BLR Metro
Sat,Jun03,2023
ಕನ್ನಡ / English

ಮುಂಗಾರು ಪೂರ್ವ ಮಳೆ ಅವಾಂತರಕ್ಕೆ ರಾಜ್ಯದಲ್ಲಿ ಇದುವರೆಗೆ 52 ಮಂದಿ ಬಲಿ, ತಲಾ 5 ಲಕ್ಷ ಪರಿಹಾರ! | JANATA NEWS

23 May 2023
422

ಬೆಂಗಳೂರು : ಮುಂಗಾರು ಪೂರ್ವ ಮಳೆಗೆ ಇದುವರೆಗೆ 52 ಮಂದಿ ಬಲಿಯಾಗಿದ್ದಾರೆ. ಮೃತಪಟ್ಟವರ ಕುಟುಂಬದವರಿಗೆ ತಲಾ 5 ಲಕ್ಷ ಪರಿಹಾರ ನೀಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಪ್ರಕೃತಿ ವಿಕೋಪ ಸಂಬಂಧ ಮುಂಜಾಗ್ರತಾ ಕ್ರಮ ಕುರಿತು ಗೃಹ ಕಚೇರಿ ಕೃಷ್ಣಾದಲ್ಲಿ ಡಿಸಿ, ಸಿಇಒಗಳ ಜೊತೆ ವಿಡಿಯೋ ಸಂವಾದ ಸಭೆ ನಡೆಸಿದ ಅವರು, ಹೊಸ ಸರ್ಕಾರ ಬಂದ ಬಳಿಕ ಜನರ ನಿರೀಕ್ಷೆ ಹೆಚ್ಚಿರುತ್ತದೆ. ಅದಕ್ಕೆ ತಕ್ಕ ಕೆಲಸ ಮಾಡಬೇಕು. ನಾನು ಕೇವಲ ಸೂಚನೆ ಕೊಡೋದಿಲ್ಲ. ಎಚ್ಚರಿಕೆ ಕೊಡ್ತಾ ಇದ್ದೇನೆ. ಸೂಚನೆಗಳನ್ನು ಪರಿಣಾಮಕಾರಿಯಾಗಿ ಜಾರಿ ಮಾಡದಿದ್ದರೆ ಕಠಿಣ ಕ್ರಮಕ್ಕೆ ಸಿದ್ದರಾಗಿ ಎಂದರು.

ಮೃತಪಟ್ಟ ಜಾನುವಾರುಗಳಿಗೆ ಪರಿಹಾರ ನೀಡುವಂತೆ ಸೂಚನೆ ನೀಡಲಾಗಿದೆ. ಮನೆ ಹಾನಿ ಬಗ್ಗೆ ಪರಿಶೀಲಿಸಿ ಪರಿಹಾರ ನೀಡುವಂತೆ ಸೂಚಿಸಲಾಗಿದೆ ಎಂದರು.

ಜಿಲ್ಲಾಧಿಕಾರಿಗಳ ಖಾತೆಯಲ್ಲಿ ಒಟ್ಟು 540 ಕೋಟಿ ಹಣವಿದೆ. ಅಗತ್ಯವಿದ್ದರೆ ವಿಪತ್ತು ನಿಧಿಯಡಿ ಪರಿಹಾರ ನೀಡುವುದಾಗಿ ಹೇಳಿದ್ದೇವೆ. ವಸ್ತುಸ್ಥಿತಿ ಆಧಾರದ ಮೇಲೆ ಅನುದಾನ ನೀಡಲು ಸೂಚನೆ ನೀಡಲಾಗಿದೆ ಎಂದರು.

ಅಲ್ಲದೆ, ಹಳ್ಳಿಗಳಿಗೆ ತೆರಳುವಂತೆ ಡಿಸಿ, ಸಿಇಒಗಳಿಗೆ ಸೂಚನೆ ನೀಡಿದ್ದೇವೆ. ಕಚೇರಿಯಿಂದ ಕಾರ್ಯ ನಿರ್ವಹಿಸಿದರೆ ವಸ್ತುಸ್ಥಿತಿ ಅರ್ಥವಾಗಲ್ಲ. ನೀವೇ ಖುದ್ದಾಗಿ ಭೇಟಿ ನೀಡಿದರೆ ಮನವರಿಕೆ ಆಗಲಿದೆ ಎಂದಿರುವುದಾಗಿ ತಿಳಿಸಿದರು.

