ಶಿವಮೊಗ್ಗ ಸಮಾವೇಶದಲ್ಲಿ ತಮಿಳು ನಾಡಗೀತೆ ಪ್ರಸಾರ, ತಮಿಳು ನಾಡಗೀತೆ ನಿಲ್ಲಿಸಿ ಕನ್ನಡದ ನಾಡಗೀತೆ ಹಾಕಿಸಿದ ಈಶ್ವರಪ್ಪ! | JANATA NEWS
ಶಿವಮೊಗ್ಗ : ಶಿವಮೊಗ್ಗದಲ್ಲಿ ಇಂದು ಆಯೋಜನೆ ಮಾಡಲಾಗಿದ್ದ ಬಿಜೆಪಿಯ ತಮಿಳು ಸಮಾಜದವರ ಸಮಾವೇಶದಲ್ಲಿ ತಮಿಳು ನಾಡಗೀತೆಯನ್ನು ಪ್ರಸಾರ ಮಾಡಲಾಗಿತ್ತು, ಈ ವೇಳೆ ಮಾಜಿ ಸಚಿವ ಕೆಎಸ್ ಈಶ್ವರಪ್ಪ ಅದನ್ನು ನಿಲ್ಲಿಸಿ ಕನ್ನಡದ ನಾಡಗೀತೆಯನ್ನು ಹಾಕಿಸಿದ ಪ್ರಸಂಗ ನಡೆಯಿತು.
ಇಂದು ಶಿವಮೊಗ್ಗದಲ್ಲಿ ಬಿಜೆಪಿ ವತಿಯಿಂದ ತಮಿಳು ಸಮುದಾಯದವರ ಸಮಾವೇಶವನ್ನು ಆಯೋಜನೆ ಮಾಡಲಾಗಿತ್ತು. ಈ ಕಾರ್ಯಕ್ರಮಕ್ಕೆ ಬತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಅವರನ್ನು ಮುಖ್ಯ ಅತಿಥಿಯಾಗಿ ಕರೆಸಲಾಗಿತ್ತು. ಆದರೆ, ಕಾರ್ಯಕ್ರಮ ಆರಂಭಕ್ಕೂ ಮುನ್ನ ಕರ್ನಾಟಕದ ನಾಡಗೀತೆ ಬದಲು ತಮಿಳು ನಾಡಗೀತೆಯನ್ನು ಪ್ರಸಾರ ಮಾಡುವ ಮೂಲಕ ಎಡವಟ್ಟು ಮಾಡಿಕೊಂಡಿದ್ದಾರೆ.
ತಕ್ಷಣವೇ ಎಚ್ಚೆತ್ತ ಮಾಜಿ ಸಚಿವ ಈಶ್ವರಪ್ಪ, ಏಯ್ ಇದು ಯಾವ ಪ್ರಾರ್ಥನೆ? ನಾಡಗೀತೆ ಹಾಕಪ್ಪ. ನಿಮ್ಮಲ್ಲಿ ಯಾರಾದರೂ ನಾಡಗೀತೆ ಹಾಡುತ್ತೀರಾ ಎಂದು ನೆರೆದಿದ್ದವರನ್ನು ಈಶ್ವರಪ್ಪ ಕೇಳಿದ್ದಾರೆ. ಬಳಿಕ ಆಯೋಜಕರು ತಮಿಳಿನ ಪ್ರಾರ್ಥನೆಯನ್ನು ನಿಲ್ಲಿಸಿ ಕನ್ನಡದ ನಾಡಗೀತೆಯನ್ನು ಪ್ಲೇ ಮಾಡಿದರು.