Fri,May17,2024
ಕನ್ನಡ / English

ಯಾರ್ಯಾರು 40% ಕಮಿಷನ್ ತಗೊಂಡ್ಡಿದ್ದಾರೋ, ಬೀಟ್ ಕಾಯಿನ್ ಭಾಗಿಯಾಗಿದ್ದವರನ್ನು ಜೈಲಿಗೆ ಹಾಕಿ - ಸಂಸದ ಸಿಂಹ ಸವಾಲ್ | JANATA NEWS

26 May 2023
1839

ಮೈಸೂರು : ಯಾರ್ಯಾರು 40% ಕಮಿಷನ್ ತಗೊಂಡ್ಡಿದ್ದಾರೋ, ಬೀಟ್ ಕಾಯಿನ್ ಒಳಗೆ ಯಾರ್ಯಾರು ಭಾಗಿಯಾಗಿದ್ದಾರೋ ಅಂತಹವರನ್ನು ಹಿಡಿದು ಜೈಲಿಗೆ ಹಾಕಿ ಸರ್, ಇಲ್ಲಾ ಅಂತ ಆದರೆ, ನೀವು ರಾಜಕೀಯ ಮಾಡೋಗೋಸ್ಕರ, ಜನರನ್ನು ಮಂಗ ಮಾಡೋಗೋಸ್ಕರ ಆರೋಪ ಮಾಡಿದ್ದೀರಿ ಎಂದು ಒಪ್ಪಿಕೊಂಡು ಕ್ಷಮೆ ಕೇಳಿ, ಎಂದು ಮೈಸೂರು ಸಂಸದ ಪ್ರತಾಪ್‌ ಸಿಂಹ ಹೊಸ ಕಾಂಗ್ರೆಸ್ ಸರ್ಕಾರಕ್ಕೆ ಸವಾಲೆಸೇದಿದ್ದಾರೆ.

ಈ ಕುರಿತು ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯಾವುದೇ ಯೋಜನೆ, ಕಾಮಗಾರಿಗಳಿಗೂ ಹಣ ಬಿಡುಗಡೆ ಮಾಡಬಾರದು ಎಂದು ಯಾಕಾಗಿ 3 ದಿನಗಳ ಹಿಂದೆ ಸರ್ಕಾರಿ ಆದೇಶ ಹೊರಡಿಸಿದ್ದೀರಿ ಸಿದ್ದರಾಮಯ್ಯ ಸರ್? ಬಿಜೆಪಿಯವರನ್ನು 40 ಪರ್ಸೆಂಟ್ ಅನ್ನುತ್ತಿದ್ದೀರಲ್ಲಾ, ನೀವೆಷ್ಟು ಪರ್ಸೆಂಟ್ ಕೇಳಲು ಇಂಥದ್ದೊಂದು ಆದೇಶ ಮಾಡಿದ್ದೀರಿ? ನಿಮ್ಮ ಉದ್ದೇಶವೇನು? ದಯವಿಟ್ಟು ಹೇಳಿ, ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.

ಬಿಜೆಪಿ ಸರ್ಕಾರದ ಮೇಲೆ 40% ಕಮಿಷನ್, ಬಿಟ್ ಕಾಯಿನ್ ಬಗ್ಗೆ ಕಾಂಗ್ರೆಸ್ ಆರೋಪ ಮಾಡಿ ಊರುರು ತಮಟೆ ಹೊಡೆದಿದ್ದೀರಿ. ಈಗ ಕಾಂಗ್ರೆಸ್ ಪಕ್ಷವೇ ಅಧಿಕಾರಕ್ಕೆ ಬಂದಿದೆ, ಈಗ ನೀವೇ ಅಧಿಕಾರಕ್ಕೆ ಬಂದಿದ್ದಿರಾ ತನಿಖೆ ಮಾಡಿ. ಆ 40% ಕಮಿಷನ್ ತಗೊಂಡವರು ಯಾರು? ಆ ಬೀಟ್ ಕಾಯಿನ್ ಒಳಗೆ ಯಾರ್ಯಾರು ಭಾಗಿಯಾಗಿದ್ದರು? ದಯವಿಟ್ಟು ಇದರ ಬಗ್ಗೆ ತಕ್ಷಣ ಒಂದು ತನಿಖೆ ನಡೆಸಿ.