ಏಪ್ರಿಲ್​​ಗೆ ಪ್ರಿ ಮಾನ್ಸೂನ್ ಮಳೆ ಶುರುವಾಗುತ್ತೆ. ಈ ಬಾರಿ ವಾಡಿಕೆಗಿಂತ ಶೇ.10 ರಷ್ಟು ಹೆಚ್ಚು ಮಳೆಯಾಗಿದೆ. ಈವರೆಗೆ 52 ಜನ ಸತ್ತಿದ್ದಾರೆ. 331 ಜಾನುವಾರುಗಳಿಗೆ ಜೀವಹಾನಿಯಾಗಿದೆ. ಸುಮಾರು 20,000 ಹೆಕ್ಟೇರ್ ಬೆಳೆ ಹಾನಿಯಾಗಿದೆ. 814 ಮನೆ ಹಾನಿಗೊಳಗಾಗಿವೆ. ಪ್ರಾಣ ಹಾನಿ ಹಾಗೂ ಮನೆ ಹಾನಿಯಾದವರಿಗೆ ಕೂಡಲೇ ಪರಿಹಾರ ಕೊಡಲು ಸೂಚನೆ ನೀಡಲಾಗಿದೆ ಎಂದರು.

logo
RELATED TOPICS:
English summary :52 people have died in the state due to pre-monsoon rain disaster, 5 lakh compensation each!

