ಪಠ್ಯ ಪುಸ್ತಕದ ಬದಲಾವಣೆ ಖಚಿತ, ಸಚಿವ ಮಧು ಬಂಗಾರಪ್ಪ | JANATA NEWS
ಶಿವಮೊಗ್ಗ : ಪಠ್ಯ ಪುಸ್ತಕಗಳ ಪರಿಷ್ಕರಣೆ 100% ಮಾಡುಮಾಡುತ್ತೆವೆ, ಯಾವುದೇ ಗೂಂದಲವಿಲ್ಲ, ಪಠ್ಯ ಪುಸ್ತಕದ ಬದಲಾವಣೆ ಖಚಿತ. ಈ ಸಂಬಂಧ ಬರಗೂರು ಸೇರಿದಂತೆ ತಜ್ಞರ ಜೊತೆ ಮಾತನಾಡಿದ್ದೇನೆ ಎಂಬುದಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ನಾನು ಅಧಿಕಾರ ತೆಗೆದುಕೊಂಡಾಗ ಪಠ್ಯ ಪುಸ್ತಕ ಹೋಗಿ ಅಗಿತ್ತು.ಅದಕ್ಕೆ ಕಾನೂನು ಬದ್ದವಾಗಿ ತಡೆಯುವ ವ್ಯವಸ್ಥೆ ಇದೆ ಎಂದರು. ಬರಗೂರು ರಾಮಚಂದ್ರಪ್ಪನವರ ಜೊತೆ ಚರ್ಚೆ ನಡೆಸಲಾಗಿದೆ. ಸಿಎಂ ರವರ ನೇತೃತ್ವದಲ್ಲಿ ಎಲ್ಲಾ ನಡೆಯುತ್ತಿದೆ. ಅವರ ಆಸೆ ಸಹ ಪಠ್ಯ ಪುಸ್ತಕ ಬದಲಾವಣೆ ಮಾಡಬೇಕೆಂದು ಇದೆ ಎಂದರು. ಮಕ್ಕಳ ಭವಿಷ್ಯಕ್ಕಾಗಿ ಏನು ಬದಲಾವಣೆ ಮಾಡಬೇಕೋ ಅದನ್ನು ಮಾಡೇ ಮಾಡುತ್ತೆವೆ.ಅದರಲ್ಲಿ ಏನೂ ಬದಲಾವಣೆ ಇಲ್ಲ ಎಂದರು.
ಸೊರಬದಲ್ಲಿ ಮಾತನಾಡಿದ ಅವರು, ಜಿಎಸ್ಟಿ, ಗ್ಯಾಸ್, ಬೆಲೆ ಏರಿಕೆ ಹೇಳಿಕೊಂಡೇ ನಾವು ಗೆದ್ದಿರುವುದು. ಅದಕ್ಕೆ ಪರಿಹಾರಾರ್ಥವೇ ಈ ಗ್ಯಾರಂಟಿ ಕಾರ್ಡ್ ಆಗಿದೆ. ರಾಜ್ಯಮಟ್ಟದಲ್ಲಿ ರೆವಿನ್ಯೂ ಬರುವುದರಿಂದ ಗ್ಯಾರಂಟಿ ಯೋಜನೆ ಯಶಸ್ವಿ ಆಗುತ್ತದೆ. ಸೊರಬ ಭಾಗದಲ್ಲಿ ಕೃಷಿ ಜಮೀನು ಅಕ್ರಮ ಸಕ್ರಮ (ಬಗರ್ ಹುಕುಂ) ಬಹು ದೊಡ್ಡ ಸಮಸ್ಯೆ ಆಗಿದೆ. ಅರಣ್ಯ ಭೂಮಿಯಲ್ಲಿ ಸಾಗುವಳಿ ಮಾಡಿ ಮನೆ ಕಟ್ಟಿಕೊಂಡವರ ರಕ್ಷಣೆ ಆಗಬೇಕಿದೆ. ಕೇಂದ್ರದ ಸಹಕಾರ ಪಡೆದು ಅದನ್ನು ಮಾಡುತ್ತೇವೆ ಎಂದು ತಿಳಿಸಿದ್ದಾರೆ.
ಈ ಸಮಸ್ಯೆ ಬಗೆಹರಿಸುವುದೇ ನನ್ನ ಮೊದಲ ಆದ್ಯತೆ ಎಂದರು. ಸೊರಬ ಕ್ಷೇತ್ರದಲ್ಲಿ ಉದ್ಯೋಗ ಸೃಷ್ಠಿ ಮಾಡುವ ನಿಟ್ಟಿನಲ್ಲಿ ಕೆಲಸ ಮಾಡುತ್ತೇನೆ. ರಾಜ್ಯ ಶಿಕ್ಷಣ ಇಲಾಖೆಯಲ್ಲಿ ಸಾಕಷ್ಟು ಸಮಸ್ಯೆಗಳಿವೆ. ದೈಹಿಕ ಶಿಕ್ಷಕರು, ಖಾಯಂ ಶಿಕ್ಷಕರು, ಶಾಲಾ ಕಟ್ಟಡ ಕೊರತೆ ಇದೆ. ಮಕ್ಕಳ ಭವಿಷ್ಯಕ್ಕಾಗಿ ನಾನು ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ ಎಂದು ತಿಳಿಸಿದರು.