ಡಿ.ಕೆ.ಶಿವಕುಮಾರ್ ಹೆಲಿಕಾಪ್ಟರ್ ಬಳಿ ಮತ್ತೊಂದು ಅವಘಡ! | JANATA NEWS
ಕಾರವಾರ : ವಿಧಾನಸಭೆ ಚುನಾವಣೆ ಹಿನ್ನೆಲೆ ಪ್ರಚಾರಕ್ಕಾಗಿ ಡಿ.ಕೆ.ಶಿವಕುಮಾರ್ ಹೊನ್ನಾವರದ ರಾಮತೀರ್ಥಕ್ಕೆ ಆಗಮಿಸಿದ್ದು, ಈ ವೇಳೆ ಡಿ.ಕೆ.ಶಿವಕುಮಾರ್ ಹೆಲಿಕಾಪ್ಟರ್ ಪಕ್ಕದಲ್ಲೇ ಇದ್ದ ಹುಲ್ಲಿಗೆ ಬೆಂಕಿ ಬಿದ್ದಿದೆ, ಡಿ.ಕೆ.ಶಿವಕುಮಾರ್ ಮೈಸೂರಿನಿಂದ ಹೊನ್ನಾವರಕ್ಕೆ ಆಗಮಿಸಿದ್ದ ವೇಳೆ ಈ ಘಟನೆ ನಡೆದಿದೆ
ಹೊನ್ನಾವರದ ಸೆಂಟ್ ಥಾಮಸ್ ಸಭಾಂಗಣದ ಆವರಣದಲ್ಲಿ ಅಭ್ಯರ್ಥಿಗಳ ಪರ ಮತ ಪ್ರಚಾರ ಸಭೆ ಆಯೋಜಿಸಲಾಗಿತ್ತು. ಈ ಸಭೆಗೆ ಡಿಕೆಶಿ ಮೈಸೂರಿನಿಂದ ಹೊನ್ನಾವರಕ್ಕೆ ಹೆಲಿಕಾಪ್ಟರ್ ಮೂಲಕ ಆಗಮಿಸಿದ್ದರು.
ಡಿಕೆಶಿ ಆಗಮಿಸುತ್ತಿದ್ದಂತೆ ಹೆಲಿಕಾಪ್ಟರ್ಗೆ ಸಿಗ್ನಲ್ ಕೊಡುವ ಸ್ಮೋಕ್ ಕ್ಯಾಂಡಲ್ನಿಂದ ಹೆಲಿಪ್ಯಾಡ್ ನಲ್ಲಿದ್ದ ಹುಲ್ಲಿಗೆ ಬೆಂಕಿ ಹೊತ್ತಿಕೊಂಡಿತು. ತಕ್ಷಣ ಸ್ಥಳದಲ್ಲಿದ್ದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಸುರಕ್ಷಿತವಾಗಿ ಹೆಲಿಕಾಪ್ಟರ್ ಲ್ಯಾಂಡಿಂಗ್ ಆಗಿದ್ದು, ಕೆಪಿಸಿಸಿ ಅಧ್ಯಕ್ಷ ಹೆಲಿಪ್ಯಾಡ್ನಲ್ಲಿ ಇಳಿದು ಕಾರ್ಯಕ್ರಮದ ಸ್ಥಳಕ್ಕೆ ತೆರಳಿದರು.