Wed,Sep27,2023
ಕನ್ನಡ / English

ಬಿಬಿಎಂಪಿ, ಸರ್ಕಾರಿ ಅಧಿಕಾರಿಗಳೊಂದಿಗೆ ಕಾಂಗ್ರೆಸ್‌ ರಾಜ್ಯ ಉಸ್ತುವಾರಿ ಸುರ್ಜೇವಾಲ ಸಭೆ : 85% ಡೀಲ್‌ ಫಿಕ್ಸಿಂಗ್ ಸಭೆಯೇ..? ಬಿಜೆಪಿ ಪ್ರಶ್ನೆ | JANATA NEWS

14 Jun 2023
525

ಬೆಂಗಳೂರು : ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ ಗಿರಿನಾಥ ಸೇರಿದಂತೆ ಸರ್ಕಾರಿ ಅಧಿಕಾರಿಗಳ, ಸಂಪುಟ ಸಚಿವರ ಸಭೆಯನ್ನು, ಬೆಂಗಳೂರಿನ ಶಾಂಗ್ರಿಲಾ ಹೋಟೆಲ್‌ನಲ್ಲಿ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲಾ ನೇತ್ರತ್ವದ ಸಭೆಯ ಫೋಟೋ ಸಾಕಷ್ಟು ಚರ್ಚೆಗೆ ಕಾರಣವಾಗಿದೆ.

ಸಚಿವ ಜಮೀರ್ ಅಹ್ಮದ್ ಖಾನ್ ಈ ಸಭೆಯ ಫೋಟೋಗಳನ್ನು ಶೇರ್ ಮಾಡಿದ್ದು, ಸಭೆಯಲ್ಲಿ ವಿವಿಧ ವಿಷಯ ಮತ್ತು ಬೆಂಗಳೂರಿನ ಅಭಿವೃದ್ಧಿ ಕುರಿತು ಚರ್ಚಿಸಿದ ಬಗ್ಗೆ ಬರೆದಿದ್ದರು.

ಸಚಿವ ಜಮೀರ್ ಅಹಮದ್ ಈ ಟ್ವೀಟ್ ಡಿಲೀಟ್ ಮಾಡುವ ಮುನ್ನವೇ ಈ ಪೋಸ್ಟ್ ಶೇರ್ ಮಾಡಿರುವ ರಾಜ್ಯ ಬಿಜೆಪಿ, ಅಬ್ಬಾ..ಹೈಕಮಾಂಡ್ ಗೆ ಲಾಟರಿ ಎಂದು ಟ್ವೀಟ್ ಮಾಡಿದೆ.

ಬಿಜೆಪಿ ಮುಂದುವರೆದ ತನ್ನ ಟ್ವೀಟ್ ನಲ್ಲಿ, "ಬೆಂಗಳೂರಿನ ಶಾಂಗ್ರಿಲಾ ಹೋಟೆಲ್‌ನಲ್ಲಿ #ATMSarkara ದ ಗೌಪ್ಯ ಸಭೆಯ ರಹಸ್ಯವೇನು...?

ರಾಜ್ಯ ಸರಕಾರದೊಟ್ಟಿಗಾಗಲಿ, ಬಿಬಿಎಂಪಿ ಒಟ್ಟಿಗಾಗಲಿ ಯಾವುದೇ ರೀತಿಯ ಅಧಿಕೃತ ಸಂಬಂಧವಿರದ ಕಾಂಗ್ರೆಸ್‌ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲರಿಗೆ ಬಿಬಿಎಂಪಿ ಉನ್ನತ ಅಧಿಕಾರಿಗಳೊಟ್ಟಿಗೇನು ಕೆಲಸ..?

ಇದು 85% ಡೀಲ್‌ ಫಿಕ್ಸಿಂಗ್ ಸಭೆಯೇ..? ಉತ್ತರಿಸಿ ಮಾನ್ಯ ಸಿದ್ದರಾಮಯ್ಯ, ಡಿಕೆ. ಶಿವಕುಮಾರ್ ಅವರೇ, ಎಂದು ರಾಜ್ಯ ಬಿಜೆಪಿ ಪ್ರಶ್ನಿಸಿದೆ.

