Wed,Aug05,2026
ಕನ್ನಡ / English

ಕಾಂಗ್ರೆಸ್​​ನವರು ಆಂಜನೇಯನ ಬಾಲಕ್ಕೆ ಬೆಂಕಿ ಹಚ್ಚಿದ್ದಾರೆ! | JANATA NEWS

04 May 2023

ರಾಮನಗರ : ಕಾಂಗ್ರೆಸ್ ಅವರು ಆಂಜನೇಯನ ಬಾಲಕ್ಕೆ ಬೆಂಕಿ ಇಟ್ಟಿದ್ದೀರಿ, ಇದು ಇಡೀ ಪಕ್ಷವನ್ನು ಸುಟ್ಟು ಸರ್ವನಾಶ ಮಾಡುತ್ತೆ ಎಂದು ಸಚಿವ ಆರ್ ಅಶೋಕ್ ಎಚ್ಚರಿಕೆ ನೀಡಿದ್ದಾರೆ.

ಕನಕಪುರದಲ್ಲಿ ಇಂದು ಮಾತನಾಡಿದ ಅವರು, ತಾನು ಬಜರಂಗದಳದ ಸದಸ್ಯ, ಕಾಂಗ್ರೆಸ್ ನಾಯಕರಿಗೆ ಧಮ್ಮಿದ್ರೆ, ತಾಕತ್ತಿದ್ರೆ ಕ್ರಮ ಜರುಗಿಸಲಿ ನೋಡೋಣ ಅಂತ ಸವಾಲೆಸೆದರು. ಕಾಂಗ್ರೆಸ್ ನವರು ಆಂಜನೇಯನ ಬಾಲಕ್ಕೆ ಬೆಂಕಿ ಹಚ್ಚಿದ್ದಾರೆ, ಆ ಆಂಜನೇಯ ಬಾಲಕ್ಕೆ ಬೆಂಕಿ ಹತ್ತಿದಾಗ ಲಂಕೆಯನ್ನು ಸುಟ್ಟಂತೆಯೇ ಕಾಂಗ್ರೆಸ್ ಹಚ್ಚಿರುವ ಬೆಂಕಿ ಆ ಪಕ್ಷವನ್ನೇ ಅಗ್ನಿಗಾಹುತಿ ಮಾಡಲಿದೆ ಎಂದು ಕಿಡಿಕಾರಿದರು.

ಕನಕಪುರ ಕ್ಷೇತ್ರದಲ್ಲಿ ಈ ಬಾರಿ ಡಿಕೆ ಶಿವಕುಮಾರ್ ವಿರೋಧಿ ಅಲೆ ಇದೆ, ಹಾಗಾಗಿ ನಾವು ಗೆಲ್ಲುವ ವಾತಾವರಣ ಇದೆ. ಇಲ್ಲಿ ಜೆಡಿಎಸ್ ಕೂಡಾ ಪ್ರಚಾರ ಮಾಡುತ್ತಿಲ್ಲ. ಹೆಚ್​ಡಿ ಕುಮಾರಸ್ವಾಮಿ ಮತ್ತು ಹೆಚ್​ಡಿ ದೇವೇಗೌಡರು ಕ್ಷೇತ್ರಕ್ಕೆ ಬಂದಿಲ್ಲ. ನಾವು ಚುನಾವಣೆಯ ರಂಗನ್ನ ಕನಕಪುರಕ್ಕೆ ತಂದಿದ್ದೇವೆ.

ಬಜರಂಗದಳ ಬ್ಯಾನ್ ವಿಚಾರದಿಂದ ಕಾಂಗ್ರೆಸ್ ಇನ್ನಷ್ಟು ಸ್ಥಾನ ಕಳೆದುಕೊಳುತ್ತಾರೆ. ಹಿಂದೂ ರಕ್ಷಣೆ ಮಾಡುವವವರು ಬಜರಂಗದಳದವರು, ದೇಶ, ದೇವಸ್ಥಾನಗಳನ್ನು ರಕ್ಷಣೆ ಮಾಡೋದು ಬಜರಂಗದಳ. ಕಾಂಗ್ರೆಸ್ ನವರು ಬಜರಂಗದಳವನ್ನು ಪಿಎಫ್ಐಗೆ ಹೋಲಿಸುವುದನ್ನು ನಾನು ಖಂಡಿಸುತ್ತೇನೆ ಎಂದು ವಾಗ್ದಾಳಿ ನಡೆಸಿದರು.

