Sat,Mar21,2026
ಕನ್ನಡ / English

ಪ್ರಧಾನಿ ಮೋದಿ ಸಮಾಜದ ವಿಷ ಕುಡಿಯುವ ನೀಲಕಂಠ: ಸಿಎಂ ಬೊಮ್ಮಾಯಿ | JANATA NEWS

29 Apr 2023

ಬೀದರ್ : ದೆಹಲಿಯಿಂದ ವಿಶೇಷ ವಿಮಾನದ ಮೂಲಕ ಬೀದರ್ ಗೆ ಮೋದಿ ಪ್ರಯಾಣ ಬೆಳೆಸಿದ್ದು 10:20ಕ್ಕೆ ಬೀದರ್ ಏರಬೇಸ್​ಗೆ ಪ್ರಧಾನಿ ಮೋದಿ ಆಗಮಿಸಿದ್ದಾರೆ. ಅಲ್ಲಿಂದ ಹೆಲಿಕಾಪ್ಟರ್ ಮೂಲಕ ಹುಮ್ನಾಬಾದ್ ಹೆಲಿಪ್ಯಾಡ್​ಗೆ‌ ಮೋದಿ ಪ್ರಯಾಣಿಸಿದ್ದಾರೆ.

ಬಿಜೆಪಿ ಸಮಾವೇಶದಲ್ಲಿ ಮಾತನಾಡಿದ ಮುಖ್ಯಮಂತ್ರಿ ಬೊಮ್ಮಾಯಿ ವಿಶ್ವಮಾನವ, ವಿಶ್ವ ಬಂಧು ಬಸವಣ್ಣನ ನಾಡಿನಲ್ಲಿ ಆಧುನಿಕ ವಿಶ್ವನಾಯಕ ಮೋದಿಯವರಿಗೆ ಸ್ವಾಗತಿಸುತ್ತಿದ್ದೇನೆ. ವಿಶ್ವದ ಮೊದಲ ಪ್ರಜಾಪ್ರಭುತ್ವದ ಮೊದ ಸಂಕೇತ ಇದ್ದರೆ ಅದು ಅನುಭವ ಮಂಟಪ. ಇದನ್ನು ಗುರುತಿಸಿದವರು ಪ್ರಧಾನಿ ಮೋದಿಯವರು. ಪ್ರಜಾಪ್ರಭುತ್ವ ಎಂದರೆ ಸಮಾನತೆ, ಎಲ್ಲರನ್ನೂ ಸರಿಸಮಾನವಾಗಿ ನೋಡುವಂತಹದ್ದು ಎಂದರು. ಇದನ್ನು ಕಾಂಗ್ರೆಸ್ ಮಾಡುತ್ತಿಲ್ಲ. ನಾವು ದೀನ ದಲಿತರಿಗೆ ವಿಶೇಷ ಕಾರ್ಯಕ್ರಮಗಳ ಮೂಲಕ ನಾವು ಸಮಾನತೆಯ ಅನುಭವ ನೀಡಿದ್ದೇವೆ.

ಕಲ್ಯಾಣ ಕರ್ನಾಟಕದ ಜನರ ಅಭಿವೃದ್ಧಿಗೆ, ಬೀದರ್​ಗೆ, ಕಲಬುರ್ಗಿಗೆ ಹೊಸ ಟೆಕ್ಸ್​ಟೈಲ್​ ಪಾರ್ಕ್​ಅನ್ನು ಪ್ರಧಾನಿ ಮೋದಿಯ ನೇತೃತ್ವದಲ್ಲಿ ನಡೆದಿದ್ದು ಒಂದು ಲಕ್ಷ ಜನರಿಗೆ ಉದ್ಯೋಗ ಸಿಕ್ಕಿದೆ. ಈ ನಡುವೆಯೂ ಕಾಂಗ್ರೆಸ್, ಲಿಂಗಾಯತ ನಾಯಕರು ಭ್ರಷ್ಟ ನಾಯಕರು ಎನ್ನುತ್ತಾರೆ' ಎಂದಿದ್ದಾರೆ.

ಡಿ.ಕೆ ಶಿವಕುಮಾರ್, ಮಲ್ಲಿಕಾರ್ಜುನ್​ ಖರ್ಗೆ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಲಿಂಗಾಯತ ಸಿಎಂ ಎಲ್ಲರೂ ಭ್ರಷ್ಟರು ಎಂದು ಹೇಳುತ್ತಾರೆ. ಕಾಂಗ್ರೆಸ್​ನವರಿಗೆ ನಾಚಿಕೆಯಾಗಬೇಕು. ಸಿದ್ದರಾಮಯ್ಯ ಭ್ರಷ್ಟ ಆಡಳಿತ ನೀಡಿದರು. ಡಬ್ಬಲ್ ಎಂಜಿನ್ ಸರ್ಕಾರದಲ್ಲಿ ಅಭಿವೃದ್ಧಿ ಪರ್ವವೇ ನಡೆದು ಹೋಗಿದೆ. ಜನರಿಗೆ ಅಮೃತ ಕೊಡುವ ನಾಯಕ ಪ್ರಧಾನಿ ಮೋದಿ. ನೀಲಕಂಠನಾಗಿ ವಿಷ ಕುಡಿದು ಅಮೃತ ಕೊಡುವ ನಾಯಕ ಎಂದರು.

