Fri,Mar31,2023
ಕನ್ನಡ / English

ನಿರ್ಮಾಪಕ‌ ಉಮಾಪತಿ ಕೊಲೆಗೆ ಸಂಚು ರೂಪಿಸಿದ್ದ ಕುಖ್ಯಾತ ರೌಡಿ ಅರೆಸ್ಟ್ | JANATA NEWS

16 Mar 2023
392

ಬೆಂಗಳೂರು : ಸ್ಯಾಂಡಲ್​ವುಡ್ ನಿರ್ಮಾಪಕ‌ ಉಮಾಪತಿ ಕೊಲೆಗೆ ಸಂಚು ಸೇರಿದಂತೆ ಹತ್ತಾರು ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ರೌಡಿ ರಾಜೇಶ್ ಅಲಿಯಾಸ್ ಕರಿಯಾ ರಾಜೇಶ್​ನನ್ನು ಕೆಂಪೇಗೌಡ ನಗರ ಪೊಲೀಸರು ಬಂಧಿಸಿದ್ದಾರೆ.

ಕುಖ್ಯಾತ ರೌಡಿ ಪರಂದಾಮ ಮತ್ತು ಬಾಂಬೆ ರವಿ ಸಹಚರರಾಗಿದ್ದ. ಈತನ ವಿರುದ್ಧ ಕಾಟನ್‌ಪೇಟೆ, ಹನುಮಂತನಗರ, ಬಸವನಗುಡಿ ಪೊಲೀಸ್ ಠಾಣೆಗಳಲ್ಲಿ ದರೋಡೆ, ಕೊಲೆ ಯತ್ನ, ಕೊಲೆಗೆ ಸಂಚು ಸೇರಿದಂತೆ 10 ಪ್ರಕರಣಗಳು ದಾಖಲಾಗಿವೆ.

ಹೆಬ್ಬುಲಿ, ರಾಬರ್ಟ್, ಮದಗಜ ಸೇರಿದಂತೆ ಹಲವು ಚಿತ್ರಗಳ ನಿರ್ಮಾಪಕರಾದ ಉಮಾಪತಿ‌ ಕೊಲೆಗೆ ಸಂಚು ರೂಪಿಸಿದ ಆರೋಪದಡಿ ಕಳೆದ ಎರಡು ವರ್ಷಗಳ ಹಿಂದೆ ಜಯನಗರ ಪೊಲೀಸರು 11 ಮಂದಿ ಆರೋಪಿಗಳ ಪೈಕಿ‌ ರಾಜೇಶ್ ಸಹ ಒಬ್ಬನಾಗಿದ್ದ.

6 ಪ್ರಕರಣಗಳಲ್ಲಿ ಕೋರ್ಟ್‌ನಿಂದ ಖುಲಾಸೆಗೊಂಡಿದ್ದ. ಉಳಿದಂತೆ ನಾಲ್ಕು ಪ್ರಕರಣದಲ್ಲಿ ಕೋರ್ಟ್‌ಗೆ ಹಾಜರಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಜಾಮೀನು ರಹಿತ ಬಂಧನ ವಾರಂಟ್ ಹೊರಡಿಸಲಾಗಿತ್ತು.

ಜಯನಗರ ಪೊಲೀಸರು ಕಾರ್ಯಾಚರಣೆ ನಡೆಸಿ 9 ಮಂದಿಯನ್ನು ಬಂಧಿಸಿದ್ದರು. ಪ್ರಕರಣದ ಪ್ರಮುಖ ಆರೋಪಿಗಳಲ್ಲಿ ಒಬ್ಬನಾದ ರಾಜೇಶ್ ಬಂಧನ ಭೀತಿಯಿಂದ ನೇಪಾಳದಲ್ಲಿ ತಲೆಮರೆಸಿಕೊಂಡಿದ್ದ. ಅಜ್ಞಾತ ಸ್ಥಳದಿಂದಲೇ ಹಲವರಿಗೆ ಫೋನ್ ಮಾಡಿ ಬೆದರಿಸಿ ಹಣಕ್ಕೆ‌ ಡಿಮ್ಯಾಂಡ್ ಇಡುತ್ತಿದ್ದ.

ಕುಖ್ಯಾತ ರೌಡಿ ಬಾಂಬೆ ರವಿಯ ಸಹಚರನಾಗಿದ್ದ ರಾಜೇಶ್, ಹಳೆ ರೌಡಿ ಪರಂಧಾಮಯ್ಯನ ಶಿಷ್ಯನಾಗಿ ಗುರುತಿಸಿಕೊಂಡಿದ್ದ. ಸೌತ್ ಬಾಸ್ ಎಂದು ಶಿಷ್ಯಂದಿರಿಂದ ಕರೆಸಿಕೊಳ್ಳುತ್ತಿದ್ದ ಈತನನ್ನು ಬಂಧಿಸಲಾಗಿದೆ

RELATED TOPICS:
English summary :Notorious rowdy arrested for plotting to murder producer Umapati

