BLR Metro
Sat,Jun03,2023
ಕನ್ನಡ / English

ಸುದೀಪ್ ಕರ್ನಾಟಕದ ಜನರ ಜೊತೆ ನಿಲ್ಲಬೇಕು, ಪಕ್ಷದ ಪರವಾಗಿ ಅಲ್ಲ | JANATA NEWS

07 Apr 2023
611

ಬೆಂಗಳೂರು : ಕಿಚ್ಚ ಸುದೀಪ್ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಬೆಂಬಲ ಘೋಷಣೆ ಮಾಡಿರುವ ನಡೆಗೆ ನಮ್ಮ ತಕರಾರಿಲ್ಲ, ಆದರೆ 40% ಕಮಿಷನ್ ಆರೋಪ ಹೊತ್ತಿರುವ ಸರ್ಕಾರವನ್ನು ಬೆಂಬಲಿಸುವುದು ಸೂಕ್ತವೇ? ಎಂದು ಕೆಪಿಸಿಸಿ ಮಾಧ್ಯಮ ಹಾಗೂ ಸಂವಹನ ವಿಭಾಗದ ಮುಖ್ಯಸ್ಥ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದರು

ಸುದೀಪ್ ರಾಜ್ಯಕ್ಕೆ ಅದ್ಭುತವಾದ ಕೊಡುಗೆ ನೀಡಿದ್ದಾರೆ. ಯಾರಿಗೆ ಬೆಂಬಲ ಕೊಡಲು ಅವರು ಸರ್ವ ಸ್ವತಂತ್ರರು. ಕನ್ನಡ ಅಸ್ಮಿತೆಯ ಬಗ್ಗೆ ಸದಾ ಮುಂಚೂಣಿಯಲ್ಲಿ ನಿಂತು ಮಾತನಾಡುತ್ತಾರೆ. ಈಗಲೂ ಜನರ ಪರವಾಗಿ ನಿಲ್ಲಬೇಕು ಎಂದರು.

ಯಾವಾಗ 300 ದಿನ ವಾಲ್ಮೀಕಿ ಸಮಾಜದ ಸ್ವಾಮೀಜಿ ಮೀಸಲಾತಿ ಸಂಬಂಧ ಧರಣಿ ನಡೆಸಿದ್ದರಲ್ಲ ಆವಾಗ ಬಂದು ನೈತಿಕತೆ ಬೆಂಬಲ ಕೊಟ್ಟಿದ್ದರೆ, ಇದೇ ಬೊಮ್ಮಾಯಿ ಮಾಮ ಅವರು ಮೀಸಲಾತಿ ಆವಾಗಲೇ ಮಾಡಿಸ್ತಾ ಇದ್ದರಲ್ಲಾ?. ಸಮಾಜದ ಸ್ವಾಮಿ ಬಿಸಿಲಿನಲ್ಲಿ ಉಪವಾಸ ಸತ್ಯಾಗ್ರಹ ಮಾಡಿದಾಗ ಸುದೀಪ್ ಬಂದು ನಾನು ನಿಮ್ಮ ಜೊತೆ ಇದ್ದೇನೆ. ಬೊಮ್ಮಾಯಿ ಮಾಮ ಜೊತೆ ಮಾತನಾಡುತ್ತೇನೆ ಎಂದು ಹೇಳಬಹುದಿತ್ತಲ್ಲ ಎಂದು ಪ್ರಶ್ನಿಸಿದರು.

ಸುದೀಪ್‌ ಚಿತ್ರಗಳಿಗೆ ನಿರ್ಬಂಧ ಹೇರಿ ಅನ್ನುವುದು ಸರಿಯಲ್ಲ. ಹಲವರಿಗೆ ಸಿನಿಮಾದಲ್ಲಿ‌ ಕೆಲಸ ಕೊಟ್ಟಿರುತ್ತಾರೆ. ವಾಣಿಜ್ಯ ದೃಷ್ಟಿಕೋನದಿಂದ ಚಿತ್ರ ತೆಗೆದಿರುತ್ತಾರೆ. ಅದನ್ನು ಬ್ಯಾನ್ ಮಾಡಿ ಅನ್ನೋದು ಸರಿಯಲ್ಲ ಎಂದು ಇದೇ ವೇಳೆ ತಿಳಿಸಿದರು. ಹಾಗೆಯೇ ಅದು‌ ಸರಿಯಾದ ಕ್ರಮವೂ ಅಲ್ಲ. ಆದರೆ ರಾಜಕೀಯ ಪಕ್ಷದ ವಿಚಾರ ಇದ್ದರೆ ನಿಷೇಧಿಸಬೇಕಾಗುತ್ತೆ. ಚುನಾವಣಾ ನಿಯಮಗಳಲ್ಲೇ ಅದು ಇರುತ್ತದೆ. ಅವರ ಸಿನಿಮಾಗಳನ್ನು ನಿರ್ಬಂಧಿಸುವುದಕ್ಕೆ ನಮ್ಮ ಬೆಂಬಲ ಇಲ್ಲ ಎಂದು ತಿಳಿಸಿದರು.

