BLR Metro
Sat,Jun03,2023
ಕನ್ನಡ / English

ನಂಗೆ ಟಿಕೆಟ್ ಕೈತಪ್ಪಲು ಕಾರಣ ಬಿ.ಎಲ್. ಸಂತೋಷ್: ಜಗದೀಶ್ ಶೆಟ್ಟರ್ | JANATA NEWS

18 Apr 2023
627

ಹುಬ್ಬಳ್ಳಿ : ನನಗೆ ಬಿಜೆಪಿಯಿಂದ ಟಿಕೆಟ್ ಕೈತಪ್ಪಲು ಕಾರಣ ಬಿ.ಎಲ್.ಸಂತೋಷ್ ಎಂದು ಜಗದೀಶ್ ಶೆಟ್ಟರ್ ವಾಗ್ದಾಳಿ ನಡೆಸಿದ್ದಾರೆ.

ನನಗೆ ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿಯ ಟಿಕೆಟ್ ಕೈ ತಪ್ಪಲು ಕಾರಣ ಬಿ.ಎಲ್. ಸಂತೋಷ್ ಅವರೇ ಕಾರಣ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ನೇರವಾಗಿ ಆರೋಪಿಸಿದ್ದಾರೆ. ನನ್ನ ವಿರುದ್ದ ಬಿಎಲ್ ಸಂತೋಷ್ ಅವರು ಹೈಕಮಾಂಡ್ ಬಳಿ ಅಪಪ್ರಚಾರ ನಡೆಸಿತು. ಅವರ ಟೀಂ ಕೂಡ ನನ್ನ ವಿರುದ್ಧ ಅಪಪ್ರಚಾರ ಮಾಡಿದರು. ನನ್ನ ವಿರುದ್ಧ ತಂತ್ರಗಾರಿಕೆ ಮಾಡಿದರು. ಅವರಿಂದಲೇ ನನಗೆ ಟಿಕೆಟ್ ತಪ್ಪಿತು ಎಂದು ಅವರು ಹೇಳಿದರು.

ಬಿಜೆಪಿಯ ಸ್ಕ್ರೀನಿಂಗ್ ಕಮಿಟಿಯಲ್ಲಿ ನನ್ನ ಹೆಸರು ಇತ್ತು ಅನ್ನೋದು ಗೊತ್ತಿದೆ. ಆದರೆ, ಹೈಕಮಾಂಡ್​ ಲೇವಲ್​​ನಲ್ಲಿ ಏನಾಯ್ತೋ ನನಗೆ ಗೊತ್ತಿಲ್ಲ. ನಾನು ಪ್ರತಿನಿಧಿಸುತ್ತಿದ್ದ ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ಕ್ಷೇತ್ರಕ್ಕೆ ಮಹೇಶ್ ತೆಂಗಿನಕಾಯಿ ಅವರಿಗೆ ಟಿಕೆಟ್ ನೀಡಲಾಗಿದೆ. ಅವರು ಪಕ್ಷಕ್ಕಾಗಿ ದುಡಿದಿದ್ದಾರೆ. ಅವರ ಮೇಲೆ ಪಕ್ಷಕ್ಕೆ ಅಷ್ಟು ಗೌರವವಿದ್ದರೆ ಅವರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿಸಬಹುದಿತ್ತು ಅಥವಾ ಕೇಂದ್ರಕ್ಕೆ ತೆಗೆದುಕೊಳ್ಳಬಹುದಾಗಿತ್ತು. ಆದರೆ, ಬಿ.ಎಲ್ ಸಂತೋಷ್ ಅವರಿಗೆ ನನ್ನ ಮೇಲೆ ಕಣ್ಣಿತ್ತು. ನನ್ನನ್ನು ಪದೇ ಪದೇ ಅವಮಾನಿಸಿದರು. ಅಪಪ್ರಚಾರ ನಡೆಸಿದರು. ಕಡೆಗೆ ಟಿಕೆಟ್ ಕೊಡದೇ ಸತಾಯಿಸಿದರು ಎಂದು ಆರೋಪಿಸಿದ್ದಾರೆ.

ಮೊದಲ ಪಟ್ಟಿ ಬಿಡುಗಡೆಗೆ ಮೂರು ದಿನ ಮುನ್ನ ನನಗೆ ಧರ್ಮೇಂದ್ರ ಪ್ರಧಾನ್ ದೂರವಾಣಿ ಕರೆ ಮಾಡಿದರು. ನಿಮಗೆ ಈ ಬಾರಿ ಟಿಕೆಟ್ ನೀಡುತ್ತಿಲ್ಲ. ಅದಕ್ಕೆ ಅಪ್ಪಣೆ ಪತ್ರವನ್ನು ಕಳುಹಿಸುತ್ತೇವೆ, ಸಹಿ ಮಾಡಿ ಕಳುಹಿಸಿ ಎಂದು ಹೇಳಿ ಫೋನ್ ಇಟ್ಟರು. ಕೇವಲ ಮೂರು ಲೈನ್​ನಲ್ಲಿ ಹೇಳಿ, ಟಿಕೆಟ್ ವಿಚಾರವನ್ನು ಅಲ್ಲಿಗೆ ಕೈಬಿಟ್ಟರು.

