Wed,Aug05,2026
ಕನ್ನಡ / English

ಪ್ರಿಯಕರನ ಬ್ಲ್ಯಾಕ್‌ಮೇಲ್‌, ನವವಿವಾಹಿತೆ ಆತ್ಮಹತ್ಯೆ | JANATA NEWS

26 Apr 2023

ವಿಜಯಪುರ : ವಿವಾಹಿತೆ ಮಹಿಳೆಯೊಬ್ಬರು ನೇಣಿಗೆ ಶರಣಾಗುವ ಮುನ್ನ ಮೊಬೈಲ್ ವಿಡಿಯೋ ಆನ್ ಮಾಡಿ ಲೈವ್ ಸೊಸೈಡ್ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಬಬಲೇಶ್ವರ ತಾಲೂಕಿನ ಉಪ್ಪಲದಿನ್ನಿ ಗ್ರಾಮದಲ್ಲಿ ನಡೆದಿದೆ.

ಸುಹಾನ್ ಸೋನಾರ್ (21) ಆತ್ಮಹತ್ಯೆ ಗೆ ಶರಣಾದ ವಿವಾಹಿತೆ ಮಹಿಳೆ. ಈಕೆ ನೇಣಿಗೆ ಶರಣಾಗುವ ಮುನ್ನ ಪ್ರಿಯಕರನ ಬ್ಲ್ಯಾಕ್ಮೇಲ್​ಗೆ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಹೇಳಿದ್ದಾಳೆ.

ಉಪ್ಪಲದಿನ್ನಿ ಗ್ರಾಮದ ಅಸ್ಲಂ ಮುಲ್ಲಾ ಹಾಗೂ ಅದೇ ಗ್ರಾಮದ ದಸ್ತಗೀರ ಮುಳವಾಡ ಹಾಗೂ ಇನ್ನೂಸ್ ಪಾರ್ಥನಲ್ಲಿ ಅಲ್ತಾಫ್ ಸುಲೆಮಾನ್ ಇವರ ಮಧ್ಯೆ ರಾಜಕೀಯ ದ್ವೇಷವಿತ್ತು.

ಅಲ್ಲದೇ ದಸ್ತಗಿರಿ ಮುಲ್ಲಾ ಈತನ ಮಗಳ ಬಾಲ್ಯ ವಿವಾಹ ನಡೆಯುತ್ತಿದ್ದಾಗ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳು ಪ್ರವೇಶ ಮಾಡಿ ಬಾಲ್ಯ ವಿವಾಹ ತಡೆದಿದ್ದರು. ಮತ್ತೊಂದೆಡೆ 2020 ರಲ್ಲಿ ಇನ್ನೂಸ್ ಪಾರ್ಥನಲ್ಲಿ‌ ಅಲ್ತಾಫ್ ಸುಲೆಮಾನ್ ವಿರುದ್ಧ ಹತ್ಯೆಯತ್ನ ಪ್ರಕರಣ ದಾಖಲಾಗಿತ್ತು.

ಗ್ರಾಮದ ಅಲ್ತಾಫ್ ಸುಲೆಮಾನ್ 1 ವರ್ಷದ ಹಿಂದೆ ಸುಹಾನಾ ಜೊತೆ ಸಲುಗೆ ಬೆಳೆಸಿ ಪ್ರೀತಿಸುತ್ತಿದ್ದ. ಈ ವಿಷಯ ಸುಹಾನಾ ಪೋಷಕರಿಗೆ ಗೊತ್ತಾಗಿ ಹಿರಿಯರ ಸಮ್ಮುಖದಲ್ಲಿ ಅಲ್ತಾಫ್​ಗೆ ತಾಕೀತು ಮಾಡಿದ್ದರು. ಬಳಿಕ ಸುಹಾನಾ ಹೊಕ್ಕುಂಡಿ ಗ್ರಾಮದ ಷರೀಫ್ ಸೋನಾರ್ ಜೊತೆಗೆ ಇತ್ತೀಚೆಗೆ ಮದುವೆ ಮಾಡಿ ಕೊಟ್ಟಿದ್ದರು.

ಮಾಜಿ ಪ್ರಿಯಕರ ಅಲ್ತಾಫ್ ಕೂಡ ಗಂಡನನ್ನು ಬಿಟ್ಟು ತನ್ನೊಂದಿಗೆ ಬರಬೇಕು. ಇಲ್ಲವಾದಲ್ಲಿ ನನ್ನೊಂದಿಗಿರುವ ಫೋಟೋ ನಿನ್ನ ಗಂಡನಿಗೆ ತೋರಿಸುತ್ತೇನೆ ಎಂದು ಪ್ರಿಯಕರ ಅಲ್ತಾಫ್ ಸುಲೆಮಾನ್ ಬ್ಲ್ಯಾಕ್ಮೇಲ್ ಮಾಡಿದ್ದಾನೆ. ಇದಕ್ಕಾಗಿ ದಸ್ತಗೀರ ಹಾಗೂ ಇನ್ನೂಸ್ 5 ಲಕ್ಷ ರೂ. ಹಾಗೂ ಕಾರು ನೀಡಿದ್ದಾರೆ.

