ಶಾಸಕ ಸ್ಥಾನಕ್ಕೆ ಜೆಡಿಎಸ್ ನ ಶಿವಲಿಂಗೇಗೌಡ ರಾಜೀನಾಮೆ | JANATA NEWS
ಶಿರಸಿ : ಅರಸೀಕೆರೆ ಕ್ಷೇತ್ರದ ವಿಧಾನ ಸಭಾ ಸದಸ್ಯ ಶಿವಲಿಂಗೇಗೌಡ ಅವರು ಇಂದು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ರಾಜೀನಾಮೆ ಸಲ್ಲಿಸಿದರು.
ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ವಿಧಾನಸಭಾ ಸಭಾಪತಿ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದರು. ಅರಸಿಕೇರೆಯಿಂದ 2008, 2013, 2018ರಲ್ಲಿ ಜೆಡಿಎಸ್ ಪಕ್ಷದಿಂದ ವಿಧಾನ ಸಭೆಗೆ ಆಯ್ಕೆ ಆಗಿದ್ದ ಶಿವಲಿಂಗೇಗೌಡ ಅವರು ಐನೂರಕ್ಕೂ ಅಧಿಕ ಬೆಂಬಲಿಗರ ಜೊತೆ ಶಿರಸಿಗೆ ಆಗಮಿಸಿ ಸ್ಪೀಕರ್ ಅವರಿಗೆ ರಾಜೀನಾಮೆ ಸಲ್ಲಿಸಿದರು.
ತಮ್ಮ ರಾಜೀನಾಮೆ ಕುರಿತು ಪ್ರತಿಕ್ರಿಯಿಸಿರುವ ಅವರು, ಜೆಡಿಎಸ್ ನಾಯಕರೊಂದಿಗೆ ಸಣ್ಣಪುಟ್ಟ ಭಿನ್ನಾಭಿಪ್ರಾಯ ಸರಿಹೋಗದ ಕಾರಣ ಪಕ್ಷ ಬಿಡುವಂತಾಗಿದೆ. ಎಂಎಲ್ಸಿ ಎಲೆಕ್ಷನ್ನಲ್ಲಿನ ವಿಷಯದಲ್ಲಿ ಆದ ಸಣ್ಣ ಭಿನ್ನಾಭಿಪ್ರಾಯ ರಾಜೀನಾಮೆ ಕೊಡುವಂತಾಗಿದೆ. ರಾಜಕೀಯದಲ್ಲಿ ಯಾರು ಬೇಕಾದರೂ ಪಕ್ಷಾಂತರ ಮಾಡುತ್ತಾರೆ. ಅಣ್ಣ-ತಮ್ಮಂದಿರೇ ಬೇರೆ ಆಗುತ್ತಾರೆ. ಕಾರ್ಯಕರ್ತರ ಅಭಿಪ್ರಾಯದಂತೆ ಜೆಡಿಎಸ್ ಬಿಟ್ಟು ಕಾಂಗ್ರೆಸ್ಗೆ ಸೇರ್ಪಡೆಗೊಳ್ಳುತಿದ್ದೇನೆ ಎಂದು ತಿಳಿಸಿದರು.