ಕೋವಿಡ್ ವೇಳೆ ಪ್ರತಿ ಕುಟುಂಬಕ್ಕೆ 10 ಕೆ.ಜಿ ಅಕ್ಕಿ ಕೊಡಲಾಗಿದೆ. 72 ವರ್ಷದಲ್ಲಿ ಆಗದ ಕೆಲಸಗಳನ್ನು ಪ್ರಧಾನಿಯವರು 3 ವರ್ಷದಲ್ಲಿ ನೆರವೇರಿಸಿದ್ದಾರೆ. ಕಲಬುರಗಿಗೆ ಮೆಗಾ ಟೆಕ್ಸ್​ಟೈಲ್ಸ್​ ಪಾರ್ಕ್ ಕೊಟ್ಟಿದ್ದಾರೆ. ಡಬ್ಬಲ್ ಎಂಜಿನ್ ಸರ್ಕಾರದಲ್ಲಿ ಹಲವು ಅಭಿವೃದ್ಧಿ ಕೆಲಸಗಳು ಕಲ್ಯಾಣ ಕರ್ನಾಟಕ ಭಾಗದಲ್ಲಿ ಆಗಿವೆ ಎಂದು ಹೇಳಿದರು.

RELATED TOPICS:
English summary :PM Modi drinking poison of society: CM Bommai

ಹಾರ್ಮುಜ್ ಜಲಸಂಧಿ : ಎಲ್ಲಾ ಭಾರತೀಯ ಹಡಗುಗಳು ಸುರಕ್ಷಿತವಾಗಿವೆ ಮತ್ತು 611 ಹಡಗುಗಳು ಸುರಕ್ಷಿತವಾಗಿವೆ - ಸಚಿವಾಲಯ
ಹಾರ್ಮುಜ್ ಜಲಸಂಧಿ : ಎಲ್ಲಾ ಭಾರತೀಯ ಹಡಗುಗಳು ಸುರಕ್ಷಿತವಾಗಿವೆ ಮತ್ತು 611 ಹಡಗುಗಳು ಸುರಕ್ಷಿತವಾಗಿವೆ - ಸಚಿವಾಲಯ
ಕತಾರ್ ಎಲ್‌ಎನ್‌ಜಿ ದಾಳಿ: ಇರಾನ್‌ಗೆ ಟ್ರಂಪ್ ಎಚ್ಚರಿಕೆ, ಭಾರಿ ಪ್ರತೀಕಾರದ ಬೆದರಿಕೆ
ಕತಾರ್ ಎಲ್‌ಎನ್‌ಜಿ ದಾಳಿ: ಇರಾನ್‌ಗೆ ಟ್ರಂಪ್ ಎಚ್ಚರಿಕೆ, ಭಾರಿ ಪ್ರತೀಕಾರದ ಬೆದರಿಕೆ
ಗುಪ್ತಚರ ಮೌಲ್ಯಮಾಪನದಲ್ಲಿ ಪಾಕಿಸ್ತಾನ ಸಂಭಾವ್ಯ ಪರಮಾಣು ಬೆದರಿಕೆ ಎಂದ ಅಮೆರಿಕ
ಗುಪ್ತಚರ ಮೌಲ್ಯಮಾಪನದಲ್ಲಿ ಪಾಕಿಸ್ತಾನ ಸಂಭಾವ್ಯ ಪರಮಾಣು ಬೆದರಿಕೆ ಎಂದ ಅಮೆರಿಕ
ಕೋಗಿಲುವಿನಲ್ಲಿ ಬಾಂಗ್ಲಾದೇಶಿಗಳಿಗೆ ಭೂಮಿ ಮಂಜೂರು ಮಾಡಲಾಗಿದೆ - ಆರ್ ಅಶೋಕ ಆರೋಪ, ಪ್ರತಿಭಟನೆಗಳ ಎಚ್ಚರಿಕೆ
ಕೋಗಿಲುವಿನಲ್ಲಿ ಬಾಂಗ್ಲಾದೇಶಿಗಳಿಗೆ ಭೂಮಿ ಮಂಜೂರು ಮಾಡಲಾಗಿದೆ - ಆರ್ ಅಶೋಕ ಆರೋಪ, ಪ್ರತಿಭಟನೆಗಳ ಎಚ್ಚರಿಕೆ
ಕಾಬೂಲ್ ಆಸ್ಪತ್ರೆಯ ಮೇಲಿನ ಪಾಕಿಸ್ತಾನದ ದಾಳಿಯನ್ನು ಖಂಡಿಸಿದ ಭಾರತ
ಕಾಬೂಲ್ ಆಸ್ಪತ್ರೆಯ ಮೇಲಿನ ಪಾಕಿಸ್ತಾನದ ದಾಳಿಯನ್ನು ಖಂಡಿಸಿದ ಭಾರತ
