲ: ಬಿಎಸ್​ ಯಡಿಯೂರಪ್ಪ
ಮುಸ್ಲಿಂ ಸಮುದಾಯಕ್ಕೆ ನಾವು ಅನ್ಯಾಯ ಮಾಡಿಲ್ಲ: ಬಿಎಸ್​ ಯಡಿಯೂರಪ್ಪ
ಮಧ್ಯಾಹ್ನದ ಬಿಸಿ ಊಟ ಸೇವಿಸಿ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಅಸ್ವಸ್ಥ
ಮಧ್ಯಾಹ್ನದ ಬಿಸಿ ಊಟ ಸೇವಿಸಿ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಅಸ್ವಸ್ಥ
ನವಜಾತ ಶಿಶುವನ್ನು ದೇವಾಲಯದ ‌ಬಳಿ ಬಿಟ್ಟು ಹೋದ ಪಾಪಿಗಳು!
ನವಜಾತ ಶಿಶುವನ್ನು ದೇವಾಲಯದ ‌ಬಳಿ ಬಿಟ್ಟು ಹೋದ ಪಾಪಿಗಳು!
ಕಳೆದ ಬಾರಿಯಂತೆ ಈ ಬಾರಿಯೂ ಜೆಡಿಎಸ್​-ಬಿಜೆಪಿ ಮ್ಯಾಚ್​ ಫಿಕ್ಸಿಂಗ್
ಕಳೆದ ಬಾರಿಯಂತೆ ಈ ಬಾರಿಯೂ ಜೆಡಿಎಸ್​-ಬಿಜೆಪಿ ಮ್ಯಾಚ್​ ಫಿಕ್ಸಿಂಗ್
ಮೇ 10 ಮತದಾನದ ದಿನ ಅಲ್ಲ, ಭ್ರಷ್ಟಾಚಾರ ತೆಗೆದುಹಾಕುವ ದಿನ: ಡಿ ಕೆ ಶಿವಕುಮಾರ್​
ಮೇ 10 ಮತದಾನದ ದಿನ ಅಲ್ಲ, ಭ್ರಷ್ಟಾಚಾರ ತೆಗೆದುಹಾಕುವ ದಿನ: ಡಿ ಕೆ ಶಿವಕುಮಾರ್​
ಚುನಾವಣೆ ಘೋಷಣೆ ಬೆನ್ನಲ್ಲೇ ನೀತಿ ಸಂಹಿತೆ ಉಲ್ಲಂಘನೆ!
ಚುನಾವಣೆ ಘೋಷಣೆ ಬೆನ್ನಲ್ಲೇ ನೀತಿ ಸಂಹಿತೆ ಉಲ್ಲಂಘನೆ!

ನ್ಯೂಸ್ MORE NEWS...