BLR Metro
Sat,Jun03,2023
ಕನ್ನಡ / English

ಜಗದೀಶ್ ಶೆಟ್ಟರ್ ರಾಜೀನಾಮೆ ನಿರ್ಧಾರ ನೋವು ತಂದಿದೆ: ಸಿಎಂ ಬೊಮ್ಮಾಯಿ | JANATA NEWS

16 Apr 2023
547

ಹುಬ್ಬಳ್ಳಿ : ಜಗದೀಶ್ ಶೆಟ್ಟರ್ ರಾಜೀನಾಮೆ ನಿರ್ಧಾರದಿಂದ ನೋವು ತಂದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಾರಿಯ ಚುನಾವಣೆಯಲ್ಲಿ ಈಶ್ವರಪ್ಪ ಸೇರಿ ಹಲವು ನಾಯಕರಿಗೆ ಟಿಕೆಟ್ ನೀಡಲಾಗಿಲ್ಲ. ಪಕ್ಷದಲ್ಲಿ ಅಸಮಾಧಾನ ಭುಗಿಲೆದಿದ್ದು, ಡ್ಯಾಮೇಜ್ ಕಂಟ್ರೋಲ್‌ ಸರಿಪಡಿಸುತ್ತೇವೆ.

ಜಗದೀಶ್‌ ಶೆಟ್ಟರ್ ಉತ್ತರ ಕರ್ನಾಟಕದ ಹಿರಿಯ ನಾಯಕರು ಅವರ ಮನವೊಲಿಕೆಗೆ ಎಲ್ಲ ಪ್ರಯತ್ನ ಮಾಡಿದ್ದೇವೆ ಎಂದ ಅವರು ರಾಷ್ಟ್ರೀಯ ಮಟ್ಟದ ಸ್ಥಾನಮಾನದ ಭರವಸೆ ನೀಡಿದೆವು ಅವರ ಕುಟುಂಬಕ್ಕೂ ಟಿಕೇಟ್ ಭರವಸೆ ಕೊಟ್ಟಿದ್ದೆವು ಆದರೂ ರಾಜೀನಾಮೆ ಈ ನಿರ್ಧಾರ ಕೈಗೊಂಡಿರೋದು ದುರ್ದೈವ ಎಂದರು.

ಸ್ಥಾಪಿತ ರಾಜಕಾರಣದಲ್ಲಿ ಬದಲಾವಣೆ ತರುವ ಪ್ರಯತ್ನ ಮಾಡುತ್ತಿದೆ. ಮೋದಿ ನೇತೃತ್ವದಲ್ಲಿ ಬದಲಾವಣೆ ತರುವ ಪ್ರಯತ್ನ ಮಾಡಿದ್ದು, ಯಡಿಯೂರಪ್ಪ ನಮಗೆ ಆದರ್ಶರು, ಮುಖ್ಯಮಂತ್ರಿ ಇರುವಾಗಲೇ ರಾಜೀನಾಮೆ ಕೊಟ್ಟಿದ್ದಾರೆ ಎಂದು ಹೇಳಿದರು.

ಅದೇ ರೀತಿ ಈಶ್ವರಪ್ಪ ಚುನಾವಣೆ ರಾಜಕೀಯ ನಿವೃತ್ತಿ ಘೋಷಣೆ ಮಾಡಿದ್ದಾರೆ. ಶೆಟ್ಟರ್ ಅವರಿಗೆ ಇದಕ್ಕಿಂತ ದೊಡ್ಡ ಹುದ್ದೆ ಕೊಡುತ್ತೇವೆ ಎಂದು ಹೇಳಲಾಗಿತ್ತು. ದಿಲ್ಲಿ ಮಟ್ಟದಲ್ಲಿ ಹುದ್ದೆ ಕೊಡುವುದಾಗಿ ನಡ್ಡಾ, ಅಮಿತ್ ಶಾ ಹೇಳಿದರು. ನಾನು ನಿನ್ನೆ ಚರ್ಚೆ ಮಾಡಿ ಹೇಳಿದ್ದೆ. ಅಷ್ಟೇ ಅಲ್ಲದೇ ಅವರು ಹೇಳಿರುವವರಿಗೆ ಟಿಕೆಟ್ ಕೊಡುತ್ತೇವೆ ಎಂದಿತ್ತು. ಆದರೂ ಶೆಟ್ಟರ್ ರಾಜೀನಾಮೆ ನೀಡಿರುವುದು ನೋವು ತಂದಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಕಲ್ಯಾಣ ಕರ್ನಾಟಕ, ಕಿತ್ತೂರ ಕರ್ನಾಟಕ ಅಭಿವೃದ್ಧಿ ಬಿಜೆಪಿಯಿಂದ ಮಾತ್ರ ಸಾಧ್ಯ. ಅತಿಹೆಚ್ಚು ಮಂತ್ರಿ ಸ್ಥಾನ ಕೊಟ್ಟಿದ್ದು ಬಿಜೆಪಿ. ಲಿಂಗಾಯತ ಸಮುದಾಯಕ್ಕೆ ಅತಿಹೆಚ್ಚು ಸೀಟ್ ಕೊಟ್ಟಿದ್ದು ಬಿಜೆಪಿ. ಯಡಿಯೂರಪ್ಪ ನೇತೃತ್ವದಲ್ಲಿ ಮೊದಲನೇ ಪೀಳಿಗೆ ಬೆಳೆದು ನಿಂತಿದೆ. ಎರಡನೇ ಪೀಳೀಗೆಯಲ್ಲಿ ಲಿಂಗಾಯತ ಸಮುದಾಯದ ಸಿಸಿ ಪಾಟೀಲ್, ನಿರಾಣಿ, ಸೋಮಣ್ಣ ಬೆಳೆದು ನಿಂತಿದ್ದಾರೆ. ಎಲ್ಲರಿಗೂ ಅವಕಾಶ ಕೊಡಲಾಗಿದೆ ಎಂದರು.