ಅಮೂಲ್ ಕರ್ನಾಟಕದ ಮಾರ್ಕೆಟ್ ಪ್ರವೇಶ ಮಾಡಿರುವ ಬಗ್ಗೆ ಪ್ರತಿಕ್ರಿಯೆ ‌ನೀಡಿ, ‌ಫ್ರೀ ಮಾರ್ಕೆಟ್ ನಲ್ಲಿ ಪೈಪೋಟಿ ಮಾಡಬಾರದು ಎಂದು ಹೇಳುತ್ತಿಲ್ಲ. ಆದರೆ ಸಹಕಾರಿ ತತ್ವದಲ್ಲಿ ಅಲಿಖಿತ ನಿಯಮ ಅಥವಾ ಹೊಂದಾಣಿಕೆ ಇರುತ್ತದೆ. ಆದರೆ ಅಮೂಲ್ ಜೊತೆಗೆ ಕೆಎಂಎಫ್ ವಿಲೀನ ಮಾಡುವ ಪ್ರಯತ್ನವೇ ನಡೆದಿತ್ತು. ಇದೆಲ್ಲವನ್ನೂ ಗಮನಿಸಿದರೆ ಕನ್ನಡಿಗರ ಅಸ್ಮಿತೆಯನ್ನು ಮುಗಿಸುವ ಸಂಚನ್ನು ಬಿಜೆಪಿ ನಾಯಕರು ನಡೆಯುತ್ತಿದ್ದಾರೆ. ಆದರೆ ರಾಜ್ಯ ಬಿಜೆಪಿ ಶಾಸಕರು, ಸಂಸದರು ಮೂಕಪ್ರೇಕ್ಷಕರಾಗಿದ್ದಾರೆ ಎಂದು ಆರೋಪಿಸಿಸಿದರು.

logo
RELATED TOPICS:
English summary :Sudeep should stand with the people of Karnataka, not the party