ಸಿದ್ದರಾಮಯ್ಯ ಅವರು ಮೊದಲಿನಿಂದಲೂ ಕುಂಕುಮವನ್ನು ವಿರೋಧ ಮಾಡುತ್ತಾರೆ. ಟಿಪ್ಪು ಸುಲ್ತಾನ್ ಅವರನ್ನು ಒಲೈಕೆ ಮಾಡಿಕೊಳ್ಳುತ್ತಾರೆ. ಕಾಂಗ್ರೆಸ್​ ದೇಶದಲ್ಲಿ ಸರ್ವನಾಶವಾಗುತ್ತದೆ, ಲಂಕೆಯಲ್ಲಿ ರಾವಣ ಸಂಹಾರ ಆದ ರೀತಿ ರಾಜ್ಯದಲ್ಲಿ ಕಾಂಗ್ರೆಸ್ ಧೂಳಿಪಟವಾಗುತ್ತದೆ‌ ಎಂದರು.

RELATED TOPICS:
English summary :Congress has set Anjaneya tail on fire!

ಸಿಎಂ ವಿಜಯ್ ಮತ್ತು ನಟಿ ತ್ರಿಶಾ ಕುರಿತ ಹೇಳಿಕೆಗಳ ಹಿನ್ನೆಲೆಯಲ್ಲಿ ಎಫ್‌ಐಆರ್ ದಾಖಲು : ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಬಂಧನ
ಸಿಎಂ ವಿಜಯ್ ಮತ್ತು ನಟಿ ತ್ರಿಶಾ ಕುರಿತ ಹೇಳಿಕೆಗಳ ಹಿನ್ನೆಲೆಯಲ್ಲಿ ಎಫ್‌ಐಆರ್ ದಾಖಲು : ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಬಂಧನ
ರಾಮಮಂದಿರ ಕುರಿತ ಕಿರುನಾಟಕದ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಮತ್ತು ಪಪ್ಪು ಯಾದವ್ ವಿರುದ್ಧ ಎಫ್‌ಐಆರ್ ದಾಖಲು
ರಾಮಮಂದಿರ ಕುರಿತ ಕಿರುನಾಟಕದ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಮತ್ತು ಪಪ್ಪು ಯಾದವ್ ವಿರುದ್ಧ ಎಫ್‌ಐಆರ್ ದಾಖಲು
ಕರ್ನಾಟಕ ರಾಜ್ಯ ಸಂಪುಟಕ್ಕೆ 20 ನೂತನ ಸಚಿವರ ಸೇರ್ಪಡೆ
ಕರ್ನಾಟಕ ರಾಜ್ಯ ಸಂಪುಟಕ್ಕೆ 20 ನೂತನ ಸಚಿವರ ಸೇರ್ಪಡೆ
 ದೆಹಲಿ ಪೊಲೀಸ್ ಕ್ರಮವನ್ನು ಸಮರ್ಥಿಸಿಕೊಂಡ ದೆಹಲಿ ಪೊಲೀಸ್ ಮಹಾಸಂಘ; ರಾಜಕೀಯ ನಿರ್ದೇಶನದ ಆರೋಪ ಸುಳ್ಳು
ದೆಹಲಿ ಪೊಲೀಸ್ ಕ್ರಮವನ್ನು ಸಮರ್ಥಿಸಿಕೊಂಡ ದೆಹಲಿ ಪೊಲೀಸ್ ಮಹಾಸಂಘ; ರಾಜಕೀಯ ನಿರ್ದೇಶನದ ಆರೋಪ ಸುಳ್ಳು
ಪ್ರತಿಭಟನೆಯ ವೇಳೆ ನಡೆದ ಸಂಘರ್ಷದಲ್ಲಿ ಗಾಯಗೊಂಡ ದೆಹಲಿ ಪೊಲೀಸ್ ಸಿಬ್ಬಂದಿಯ ಕುಟುಂಬಗಳಿಂದ ನ್ಯಾಯಕ್ಕಾಗಿ ಆಗ್ರಹ
ಪ್ರತಿಭಟನೆಯ ವೇಳೆ ನಡೆದ ಸಂಘರ್ಷದಲ್ಲಿ ಗಾಯಗೊಂಡ ದೆಹಲಿ ಪೊಲೀಸ್ ಸಿಬ್ಬಂದಿಯ ಕುಟುಂಬಗಳಿಂದ ನ್ಯಾಯಕ್ಕಾಗಿ ಆಗ್ರಹ
ಸಿಜೆಪಿ ಕಾನೂನು ಬೆಂಬಲಕ್ಕೆ ನಿಂತ ಕಪಿಲ್ ಸಿಬಲ್ ಶಿಕ್ಷಣ ಮಂತ್ರಿಯಾಗಿದ್ದಾಗ ಹೆಚ್ಚು ಪೇಪರ್ ಲೀಕ್ - ಬಿಜೆಪಿಯ ಸುಧಾಂಶು ತ್ರಿವೇದಿ
