ಮೈಸೂರು ಅಪಘಾತ : ಪ್ರಾಣ ಕಳೆದುಕೊಂಡವರ ಸಂಬಂಧಿಕರಿಗೆ, ಗಾಯಾಳುಗಳಿಗೆ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ | JANATA NEWS
ಮೈಸೂರು : ಮೈಸೂರು ಮತ್ತು ಧನ್ಬಾದ್ನಲ್ಲಿ ಸಂಭವಿಸಿದ ದುರಂತಗಳಲ್ಲಿ ಪ್ರಾಣ ಕಳೆದುಕೊಂಡವರ ಸಂಬಂಧಿಕರಿಗೆ PMNRF ನಿಂದ ಪ್ರಧಾನಮಂತ್ರಿಯವರು 2 ಲಕ್ಷ ರೂ. ಹಾಗೂ ಗಾಯಾಳುಗಳಿಗೆ ರೂ. 50,000 ಪರಿಹಾರವನ್ನು ಘೋಷಿಸಿದ್ದಾರೆ, ಎಂದು ಪ್ರಧಾನಿ ಕಚೇರಿ ಟ್ವಿಟರ್ನಲ್ಲಿ ಹೇಳಿಕೆ ನೀಡಿದೆ.
ಇದಕ್ಕೂ ಮುನ್ನ ಹತ್ತು ಪ್ರವಾಸಿಗರ ಸಾವಿಗೆ ಸಂತಾಪ ಸೂಚಿಸಿದ ಪ್ರಧಾನಿ ಮೋದಿ, "ಕರ್ನಾಟಕದ ಮೈಸೂರಿನಲ್ಲಿ ಸಂಭವಿಸಿದ ಭೀಕರ ಅಪಘಾತದಿಂದ ತೀವ್ರ ದುಃಖವಾಗಿದೆ. ನನ್ನ ಆಲೋಚನೆಗಳು ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳೊಂದಿಗೆ ಇವೆ. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ. ಧನ್ಬಾದ್ನಲ್ಲಿ ಸಂಭವಿಸಿದ ದುರ್ಘಟನೆಯಿಂದ ಪ್ರಾಣಹಾನಿಯಾಗಿರುವುದು ಅತ್ಯಂತ ದುರದೃಷ್ಟಕರ. ದುಃಖತಪ್ತ ಕುಟುಂಬಗಳಿಗೆ ನನ್ನ ಆಳವಾದ ಸಂತಾಪಗಳು. ಗಾಯಾಳುಗಳು ಶೀಘ್ರ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ", ಎಂದಿದ್ದಾರೆ.
ಟಿ.ನರಸೀಪುರ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೈಸೂರಿಗೆ ಪ್ರವಾಸಕ್ಕೆ ತೆರಳಿದ್ದ ಸಂಗನಕಲ್ಲು ಗ್ರಾಮದ ಒಂದೇ ಕುಟುಂಬದ ಮಕ್ಕಳು ಸೇರಿದಂತೆ 10 ಮಂದಿ ಸಾವನ್ನಪ್ಪಿದ್ದಾರೆ.
ಪ್ರವಾಸಿಗರು ಮೈಸೂರಿನಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ಮೈಸೂರು-ಕೊಳ್ಳೇಗಾಲ ಮುಖ್ಯರಸ್ತೆಯ ತಿರುವಿನಲ್ಲಿ ಖಾಸಗಿ ಬಸ್ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಹತ್ತು ಮಂದಿ ಪ್ರವಾಸಿಗರು ಸಾವನ್ನಪ್ಪಿದ್ದಾರೆ.