Fri,Mar31,2023
ಕನ್ನಡ / English

ಮಾ.18ಕ್ಕೆ 108 ಅಡಿ ಮಾದಪ್ಪನ ಪ್ರತಿಮೆ ಲೋಕಾರ್ಪಣೆ | JANATA NEWS

17 Mar 2023
502

ಚಾಮರಾಜನಗರ : ರಾಜ್ಯದ ಪ್ರಮುಖ ದೇಗುಲಗಳಲ್ಲಿ ಒಂದಾದ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ನಿರ್ಮಿಸಿರುವ 108 ಅಡಿ ಮಲೆಮಹದೇಶ್ವರನ ಪ್ರತಿಮೆ ಇದೇ ಮಾರ್ಚ್ 18 ರಂದು ಲೋಕಾರ್ಪಣೆಗೊಳ್ಳುತ್ತಿದೆ.

ಅಸಂಖ್ಯಾತಭಕ್ತರ ಪಾಲಿನ ದೈವ “ಮಾಯ್ಕರ” ಮಾದಪ್ಪನ ನೆಲದಲ್ಲಿ ಮುಗಿಲೆತ್ತರದಲ್ಲಿ 108 ಅಡಿ ಎತ್ತರದ ಮಾದಪ್ಪನ ಪ್ರತಿಮೆ ಸಿದ್ಧಗೊಂಡಿದ್ದು ಶನಿವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಲೋಕಾರ್ಪಣೆ ಮಾಡಲಿದ್ದಾರೆ. ಜೊತೆಗೆ ಪ್ರಾಧಿಕಾರದ ವತಿಯಿಂದ ನಿರ್ಮಾಣಗೊಂಡಿರುವ ಬೆಳ್ಳಿರಥವೂ ಲೋಕಾರ್ಪಣೆ ಆಗಲಿದೆ.

₹20 ಕೋಟಿ ವೆಚ್ಚದ ಯೋಜನೆ ಇದಾಗಿದ್ದು, ಸದ್ಯ, ಪ್ರತಿಮೆ ನಿರ್ಮಾಣ ಮಾತ್ರ ಪೂರ್ಣಗೊಂಡಿದೆ. ಮಹದೇಶ್ವರಸ್ವಾಮಿ ಜೀವನ ಚರಿತ್ರೆ ಸಾರುವ ಮ್ಯೂಸಿಯಂ, ಪ್ರತಿಮೆಯ ಸ್ಥಳದಲ್ಲಿ ಬಯಲು ರಂಗಮಂದಿರ, ಗಿಡಮೂಲಿಕಾ ವನಗಳ ಅಭಿವೃದ್ಧಿ ಸೇರಿದಂತೆ ಇತರೆ ಕಾಮಗಾರಿಗಳು ಇನ್ನಷ್ಟೇ ನಡೆಯಬೇಕಿವೆ.

janata



108 ಅಡಿ ಎತ್ತರ ‌ಪ್ರತಿಮೆಯು ಎರಡು ಸ್ತರದಲ್ಲಿ ನಿರ್ಮಾಣವಾಗಿದೆ. ಕಲ್ಲು ಬಂಡೆಯ ರಚನೆಯ ಮೇಲೆ ವ್ಯಾಘ್ರನ ಮೇಲೆ ಕುಳಿತ ತ್ರಿಶೂಲ ಹಿಡಿದ ಮಹದೇಶ್ವರ ಸ್ವಾಮಿಯ ಪ್ರತಿಮೆ ರೂಪಿಸಲಾಗಿದೆ.

ಕಲ್ಲುಬಂಡೆಯಾಕೃತಿಯ ರಚನೆಯಲ್ಲಿ ಗುಹೆಯ ಮಾದರಿಯಲ್ಲಿ ಎರಡು ಮಹಡಿಗಳಿವೆ. ತಳಭಾಗದಲ್ಲಿ ಮಹದೇಶ್ವರ ಬೆಟ್ಟದ ಚಾರಿತ್ರಿಕ ಹಿನ್ನಲೆ ಸಾರುವ ಕಲಾಕೃತಿ ಚಿತ್ರಗಳ ರಚನೆ, ಭಕ್ತರ ವಿಶ್ರಾಂತಿ ಸ್ಥಳಾವಕಾಶ ಸೇರಿದಂತೆ ಭಕ್ತರು, ಪ್ರವಾಸಿಗರಿಗೆ ಮಹದೇಶ್ವರ ಚರಿತ್ರೆ, ಪರಂಪರೆ ಸಾರುವ ಮ್ಯೂಸಿಯಂ ನಿರ್ಮಾಣವಾಗಲಿದೆ.