ಸಿದ್ದರಾಮಯ್ಯ ಕುರಿತು ಸಿನಿಮಾ, ಪೋಸ್ಟರ್ ಔಟ್
ಸಿದ್ದರಾಮಯ್ಯ ಕುರಿತು ಸಿನಿಮಾ, ಪೋಸ್ಟರ್ ಔಟ್
ಮಚ್ಚು ಹಿಡಿದು ಪತ್ನಿಯ ಕೊಲೆಗೆ ಯತ್ನಿಸಿದ ಕುಡುಕ ಗಂಡ
ಮಚ್ಚು ಹಿಡಿದು ಪತ್ನಿಯ ಕೊಲೆಗೆ ಯತ್ನಿಸಿದ ಕುಡುಕ ಗಂಡ
ರಸ್ತೆ ದಾಟುವಾಗ ಖಾಸಗಿ ಬಸ್ ಡಿಕ್ಕಿ ಹೊಡೆದು ಮಹಿಳೆ ಸಾವು
ರಸ್ತೆ ದಾಟುವಾಗ ಖಾಸಗಿ ಬಸ್ ಡಿಕ್ಕಿ ಹೊಡೆದು ಮಹಿಳೆ ಸಾವು
ವರುಣಾದಲ್ಲೂ ಸಿದ್ದರಾಮಯ್ಯ ಗೆಲುವು ಅಷ್ಟು ಸುಲಭವಲ್ಲ : ಬಿ.ಎಸ್.ಯಡಿಯೂರಪ್ಪ
ವರುಣಾದಲ್ಲೂ ಸಿದ್ದರಾಮಯ್ಯ ಗೆಲುವು ಅಷ್ಟು ಸುಲಭವಲ್ಲ : ಬಿ.ಎಸ್.ಯಡಿಯೂರಪ್ಪ
ನಂದಿನಿ ಮೊಸರು ಪಾಕೆಟ್ ಮೇಲೆ ದಹಿ ಪದ: ಇದು ಕನ್ನಡಿಗರ ಮೇಲೆ ಬಿಜೆಪಿಯ ದಮ್ಮು ತಾಕತ್ತಿನ ಪ್ರದರ್ಶನವೇ?
ನಂದಿನಿ ಮೊಸರು ಪಾಕೆಟ್ ಮೇಲೆ ದಹಿ ಪದ: ಇದು ಕನ್ನಡಿಗರ ಮೇಲೆ ಬಿಜೆಪಿಯ ದಮ್ಮು ತಾಕತ್ತಿನ ಪ್ರದರ್ಶನವೇ?
ದೈವನರ್ತನ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ದೈವ ನರ್ತಕ‌ ಸಾವು
ದೈವನರ್ತನ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ದೈವ ನರ್ತಕ‌ ಸಾವು
ಮುಸ್ಲಿಂ ಸಮುದಾಯಕ್ಕೆ ನಾವು ಅನ್ಯಾಯ ಮಾಡಿಲ್ಲ: ಬಿಎಸ್​ ಯಡಿಯೂರಪ್ಪ
ಮುಸ್ಲಿಂ ಸಮುದಾಯಕ್ಕೆ ನಾವು ಅನ್ಯಾಯ ಮಾಡಿಲ್ಲ: ಬಿಎಸ್​ ಯಡಿಯೂರಪ್ಪ
ಮಧ್ಯಾಹ್ನದ ಬಿಸಿ ಊಟ ಸೇವಿಸಿ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಅಸ್ವಸ್ಥ
ಮಧ್ಯಾಹ್ನದ ಬಿಸಿ ಊಟ ಸೇವಿಸಿ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಅಸ್ವಸ್ಥ
ನವಜಾತ ಶಿಶುವನ್ನು ದೇವಾಲಯದ ‌ಬಳಿ ಬಿಟ್ಟು ಹೋದ ಪಾಪಿಗಳು!
ನವಜಾತ ಶಿಶುವನ್ನು ದೇವಾಲಯದ ‌ಬಳಿ ಬಿಟ್ಟು ಹೋದ ಪಾಪಿಗಳು!
ಕಳೆದ ಬಾರಿಯಂತೆ ಈ ಬಾರಿಯೂ ಜೆಡಿಎಸ್​-ಬಿಜೆಪಿ ಮ್ಯಾಚ್​ ಫಿಕ್ಸಿಂಗ್
ಕಳೆದ ಬಾರಿಯಂತೆ ಈ ಬಾರಿಯೂ ಜೆಡಿಎಸ್​-ಬಿಜೆಪಿ ಮ್ಯಾಚ್​ ಫಿಕ್ಸಿಂಗ್
ಮೇ 10 ಮತದಾನದ ದಿನ ಅಲ್ಲ, ಭ್ರಷ್ಟಾಚಾರ ತೆಗೆದುಹಾಕುವ ದಿನ: ಡಿ ಕೆ ಶಿವಕುಮಾರ್​
ಮೇ 10 ಮತದಾನದ ದಿನ ಅಲ್ಲ, ಭ್ರಷ್ಟಾಚಾರ ತೆಗೆದುಹಾಕುವ ದಿನ: ಡಿ ಕೆ ಶಿವಕುಮಾರ್​
ಚುನಾವಣೆ ಘೋಷಣೆ ಬೆನ್ನಲ್ಲೇ ನೀತಿ ಸಂಹಿತೆ ಉಲ್ಲಂಘನೆ!
ಚುನಾವಣೆ ಘೋಷಣೆ ಬೆನ್ನಲ್ಲೇ ನೀತಿ ಸಂಹಿತೆ ಉಲ್ಲಂಘನೆ!

ನ್ಯೂಸ್ MORE NEWS...