ಮಣಿಪುರದಾದ್ಯಂತ 144 ಶಸ್ತ್ರಾಸ್ತ್ರಗಳು ಮತ್ತು 11 ಮ್ಯಾಗಜೀನ್ ವಶ
ಮಣಿಪುರದಾದ್ಯಂತ 144 ಶಸ್ತ್ರಾಸ್ತ್ರಗಳು ಮತ್ತು 11 ಮ್ಯಾಗಜೀನ್ ವಶ
5 ಗ್ಯಾರಂಟಿಗಳನ್ನು ಜಾರಿಗೊಳಿಸಲುಕ್ಯಾಬಿನೆಟ್‌ ಸಮ್ಮತಿ : ಯೋಜನೆಗಳ ಬಗ್ಗೆ ನೀವು ತಿಳಿದುಕೊಳ್ಳಲೇಬೇಕಾದ ಅಂಶ
5 ಗ್ಯಾರಂಟಿಗಳನ್ನು ಜಾರಿಗೊಳಿಸಲುಕ್ಯಾಬಿನೆಟ್‌ ಸಮ್ಮತಿ : ಯೋಜನೆಗಳ ಬಗ್ಗೆ ನೀವು ತಿಳಿದುಕೊಳ್ಳಲೇಬೇಕಾದ ಅಂಶ
ಮುಸ್ಲಿಂ ಲೀಗ್ ಸಂಪೂರ್ಣವಾಗಿ ಜಾತ್ಯತೀತ ಎಂದ ರಾಹುಲ್ ಗಾಂಧಿ ಹೇಳಿಕೆಗೆ ಬಿಜೆಪಿ ತೀವ್ರ ವಾಗ್ದಾಳಿ
ಮುಸ್ಲಿಂ ಲೀಗ್ ಸಂಪೂರ್ಣವಾಗಿ ಜಾತ್ಯತೀತ ಎಂದ ರಾಹುಲ್ ಗಾಂಧಿ ಹೇಳಿಕೆಗೆ ಬಿಜೆಪಿ ತೀವ್ರ ವಾಗ್ದಾಳಿ
ಪೊಲೀಸರ ತನಿಖೆಯನ್ನು ನಂಬಿ, ಅದರ ಮುಕ್ತಾಯದವರೆಗೂ ತಾಳ್ಮೆಯಿಂದಿರಿ - ಕ್ರೀಡಾ ಸಚಿವ ಠಾಕೂರ್ ಮನವಿ
ಪೊಲೀಸರ ತನಿಖೆಯನ್ನು ನಂಬಿ, ಅದರ ಮುಕ್ತಾಯದವರೆಗೂ ತಾಳ್ಮೆಯಿಂದಿರಿ - ಕ್ರೀಡಾ ಸಚಿವ ಠಾಕೂರ್ ಮನವಿ
ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಾರಿಗೆ ತರಲಾದ ಯೋಜನೆಗಳಿಗೆ ಅನುದಾನ ಕಡಿತ ಮಾಡದಂತೆ ಬಸವರಾಜ ಬೊಮ್ಮಾಯಿ‌ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ!
ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಾರಿಗೆ ತರಲಾದ ಯೋಜನೆಗಳಿಗೆ ಅನುದಾನ ಕಡಿತ ಮಾಡದಂತೆ ಬಸವರಾಜ ಬೊಮ್ಮಾಯಿ‌ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ!
ಧಗ ಧಗನೆ ಹೊತ್ತಿ ಉರಿದ ಲಘು ವಿಮಾನ, ಪ್ಯಾರಾಚೂಟ್ ಸಹಾಯದಿಂದ ಜಿಗಿದ ಪೈಲಟ್ ಗಳು
ಧಗ ಧಗನೆ ಹೊತ್ತಿ ಉರಿದ ಲಘು ವಿಮಾನ, ಪ್ಯಾರಾಚೂಟ್ ಸಹಾಯದಿಂದ ಜಿಗಿದ ಪೈಲಟ್ ಗಳು
ಅಂಬರ್ ಗ್ರಿಸ್​ ತಂದು ಮಾರಾಟಕ್ಕೆ ಯತ್ನ, ಸಿಸಿಬಿ ಪೊಲೀಸರಿಂದ ಇಬ್ಬರ ಬಂಧನ.
ಅಂಬರ್ ಗ್ರಿಸ್​ ತಂದು ಮಾರಾಟಕ್ಕೆ ಯತ್ನ, ಸಿಸಿಬಿ ಪೊಲೀಸರಿಂದ ಇಬ್ಬರ ಬಂಧನ.
ಪಕ್ಷ ಸಂಘಟನೆ ದೃಷ್ಟಿಯಿಂದ ಕಠಿಣ ಸೂಚನೆಗಳನ್ನು ಕೊಟ್ಟ ಕುಮಾರಸ್ವಾಮಿ!
ಪಕ್ಷ ಸಂಘಟನೆ ದೃಷ್ಟಿಯಿಂದ ಕಠಿಣ ಸೂಚನೆಗಳನ್ನು ಕೊಟ್ಟ ಕುಮಾರಸ್ವಾಮಿ!
ತಮಿಳುನಾಡು ಸರ್ಕಾರಕ್ಕೆ ಮನವಿ, ಅಕ್ಕಪಕ್ಕದ ರಾಜ್ಯದವರು ಅಣ್ಣ ತಮ್ಮಂದಿರಂತೆ ಬದುಕೋಣ!
ತಮಿಳುನಾಡು ಸರ್ಕಾರಕ್ಕೆ ಮನವಿ, ಅಕ್ಕಪಕ್ಕದ ರಾಜ್ಯದವರು ಅಣ್ಣ ತಮ್ಮಂದಿರಂತೆ ಬದುಕೋಣ!
ಬಿಎಸ್​ವೈ ನಿವಾಸಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಭೇಟಿ, ಯೋಗಕ್ಷೇಮ ವಿಚಾರಿಸಿದ ಡಿಕೆ ಶಿವಕುಮಾರ್
ಬಿಎಸ್​ವೈ ನಿವಾಸಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಭೇಟಿ, ಯೋಗಕ್ಷೇಮ ವಿಚಾರಿಸಿದ ಡಿಕೆ ಶಿವಕುಮಾರ್
5 ಪ್ರಮುಖ ಗ್ಯಾರಂಟಿಗಳ ಜಾರಿಗೆ ಆರ್ಥಿಕ ಇಲಾಖೆಗಳು ನಮಗೆ ಆಯ್ಕೆಗಳನ್ನು ನೀಡಿದೆ - ಡಿಸಿಎಂ ಡಿಕೆಶಿ
5 ಪ್ರಮುಖ ಗ್ಯಾರಂಟಿಗಳ ಜಾರಿಗೆ ಆರ್ಥಿಕ ಇಲಾಖೆಗಳು ನಮಗೆ ಆಯ್ಕೆಗಳನ್ನು ನೀಡಿದೆ - ಡಿಸಿಎಂ ಡಿಕೆಶಿ
ಹೆಚ್ ಡಿ ಕುಮಾರಸ್ವಾಮಿ ಜೆಡಿಎಸ್‌ ವಿಸರ್ಜನೆ ಯಾವಾಗ ಎಂಬ ಪ್ರಶ್ನೆಗೆ ಹೇಳಿದ್ದೇನು ಗೊತ್ತಾ?
ಹೆಚ್ ಡಿ ಕುಮಾರಸ್ವಾಮಿ ಜೆಡಿಎಸ್‌ ವಿಸರ್ಜನೆ ಯಾವಾಗ ಎಂಬ ಪ್ರಶ್ನೆಗೆ ಹೇಳಿದ್ದೇನು ಗೊತ್ತಾ?

ನ್ಯೂಸ್ MORE NEWS...