ನನ್ನನ್ನು ಕರೆಸಿ ಮಾತನಾಡಬಹುದಿತ್ತು. ಆದರೆ ಹಾಗೆ ಮಾಡಿಲ್ಲ. ಇನ್ನು, ನನಗೆ ಮುಖ್ಯಮಂತ್ರಿ ಅಧಿಕಾರ ಕೊಟ್ಟಿದ್ದಕ್ಕೆ ನಾನು ಬಿಜೆಪಿಗೆ ಧನ್ಯವಾದ ಅರ್ಪಿಸುತ್ತೇನೆ. ಆದರೆ, 10 ತಿಂಗಳ ಕಾಲವಷ್ಟೇ ಅಧಿಕಾರ ಕೊಟ್ಟಿದ್ದು. ನನಗಿಂತಲೂ ಕಿರಿಯರಾದ ಬೊಮ್ಮಾಯಿಯವರಿಗೆ ಈಗಾಗಲೇ ಸುಮಾರು 2 ವರ್ಷಗಳಿಂದ ಸಿಎಂ ಪದವಿ ಕೊಟ್ಟಿದ್ದೀರಲ್ಲವೇ? ನನಗೆ ಅದಕ್ಕಿಂತಲೂ ಕಡಿಮೆ ಅವಧಿಗೆ ಕೊಡಲಾಗಿದೆ ಎಂದು ಅವರು ಹೇಳಿದ್ದಾರೆ.

ಇಷ್ಟಕ್ಕೆಲ್ಲ ಕಾರಣ ಬಿಎಲ್. ಸಂತೋಷ್. ಬಿ.ಎಲ್.ಸಂತೋಷ್ ಅವರು ತಮ್ಮ ಮಾನಸ ಪುತ್ರನಿಗೆ ಟಿಕೆಟ್ ಕೊಡಿಸುವ ನಿಟ್ಟಿನಲ್ಲಿ ನನಗೆ ಟಿಕೆಟ್ ಕೊಡಲಿಲ್ಲ ಎಂದು ಗಂಭೀರವಾದ ಆರೋಪ ಮಾಡಿದರು.

logo
RELATED TOPICS:
English summary :The reason why I lost the ticket was B.L. Santhosh: Jagdish Shettar

