Sun,May19,2024
ಕನ್ನಡ / English

ಡ್ರಮ್​ನಲ್ಲಿ ಯುವತಿ ಶವ ಪತ್ತೆ ಕೇಸ್​ಗೆ ಟ್ವಿಸ್ಟ್​; ಮೃತ ಮಹಿಳೆಯ ಗುರುತು ಪತ್ತೆ, ಮೂವರ ಬಂಧನ | JANATA NEWS

16 Mar 2023
1410

ಬೆಂಗಳೂರು : ಬೈಯಪ್ಪನಹಳ್ಳಿ ರೈಲು ನಿಲ್ದಾಣದ ಡ್ರಮ್​ನಲ್ಲಿ ಶವ ಪತ್ತೆಯಾದ ಪ್ರಕರಣದ ರಹಸ್ಯ ಬೇಧಿಸಿರುವ ರೈಲ್ವೇ ಪೊಲೀಸರು ಮೂವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಆರೋಪಿಗಳು ಬೈಯಪ್ಪನಹಳ್ಳಿಯಲ್ಲಿ ತಮನ್ನಾ ಎಂಬಾಕೆಯನ್ನು ಕೊಂದು ಶವವನ್ನು ಡ್ರಮ್​ನಲ್ಲಿ ಬಚ್ಚಿಟ್ಟು ತಲೆಮರಿಸಿಕೊಂಡಿದ್ದರು. ಇದೀಗ ಆರೋಪಿಗಳನ್ನು ರೈಲ್ವೇ ಪೊಲೀಸರು ಪತ್ತೆಹಚ್ಚಿ ಬಂಧಿಸಿದ್ದಾರೆ.

ಒಟ್ಟು ಎಂಟು ಜನರಿಂದ ತಮನ್ನಾ ಕೊಲೆ ನಡೆದಿದ್ದು, ಅದರಲ್ಲಿ ಮೂವರು ಆರೋಪಿಗಳನ್ನ ಬಂಧಿಸಿದ್ದಾರೆ. ಕಮಾಲ್(21), ತನ್ವೀರ್ ಆಲಂ(28), ಶಾಕೀಬ್(25) ಎಂಬ ಮೂವರನ್ನು ಪೊಲೀಸರು ಸೆರೆಹಿಡಿದಿದ್ದಾರೆ. ಉಳಿದ ಐವರು ಆರೋಪಿಗಳಾದ ನವಾಬ್, ಜಮಾಲ್, ಮಜರ್, ಅಸ್ಸಾಬ್ ಹಾಗು ಸಬೂಲ್ ತಲೆಮರೆಸಿಕೊಂಡಿದ್ದಾರೆ. ಕೌಟುಂಬಿಕ ಕಲಹದ ಕಾರಣಕ್ಕೆ ಪತಿಯ ಹಿರಿಯ ಸಹೋದರನ ನೇತೃತ್ವದಲ್ಲೇ ಹತ್ಯೆ ನಡೆದಿರುವುದು ತನಿಖೆಯ ಸಂದರ್ಭದಲ್ಲಿ ಬಯಲಾಗಿದೆ​.

ಬಿಹಾರ ಮೂಲದ ತಮನ್ನಾಗೆ ಕಳೆದ ವರ್ಷ ಏಪ್ರಿಲ್‌ನಲ್ಲಿ ಅಫ್ರೋಜ್ ಎಂಬಾತನೊಂದಿಗೆ ವಿವಾಹವಾಗಿತ್ತು. ವಿಕಲಚೇತನನಾಗಿದ್ದ ಈತನಿಂದ ಎರಡೇ ತಿಂಗಳಿಗೆ ವಿಚ್ಚೇದನ ಪಡೆದಿದ್ದ ತಮನ್ನಾ, ಅಫ್ರೋಜ್​ನ ಚಿಕ್ಕಪ್ಪನ ಮಗ ಇಂತಿಕಾಬ್ ಜೊತೆ ಬೆಂಗಳೂರಿಗೆ ಬಂದಿದ್ದರು. ಇಬ್ಬರೂ ವಿವಾಹವಾಗಿ ಜಿಗಣಿ ಬಳಿ ವಾಸವಿದ್ದರು.

