Sat,May18,2024
ಕನ್ನಡ / English

ನಾವು ನಂಬಿ ಪ್ರತಿಪಾದಿಸುತ್ತಾ ಬಂದಿರುವ ಎಲ್ಲಾ ತತ್ವ, ಆದರ್ಶಗಳ ವಿರುದ್ಧ ಕೆಲಸ ಮಾಡುವ ಕಾಂಗ್ರೆಸ್‌ ಪಕ್ಷದೊಂದಿಗೆ ಕೆಲಸ ಮಾಡುವುದು ಹೇಗೆ ಸಾಧ್ಯ? | JANATA NEWS

17 Apr 2023
1178

ಶಿವಮೊಗ್ಗ : ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌ ಅವರು ಇಂದು ಕಾಂಗ್ರೆಸ್‌ ಸೇರ್ಪಡೆ ಆಗಿದ್ದಾರೆ. ಈ ಬಗ್ಗೆ ಕೆ.ಎಸ್. ಈಶ್ವರಪ್ಪ ಅವರು ಶೆಟ್ಟರ್‌ಗೆ ಬಹಿರಂಗ ಪತ್ರ ಬರೆದಿದ್ದು, ನಾವು ನಂಬಿ ಪ್ರತಿಪಾದಿಸುತ್ತಾ ಬಂದಿರುವ ಎಲ್ಲಾ ತತ್ವ, ಆದರ್ಶಗಳ ವಿರುದ್ಧ ಕೆಲಸ ಮಾಡುವ ಕಾಂಗ್ರೆಸ್‌ ಪಕ್ಷದೊಂದಿಗೆ ಕೆಲಸ ಮಾಡುವುದು ಹೇಗೆ ಸಾಧ್ಯ? ಎಂದು ಜಗದೀಶ್‌ ಶೆಟ್ಟರ್‌ ಅವರಿಗೆ ಪ್ರಶ್ನಿಸಿದ್ದಾರೆ.

ಮಾನ್ಯ ಶ್ರೀ ಜಗದೀಶ್ ಶೆಟ್ಟರ್ ಅವರಿಗೆ ನನ್ನ ಅತ್ಮೀಯ ನಮಸ್ಕಾರಗಳು.

ಸುಮಾರು 4 ದಶಕಗಳಿಗೂ ಹೆಚ್ಚಿನ ಕಾಲ ತಾವು ನಂಬಿ ತಮ್ಮ ರಾಜಕೀಯ ಜೀವನವನ್ನು ರೂಪಿಸಿಕೊಂಡಿದ್ದ ತತ್ವ ಸಿದ್ಧಾಂತ, ರಾಜಕೀಯ ನಿಲುವನ್ನು ತ್ಯಜಿಸಿ ಕಾಂಗ್ರೆಸ್‌ ಪಕ್ಷದ ಕಡೆ ತಾವು ಮುಖ ಮಾಡಿರುವ ಈ ಬದಲಾದ ಪರಿಸ್ಥಿತಿಯಲ್ಲಿ ನನಗೆ ನಿಮ್ಮ ಪೂಜ್ಯ ತಂದೆಯವರಾದ ದಿ.ಶಿವಪ್ಪ ಶೆಟ್ಟರು ಬಹಳವಾಗಿ ನೆನಪಾಗುತ್ತಿದ್ದಾರೆ.

ರಾಷ್ಟ್ರೀಯ ಸ್ವಯಂ ಸೇವಕ (RSS) ಸಂಘದ ದಟ್ಟ ಪ್ರಭಾವದಲ್ಲಿ ತಮ್ಮ ರಾಜಕೀಯ ಜೀವನ ರೂಪಿಸಿಕೊಂಡ ದಿ.ಶಿವಪ್ಪ ಶೆಟ್ಟರು, ಭಾರತೀಯ ಜನತಾ ಪಕ್ಷದ ಮೂಲಕ ನಗರ ಸಭೆಯ ಸದಸ್ಯರಾಗಿ, ಮಹಾಪೌರರಾಗಿ, ಶಾಸಕರಾಗಿ ಎಲ್ಲದಕ್ಕಿಂತ ಮಿಗಿಲಾಗಿ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿ ಜನಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಂಡವರು ಅವರದೇ ಪ್ರಭಾವದಲ್ಲಿ ಬೆಳೆದ ತಾವು ಸಹ ರಾಷ್ಟ್ರೀಯತೆಯ ವಿಚಾರಧಾರೆಗಳನ್ನು ಮೈಗೂಡಿಸಿಕೊಂಡವರು. ಕಾಂಗ್ರೆಸ್‌ ಪಕ್ಷದ ದೇಶ ವಿರೋಧಿ ಧೋರಣೆಗಳನ್ನು ಸದಾ ಖಂಡಿಸುತ್ತಾ ಬಂದವರು, ಭಾರತೀಯ ಜನತಾ ಪಕ್ಷದ ಮೂಲಕ ಅನೇಕ ಬಾರಿ ಶಾಸಕರಾಗಿ ಚುನಾಯಿತರಾಗಿದ್ದು ಮಾತ್ರವಲ್ಲದೇ ರಾಜ್ಯದ ಮುಖ್ಯಮಂತ್ರಿಯಾಗುವಷ್ಟು ಎತ್ತರಕ್ಕೆ ಬೆಳೆದವರು.