ಮಹದೇಶ್ವರರ ಪ್ರತಿಮೆ ನಿರ್ಮಾಣ ಸಂಪೂರ್ಣ ಕಾಂಕ್ರೀಟ್‌ನಿಂದ ನಿರ್ಮಾಣ ಗೊಂಡಿದ್ದು ನಿರ್ಮಾಣದ ಹೊಣೆಯನ್ನು ಬೆಂಗಳೂರಿನ ಪಿಎಸ್‌ಆರ್‌ಪಿ ಆರ್ಕಿಟೆಕ್ಟ್ ಕಂಪನಿ ಸಂಸ್ಥೆಗೆ ನೀಡಲಾಗಿತ್ತು. ಈ ಕಂಪನಿಯು ಹಿಂದೆಯೂ ಗದಗಿನಲ್ಲಿ 117 ಅಡಿ ಎತ್ತರದ ಬಸವೇಶ್ವರರ ಮೂರ್ತಿ ಮತ್ತು ರಾಮ್‌ದುರ್ಗದಲ್ಲಿ ಶಿವನ ಮೂರ್ತಿಯನ್ನು ಉತ್ತಮವಾಗಿ ನಿರ್ಮಾಣ ಮಾಡಿತ್ತು. ಈ ಹಿನ್ನೆಲೆ ಮಹದೇಶ್ವರರ ಪ್ರತಿಮೆಯ ನಿರ್ಮಾಣ ಹೊಣೆಯನ್ನೂ ನೀಡಲಾಗಿತ್ತು.

ಮಹದೇಶ್ವರರ ಪ್ರತಿಮೆ ಅನಾವರಣಕ್ಕೆ ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದ್ದು, ಸರ್ಕಾರ ರಾಜಕೀಯ ಲಾಭಕ್ಕಾಗಿ ಅಪೂರ್ಣ ಕಾಮಗಾರಿ ಲೋಕಾರ್ಪಣೆ ಮಾಡುತ್ತಿದ್ದಾರೆ ಎಂದು ಆರೋಪಿಸಿ ಭಕ್ತರು ಕಿಡಿಕಾರಿದ್ದಾರೆ.

RELATED TOPICS:
English summary :108 feet statue of Madappa will be inaugurated on March 18