logo
RELATED TOPICS:
English summary :Jagdish Shettar decision to resign has brought pain: CM Bommai

ಮಣಿಪುರದಾದ್ಯಂತ 144 ಶಸ್ತ್ರಾಸ್ತ್ರಗಳು ಮತ್ತು 11 ಮ್ಯಾಗಜೀನ್ ವಶ
ಮಣಿಪುರದಾದ್ಯಂತ 144 ಶಸ್ತ್ರಾಸ್ತ್ರಗಳು ಮತ್ತು 11 ಮ್ಯಾಗಜೀನ್ ವಶ
5 ಗ್ಯಾರಂಟಿಗಳನ್ನು ಜಾರಿಗೊಳಿಸಲುಕ್ಯಾಬಿನೆಟ್‌ ಸಮ್ಮತಿ : ಯೋಜನೆಗಳ ಬಗ್ಗೆ ನೀವು ತಿಳಿದುಕೊಳ್ಳಲೇಬೇಕಾದ ಅಂಶ
5 ಗ್ಯಾರಂಟಿಗಳನ್ನು ಜಾರಿಗೊಳಿಸಲುಕ್ಯಾಬಿನೆಟ್‌ ಸಮ್ಮತಿ : ಯೋಜನೆಗಳ ಬಗ್ಗೆ ನೀವು ತಿಳಿದುಕೊಳ್ಳಲೇಬೇಕಾದ ಅಂಶ
ಮುಸ್ಲಿಂ ಲೀಗ್ ಸಂಪೂರ್ಣವಾಗಿ ಜಾತ್ಯತೀತ ಎಂದ ರಾಹುಲ್ ಗಾಂಧಿ ಹೇಳಿಕೆಗೆ ಬಿಜೆಪಿ ತೀವ್ರ ವಾಗ್ದಾಳಿ
ಮುಸ್ಲಿಂ ಲೀಗ್ ಸಂಪೂರ್ಣವಾಗಿ ಜಾತ್ಯತೀತ ಎಂದ ರಾಹುಲ್ ಗಾಂಧಿ ಹೇಳಿಕೆಗೆ ಬಿಜೆಪಿ ತೀವ್ರ ವಾಗ್ದಾಳಿ
ಪೊಲೀಸರ ತನಿಖೆಯನ್ನು ನಂಬಿ, ಅದರ ಮುಕ್ತಾಯದವರೆಗೂ ತಾಳ್ಮೆಯಿಂದಿರಿ - ಕ್ರೀಡಾ ಸಚಿವ ಠಾಕೂರ್ ಮನವಿ
ಪೊಲೀಸರ ತನಿಖೆಯನ್ನು ನಂಬಿ, ಅದರ ಮುಕ್ತಾಯದವರೆಗೂ ತಾಳ್ಮೆಯಿಂದಿರಿ - ಕ್ರೀಡಾ ಸಚಿವ ಠಾಕೂರ್ ಮನವಿ
ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಾರಿಗೆ ತರಲಾದ ಯೋಜನೆಗಳಿಗೆ ಅನುದಾನ ಕಡಿತ ಮಾಡದಂತೆ ಬಸವರಾಜ ಬೊಮ್ಮಾಯಿ‌ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ!
ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಾರಿಗೆ ತರಲಾದ ಯೋಜನೆಗಳಿಗೆ ಅನುದಾನ ಕಡಿತ ಮಾಡದಂತೆ ಬಸವರಾಜ ಬೊಮ್ಮಾಯಿ‌ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ!