ಮಣಿಪುರದಾದ್ಯಂತ 144 ಶಸ್ತ್ರಾಸ್ತ್ರಗಳು ಮತ್ತು 11 ಮ್ಯಾಗಜೀನ್ ವಶ
ಮಣಿಪುರದಾದ್ಯಂತ 144 ಶಸ್ತ್ರಾಸ್ತ್ರಗಳು ಮತ್ತು 11 ಮ್ಯಾಗಜೀನ್ ವಶ
5 ಗ್ಯಾರಂಟಿಗಳನ್ನು ಜಾರಿಗೊಳಿಸಲುಕ್ಯಾಬಿನೆಟ್‌ ಸಮ್ಮತಿ : ಯೋಜನೆಗಳ ಬಗ್ಗೆ ನೀವು ತಿಳಿದುಕೊಳ್ಳಲೇಬೇಕಾದ ಅಂಶ
5 ಗ್ಯಾರಂಟಿಗಳನ್ನು ಜಾರಿಗೊಳಿಸಲುಕ್ಯಾಬಿನೆಟ್‌ ಸಮ್ಮತಿ : ಯೋಜನೆಗಳ ಬಗ್ಗೆ ನೀವು ತಿಳಿದುಕೊಳ್ಳಲೇಬೇಕಾದ ಅಂಶ
ಮುಸ್ಲಿಂ ಲೀಗ್ ಸಂಪೂರ್ಣವಾಗಿ ಜಾತ್ಯತೀತ ಎಂದ ರಾಹುಲ್ ಗಾಂಧಿ ಹೇಳಿಕೆಗೆ ಬಿಜೆಪಿ ತೀವ್ರ ವಾಗ್ದಾಳಿ
ಮುಸ್ಲಿಂ ಲೀಗ್ ಸಂಪೂರ್ಣವಾಗಿ ಜಾತ್ಯತೀತ ಎಂದ ರಾಹುಲ್ ಗಾಂಧಿ ಹೇಳಿಕೆಗೆ ಬಿಜೆಪಿ ತೀವ್ರ ವಾಗ್ದಾಳಿ
ಪೊಲೀಸರ ತನಿಖೆಯನ್ನು ನಂಬಿ, ಅದರ ಮುಕ್ತಾಯದವರೆಗೂ ತಾಳ್ಮೆಯಿಂದಿರಿ - ಕ್ರೀಡಾ ಸಚಿವ ಠಾಕೂರ್ ಮನವಿ
ಪೊಲೀಸರ ತನಿಖೆಯನ್ನು ನಂಬಿ, ಅದರ ಮುಕ್ತಾಯದವರೆಗೂ ತಾಳ್ಮೆಯಿಂದಿರಿ - ಕ್ರೀಡಾ ಸಚಿವ ಠಾಕೂರ್ ಮನವಿ
ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಾರಿಗೆ ತರಲಾದ ಯೋಜನೆಗಳಿಗೆ ಅನುದಾನ ಕಡಿತ ಮಾಡದಂತೆ ಬಸವರಾಜ ಬೊಮ್ಮಾಯಿ‌ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ!
ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಾರಿಗೆ ತರಲಾದ ಯೋಜನೆಗಳಿಗೆ ಅನುದಾನ ಕಡಿತ ಮಾಡದಂತೆ ಬಸವರಾಜ ಬೊಮ್ಮಾಯಿ‌ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ!
ಧಗ ಧಗನೆ ಹೊತ್ತಿ ಉರಿದ ಲಘು ವಿಮಾನ, ಪ್ಯಾರಾಚೂಟ್ ಸಹಾಯದಿಂದ ಜಿಗಿದ ಪೈಲಟ್ ಗಳು
ಧಗ ಧಗನೆ ಹೊತ್ತಿ ಉರಿದ ಲಘು ವಿಮಾನ, ಪ್ಯಾರಾಚೂಟ್ ಸಹಾಯದಿಂದ ಜಿಗಿದ ಪೈಲಟ್ ಗಳು
ಅಂಬರ್ ಗ್ರಿಸ್​ ತಂದು ಮಾರಾಟಕ್ಕೆ ಯತ್ನ, ಸಿಸಿಬಿ ಪೊಲೀಸರಿಂದ ಇಬ್ಬರ ಬಂಧನ.
ಅಂಬರ್ ಗ್ರಿಸ್​ ತಂದು ಮಾರಾಟಕ್ಕೆ ಯತ್ನ, ಸಿಸಿಬಿ ಪೊಲೀಸರಿಂದ ಇಬ್ಬರ ಬಂಧನ.
ಪಕ್ಷ ಸಂಘಟನೆ ದೃಷ್ಟಿಯಿಂದ ಕಠಿಣ ಸೂಚನೆಗಳನ್ನು ಕೊಟ್ಟ ಕುಮಾರಸ್ವಾಮಿ!
ಪಕ್ಷ ಸಂಘಟನೆ ದೃಷ್ಟಿಯಿಂದ ಕಠಿಣ ಸೂಚನೆಗಳನ್ನು ಕೊಟ್ಟ ಕುಮಾರಸ್ವಾಮಿ!
ತಮಿಳುನಾಡು ಸರ್ಕಾರಕ್ಕೆ ಮನವಿ, ಅಕ್ಕಪಕ್ಕದ ರಾಜ್ಯದವರು ಅಣ್ಣ ತಮ್ಮಂದಿರಂತೆ ಬದುಕೋಣ!
ತಮಿಳುನಾಡು ಸರ್ಕಾರಕ್ಕೆ ಮನವಿ, ಅಕ್ಕಪಕ್ಕದ ರಾಜ್ಯದವರು ಅಣ್ಣ ತಮ್ಮಂದಿರಂತೆ ಬದುಕೋಣ!
ಬಿಎಸ್​ವೈ ನಿವಾಸಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಭೇಟಿ, ಯೋಗಕ್ಷೇಮ ವಿಚಾರಿಸಿದ ಡಿಕೆ ಶಿವಕುಮಾರ್
ಬಿಎಸ್​ವೈ ನಿವಾಸಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಭೇಟಿ, ಯೋಗಕ್ಷೇಮ ವಿಚಾರಿಸಿದ ಡಿಕೆ ಶಿವಕುಮಾರ್
5 ಪ್ರಮುಖ ಗ್ಯಾರಂಟಿಗಳ ಜಾರಿಗೆ ಆರ್ಥಿಕ ಇಲಾಖೆಗಳು ನಮಗೆ ಆಯ್ಕೆಗಳನ್ನು ನೀಡಿದೆ - ಡಿಸಿಎಂ ಡಿಕೆಶಿ
5 ಪ್ರಮುಖ ಗ್ಯಾರಂಟಿಗಳ ಜಾರಿಗೆ ಆರ್ಥಿಕ ಇಲಾಖೆಗಳು ನಮಗೆ ಆಯ್ಕೆಗಳನ್ನು ನೀಡಿದೆ - ಡಿಸಿಎಂ ಡಿಕೆಶಿ
ಹೆಚ್ ಡಿ ಕುಮಾರಸ್ವಾಮಿ ಜೆಡಿಎಸ್‌ ವಿಸರ್ಜನೆ ಯಾವಾಗ ಎಂಬ ಪ್ರಶ್ನೆಗೆ ಹೇಳಿದ್ದೇನು ಗೊತ್ತಾ?
ಹೆಚ್ ಡಿ ಕುಮಾರಸ್ವಾಮಿ ಜೆಡಿಎಸ್‌ ವಿಸರ್ಜನೆ ಯಾವಾಗ ಎಂಬ ಪ್ರಶ್ನೆಗೆ ಹೇಳಿದ್ದೇನು ಗೊತ್ತಾ?

ನ್ಯೂಸ್ MORE NEWS...