ಸಚಿವರ ಗೈರು, ನಿರಂತರ ನಿರ್ಲಕ್ಷ್ಯದಿಂದ ಬೇಸತ್ತು ಸಭಾತ್ಯಾಗ ಮಾಡಿ ಸದನವನ್ನು ಮುಂದೂಡಿದ ಸ್ಪೀಕರ್ ಖಾದರ್
ಸಚಿವರ ಗೈರು, ನಿರಂತರ ನಿರ್ಲಕ್ಷ್ಯದಿಂದ ಬೇಸತ್ತು ಸಭಾತ್ಯಾಗ ಮಾಡಿ ಸದನವನ್ನು ಮುಂದೂಡಿದ ಸ್ಪೀಕರ್ ಖಾದರ್
ಶಿವಾಲಿಕ್ ಎಲ್‌ಪಿಜಿ ವಾಹಕ ಹಡಗು ಇರಾನ್ ದಾಟಿದ್ದು ಇಂದು ಮುಂಬೈ ತಲುಪಲಿದೆ - ಶಿಪ್ಪಿಂಗ್ ಸಚಿವಾಲಯ, ಭಾರತ ಸರ್ಕಾರ
ಶಿವಾಲಿಕ್ ಎಲ್‌ಪಿಜಿ ವಾಹಕ ಹಡಗು ಇರಾನ್ ದಾಟಿದ್ದು ಇಂದು ಮುಂಬೈ ತಲುಪಲಿದೆ - ಶಿಪ್ಪಿಂಗ್ ಸಚಿವಾಲಯ, ಭಾರತ ಸರ್ಕಾರ
ಕಾಂಗ್ರೆಸ್ ಶಾಸಕರ ಖರೀದಿ... ಖಾಲಿ ಚೆಕ್‌ಗಳೊಂದಿಗೆ ಸಿಕ್ಕಿಬಿದ್ದಿ ಇಬ್ಬರು ; ಪ್ರತಿ ಶಾಸಕರಿಗೆ 5 ಕೋಟಿ - ಡಿಕೆಶಿ
ಕಾಂಗ್ರೆಸ್ ಶಾಸಕರ ಖರೀದಿ... ಖಾಲಿ ಚೆಕ್‌ಗಳೊಂದಿಗೆ ಸಿಕ್ಕಿಬಿದ್ದಿ ಇಬ್ಬರು ; ಪ್ರತಿ ಶಾಸಕರಿಗೆ 5 ಕೋಟಿ - ಡಿಕೆಶಿ
 ಅಫ್ಘಾನಿಸ್ತಾನದ ಭೂಪ್ರದೇಶದಲ್ಲಿ ಪಾಕಿಸ್ತಾನ ನಡೆಸಿದ ವಾಯುದಾಳಿಯನ್ನು ಖಂಡಿಸಿದ ಭಾರತ
ಅಫ್ಘಾನಿಸ್ತಾನದ ಭೂಪ್ರದೇಶದಲ್ಲಿ ಪಾಕಿಸ್ತಾನ ನಡೆಸಿದ ವಾಯುದಾಳಿಯನ್ನು ಖಂಡಿಸಿದ ಭಾರತ
ಆತಂಕದ ಇಂಧನ ಸಂಗ್ರಹಣೆಯ ವಿರುದ್ಧ ಸೂಚನೆ ನೀಡಿದ ಕೇಂದ್ರ ಸರ್ಕಾರ
ಆತಂಕದ ಇಂಧನ ಸಂಗ್ರಹಣೆಯ ವಿರುದ್ಧ ಸೂಚನೆ ನೀಡಿದ ಕೇಂದ್ರ ಸರ್ಕಾರ
ಉದ್ವಿಗ್ನತೆಯ ನಡುವೆಯೂ ಹಾರ್ಮುಜ್ ಜಲಸಂಧಿಯ ಮೂಲಕ ಭಾರತ-ಬಂಧಿತ ಎರಡು ಎಲ್‌ಪಿಜಿ ಟ್ಯಾಂಕರ್‌ಗಳಿಗೆ ಅನುಮತಿ ನೀಡಿದ  ಇರಾನ್
ಉದ್ವಿಗ್ನತೆಯ ನಡುವೆಯೂ ಹಾರ್ಮುಜ್ ಜಲಸಂಧಿಯ ಮೂಲಕ ಭಾರತ-ಬಂಧಿತ ಎರಡು ಎಲ್‌ಪಿಜಿ ಟ್ಯಾಂಕರ್‌ಗಳಿಗೆ ಅನುಮತಿ ನೀಡಿದ ಇರಾನ್
ನನ್ನ ಕೊನೆಯ ಉಸಿರಿನವರೆಗೂ ನಾನು ರಾಜಕೀಯದಲ್ಲಿಯೇ ಇರುತ್ತೇನೆ - ಸಿಎಂ ಸಿದ್ದರಾಮಯ್ಯ
ನನ್ನ ಕೊನೆಯ ಉಸಿರಿನವರೆಗೂ ನಾನು ರಾಜಕೀಯದಲ್ಲಿಯೇ ಇರುತ್ತೇನೆ - ಸಿಎಂ ಸಿದ್ದರಾಮಯ್ಯ

ನ್ಯೂಸ್ MORE NEWS...