ಸಿದ್ದರಾಮಯ್ಯ ಕುರಿತು ಸಿನಿಮಾ, ಪೋಸ್ಟರ್ ಔಟ್
ಸಿದ್ದರಾಮಯ್ಯ ಕುರಿತು ಸಿನಿಮಾ, ಪೋಸ್ಟರ್ ಔಟ್
ಮಚ್ಚು ಹಿಡಿದು ಪತ್ನಿಯ ಕೊಲೆಗೆ ಯತ್ನಿಸಿದ ಕುಡುಕ ಗಂಡ
ಮಚ್ಚು ಹಿಡಿದು ಪತ್ನಿಯ ಕೊಲೆಗೆ ಯತ್ನಿಸಿದ ಕುಡುಕ ಗಂಡ
ರಸ್ತೆ ದಾಟುವಾಗ ಖಾಸಗಿ ಬಸ್ ಡಿಕ್ಕಿ ಹೊಡೆದು ಮಹಿಳೆ ಸಾವು
ರಸ್ತೆ ದಾಟುವಾಗ ಖಾಸಗಿ ಬಸ್ ಡಿಕ್ಕಿ ಹೊಡೆದು ಮಹಿಳೆ ಸಾವು
ವರುಣಾದಲ್ಲೂ ಸಿದ್ದರಾಮಯ್ಯ ಗೆಲುವು ಅಷ್ಟು ಸುಲಭವಲ್ಲ : ಬಿ.ಎಸ್.ಯಡಿಯೂರಪ್ಪ
ವರುಣಾದಲ್ಲೂ ಸಿದ್ದರಾಮಯ್ಯ ಗೆಲುವು ಅಷ್ಟು ಸುಲಭವಲ್ಲ : ಬಿ.ಎಸ್.ಯಡಿಯೂರಪ್ಪ
ನಂದಿನಿ ಮೊಸರು ಪಾಕೆಟ್ ಮೇಲೆ ದಹಿ ಪದ: ಇದು ಕನ್ನಡಿಗರ ಮೇಲೆ ಬಿಜೆಪಿಯ ದಮ್ಮು ತಾಕತ್ತಿನ ಪ್ರದರ್ಶನವೇ?
ನಂದಿನಿ ಮೊಸರು ಪಾಕೆಟ್ ಮೇಲೆ ದಹಿ ಪದ: ಇದು ಕನ್ನಡಿಗರ ಮೇಲೆ ಬಿಜೆಪಿಯ ದಮ್ಮು ತಾಕತ್ತಿನ ಪ್ರದರ್ಶನವೇ?
ದೈವನರ್ತನ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ದೈವ ನರ್ತಕ‌ ಸಾವು
ದೈವನರ್ತನ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ದೈವ ನರ್ತಕ‌ ಸಾವು
ಮುಸ್ಲಿಂ ಸಮುದಾಯಕ್ಕೆ ನಾವು ಅನ್ಯಾಯ ಮಾಡಿಲ್ಲ: ಬಿಎಸ್​ ಯಡಿಯೂರಪ್ಪ
ಮುಸ್ಲಿಂ ಸಮುದಾಯಕ್ಕೆ ನಾವು ಅನ್ಯಾಯ ಮಾಡಿಲ್ಲ: ಬಿಎಸ್​ ಯಡಿಯೂರಪ್ಪ
ಮಧ್ಯಾಹ್ನದ ಬಿಸಿ ಊಟ ಸೇವಿಸಿ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಅಸ್ವಸ್ಥ
ಮಧ್ಯಾಹ್ನದ ಬಿಸಿ ಊಟ ಸೇವಿಸಿ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಅಸ್ವಸ್ಥ
ನವಜಾತ ಶಿಶುವನ್ನು ದೇವಾಲಯದ ‌ಬಳಿ ಬಿಟ್ಟು ಹೋದ ಪಾಪಿಗಳು!
ನವಜಾತ ಶಿಶುವನ್ನು ದೇವಾಲಯದ ‌ಬಳಿ ಬಿಟ್ಟು ಹೋದ ಪಾಪಿಗಳು!
ಕಳೆದ ಬಾರಿಯಂತೆ ಈ ಬಾರಿಯೂ ಜೆಡಿಎಸ್​-ಬಿಜೆಪಿ ಮ್ಯಾಚ್​ ಫಿಕ್ಸಿಂಗ್
ಕಳೆದ ಬಾರಿಯಂತೆ ಈ ಬಾರಿಯೂ ಜೆಡಿಎಸ್​-ಬಿಜೆಪಿ ಮ್ಯಾಚ್​ ಫಿಕ್ಸಿಂಗ್
ಮೇ 10 ಮತದಾನದ ದಿನ ಅಲ್ಲ, ಭ್ರಷ್ಟಾಚಾರ ತೆಗೆದುಹಾಕುವ ದಿನ: ಡಿ ಕೆ ಶಿವಕುಮಾರ್​
ಮೇ 10 ಮತದಾನದ ದಿನ ಅಲ್ಲ, ಭ್ರಷ್ಟಾಚಾರ ತೆಗೆದುಹಾಕುವ ದಿನ: ಡಿ ಕೆ ಶಿವಕುಮಾರ್​
ಚುನಾವಣೆ ಘೋಷಣೆ ಬೆನ್ನಲ್ಲೇ ನೀತಿ ಸಂಹಿತೆ ಉಲ್ಲಂಘನೆ!
ಚುನಾವಣೆ ಘೋಷಣೆ ಬೆನ್ನಲ್ಲೇ ನೀತಿ ಸಂಹಿತೆ ಉಲ್ಲಂಘನೆ!

ನ್ಯೂಸ್ MORE NEWS...