ಪ್ರಸಕ್ತ ಸಂದರ್ಭದಲ್ಲಿ ತಾಯಿಯಂತೆ ಕಾಪಾಡಿದ ಪಕ್ಷ ತೆಗೆದುಕೊಂಡ ನಿರ್ಣಯದ ವಿರುದ್ಧ ಅಸಮಾಧಾನಗೊಂಡಿರುವ ತಮ್ಮ ಮನಸ್ಥಿತಿ ನನಗೆ ಅರ್ಥವಾಗುತ್ತದೆ. ಆದರೆ ಪಕ್ಷವನ್ನು ಬಿಟ್ಟು ನಂಬಿದ ಎಲ್ಲಾ ಆದರ್ಶಗಳನ್ನು ತೊರೆದು ನಮ್ಮ ಪಕ್ಷದ ಚಿಂತನೆಗೆ ವಿರುದ್ಧವಾದ ಕಾಂಗ್ರೆಸ್‌ ಪಕ್ಷಕ್ಕೆ ತಾವು ಸೇರಲು ಬಯಸಿರುವುದು ಮಾತ್ರ ಅತ್ಯಂತ ದುರದೃಷ್ಟಕರ.

ಮುಂದೆ ಒಂದು ದಿನ ತಾವು ಕಾಂಗ್ರೆಸ್ ಪಕ್ಷದಿಂದ ಗೆದ್ದು ಬಂದ ಸಂಧರ್ಭದಲ್ಲಿ ಸದನದಲ್ಲಿ ಗೋ ಹತ್ಯೆ ಪರ – ವಿರೋಧದ ಚರ್ಚೆ ನಡೆದರೆ ತಾವು ಗೋ ಹತ್ಯೆಯನ್ನು ಸಮರ್ಥಿಸಲು ಸಾಧ್ಯವೇ? ಉಗ್ರ ಪಿಎಫ್‌ಐ ಸಂಘಟನೆ ಕುರಿತಾದ ಪರ-ವಿರೋಧದ ಚರ್ಚೆಯಲ್ಲಿ ಪಿಎಫ್‌ಐ ನಿರ್ಬಂಧ ತೆರವು ಮಾಡಲು ತಾವು ಸಮ್ಮತಿಸಲು ಸಾಧ್ಯವೇ? ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ತ್ರಿವರ್ಣ ಧ್ವಜ ಹಾರಿಸಲು ವಿರೋಧ ವ್ಯಕ್ತಪಡಿಸಿದ ಕಾಂಗ್ರೆಸ್‌ ಪಕ್ಷದ ವಿರುದ್ಧ ತಮ್ಮ ಉಗ್ರ ಹೋರಾಟ ನನಗಿನ್ನೂ ಮನಸ್ಸಿನಲ್ಲಿ ಹಸಿರಾಗಿದೆ.

ಈಗ ತಾವು ಅದೇ ಪಕ್ಷವನ್ನು ಯಾವ ರೀತಿ ಒಪ್ಪಿಕೊಳ್ಳಲು ಸಾಧ್ಯ? ನಾವು ನಂಬಿ ಪ್ರತಿಪಾದಿಸುತ್ತಾ ಬಂದಿರುವ ಎಲ್ಲಾ ತತ್ವ, ಆದರ್ಶಗಳ ವಿರುದ್ಧ ಕೆಲಸ ಮಾಡುವ ಕಾಂಗ್ರೆಸ್‌ ಪಕ್ಷದೊಂದಿಗೆ ಕೆಲಸ ಮಾಡುವುದು ಹೇಗೆ ಸಾಧ್ಯ? ಈ ಕುರಿತು ಒಮ್ಮೆ ಯೋಚಿಸಿ ಎಂದು ಕೋರುತ್ತೇನೆ.

ಕೇವಲ ಈ ಬಾರಿಯ ಚುನಾವಣೆಯಲ್ಲಿ ತಮಗೆ ಸ್ಪರ್ಧಿಸಲು ಬಿಜೆಪಿ ಅವಕಾಶ ನೀಡಲಿಲ್ಲವೆಂಬ ಕಾರಣವನ್ನು ಮುಂದಿಟ್ಟುಕೊಂಡು ಪಕ್ಷ ತೊರೆಯುವ ಮಹತ್ವದ ನಿರ್ಧಾರ ಮಾಡುವ ಮುನ್ನ ಪಕ್ಷ ತಮಗೆ ಈ ಹಿಂದೆ ನೀಡಿದ ಸ್ಥಾನ-ಮಾನಗಳ ಕುರಿತು ಒಮ್ಮೆ ಅವಲೋಕಿಸಬೇಕೆಂದು ಕೋರುತ್ತೇನೆ.

RELATED TOPICS:
English summary :How is it possible to work with the Congress party which works against all the principles and ideals that we have believed in and advocated?

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ನ್ಯೂಸ್ MORE NEWS...