Sat,Jun20,2026
ಕನ್ನಡ / English

ಮಾ.18ಕ್ಕೆ 108 ಅಡಿ ಮಾದಪ್ಪನ ಪ್ರತಿಮೆ ಲೋಕಾರ್ಪಣೆ | JANATA NEWS

17 Mar 2023

ಚಾಮರಾಜನಗರ : ರಾಜ್ಯದ ಪ್ರಮುಖ ದೇಗುಲಗಳಲ್ಲಿ ಒಂದಾದ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ನಿರ್ಮಿಸಿರುವ 108 ಅಡಿ ಮಲೆಮಹದೇಶ್ವರನ ಪ್ರತಿಮೆ ಇದೇ ಮಾರ್ಚ್ 18 ರಂದು ಲೋಕಾರ್ಪಣೆಗೊಳ್ಳುತ್ತಿದೆ.

ಅಸಂಖ್ಯಾತಭಕ್ತರ ಪಾಲಿನ ದೈವ “ಮಾಯ್ಕರ” ಮಾದಪ್ಪನ ನೆಲದಲ್ಲಿ ಮುಗಿಲೆತ್ತರದಲ್ಲಿ 108 ಅಡಿ ಎತ್ತರದ ಮಾದಪ್ಪನ ಪ್ರತಿಮೆ ಸಿದ್ಧಗೊಂಡಿದ್ದು ಶನಿವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಲೋಕಾರ್ಪಣೆ ಮಾಡಲಿದ್ದಾರೆ. ಜೊತೆಗೆ ಪ್ರಾಧಿಕಾರದ ವತಿಯಿಂದ ನಿರ್ಮಾಣಗೊಂಡಿರುವ ಬೆಳ್ಳಿರಥವೂ ಲೋಕಾರ್ಪಣೆ ಆಗಲಿದೆ.

₹20 ಕೋಟಿ ವೆಚ್ಚದ ಯೋಜನೆ ಇದಾಗಿದ್ದು, ಸದ್ಯ, ಪ್ರತಿಮೆ ನಿರ್ಮಾಣ ಮಾತ್ರ ಪೂರ್ಣಗೊಂಡಿದೆ. ಮಹದೇಶ್ವರಸ್ವಾಮಿ ಜೀವನ ಚರಿತ್ರೆ ಸಾರುವ ಮ್ಯೂಸಿಯಂ, ಪ್ರತಿಮೆಯ ಸ್ಥಳದಲ್ಲಿ ಬಯಲು ರಂಗಮಂದಿರ, ಗಿಡಮೂಲಿಕಾ ವನಗಳ ಅಭಿವೃದ್ಧಿ ಸೇರಿದಂತೆ ಇತರೆ ಕಾಮಗಾರಿಗಳು ಇನ್ನಷ್ಟೇ ನಡೆಯಬೇಕಿವೆ.

janata



108 ಅಡಿ ಎತ್ತರ ‌ಪ್ರತಿಮೆಯು ಎರಡು ಸ್ತರದಲ್ಲಿ ನಿರ್ಮಾಣವಾಗಿದೆ. ಕಲ್ಲು ಬಂಡೆಯ ರಚನೆಯ ಮೇಲೆ ವ್ಯಾಘ್ರನ ಮೇಲೆ ಕುಳಿತ ತ್ರಿಶೂಲ ಹಿಡಿದ ಮಹದೇಶ್ವರ ಸ್ವಾಮಿಯ ಪ್ರತಿಮೆ ರೂಪಿಸಲಾಗಿದೆ.

ಕಲ್ಲುಬಂಡೆಯಾಕೃತಿಯ ರಚನೆಯಲ್ಲಿ ಗುಹೆಯ ಮಾದರಿಯಲ್ಲಿ ಎರಡು ಮಹಡಿಗಳಿವೆ. ತಳಭಾಗದಲ್ಲಿ ಮಹದೇಶ್ವರ ಬೆಟ್ಟದ ಚಾರಿತ್ರಿಕ ಹಿನ್ನಲೆ ಸಾರುವ ಕಲಾಕೃತಿ ಚಿತ್ರಗಳ ರಚನೆ, ಭಕ್ತರ ವಿಶ್ರಾಂತಿ ಸ್ಥಳಾವಕಾಶ ಸೇರಿದಂತೆ ಭಕ್ತರು, ಪ್ರವಾಸಿಗರಿಗೆ ಮಹದೇಶ್ವರ ಚರಿತ್ರೆ, ಪರಂಪರೆ ಸಾರುವ ಮ್ಯೂಸಿಯಂ ನಿರ್ಮಾಣವಾಗಲಿದೆ.