ಬಿಜೆಪಿ ಮತ್ತೊಂದು ಟ್ವೀಟ್‌ನಲ್ಲಿ, ಬೆಂಗಳೂರಿನ ಶಾಂಗ್ರಿಲಾ ಹೋಟೆಲ್‌ನಲ್ಲಿ ನಡೆದ “ರಹಸ್ಯ ಸಭೆ” ಕರ್ನಾಟಕವನ್ನು ನಿಯಂತ್ರಿಸಲು ಪ್ರಯತ್ನಿಸುತ್ತಿರುವ ಗಾಂಧಿಗಳ ಮತ್ತೊಂದು ಮಾರ್ಗವಾಗಿದೆ.

ಕುಟುಂಬದವರು ತಮ್ಮ ಆಪ್ತ ಸಹಾಯಕ ರಣದೀಪ್ ಸುರ್ಜೆವಾಲಾ ಅವರನ್ನು ಕಳುಹಿಸಿದ್ದಾರೆ, ಅವರು ಬಿಡಿಎ/ಬಿಬಿಎಂಪಿ ಅಥವಾ ಸರ್ಕಾರದಲ್ಲಿ ಯಾವುದೇ ಸ್ಥಾನವನ್ನು ಹೊಂದಿರುವುದಿಲ್ಲ, ಕರ್ನಾಟಕದ ವಿಷಯಗಳ ಬಗ್ಗೆ ನಿರ್ಧರಿಸಲು.

ಬಿಬಿಎಂಪಿ ಮತ್ತು ಬಿಡಿಎ ಆಯುಕ್ತರು/ಅಧಿಕಾರಿಗಳೊಂದಿಗೆ ಸಭೆಯ ಅಧ್ಯಕ್ಷತೆ ವಹಿಸಲು ಅವರ ಸಾಮರ್ಥ್ಯ ಅಥವಾ ಅಧಿಕಾರ ಏನು?

2024 ರ ಚುನಾವಣೆಗೆ ಮುಂಚಿತವಾಗಿ ಹಣವನ್ನು ಸಂಗ್ರಹಿಸಲು #ಎಟಿಎಂಸರ್ಕಾರದಿಂದ '85% ಡೀಲ್‌ಗಳನ್ನು' ಆಯೋಜಿಸಲಾಗುತ್ತಿದೆಯೇ?, ಎಂದು ಬಿಜೆಪಿ ಪ್ರಶ್ನೆಗಳ ಸುರಿಮಳೆಗೈದಿದೆ.

English summary :BBMP, government officials meeting held by Congress state in-charge Surjewala: 85% deal fixing meeting..? BJP question

