ಕಾಂಗ್ರೆಸ್ ಘೋಷಣೆ ಮಾಡಿದ ಐದು ಗ್ಯಾರಂಟಿ ಜಾರಿ ಮಾಡುವುದು ಗ್ಯಾರಂಟಿ : ಸಿದ್ದರಾಮಯ್ಯ | JANATA NEWS
ಬೆಂಗಳೂರು : ಕಾಂಗ್ರೆಸ್ ಘೋಷಣೆ ಮಾಡಿದ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುವುದು ಗ್ಯಾರಂಟಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ವಿಧಾನಸೌಧದಲ್ಲಿ ನಡೆದ ಸಚಿವರ ಜೊತೆಗಿನ ಸಭೆಯ ಬಳಿಕ ಮಾತನಾಡಿದ ಅವರು, ಐದು ಘೋಷಣೆಗಳನ್ನು ಜಾರಿ ಮಾಡುವ ಬಗ್ಗೆ ಸಚಿವರು ಹಾಗೂ ಹಣಕಾಸು ಇಲಾಖೆ ಜೊತೆಗೆ ಸಭೆ ಮಾಡಲಾಗಿದೆ.
ಜಾರಿ ವಿಚಾರವಾಗಿ ಚರ್ಚೆ ಮಾಡಿ ಶುಕ್ರವಾರ ತೀರ್ಮಾನ ಮಾಡುತ್ತೇವೆ. ಬಳಿಕ ಕ್ಯಾಬಿನೆಟ್ ತೀರ್ಮಾನದ ಬಗ್ಗೆ ತಿಳಿಸುತ್ತೇವೆ ಎಂದರು.
ಸಭೆಯಲ್ಲಿ ಎಲ್ಲಾ ಅಧಿಕಾರಿಗಳು ಸೇರಿ ಒಟ್ಟಿಗೆ ಪ್ರೆಸೆಂಟೇಶನ್ ನೀಡಿದ್ದಾರೆ. ಎಲ್ಲಾ ಪ್ರಸ್ತಾವನೆಗಳು ಇತ್ತು, ಶುಕ್ರವಾರ ಕ್ಯಾಬಿನೆಟ್ ಮೀಟಿಂಗ್ನಲ್ಲಿ ಚರ್ಚೆ ಮಾಡುತ್ತೇವೆ. ಆ ಬಳಿಕ ಅಂತಿಮ ತೀರ್ಮಾನ ಮಾಡುತ್ತೇವೆ. ಸರ್ಕಾರ 5 ಯೋಜನೆಗಳ ಜಾರಿಗೆ ತೀರ್ಮಾನ ಮಾಡಿದೆ ಎಂದರು.
ಇದೇ ವೇಳೆ ಬಿಜೆಪಿ ನಾಯಕರಿಗೆ ತಿರುಗೇಟು ಕೊಟ್ಟ ಸಿಎಂ, ಬಿಜೆಪಿ ಮೊದಲು ಅವರು ಹೇಳಿದ್ದು ಮಾಡಿದ್ದಾರಾ? ಅವರು ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿರುವುದು ಮಾಡಿದ್ದಾರಾ ಎಂದು ಪ್ರಶ್ನಿಸಿ ಬಿಜೆಪಿ ಟೀಕೆಗೆ ಸಿಎಂ ತಿರುಗೇಟು ನೀಡಿದರು. ಬಿಜೆಪಿ ಅವರು ಏನೇ ಆರೋಪ ಮಾಡಲಿ, ನಾವು ನಮ್ಮ ಘೋಷಣೆಯನ್ನು ಜಾರಿ ಮಾಡೇ ಮಾಡುತ್ತೇವೆ ಎಂದರು.