Thu,May09,2024
ಕನ್ನಡ / English

ಕಾಂಗ್ರೆಸ್​​ನವರು ಆಂಜನೇಯನ ಬಾಲಕ್ಕೆ ಬೆಂಕಿ ಹಚ್ಚಿದ್ದಾರೆ! | JANATA NEWS

04 May 2023
2370

ರಾಮನಗರ : ಕಾಂಗ್ರೆಸ್ ಅವರು ಆಂಜನೇಯನ ಬಾಲಕ್ಕೆ ಬೆಂಕಿ ಇಟ್ಟಿದ್ದೀರಿ, ಇದು ಇಡೀ ಪಕ್ಷವನ್ನು ಸುಟ್ಟು ಸರ್ವನಾಶ ಮಾಡುತ್ತೆ ಎಂದು ಸಚಿವ ಆರ್ ಅಶೋಕ್ ಎಚ್ಚರಿಕೆ ನೀಡಿದ್ದಾರೆ.

ಕನಕಪುರದಲ್ಲಿ ಇಂದು ಮಾತನಾಡಿದ ಅವರು, ತಾನು ಬಜರಂಗದಳದ ಸದಸ್ಯ, ಕಾಂಗ್ರೆಸ್ ನಾಯಕರಿಗೆ ಧಮ್ಮಿದ್ರೆ, ತಾಕತ್ತಿದ್ರೆ ಕ್ರಮ ಜರುಗಿಸಲಿ ನೋಡೋಣ ಅಂತ ಸವಾಲೆಸೆದರು. ಕಾಂಗ್ರೆಸ್ ನವರು ಆಂಜನೇಯನ ಬಾಲಕ್ಕೆ ಬೆಂಕಿ ಹಚ್ಚಿದ್ದಾರೆ, ಆ ಆಂಜನೇಯ ಬಾಲಕ್ಕೆ ಬೆಂಕಿ ಹತ್ತಿದಾಗ ಲಂಕೆಯನ್ನು ಸುಟ್ಟಂತೆಯೇ ಕಾಂಗ್ರೆಸ್ ಹಚ್ಚಿರುವ ಬೆಂಕಿ ಆ ಪಕ್ಷವನ್ನೇ ಅಗ್ನಿಗಾಹುತಿ ಮಾಡಲಿದೆ ಎಂದು ಕಿಡಿಕಾರಿದರು.

ಕನಕಪುರ ಕ್ಷೇತ್ರದಲ್ಲಿ ಈ ಬಾರಿ ಡಿಕೆ ಶಿವಕುಮಾರ್ ವಿರೋಧಿ ಅಲೆ ಇದೆ, ಹಾಗಾಗಿ ನಾವು ಗೆಲ್ಲುವ ವಾತಾವರಣ ಇದೆ. ಇಲ್ಲಿ ಜೆಡಿಎಸ್ ಕೂಡಾ ಪ್ರಚಾರ ಮಾಡುತ್ತಿಲ್ಲ. ಹೆಚ್​ಡಿ ಕುಮಾರಸ್ವಾಮಿ ಮತ್ತು ಹೆಚ್​ಡಿ ದೇವೇಗೌಡರು ಕ್ಷೇತ್ರಕ್ಕೆ ಬಂದಿಲ್ಲ. ನಾವು ಚುನಾವಣೆಯ ರಂಗನ್ನ ಕನಕಪುರಕ್ಕೆ ತಂದಿದ್ದೇವೆ.

ಬಜರಂಗದಳ ಬ್ಯಾನ್ ವಿಚಾರದಿಂದ ಕಾಂಗ್ರೆಸ್ ಇನ್ನಷ್ಟು ಸ್ಥಾನ ಕಳೆದುಕೊಳುತ್ತಾರೆ. ಹಿಂದೂ ರಕ್ಷಣೆ ಮಾಡುವವವರು ಬಜರಂಗದಳದವರು, ದೇಶ, ದೇವಸ್ಥಾನಗಳನ್ನು ರಕ್ಷಣೆ ಮಾಡೋದು ಬಜರಂಗದಳ. ಕಾಂಗ್ರೆಸ್ ನವರು ಬಜರಂಗದಳವನ್ನು ಪಿಎಫ್ಐಗೆ ಹೋಲಿಸುವುದನ್ನು ನಾನು ಖಂಡಿಸುತ್ತೇನೆ ಎಂದು ವಾಗ್ದಾಳಿ ನಡೆಸಿದರು.

ಸಿದ್ದರಾಮಯ್ಯ ಅವರು ಮೊದಲಿನಿಂದಲೂ ಕುಂಕುಮವನ್ನು ವಿರೋಧ ಮಾಡುತ್ತಾರೆ. ಟಿಪ್ಪು ಸುಲ್ತಾನ್ ಅವರನ್ನು ಒಲೈಕೆ ಮಾಡಿಕೊಳ್ಳುತ್ತಾರೆ. ಕಾಂಗ್ರೆಸ್​ ದೇಶದಲ್ಲಿ ಸರ್ವನಾಶವಾಗುತ್ತದೆ, ಲಂಕೆಯಲ್ಲಿ ರಾವಣ ಸಂಹಾರ ಆದ ರೀತಿ ರಾಜ್ಯದಲ್ಲಿ ಕಾಂಗ್ರೆಸ್ ಧೂಳಿಪಟವಾಗುತ್ತದೆ‌ ಎಂದರು.

RELATED TOPICS:
English summary :Congress has set Anjaneya tail on fire!

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ನ್ಯೂಸ್ MORE NEWS...