ಮಣಿಪುರದಾದ್ಯಂತ 144 ಶಸ್ತ್ರಾಸ್ತ್ರಗಳು ಮತ್ತು 11 ಮ್ಯಾಗಜೀನ್ ವಶ
ಮಣಿಪುರದಾದ್ಯಂತ 144 ಶಸ್ತ್ರಾಸ್ತ್ರಗಳು ಮತ್ತು 11 ಮ್ಯಾಗಜೀನ್ ವಶ
5 ಗ್ಯಾರಂಟಿಗಳನ್ನು ಜಾರಿಗೊಳಿಸಲುಕ್ಯಾಬಿನೆಟ್‌ ಸಮ್ಮತಿ : ಯೋಜನೆಗಳ ಬಗ್ಗೆ ನೀವು ತಿಳಿದುಕೊಳ್ಳಲೇಬೇಕಾದ ಅಂಶ
5 ಗ್ಯಾರಂಟಿಗಳನ್ನು ಜಾರಿಗೊಳಿಸಲುಕ್ಯಾಬಿನೆಟ್‌ ಸಮ್ಮತಿ : ಯೋಜನೆಗಳ ಬಗ್ಗೆ ನೀವು ತಿಳಿದುಕೊಳ್ಳಲೇಬೇಕಾದ ಅಂಶ
ಮುಸ್ಲಿಂ ಲೀಗ್ ಸಂಪೂರ್ಣವಾಗಿ ಜಾತ್ಯತೀತ ಎಂದ ರಾಹುಲ್ ಗಾಂಧಿ ಹೇಳಿಕೆಗೆ ಬಿಜೆಪಿ ತೀವ್ರ ವಾಗ್ದಾಳಿ
ಮುಸ್ಲಿಂ ಲೀಗ್ ಸಂಪೂರ್ಣವಾಗಿ ಜಾತ್ಯತೀತ ಎಂದ ರಾಹುಲ್ ಗಾಂಧಿ ಹೇಳಿಕೆಗೆ ಬಿಜೆಪಿ ತೀವ್ರ ವಾಗ್ದಾಳಿ
ಪೊಲೀಸರ ತನಿಖೆಯನ್ನು ನಂಬಿ, ಅದರ ಮುಕ್ತಾಯದವರೆಗೂ ತಾಳ್ಮೆಯಿಂದಿರಿ - ಕ್ರೀಡಾ ಸಚಿವ ಠಾಕೂರ್ ಮನವಿ
ಪೊಲೀಸರ ತನಿಖೆಯನ್ನು ನಂಬಿ, ಅದರ ಮುಕ್ತಾಯದವರೆಗೂ ತಾಳ್ಮೆಯಿಂದಿರಿ - ಕ್ರೀಡಾ ಸಚಿವ ಠಾಕೂರ್ ಮನವಿ
ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಾರಿಗೆ ತರಲಾದ ಯೋಜನೆಗಳಿಗೆ ಅನುದಾನ ಕಡಿತ ಮಾಡದಂತೆ ಬಸವರಾಜ ಬೊಮ್ಮಾಯಿ‌ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ!
ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಾರಿಗೆ ತರಲಾದ ಯೋಜನೆಗಳಿಗೆ ಅನುದಾನ ಕಡಿತ ಮಾಡದಂತೆ ಬಸವರಾಜ ಬೊಮ್ಮಾಯಿ‌ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ!
ಧಗ ಧಗನೆ ಹೊತ್ತಿ ಉರಿದ ಲಘು ವಿಮಾನ, ಪ್ಯಾರಾಚೂಟ್ ಸಹಾಯದಿಂದ ಜಿಗಿದ ಪೈಲಟ್ ಗಳು
ಧಗ ಧಗನೆ ಹೊತ್ತಿ ಉರಿದ ಲಘು ವಿಮಾನ, ಪ್ಯಾರಾಚೂಟ್ ಸಹಾಯದಿಂದ ಜಿಗಿದ ಪೈಲಟ್ ಗಳು
ಅಂಬರ್ ಗ್ರಿಸ್​ ತಂದು ಮಾರಾಟಕ್ಕೆ ಯತ್ನ, ಸಿಸಿಬಿ ಪೊಲೀಸರಿಂದ ಇಬ್ಬರ ಬಂಧನ.
ಅಂಬರ್ ಗ್ರಿಸ್​ ತಂದು ಮಾರಾಟಕ್ಕೆ ಯತ್ನ, ಸಿಸಿಬಿ ಪೊಲೀಸರಿಂದ ಇಬ್ಬರ ಬಂಧನ.
ಪಕ್ಷ ಸಂಘಟನೆ ದೃಷ್ಟಿಯಿಂದ ಕಠಿಣ ಸೂಚನೆಗಳನ್ನು ಕೊಟ್ಟ ಕುಮಾರಸ್ವಾಮಿ!
ಪಕ್ಷ ಸಂಘಟನೆ ದೃಷ್ಟಿಯಿಂದ ಕಠಿಣ ಸೂಚನೆಗಳನ್ನು ಕೊಟ್ಟ ಕುಮಾರಸ್ವಾಮಿ!
ತಮಿಳುನಾಡು ಸರ್ಕಾರಕ್ಕೆ ಮನವಿ, ಅಕ್ಕಪಕ್ಕದ ರಾಜ್ಯದವರು ಅಣ್ಣ ತಮ್ಮಂದಿರಂತೆ ಬದುಕೋಣ!
ತಮಿಳುನಾಡು ಸರ್ಕಾರಕ್ಕೆ ಮನವಿ, ಅಕ್ಕಪಕ್ಕದ ರಾಜ್ಯದವರು ಅಣ್ಣ ತಮ್ಮಂದಿರಂತೆ ಬದುಕೋಣ!
ಬಿಎಸ್​ವೈ ನಿವಾಸಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಭೇಟಿ, ಯೋಗಕ್ಷೇಮ ವಿಚಾರಿಸಿದ ಡಿಕೆ ಶಿವಕುಮಾರ್
ಬಿಎಸ್​ವೈ ನಿವಾಸಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಭೇಟಿ, ಯೋಗಕ್ಷೇಮ ವಿಚಾರಿಸಿದ ಡಿಕೆ ಶಿವಕುಮಾರ್
5 ಪ್ರಮುಖ ಗ್ಯಾರಂಟಿಗಳ ಜಾರಿಗೆ ಆರ್ಥಿಕ ಇಲಾಖೆಗಳು ನಮಗೆ ಆಯ್ಕೆಗಳನ್ನು ನೀಡಿದೆ - ಡಿಸಿಎಂ ಡಿಕೆಶಿ
5 ಪ್ರಮುಖ ಗ್ಯಾರಂಟಿಗಳ ಜಾರಿಗೆ ಆರ್ಥಿಕ ಇಲಾಖೆಗಳು ನಮಗೆ ಆಯ್ಕೆಗಳನ್ನು ನೀಡಿದೆ - ಡಿಸಿಎಂ ಡಿಕೆಶಿ
ಹೆಚ್ ಡಿ ಕುಮಾರಸ್ವಾಮಿ ಜೆಡಿಎಸ್‌ ವಿಸರ್ಜನೆ ಯಾವಾಗ ಎಂಬ ಪ್ರಶ್ನೆಗೆ ಹೇಳಿದ್ದೇನು ಗೊತ್ತಾ?
ಹೆಚ್ ಡಿ ಕುಮಾರಸ್ವಾಮಿ ಜೆಡಿಎಸ್‌ ವಿಸರ್ಜನೆ ಯಾವಾಗ ಎಂಬ ಪ್ರಶ್ನೆಗೆ ಹೇಳಿದ್ದೇನು ಗೊತ್ತಾ?

ನ್ಯೂಸ್ MORE NEWS...