ಮಹದೇಶ್ವರರ ಪ್ರತಿಮೆ ನಿರ್ಮಾಣ ಸಂಪೂರ್ಣ ಕಾಂಕ್ರೀಟ್‌ನಿಂದ ನಿರ್ಮಾಣ ಗೊಂಡಿದ್ದು ನಿರ್ಮಾಣದ ಹೊಣೆಯನ್ನು ಬೆಂಗಳೂರಿನ ಪಿಎಸ್‌ಆರ್‌ಪಿ ಆರ್ಕಿಟೆಕ್ಟ್ ಕಂಪನಿ ಸಂಸ್ಥೆಗೆ ನೀಡಲಾಗಿತ್ತು. ಈ ಕಂಪನಿಯು ಹಿಂದೆಯೂ ಗದಗಿನಲ್ಲಿ 117 ಅಡಿ ಎತ್ತರದ ಬಸವೇಶ್ವರರ ಮೂರ್ತಿ ಮತ್ತು ರಾಮ್‌ದುರ್ಗದಲ್ಲಿ ಶಿವನ ಮೂರ್ತಿಯನ್ನು ಉತ್ತಮವಾಗಿ ನಿರ್ಮಾಣ ಮಾಡಿತ್ತು. ಈ ಹಿನ್ನೆಲೆ ಮಹದೇಶ್ವರರ ಪ್ರತಿಮೆಯ ನಿರ್ಮಾಣ ಹೊಣೆಯನ್ನೂ ನೀಡಲಾಗಿತ್ತು.

ಮಹದೇಶ್ವರರ ಪ್ರತಿಮೆ ಅನಾವರಣಕ್ಕೆ ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದ್ದು, ಸರ್ಕಾರ ರಾಜಕೀಯ ಲಾಭಕ್ಕಾಗಿ ಅಪೂರ್ಣ ಕಾಮಗಾರಿ ಲೋಕಾರ್ಪಣೆ ಮಾಡುತ್ತಿದ್ದಾರೆ ಎಂದು ಆರೋಪಿಸಿ ಭಕ್ತರು ಕಿಡಿಕಾರಿದ್ದಾರೆ.

RELATED TOPICS:
English summary :108 feet statue of Madappa will be inaugurated on March 18

