Sun,Jun21,2026
ಕನ್ನಡ / English

ಬಳ್ಳಾರಿ ಮಹಾನಗರ ಪಾಲಿಕೆಯ ನೂತನ ಮೇಯರ್​​​ ಆಗಿ ಡಿ. ತ್ರಿವೇಣಿ ಆಯ್ಕೆ! | JANATA NEWS

29 Mar 2023

ಬಳ್ಳಾರಿ : ಬಳ್ಳಾರಿ ಮಹಾನಗರ ಪಾಲಿಕೆಯ ನೂತನ ಮೇಯರ್ ಆಗಿ ಕಾಂಗ್ರೆಸ್ ಸದಸ್ಯೆಯಾಗಿರುವ ಡಿ. ತ್ರಿವೇಣಿ ಆಯ್ಕೆ ಆಗಿದ್ದು, ರಾಜ್ಯದಲ್ಲೇ ಅತಿ ಕಿರಿಯ ವಯಸ್ಸಿನ ಮೇಯರ್​​ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ತಮ್ಮ 23ನೇ ವಯಸ್ಸಿಗೆ ಬಳ್ಳಾರಿಯ 4ನೇ ವಾರ್ಡ್​ನ ಸದಸ್ಯೆ ಆಗಿ ಆಯ್ಕೆಯಾಗಿದ್ದಾರೆ.

ಇದೇ ಮೊದಲ ಬಾರಿಗೆ ಅತಿ ಕಿರಿಯ ವಯಸ್ಸಿನ ಪಾಲಿಕೆ ಸದಸ್ಯರು, ಮೇಯರ್ ಪಟ್ಟವನ್ನು ಅಲಂಕರಿಸಿದ್ದಾರೆ. ಇಡೀ ರಾಜ್ಯದಲ್ಲೇ ಕಿರಿಯ ವಯಸ್ಸಿನಲ್ಲಿ ಮೇಯರ್ ಆಗಿ ಅಧಿಕಾರ ಸ್ವೀಕರಿಸಿದ ಖ್ಯಾತಿಗೆ ತ್ರಿವೇಣಿ ಭಾಜನರಾಗಿದ್ದಾರೆ.

ಬಳ್ಳಾರಿಯ 4ನೇ ವಾರ್ಡ್‌ನ ಸದಸ್ಯೆ ತ್ರಿವೇಣಿ ಮೇಯರ್ ಆಗಿ ಆಯ್ಕೆ ಆಗಿದ್ದಾರೆ. ತ್ರಿವೇಣಿಯು ಕಾಂಗ್ರೆಸ್ ಮುಖಂಡ ಡಿ.ಸೂರಿ ಅವರ ಪುತ್ರಿಯಾಗಿದ್ದಾರೆ. ಇನ್ನು ಉಪಮೇಯರ್ ಆಗಿ 33ನೇ ವಾರ್ಡ್‌ನ ಜಾನಕಮ್ಮ ಆಯ್ಕೆ ಆಗಿದ್ದಾರೆ.

ಪ್ಯಾರಾ ಮೆಡಿಕಲ್​ ವಿದ್ಯಾಭ್ಯಾಸ ಮಾಡಿರುವ ಡಿ. ತ್ರಿವೇಣಿ, 2022ರಲ್ಲಿ ನಡೆದಿದ್ದ ಪಾಲಿಕೆ ಚುನಾವಣೆಯಲ್ಲಿ 4ನೇ ವಾರ್ಡ್​​ನಿಂದ ಸ್ಪರ್ಧಿಸುವ ಮೂಲಕ 501 ಮತಗಳಿಂದ ಗೆದಿದ್ದರು.

ಉಪ ಮೇಯರ್ ಸ್ಥಾನಕ್ಕೆ 3 ಜನ ಪಾಲಿಕೆ ಸದಸ್ಯರ ಮಧ್ಯೆ ಪೈಪೋಟಿ ನಡೆದಿತ್ತು. ಉಪ ಮೇಯರ್ ಸ್ಥಾನಕ್ಕೆ ಶಶಿಕಲಾ ಜಗನ್ನಾಥ, ಜಾನಕಿ,‌ ರತ್ನಮ್ಮ ಪ್ರಬಲ ಆಕಾಂಕ್ಷಿಗಳಾಗಿದ್ದರು. ಮೇಯರ್ ಎಲೆಕ್ಷನ್‌ಗೆ ಬಿಜೆಪಿಯಿಂದಲೂ ಅಭ್ಯರ್ಥಿಗಳು ಸ್ಪರ್ಧಿಸಿದ್ದರು.