ಸಿಜೆಪಿ ಕಾನೂನು ಬೆಂಬಲಕ್ಕೆ ನಿಂತ ಕಪಿಲ್ ಸಿಬಲ್ ಶಿಕ್ಷಣ ಮಂತ್ರಿಯಾಗಿದ್ದಾಗ ಹೆಚ್ಚು ಪೇಪರ್ ಲೀಕ್ - ಬಿಜೆಪಿಯ ಸುಧಾಂಶು ತ್ರಿವೇದಿ
ಸಂಸತ್ತಿನಲ್ಲಿ ಆಧಾರರಹಿತ ಹೇಳಿಕೆ : ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕೆಂದು ಎನ್‌ಡಿಎ ಸಂಸದರ ಆಗ್ರಹ
ಸಂಸತ್ತಿನಲ್ಲಿ ಆಧಾರರಹಿತ ಹೇಳಿಕೆ : ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕೆಂದು ಎನ್‌ಡಿಎ ಸಂಸದರ ಆಗ್ರಹ
ಪಿಒಜೆಕೆಯಲ್ಲಿ ನಾಗರಿಕರ ಮೇಲೆ ಗುಂಡಿನ ಸುರಿಮಳೆ ಖಂಡಿಸಿ, ಪಾಕಿಸ್ತಾನ ಬೆಂಬಲಿತ ಚುನಾವಣೆಗಳನ್ನು ತೋರಿಕೆಯ ವ್ಯಾಯಾಮ ಎಂದ ಭಾರತ
ಪಿಒಜೆಕೆಯಲ್ಲಿ ನಾಗರಿಕರ ಮೇಲೆ ಗುಂಡಿನ ಸುರಿಮಳೆ ಖಂಡಿಸಿ, ಪಾಕಿಸ್ತಾನ ಬೆಂಬಲಿತ ಚುನಾವಣೆಗಳನ್ನು ತೋರಿಕೆಯ ವ್ಯಾಯಾಮ ಎಂದ ಭಾರತ
6 ಪ್ರಶ್ನೆ ಪತ್ರಿಕೆಗಳ ಸೋರಿಕೆ : ಪಂಜಾಬ್ ಸಚಿವರ ರಾಜೀನಾಮೆಗೆ ಎನ್‌ಡಿಎ ಸಂಸದರ ಆಗ್ರಹ; ಸಂಸತ್ತಿನಲ್ಲಿ ರಾಜಕೀಯ ಜಟಾಪಟಿ
6 ಪ್ರಶ್ನೆ ಪತ್ರಿಕೆಗಳ ಸೋರಿಕೆ : ಪಂಜಾಬ್ ಸಚಿವರ ರಾಜೀನಾಮೆಗೆ ಎನ್‌ಡಿಎ ಸಂಸದರ ಆಗ್ರಹ; ಸಂಸತ್ತಿನಲ್ಲಿ ರಾಜಕೀಯ ಜಟಾಪಟಿ
ಪರೀಕ್ಷಾ ಸುಧಾರಣೆಗಳ ಕುರಿತು ಉನ್ನತ ಅಧಿಕಾರದ ಕಾರ್ಯಪಡೆ ಘೋಷಿಸಿದ ಪ್ರಧಾನಿ ಮೋದಿ : ನೇತೃತ್ವ ವಹಿಸಲು ನಂದನ್ ನಿಲೇಕಣಿ ಆಯ್ಕೆ
ಪರೀಕ್ಷಾ ಸುಧಾರಣೆಗಳ ಕುರಿತು ಉನ್ನತ ಅಧಿಕಾರದ ಕಾರ್ಯಪಡೆ ಘೋಷಿಸಿದ ಪ್ರಧಾನಿ ಮೋದಿ : ನೇತೃತ್ವ ವಹಿಸಲು ನಂದನ್ ನಿಲೇಕಣಿ ಆಯ್ಕೆ
ಅಣೆಕಟ್ಟುಗಳ ಹೂಳೆತ್ತುವಿಕೆ, ಮೇಕೆದಾಟು ಮತ್ತು ಮಹದಾಯಿ ಯೋಜನೆಗಳಿಗೆ ಕೇಂದ್ರದ ಬೆಂಬಲದ ಭರವಸೆ
ಅಣೆಕಟ್ಟುಗಳ ಹೂಳೆತ್ತುವಿಕೆ, ಮೇಕೆದಾಟು ಮತ್ತು ಮಹದಾಯಿ ಯೋಜನೆಗಳಿಗೆ ಕೇಂದ್ರದ ಬೆಂಬಲದ ಭರವಸೆ
ಲೋಕಸಭೆಯಲ್ಲಿ ವಿರೋಧ ಪಕ್ಷಗಳ ಗದ್ದಲ: ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ತಡೆ ಮಸೂದೆ ಮೇಲಿನ ಚರ್ಚೆ ಮುಂದೂಡಿಕೆ
ಲೋಕಸಭೆಯಲ್ಲಿ ವಿರೋಧ ಪಕ್ಷಗಳ ಗದ್ದಲ: ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ತಡೆ ಮಸೂದೆ ಮೇಲಿನ ಚರ್ಚೆ ಮುಂದೂಡಿಕೆ

ನ್ಯೂಸ್ MORE NEWS...