ಸಿದ್ದರಾಮಯ್ಯ ಶಕ್ತಿ ಕುಗ್ಗಿದೆಯೋ ಅಂತ ಜನರು ಮಾತಾಡುತ್ತಿದ್ದಾರೆ: ಹೆಚ್.ಡಿ.ಕುಮಾರಸ್ವಾಮಿ | JANATA NEWS

ಬೆಂಗಳೂರು : ಸಿದ್ದರಾಮಯ್ಯ ಸ್ಪರ್ಧೆ ಬಗ್ಗೆ ಲಘುವಾಗಿ ಮಾತನಾಡಲು ಹೋಗಲ್ಲ. ಸಿದ್ದರಾಮಯ್ಯ ವಿಶ್ವಾಸದ ಕೊರತೆ ಬಗ್ಗೆ ಜನರೇ ಮಾತನಾಡುದ್ದಾರೆ. ಸಿದ್ದರಾಮಯ್ಯ ಶಕ್ತಿ ಕುಗ್ಗಿದೆಯೋ ಅಂತ ಜನರು ಮಾತಾಡುತ್ತಿದ್ದಾರೆ ಎಂದು ಹೆಚ್.ಡಿ.ಕುಮಾರಸ್ವಾಮಿ ಹೇಳಿದರು.
ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಕೋಲಾರದಲ್ಲಿ ಸ್ಪರ್ಧಿಸದಂತೆ ರಾಹುಲ್ ಗಾಂಧಿ ಸಲಹೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ನಾನು ಸಿದ್ದರಾಮಯ್ಯ ಅವರು ಎಲ್ಲಿ ನಿಲ್ಲುತ್ತಾರೆ ಎಂಬುದರ ಬಗ್ಗೆ ಲಘುವಾಗಿ ಮಾತಾಡಲ್ಲ. ರಾಷ್ಟ್ರೀಯ ಪಕ್ಷದ ಮುಖಂಡರು, ಸಿದ್ದರಾಮಯ್ಯ ಮುಖ್ಯಮಂತ್ರಿ ಆದವರು. ರಾಷ್ಟ್ರೀಯ ಪಕ್ಷದಲ್ಲಿ ಈ ಮಟ್ಟದಲ್ಲಿ ಈ ಬಗ್ಗೆ ಚರ್ಚೆ ನಡೆದಿದೆ. ನಿಜಕ್ಕೂ ಈ ರೀತಿ ತೀರ್ಮಾನ ಬಾಲಿಶಃ ವಿಷಯವಾಗಿಯೋ, ಅವರ ಶಕ್ತಿ ಕುಗ್ಗಿದಿಯಾ ಎಂದು ಜನ ಮಾತನಾಡಿಕೊಳ್ಳುವಂತಾಗಿದೆ. ಈ ರೀತಿ ಆಗಬಾರದಿತ್ತು ಎಂಬುದು ನನ್ನ ಅಭಿಪ್ರಾಯ ಎಂದರು
ಕೋಲಾರದಲ್ಲಿ ಸಿದ್ದರಾಮಯ್ಯ ನಿಂತರು ನಮಗೆ ಸಮಸ್ಯೆ ಇಲ್ಲ. ಮತದಾರರು ಜೆಡಿಎಸ್ ಪರ ಇದ್ದಾರೆ. ಯಾರು ಅಭ್ಯರ್ಥಿ ನಿಲ್ತಾರೆ ಮುಖ್ಯ ಅಲ್ಲ. ನಮ್ಮ ಅಭ್ಯರ್ಥಿ ಅಲ್ಲಿ ಗೆಲ್ಲುತ್ತಾರೆ. ಶ್ರೀನಾಥ್ ಕೆಲಸ ಆರಂಭ ಮಾಡಿದ್ದಾರೆ. ಕಳೆದ ಏಳೆಂಟು ತಿಂಗಳಿನಿಂದ ಸಂಘಟನೆ ನಡೆಯುತ್ತಿದೆ. ಅಲ್ಲಿ ವಿಶೇಷವಾಗಿ ಯಾರು ಪ್ರಮುಖ ಅಭ್ಯರ್ಥಿ ಬರ್ತಾರೆ ಅಂತಾ ಲೆಕ್ಕಾಚಾರ ಹಾಕಿಲ್ಲ ಎಂದು ಕುಮಾರಸ್ವಾಮಿ ಹೇಳಿದರು.