ಇದರಿಂದ ಬೆಸತ್ತಿದ್ದ ಸುಹಾನಾ, ಮೂವರ ಹೆಸರು ಹೇಳಿ ಆತ್ಮಹತ್ಯೆಗೆ ಶರಣಾಗಿದ್ದಳೆ. ಈ ಕುರಿತು ಸುಹಾನಾ ತಂದೆ ಅಸ್ಲಂ ಮುಲ್ಲಾ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಬಬಲೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :Lover blackmail, newlywed suicide

ಸಿಎಂ ವಿಜಯ್ ಮತ್ತು ನಟಿ ತ್ರಿಶಾ ಕುರಿತ ಹೇಳಿಕೆಗಳ ಹಿನ್ನೆಲೆಯಲ್ಲಿ ಎಫ್‌ಐಆರ್ ದಾಖಲು : ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಬಂಧನ
ಸಿಎಂ ವಿಜಯ್ ಮತ್ತು ನಟಿ ತ್ರಿಶಾ ಕುರಿತ ಹೇಳಿಕೆಗಳ ಹಿನ್ನೆಲೆಯಲ್ಲಿ ಎಫ್‌ಐಆರ್ ದಾಖಲು : ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಬಂಧನ
ರಾಮಮಂದಿರ ಕುರಿತ ಕಿರುನಾಟಕದ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಮತ್ತು ಪಪ್ಪು ಯಾದವ್ ವಿರುದ್ಧ ಎಫ್‌ಐಆರ್ ದಾಖಲು
ರಾಮಮಂದಿರ ಕುರಿತ ಕಿರುನಾಟಕದ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಮತ್ತು ಪಪ್ಪು ಯಾದವ್ ವಿರುದ್ಧ ಎಫ್‌ಐಆರ್ ದಾಖಲು
ಕರ್ನಾಟಕ ರಾಜ್ಯ ಸಂಪುಟಕ್ಕೆ 20 ನೂತನ ಸಚಿವರ ಸೇರ್ಪಡೆ
ಕರ್ನಾಟಕ ರಾಜ್ಯ ಸಂಪುಟಕ್ಕೆ 20 ನೂತನ ಸಚಿವರ ಸೇರ್ಪಡೆ
 ದೆಹಲಿ ಪೊಲೀಸ್ ಕ್ರಮವನ್ನು ಸಮರ್ಥಿಸಿಕೊಂಡ ದೆಹಲಿ ಪೊಲೀಸ್ ಮಹಾಸಂಘ; ರಾಜಕೀಯ ನಿರ್ದೇಶನದ ಆರೋಪ ಸುಳ್ಳು
ದೆಹಲಿ ಪೊಲೀಸ್ ಕ್ರಮವನ್ನು ಸಮರ್ಥಿಸಿಕೊಂಡ ದೆಹಲಿ ಪೊಲೀಸ್ ಮಹಾಸಂಘ; ರಾಜಕೀಯ ನಿರ್ದೇಶನದ ಆರೋಪ ಸುಳ್ಳು
ಪ್ರತಿಭಟನೆಯ ವೇಳೆ ನಡೆದ ಸಂಘರ್ಷದಲ್ಲಿ ಗಾಯಗೊಂಡ ದೆಹಲಿ ಪೊಲೀಸ್ ಸಿಬ್ಬಂದಿಯ ಕುಟುಂಬಗಳಿಂದ ನ್ಯಾಯಕ್ಕಾಗಿ ಆಗ್ರಹ
ಪ್ರತಿಭಟನೆಯ ವೇಳೆ ನಡೆದ ಸಂಘರ್ಷದಲ್ಲಿ ಗಾಯಗೊಂಡ ದೆಹಲಿ ಪೊಲೀಸ್ ಸಿಬ್ಬಂದಿಯ ಕುಟುಂಬಗಳಿಂದ ನ್ಯಾಯಕ್ಕಾಗಿ ಆಗ್ರಹ
ಸಿಜೆಪಿ ಕಾನೂನು ಬೆಂಬಲಕ್ಕೆ ನಿಂತ ಕಪಿಲ್ ಸಿಬಲ್ ಶಿಕ್ಷಣ ಮಂತ್ರಿಯಾಗಿದ್ದಾಗ ಹೆಚ್ಚು ಪೇಪರ್ ಲೀಕ್ - ಬಿಜೆಪಿಯ ಸುಧಾಂಶು ತ್ರಿವೇದಿ
