ದೇವೇಗೌಡರನ್ನು ಭೇಟಿ ಮಾಡಿದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ | JANATA NEWS

ಬೆಂಗಳೂರು : ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಅವರು ಇಂದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರನ್ನು ಭೇಟಿ ಮಾಡಿದರು.
ಭೇಟಿಯ ಬಳಿಕ ಮಾತಾಡಿದ ಶ್ರೀಗಳು, ದೇವೇಗೌಡರು ಅನಾರೋಗ್ಯದಲ್ಲಿದ್ದಾಗ ಅವರನ್ನು ಕಂಡು ಮಾತಾಡುವುದು ಸಾಧ್ಯವಾಗಿರಲಿಲ್ಲ. ಹಾಗಾಗಿ, ಕುಮಾರಸ್ವಾಮಿ ಅವರಿಗೆ ವಿಷಯ ತಿಳಿಸಿ ಭೇಟಿಯಾಗಲು ಬಂದಿದ್ದಾಗಿ ಹೇಳಿದರು. ಎಲ್ಲ ಸಮುದಾಯಗಳ ಪರ ಧ್ವನಿಯೆತ್ತುವ ದೇವೇಗೌಡರು ತಾವು ನಡೆಸುತ್ತಿರುವ ಹೋರಾಟಕ್ಕೂ ಧ್ವನಿಗೂಡಿಸಬೇಕೆಂದು ಕೋರಲಾಯಿತು ಎಂದು ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದರು.
ಬಳಿಕ ಮಾಧ್ಯಮಗಳ ಜತೆ ಮಾತನಾಡಿದ ಹೆಚ್ಡಿಕೆ "ದೇವೇಗೌಡರ ಆರೋಗ್ಯ ವಿಚಾರಿಸಲು ಶ್ರೀಗಳು ಬಂದಿದ್ದರು. ಯಾವುದೇ ರಾಜಕೀಯ ಚರ್ಚೆ ಆಗಿಲ್ಲ ಎಂದು ತಿಳಿಸಿದರು.
RELATED TOPICS:
English summary :Basava Jaya Mrityunjaya Swamiji met Deve Gowda