ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಕಾರು, ಸ್ಥಳದಲ್ಲೇ ನಾಲ್ವರ ಸಾವು | JANATA NEWS
ಮಂಡ್ಯ : ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಯುವಕರು ಮೃತಪಟ್ಟ ಘಟನೆ ನಾಗಮಂಗಲ ತಾಲೂಕಿನ ತಿರುಮಲಾಪುರದಲ್ಲಿ ನಡೆದಿದೆ.
ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಹೇಮಂತ್, ಶರತ್ ಹಾಗೂ ನವೀನ್ ಸೇರಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ತಿರುಮಲಾಪುರ ಗೇಟ್ ಬಳಿ ಭೀಕರ ಅಪಘಾತ ಸಂಭವಿಸಿದ್ದು ಕಾರಿನಲ್ಲಿದ್ದವರು ಬೆಂಗಳೂರಿನಿಂದ ಹಾಸನ ಕಡೆ ಹೋಗುತ್ತಿದ್ದರು.
ಕಾರು ತಿರುಮಲಾಪುರ ಗೇಟ್ ಬಳಿ ತಲುಪಿದಾಗ ಚಾಲಕನ ನಿಯಂತ್ರಣ ತಪ್ಪಿ ಮುಂದೆ ಚಲಿಸುತ್ತಿದ್ದ ತ್ಯಾಜ್ಯ ಸಾಗಾಟದ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಘಟನೆಯ ಬಳಿಕ ಲಾರಿ ಚಾಲಕ ಎಸ್ಕೇಪ್ ಆಗಿದ್ದಾರೆ.
English summary :A car collided with a lorry from behind, killing four people on the spot