ಸಿಜೆಪಿ ಕಾನೂನು ಬೆಂಬಲಕ್ಕೆ ನಿಂತ ಕಪಿಲ್ ಸಿಬಲ್ ಶಿಕ್ಷಣ ಮಂತ್ರಿಯಾಗಿದ್ದಾಗ ಹೆಚ್ಚು ಪೇಪರ್ ಲೀಕ್ - ಬಿಜೆಪಿಯ ಸುಧಾಂಶು ತ್ರಿವೇದಿ
ಸಂಸತ್ತಿನಲ್ಲಿ ಆಧಾರರಹಿತ ಹೇಳಿಕೆ : ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕೆಂದು ಎನ್‌ಡಿಎ ಸಂಸದರ ಆಗ್ರಹ
ಸಂಸತ್ತಿನಲ್ಲಿ ಆಧಾರರಹಿತ ಹೇಳಿಕೆ : ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕೆಂದು ಎನ್‌ಡಿಎ ಸಂಸದರ ಆಗ್ರಹ
ಪಿಒಜೆಕೆಯಲ್ಲಿ ನಾಗರಿಕರ ಮೇಲೆ ಗುಂಡಿನ ಸುರಿಮಳೆ ಖಂಡಿಸಿ, ಪಾಕಿಸ್ತಾನ ಬೆಂಬಲಿತ ಚುನಾವಣೆಗಳನ್ನು ತೋರಿಕೆಯ ವ್ಯಾಯಾಮ ಎಂದ ಭಾರತ
ಪಿಒಜೆಕೆಯಲ್ಲಿ ನಾಗರಿಕರ ಮೇಲೆ ಗುಂಡಿನ ಸುರಿಮಳೆ ಖಂಡಿಸಿ, ಪಾಕಿಸ್ತಾನ ಬೆಂಬಲಿತ ಚುನಾವಣೆಗಳನ್ನು ತೋರಿಕೆಯ ವ್ಯಾಯಾಮ ಎಂದ ಭಾರತ
6 ಪ್ರಶ್ನೆ ಪತ್ರಿಕೆಗಳ ಸೋರಿಕೆ : ಪಂಜಾಬ್ ಸಚಿವರ ರಾಜೀನಾಮೆಗೆ ಎನ್‌ಡಿಎ ಸಂಸದರ ಆಗ್ರಹ; ಸಂಸತ್ತಿನಲ್ಲಿ ರಾಜಕೀಯ ಜಟಾಪಟಿ
6 ಪ್ರಶ್ನೆ ಪತ್ರಿಕೆಗಳ ಸೋರಿಕೆ : ಪಂಜಾಬ್ ಸಚಿವರ ರಾಜೀನಾಮೆಗೆ ಎನ್‌ಡಿಎ ಸಂಸದರ ಆಗ್ರಹ; ಸಂಸತ್ತಿನಲ್ಲಿ ರಾಜಕೀಯ ಜಟಾಪಟಿ
ಪರೀಕ್ಷಾ ಸುಧಾರಣೆಗಳ ಕುರಿತು ಉನ್ನತ ಅಧಿಕಾರದ ಕಾರ್ಯಪಡೆ ಘೋಷಿಸಿದ ಪ್ರಧಾನಿ ಮೋದಿ : ನೇತೃತ್ವ ವಹಿಸಲು ನಂದನ್ ನಿಲೇಕಣಿ ಆಯ್ಕೆ
ಪರೀಕ್ಷಾ ಸುಧಾರಣೆಗಳ ಕುರಿತು ಉನ್ನತ ಅಧಿಕಾರದ ಕಾರ್ಯಪಡೆ ಘೋಷಿಸಿದ ಪ್ರಧಾನಿ ಮೋದಿ : ನೇತೃತ್ವ ವಹಿಸಲು ನಂದನ್ ನಿಲೇಕಣಿ ಆಯ್ಕೆ
ಅಣೆಕಟ್ಟುಗಳ ಹೂಳೆತ್ತುವಿಕೆ, ಮೇಕೆದಾಟು ಮತ್ತು ಮಹದಾಯಿ ಯೋಜನೆಗಳಿಗೆ ಕೇಂದ್ರದ ಬೆಂಬಲದ ಭರವಸೆ
ಅಣೆಕಟ್ಟುಗಳ ಹೂಳೆತ್ತುವಿಕೆ, ಮೇಕೆದಾಟು ಮತ್ತು ಮಹದಾಯಿ ಯೋಜನೆಗಳಿಗೆ ಕೇಂದ್ರದ ಬೆಂಬಲದ ಭರವಸೆ
ಲೋಕಸಭೆಯಲ್ಲಿ ವಿರೋಧ ಪಕ್ಷಗಳ ಗದ್ದಲ: ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ತಡೆ ಮಸೂದೆ ಮೇಲಿನ ಚರ್ಚೆ ಮುಂದೂಡಿಕೆ
ಲೋಕಸಭೆಯಲ್ಲಿ ವಿರೋಧ ಪಕ್ಷಗಳ ಗದ್ದಲ: ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ತಡೆ ಮಸೂದೆ ಮೇಲಿನ ಚರ್ಚೆ ಮುಂದೂಡಿಕೆ

ನ್ಯೂಸ್ MORE NEWS...