ನಾನು ಮತ್ತು ಇಟಲಿ ಎಂದಿಗೂ ಬೇಡುವುದಿಲ್ಲ  - ಟ್ರಂಪ್ ಹೇಳಿಕೆಗೆ ಮೆಲೋನಿ ತಿರುಗೇಟು
ನಾನು ಮತ್ತು ಇಟಲಿ ಎಂದಿಗೂ ಬೇಡುವುದಿಲ್ಲ - ಟ್ರಂಪ್ ಹೇಳಿಕೆಗೆ ಮೆಲೋನಿ ತಿರುಗೇಟು
ಎನ್‌ಡಿಎ ಶಾಸಕರ ಅಡ್ಡ ಮತದಾನ ಆರೋಪ : ಕರ್ನಾಟಕದ ನಾಯಕರಿಗೆ ಬಿಜೆಪಿ ಹೈಕಮಾಂಡ್ ಸಮನ್ಸ್
ಎನ್‌ಡಿಎ ಶಾಸಕರ ಅಡ್ಡ ಮತದಾನ ಆರೋಪ : ಕರ್ನಾಟಕದ ನಾಯಕರಿಗೆ ಬಿಜೆಪಿ ಹೈಕಮಾಂಡ್ ಸಮನ್ಸ್
ಅವರು ತಿರುಮಲ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ಸಿಎಂ ಡಿ.ಕೆ. ಶಿವಕುಮಾರ್
ಅವರು ತಿರುಮಲ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ಸಿಎಂ ಡಿ.ಕೆ. ಶಿವಕುಮಾರ್
ಮೋದಿ ನಾಯಕರಾಗಿದ್ದಾಗ ಭಾರತದ ಮೇಲೆ ದಾಳಿ ನಡೆದರೆ ಅಮೆರಿಕ ಭಾರತವನ್ನು ರಕ್ಷಿಸುತ್ತದೆ - ಅಧ್ಯಕ್ಷ ಟ್ರಂಪ್
ಮೋದಿ ನಾಯಕರಾಗಿದ್ದಾಗ ಭಾರತದ ಮೇಲೆ ದಾಳಿ ನಡೆದರೆ ಅಮೆರಿಕ ಭಾರತವನ್ನು ರಕ್ಷಿಸುತ್ತದೆ - ಅಧ್ಯಕ್ಷ ಟ್ರಂಪ್
ಭಾರತದ 3 ನಾವಿಕರ ಸಾವಿನ ವಿಷಯ ಟ್ರಂಪ್ ಎದುರು ಪ್ರಸ್ತಾವ ಮಾಡಿದ ಪ್ರಧಾನಿ ಮೋದಿ
ಭಾರತದ 3 ನಾವಿಕರ ಸಾವಿನ ವಿಷಯ ಟ್ರಂಪ್ ಎದುರು ಪ್ರಸ್ತಾವ ಮಾಡಿದ ಪ್ರಧಾನಿ ಮೋದಿ
 ಜಿ7 ಶೃಂಗಸಭೆಯಲ್ಲಿ ಗಮನ ಸೆಳೆಯುತ್ತದ ಪ್ರಧಾನಿ ಮೋದಿ ಅವರ ವಿಶ್ವಾಸಾರ್ಹತೆಯ ಕೊರತೆ ಹೇಳಿಕೆ
ಜಿ7 ಶೃಂಗಸಭೆಯಲ್ಲಿ ಗಮನ ಸೆಳೆಯುತ್ತದ ಪ್ರಧಾನಿ ಮೋದಿ ಅವರ ವಿಶ್ವಾಸಾರ್ಹತೆಯ ಕೊರತೆ ಹೇಳಿಕೆ
ಅಮೆರಿಕ ಅಧ್ಯಕ್ಷ ಟ್ರಂಪ್ ಗೆ ಫ್ರಾನ್ಸ್‌ ನಲ್ಲಿ ಕೆಂಪು ಹಾಸಿಗೆ ಸ್ವಾಗತದ ಅನುಪಸ್ಥಿತಿ : ಟ್ರಂಪ್ ಅಸಮಾಧಾನ
ಅಮೆರಿಕ ಅಧ್ಯಕ್ಷ ಟ್ರಂಪ್ ಗೆ ಫ್ರಾನ್ಸ್‌ ನಲ್ಲಿ ಕೆಂಪು ಹಾಸಿಗೆ ಸ್ವಾಗತದ ಅನುಪಸ್ಥಿತಿ : ಟ್ರಂಪ್ ಅಸಮಾಧಾನ
ಎರಡೂ ಕಡೆಯ ವಾದ ಆಲಿಸಿ ಟಿಎಂಸಿಯ ಬಂಡಾಯ ಸಂಸದರ ವಿಷಯದಲ್ಲಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ನಿರ್ಧಾರ
ಎರಡೂ ಕಡೆಯ ವಾದ ಆಲಿಸಿ ಟಿಎಂಸಿಯ ಬಂಡಾಯ ಸಂಸದರ ವಿಷಯದಲ್ಲಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ನಿರ್ಧಾರ
ಅಮೆರಿಕದ ಒಪ್ಪಂದವನ್ನು ತಿರಸ್ಕರಿಸಿದ ಇಸ್ರೇಲಿ ಸಚಿವರು, ಇರಾನ್ ದಾಳಿಗೆ ಬಲವಾದ ಪ್ರತಿಕ್ರಿಯೆ ನೀಡುವ ಪ್ರತಿಜ್ಞೆ
ಅಮೆರಿಕದ ಒಪ್ಪಂದವನ್ನು ತಿರಸ್ಕರಿಸಿದ ಇಸ್ರೇಲಿ ಸಚಿವರು, ಇರಾನ್ ದಾಳಿಗೆ ಬಲವಾದ ಪ್ರತಿಕ್ರಿಯೆ ನೀಡುವ ಪ್ರತಿಜ್ಞೆ
ಇರಾನ್ ಒಪ್ಪಂದವನ್ನು ಘೋಷಿಸಿದ ಟ್ರಂಪ್, ಹಾರ್ಮುಜ್ ಜಲಸಂಧಿಯನ್ನು ಪುನಃ ತೆರೆಯಲು ಆದೇಶ
ಇರಾನ್ ಒಪ್ಪಂದವನ್ನು ಘೋಷಿಸಿದ ಟ್ರಂಪ್, ಹಾರ್ಮುಜ್ ಜಲಸಂಧಿಯನ್ನು ಪುನಃ ತೆರೆಯಲು ಆದೇಶ
ಎನ್‌ಡಿಎಗೆ ಟಿಎಂಸಿಯ ಬಂಡಾಯ ಸಂಸದರ ಬೆಂಬಲ : ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಗೆ ಭೇಟಿ
ಎನ್‌ಡಿಎಗೆ ಟಿಎಂಸಿಯ ಬಂಡಾಯ ಸಂಸದರ ಬೆಂಬಲ : ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಗೆ ಭೇಟಿ
 ಫ್ರಾನ್ಸ್ ಜೊತೆ ನಡೆಯುತ್ತಿರುವ ರಫೇಲ್ ಚರ್ಚೆಯಲ್ಲಿ ಮೇಕ್ ಇನ್ ಇಂಡಿಯಾ ಗೆ ಒತ್ತು ನೀಡಿದ  ಭಾರತ
ಫ್ರಾನ್ಸ್ ಜೊತೆ ನಡೆಯುತ್ತಿರುವ ರಫೇಲ್ ಚರ್ಚೆಯಲ್ಲಿ ಮೇಕ್ ಇನ್ ಇಂಡಿಯಾ ಗೆ ಒತ್ತು ನೀಡಿದ ಭಾರತ

ನ್ಯೂಸ್ MORE NEWS...