ಮೇಯರ್ ಸ್ಥಾನಕ್ಕೆ ಎಸ್​ಸಿ, ಉಪ ಮೇಯರ್ ಸ್ಥಾನಕ್ಕೆ ಎಸ್​ಟಿ ಮೀಸಲು ಘೋಷಣೆ ಮಾಡಲಾಗಿದೆ. ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್​ ಬಹುಮತ ಬಂದಿದ್ದು, ಇದರ ಜೊತೆಗೆ ಐವರು ಪಕ್ಷೇತರ ಸದಸ್ಯರು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಈಗ 26 ಸದಸ್ಯರ ಬಲ ಹೊಂದಿರುವ ಕಾಂಗ್ರೆಸ್‌ಗೆ ಮೇಯರ್ ಗದ್ದುಗೆ ಎರೆದಿದೆ.

RELATED TOPICS:
English summary :D. as the new mayor of Bellary Municipal Corporation. Triveni option

ನಾನು ಮತ್ತು ಇಟಲಿ ಎಂದಿಗೂ ಬೇಡುವುದಿಲ್ಲ  - ಟ್ರಂಪ್ ಹೇಳಿಕೆಗೆ ಮೆಲೋನಿ ತಿರುಗೇಟು
ನಾನು ಮತ್ತು ಇಟಲಿ ಎಂದಿಗೂ ಬೇಡುವುದಿಲ್ಲ - ಟ್ರಂಪ್ ಹೇಳಿಕೆಗೆ ಮೆಲೋನಿ ತಿರುಗೇಟು
ಎನ್‌ಡಿಎ ಶಾಸಕರ ಅಡ್ಡ ಮತದಾನ ಆರೋಪ : ಕರ್ನಾಟಕದ ನಾಯಕರಿಗೆ ಬಿಜೆಪಿ ಹೈಕಮಾಂಡ್ ಸಮನ್ಸ್
ಎನ್‌ಡಿಎ ಶಾಸಕರ ಅಡ್ಡ ಮತದಾನ ಆರೋಪ : ಕರ್ನಾಟಕದ ನಾಯಕರಿಗೆ ಬಿಜೆಪಿ ಹೈಕಮಾಂಡ್ ಸಮನ್ಸ್
ಅವರು ತಿರುಮಲ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ಸಿಎಂ ಡಿ.ಕೆ. ಶಿವಕುಮಾರ್
ಅವರು ತಿರುಮಲ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ಸಿಎಂ ಡಿ.ಕೆ. ಶಿವಕುಮಾರ್
ಮೋದಿ ನಾಯಕರಾಗಿದ್ದಾಗ ಭಾರತದ ಮೇಲೆ ದಾಳಿ ನಡೆದರೆ ಅಮೆರಿಕ ಭಾರತವನ್ನು ರಕ್ಷಿಸುತ್ತದೆ - ಅಧ್ಯಕ್ಷ ಟ್ರಂಪ್
ಮೋದಿ ನಾಯಕರಾಗಿದ್ದಾಗ ಭಾರತದ ಮೇಲೆ ದಾಳಿ ನಡೆದರೆ ಅಮೆರಿಕ ಭಾರತವನ್ನು ರಕ್ಷಿಸುತ್ತದೆ - ಅಧ್ಯಕ್ಷ ಟ್ರಂಪ್
ಭಾರತದ 3 ನಾವಿಕರ ಸಾವಿನ ವಿಷಯ ಟ್ರಂಪ್ ಎದುರು ಪ್ರಸ್ತಾವ ಮಾಡಿದ ಪ್ರಧಾನಿ ಮೋದಿ
ಭಾರತದ 3 ನಾವಿಕರ ಸಾವಿನ ವಿಷಯ ಟ್ರಂಪ್ ಎದುರು ಪ್ರಸ್ತಾವ ಮಾಡಿದ ಪ್ರಧಾನಿ ಮೋದಿ
 ಜಿ7 ಶೃಂಗಸಭೆಯಲ್ಲಿ ಗಮನ ಸೆಳೆಯುತ್ತದ ಪ್ರಧಾನಿ ಮೋದಿ ಅವರ ವಿಶ್ವಾಸಾರ್ಹತೆಯ ಕೊರತೆ ಹೇಳಿಕೆ