ಯಾರ್ಯಾರು 40% ಕಮಿಷನ್ ತಗೊಂಡ್ಡಿದ್ದಾರೋ, ಬೀಟ್ ಕಾಯಿನ್ ಒಳಗೆ ಯಾರ್ಯಾರು ಭಾಗಿಯಾಗಿದ್ದಾರೋ ಅಂತಹವರನ್ನು ಹಿಡಿದು ಜೈಲಿಗೆ ಹಾಕಿ ಸರ್, ನಾನೇ ಬಂದು ಕಾಲಿಗೆ ಬಂದು ನಮಸ್ಕಾರ ಮಾಡುತ್ತೇನೆ, ಎಂದು ಮೈಸೂರು ಸಂಸದ ಪ್ರತಾಪ್‌ ಸಿಂಹ ಹೇಳಿದ್ದಾರೆ.

ರಾಜಕೀಯ ಅನ್ನೋದು ಶುದ್ಧೀಕರಣ ಆಗಲಿ. ಯಾರ್ಯಾರು 40% ಕಮಿಷನ್ ತಗೊಂಡ್ಡಿದ್ದಾರೋ ಅಂತಹವರು ಇರಬಾರದು. ಬೀಟ್ ಕಾಯಿನ್ ಒಳಗೆ ಯಾರ್ಯಾರು ಭಾಗಿಯಾಗಿದ್ದಾರೋ ಅಂತಹವರು ಇರಬಾರದು. ನೀವೇನು ಡಂಗುರ ಸಾರಿದ್ದರೋ, ಊರುರು ತಮಟೆ ಬಾರಿಸಿದ್ದರೋ, ಈಗ ತಕ್ಷಣ ತನಿಖೆ ನಡೆಸಿ ಅಂತಹವರನ್ನು ಜೈಲಿಗೆ ಹಾಕಬೇಕು. ಇಲ್ಲಾ ಅಂತ ಆದರೆ, ನೀವು ರಾಜಕೀಯ ಮಾಡೋಗೋಸ್ಕರ, ಜನರನ್ನು ಮಂಗ ಮಾಡೋಗೋಸ್ಕರ ಆರೋಪ ಮಾಡಿದ್ದೀರಿ ಎಂದು ಒಪ್ಪಿಕೊಂಡು ಕ್ಷಮೆ ಕೇಳಿ, ಎಂದು ಸಂಸದ ಸಿಂಹ ಸವಾಲೆಸೇದಿದ್ದಾರೆ.

40% ಕಮೀಷನ್ ಸರ್ಕಾರ ಅಂತಾ ಊರೂರು ತಿರುಗಿ ಪ್ರಚಾರ ಮಾಡಿದ್ದೀರಾ. ಈಗ ನೀವೇ ಅಧಿಕಾರಕ್ಕೆ ಬಂದಿದ್ದಿರಾ ತನಿಖೆ ಮಾಡಿ, ಕಮಿಷನ್ ಪಡೆವರನ್ನು ಜೈಲಿಗೆ ಕಳುಹಿಸುವ ಜವಾಬ್ದಾರಿ ನಿಮ್ಮದು. ಈ ಜವಾಬ್ದಾರಿ ನಿಭಾಯಿಸದೇ ಇದ್ದರೆ ನೀವು ಹೇಳಿದ್ದು ಸುಳ್ಳು ಅಂತಾ ಒಪ್ಪಿಕೊಳ್ಳಿ, ಎಂದು ಕಾಂಗ್ರೆಸ್‌ ಸರ್ಕಾರದ ವಿರುದ್ದ ಕಿಡಿಕಾರಿದರು.

ಗ್ಯಾರಂಟಿ ಕಾರ್ಡ್ ನಲ್ಲಿ ಕಂಡೀಷನ್ ಅಪ್ಲೈ ಅಂತಾ ಎಲ್ಲೂ ಹಾಕಿಲ್ಲ. ಎಲ್ಲಾ ಮನೆಯ ಯಜಮಾನಿಗೆ 2 ಸಾವಿರ ಕೊಡಬೇಕು, ಎಲ್ಲಾ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಅವಕಾಶ ಕೊಡಬೇಕು. ಜೂನ್ 1 ರವರೆಗೆ ಕಾಯುತ್ತೇನೆ, ಜೂನ್ 1 ರಿಂದ 200 ಯೂನಿಟ್ ಒಳಗೆ ವಿದ್ಯುತ್ ಬಿಲ್ ಬಂದರೆ ಬಿಲ್ ಕಟ್ಟಬೇಡಿ ಎಂದು ಹೇಳಿದರು.

English summary : Jail whoever took 40% commission, those involved in BitCoin - MP Sinha challenge

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ನ್ಯೂಸ್ MORE NEWS...