ಆದರೆ, ಆಕೆಯಿಂದ ಕುಟುಂಬದ ನೆಮ್ಮದಿ‌ ಹಾಳಾಯಿತೆಂದು ಇಂತಿಕಾಬ್ ಸಹೋದರ ನವಾಬ್ ಕೋಪಗೊಂಡಿದ್ದ. ಬೆಂಗಳೂರಿಗೆ ಬಂದಿದ್ದ ನವಾಬ್ ಮಾರ್ಚ್ 12ರಂದು ಸಹೋದರ ಇಂತಿಕಾಬ್​ಗೆ ಕರೆ ಮಾಡಿ, ತಮನ್ನಾ ಮತ್ತು ಇಂತಿಕಾಬ್ ದಂಪತಿಯನ್ನ ಬೆಂಗಳೂರು ತೋರಿಸೋದಾಗಿ ಜಿಗಣಿಯಿಂದ ಕರೆಸಿಕೊಂಡಿದ್ದರು.

ಇಂತಿಕಾಬ್, ತಮನ್ನಾ, ನವಾಬ್, ಕಮಾಲ್, ತನ್ವೀರ್ ಆಲಂ, ಶಾಕೀಬ್, ಜಮಾಲ್, ಮಸ್ಸರ್, ಅಸ್ಸಾಬ್, ಸಬೂಲ್ ಎಲ್ಲರೂ ಒಟ್ಟಿಗೆ ಬೆಂಗಳೂರು ಸುತ್ತಾಡಿ, ಮಧ್ಯಾಹ್ನ ಊಟ ಮಾಡಿದ್ದರು. ಆ ಬಳಿಕ ಮಾತನಾಡುತ್ತಾ, "ತಮನ್ನಾಳಿಂದ ನಮ್ಮ ಕುಟುಂಬದ ನೆಮ್ಮದಿ ಹಾಳಾಗಿದೆ. ಆಕೆ ಬೆಂಗಳೂರಿನಲ್ಲಿ ಇರುವುದು ಬೇಡ, ಬಿಹಾರಕ್ಕೆ ಕಳಿಸುತ್ತೇನೆ, ನೀನು ವಾಪಸ್ ನಿನ್ನ ಮನೆಗೆ ಹೋಗು" ಎಂದಿದ್ದ. ಬಳಿಕ ಸಹೋದರ ಇಂತಿಕಾಬ್‌ನನ್ನು ಬೆದರಿಸಿ ವಾಪಸ್ ಜಿಗಣಿಗೆ ಕಳಿಸಿದ್ದ.

ಸಂಜೆ ಕುತ್ತಿಗೆ ಹಿಸುಕಿ, ವೇಲ್ ನಿಂದ ಕುತ್ತಿಗೆ ಬಿಗಿದು ಕೊಲೆ ಮಾಡಿದ್ದಾರೆ. ಆರೋಪಿಗಳು ಶವದ ಕಾಲು‌ಮುರಿದು ತಾವು ಮೊದಲೇ ಸಿದ್ಧಪಡಿಸಿಕೊಂಡಿದ್ದ ನೀಲಿ ಬಣ್ಣದ ಡ್ರಮ್ಮಿಗೆ ತುಂಬಿ ಸೀಲ್ ಮಾಡಿದ್ದರು. ರಾತ್ರಿ 11:45ರ ಸುಮಾರಿಗೆ ಆಟೋದಲ್ಲಿ ಬೈಯ್ಯಪ್ಪನಹಳ್ಳಿ ರೈಲ್ವೇ ನಿಲ್ದಾಣಕ್ಕೆ ತೆರಳಿ ಪೋರ್ಟಿಕೋ ಮುಂದೆ ಡ್ರಮ್ ಇಟ್ಟು ಪರಾರಿಯಾಗಿದ್ದರು.

ಆದರೆ ಅದೇ ಡ್ರಮ್ ಮೇಲೆ ಜಮಾಲ್ ಹೆಸರು ಮತ್ತು ವಿಳಾಸ ಪತ್ತೆಯಾಗಿತ್ತು. ಅದೇ ಸ್ಟಿಕ್ಕರ್ ಆಧಾರದ ಮೇಲೆ ಆರೋಪಿಗಳ ಬಂಧಿಸಿದ್ದಾರೆ.

RELATED TOPICS:
English summary :A twist to the case of the discovery of a young woman body in a drum: The identity of the dead woman was found, three people were arrested

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...