ಜಿ7 ಶೃಂಗಸಭೆಯಲ್ಲಿ ಗಮನ ಸೆಳೆಯುತ್ತದ ಪ್ರಧಾನಿ ಮೋದಿ ಅವರ ವಿಶ್ವಾಸಾರ್ಹತೆಯ ಕೊರತೆ ಹೇಳಿಕೆ
ಅಮೆರಿಕ ಅಧ್ಯಕ್ಷ ಟ್ರಂಪ್ ಗೆ ಫ್ರಾನ್ಸ್‌ ನಲ್ಲಿ ಕೆಂಪು ಹಾಸಿಗೆ ಸ್ವಾಗತದ ಅನುಪಸ್ಥಿತಿ : ಟ್ರಂಪ್ ಅಸಮಾಧಾನ
ಅಮೆರಿಕ ಅಧ್ಯಕ್ಷ ಟ್ರಂಪ್ ಗೆ ಫ್ರಾನ್ಸ್‌ ನಲ್ಲಿ ಕೆಂಪು ಹಾಸಿಗೆ ಸ್ವಾಗತದ ಅನುಪಸ್ಥಿತಿ : ಟ್ರಂಪ್ ಅಸಮಾಧಾನ
ಎರಡೂ ಕಡೆಯ ವಾದ ಆಲಿಸಿ ಟಿಎಂಸಿಯ ಬಂಡಾಯ ಸಂಸದರ ವಿಷಯದಲ್ಲಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ನಿರ್ಧಾರ
ಎರಡೂ ಕಡೆಯ ವಾದ ಆಲಿಸಿ ಟಿಎಂಸಿಯ ಬಂಡಾಯ ಸಂಸದರ ವಿಷಯದಲ್ಲಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ನಿರ್ಧಾರ
ಅಮೆರಿಕದ ಒಪ್ಪಂದವನ್ನು ತಿರಸ್ಕರಿಸಿದ ಇಸ್ರೇಲಿ ಸಚಿವರು, ಇರಾನ್ ದಾಳಿಗೆ ಬಲವಾದ ಪ್ರತಿಕ್ರಿಯೆ ನೀಡುವ ಪ್ರತಿಜ್ಞೆ
ಅಮೆರಿಕದ ಒಪ್ಪಂದವನ್ನು ತಿರಸ್ಕರಿಸಿದ ಇಸ್ರೇಲಿ ಸಚಿವರು, ಇರಾನ್ ದಾಳಿಗೆ ಬಲವಾದ ಪ್ರತಿಕ್ರಿಯೆ ನೀಡುವ ಪ್ರತಿಜ್ಞೆ
ಇರಾನ್ ಒಪ್ಪಂದವನ್ನು ಘೋಷಿಸಿದ ಟ್ರಂಪ್, ಹಾರ್ಮುಜ್ ಜಲಸಂಧಿಯನ್ನು ಪುನಃ ತೆರೆಯಲು ಆದೇಶ
ಇರಾನ್ ಒಪ್ಪಂದವನ್ನು ಘೋಷಿಸಿದ ಟ್ರಂಪ್, ಹಾರ್ಮುಜ್ ಜಲಸಂಧಿಯನ್ನು ಪುನಃ ತೆರೆಯಲು ಆದೇಶ
ಎನ್‌ಡಿಎಗೆ ಟಿಎಂಸಿಯ ಬಂಡಾಯ ಸಂಸದರ ಬೆಂಬಲ : ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಗೆ ಭೇಟಿ
ಎನ್‌ಡಿಎಗೆ ಟಿಎಂಸಿಯ ಬಂಡಾಯ ಸಂಸದರ ಬೆಂಬಲ : ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಗೆ ಭೇಟಿ
 ಫ್ರಾನ್ಸ್ ಜೊತೆ ನಡೆಯುತ್ತಿರುವ ರಫೇಲ್ ಚರ್ಚೆಯಲ್ಲಿ ಮೇಕ್ ಇನ್ ಇಂಡಿಯಾ ಗೆ ಒತ್ತು ನೀಡಿದ  ಭಾರತ
ಫ್ರಾನ್ಸ್ ಜೊತೆ ನಡೆಯುತ್ತಿರುವ ರಫೇಲ್ ಚರ್ಚೆಯಲ್ಲಿ ಮೇಕ್ ಇನ್ ಇಂಡಿಯಾ ಗೆ ಒತ್ತು ನೀಡಿದ ಭಾರತ

ನ್ಯೂಸ್ MORE NEWS...