ಧಗ ಧಗನೆ ಹೊತ್ತಿ ಉರಿದ ಲಘು ವಿಮಾನ, ಪ್ಯಾರಾಚೂಟ್ ಸಹಾಯದಿಂದ ಜಿಗಿದ ಪೈಲಟ್ ಗಳು
ಧಗ ಧಗನೆ ಹೊತ್ತಿ ಉರಿದ ಲಘು ವಿಮಾನ, ಪ್ಯಾರಾಚೂಟ್ ಸಹಾಯದಿಂದ ಜಿಗಿದ ಪೈಲಟ್ ಗಳು
ಅಂಬರ್ ಗ್ರಿಸ್​ ತಂದು ಮಾರಾಟಕ್ಕೆ ಯತ್ನ, ಸಿಸಿಬಿ ಪೊಲೀಸರಿಂದ ಇಬ್ಬರ ಬಂಧನ.
ಅಂಬರ್ ಗ್ರಿಸ್​ ತಂದು ಮಾರಾಟಕ್ಕೆ ಯತ್ನ, ಸಿಸಿಬಿ ಪೊಲೀಸರಿಂದ ಇಬ್ಬರ ಬಂಧನ.
ಪಕ್ಷ ಸಂಘಟನೆ ದೃಷ್ಟಿಯಿಂದ ಕಠಿಣ ಸೂಚನೆಗಳನ್ನು ಕೊಟ್ಟ ಕುಮಾರಸ್ವಾಮಿ!
ಪಕ್ಷ ಸಂಘಟನೆ ದೃಷ್ಟಿಯಿಂದ ಕಠಿಣ ಸೂಚನೆಗಳನ್ನು ಕೊಟ್ಟ ಕುಮಾರಸ್ವಾಮಿ!
ತಮಿಳುನಾಡು ಸರ್ಕಾರಕ್ಕೆ ಮನವಿ, ಅಕ್ಕಪಕ್ಕದ ರಾಜ್ಯದವರು ಅಣ್ಣ ತಮ್ಮಂದಿರಂತೆ ಬದುಕೋಣ!
ತಮಿಳುನಾಡು ಸರ್ಕಾರಕ್ಕೆ ಮನವಿ, ಅಕ್ಕಪಕ್ಕದ ರಾಜ್ಯದವರು ಅಣ್ಣ ತಮ್ಮಂದಿರಂತೆ ಬದುಕೋಣ!
ಬಿಎಸ್​ವೈ ನಿವಾಸಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಭೇಟಿ, ಯೋಗಕ್ಷೇಮ ವಿಚಾರಿಸಿದ ಡಿಕೆ ಶಿವಕುಮಾರ್
ಬಿಎಸ್​ವೈ ನಿವಾಸಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಭೇಟಿ, ಯೋಗಕ್ಷೇಮ ವಿಚಾರಿಸಿದ ಡಿಕೆ ಶಿವಕುಮಾರ್
5 ಪ್ರಮುಖ ಗ್ಯಾರಂಟಿಗಳ ಜಾರಿಗೆ ಆರ್ಥಿಕ ಇಲಾಖೆಗಳು ನಮಗೆ ಆಯ್ಕೆಗಳನ್ನು ನೀಡಿದೆ - ಡಿಸಿಎಂ ಡಿಕೆಶಿ
5 ಪ್ರಮುಖ ಗ್ಯಾರಂಟಿಗಳ ಜಾರಿಗೆ ಆರ್ಥಿಕ ಇಲಾಖೆಗಳು ನಮಗೆ ಆಯ್ಕೆಗಳನ್ನು ನೀಡಿದೆ - ಡಿಸಿಎಂ ಡಿಕೆಶಿ
ಹೆಚ್ ಡಿ ಕುಮಾರಸ್ವಾಮಿ ಜೆಡಿಎಸ್‌ ವಿಸರ್ಜನೆ ಯಾವಾಗ ಎಂಬ ಪ್ರಶ್ನೆಗೆ ಹೇಳಿದ್ದೇನು ಗೊತ್ತಾ?
ಹೆಚ್ ಡಿ ಕುಮಾರಸ್ವಾಮಿ ಜೆಡಿಎಸ್‌ ವಿಸರ್ಜನೆ ಯಾವಾಗ ಎಂಬ ಪ್ರಶ್ನೆಗೆ ಹೇಳಿದ್ದೇನು ಗೊತ್ತಾ?

ನ್ಯೂಸ್ MORE NEWS...