ಸೆಪ್ಟೆಂಬರ್ 26ರಂದು ಬೆಂಗಳೂರು ಬಂದ್
ಸೆಪ್ಟೆಂಬರ್ 26ರಂದು ಬೆಂಗಳೂರು ಬಂದ್
ಚನ್ನಪಟ್ಟಣದಲ್ಲಿ ಯಾರ ಮತಗಳಿಂದ ಗೆದ್ದಿದ್ದೀರಿ? ಎದೆ ಮುಟ್ಟಿಕೊಂಡು ಹೇಳಿ
ಚನ್ನಪಟ್ಟಣದಲ್ಲಿ ಯಾರ ಮತಗಳಿಂದ ಗೆದ್ದಿದ್ದೀರಿ? ಎದೆ ಮುಟ್ಟಿಕೊಂಡು ಹೇಳಿ
ರಾಜ್ಯದ ಹಿತಾಸಕ್ತಿ ವಿಚಾರದಲ್ಲಿ ರಾಜಕೀಯ ಮಾಡಬೇಡಿ: ಡಿಕೆ ಶಿವಕುಮಾರ್
ರಾಜ್ಯದ ಹಿತಾಸಕ್ತಿ ವಿಚಾರದಲ್ಲಿ ರಾಜಕೀಯ ಮಾಡಬೇಡಿ: ಡಿಕೆ ಶಿವಕುಮಾರ್
ಕದ್ದುಮುಚ್ಚಿ ಲವ್ವಿಡವ್ವಿ ಮಾಡುತ್ತಿದ್ದ ಜೆಡಿಎಸ್-ಬಿಜೆಪಿ ಹಾರ ಬದಲಿಸಿಕೊಂಡಿವೆ: ಕಾಂಗ್ರೆಸ್ ವ್ಯಂಗ್ಯ
ಕದ್ದುಮುಚ್ಚಿ ಲವ್ವಿಡವ್ವಿ ಮಾಡುತ್ತಿದ್ದ ಜೆಡಿಎಸ್-ಬಿಜೆಪಿ ಹಾರ ಬದಲಿಸಿಕೊಂಡಿವೆ: ಕಾಂಗ್ರೆಸ್ ವ್ಯಂಗ್ಯ
ಕಾವೇರಿ ಸಮಸ್ಯೆಗೆ ವಿರೋಧ ಪಕ್ಷಗಳಿಂದ ರಾಜಕೀಯ ಆಯಾಮ
ಕಾವೇರಿ ಸಮಸ್ಯೆಗೆ ವಿರೋಧ ಪಕ್ಷಗಳಿಂದ ರಾಜಕೀಯ ಆಯಾಮ
ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಮೃತದೇಹ ಪತ್ತೆ, ಪತಿ ಹಾಗೂ ಕುಟುಂಬಸ್ಥರು ಪರಾರಿ!
ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಮೃತದೇಹ ಪತ್ತೆ, ಪತಿ ಹಾಗೂ ಕುಟುಂಬಸ್ಥರು ಪರಾರಿ!
ಚೈತ್ರಾ ಕುಂದಾಪುರ ಸೇರಿ ಏಳು ಆರೋಪಿಗಳಿಗೆ ನ್ಯಾಯಾಂಗ ಬಂಧನ
ಚೈತ್ರಾ ಕುಂದಾಪುರ ಸೇರಿ ಏಳು ಆರೋಪಿಗಳಿಗೆ ನ್ಯಾಯಾಂಗ ಬಂಧನ
ಯಶವಂತಪುರ-ಕಾಚೇಗೌಡ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು ಸೆಪ್ಟೆಂಬರ್ 24 ರಂದು ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ
ಯಶವಂತಪುರ-ಕಾಚೇಗೌಡ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು ಸೆಪ್ಟೆಂಬರ್ 24 ರಂದು ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ
ಕಾವೇರಿ ನದಿ ವಿವಾದ ತೀವ್ರ ಸ್ವರೂಪ : ಕರ್ನಾಟಕದಾದ್ಯಂತ ಭುಗಿಲೆದ್ದ ಪ್ರತಿಭಟನೆಗಳು, ನಾಳೆ ಮಂಡ್ಯ ಬಂದ್‌
ಕಾವೇರಿ ನದಿ ವಿವಾದ ತೀವ್ರ ಸ್ವರೂಪ : ಕರ್ನಾಟಕದಾದ್ಯಂತ ಭುಗಿಲೆದ್ದ ಪ್ರತಿಭಟನೆಗಳು, ನಾಳೆ ಮಂಡ್ಯ ಬಂದ್‌
ಮಹಿಳಾ ಮೀಸಲಾತಿ ಮಸೂದೆಗೆ ಅನುಮೋದನೆಗೆ ಕಾರಣ ಬಹುಮತದೊಂದಿಗೆ ಬಲಿಷ್ಠ ಸರ್ಕಾರ - ಪ್ರಧಾನಿ ಮೋದಿ
ಮಹಿಳಾ ಮೀಸಲಾತಿ ಮಸೂದೆಗೆ ಅನುಮೋದನೆಗೆ ಕಾರಣ ಬಹುಮತದೊಂದಿಗೆ ಬಲಿಷ್ಠ ಸರ್ಕಾರ - ಪ್ರಧಾನಿ ಮೋದಿ
ಕೆನಡಾ ಪ್ರಧಾನಿಗೆ ತಟ್ಟಿದ ಬಿಸಿ : ಕೆನಡಾದಲ್ಲಿ ವೀಸಾ ಸೇವೆಗಳನ್ನು ಮುಂದಿನ ಸೂಚನೆಯವರೆಗೆ ಸ್ಥಗಿತಗೊಳಿಸಿದ ಭಾರತ
ಕೆನಡಾ ಪ್ರಧಾನಿಗೆ ತಟ್ಟಿದ ಬಿಸಿ : ಕೆನಡಾದಲ್ಲಿ ವೀಸಾ ಸೇವೆಗಳನ್ನು ಮುಂದಿನ ಸೂಚನೆಯವರೆಗೆ ಸ್ಥಗಿತಗೊಳಿಸಿದ ಭಾರತ
ಸುಪ್ರೀಂಕೋರ್ಟ್ ನಲ್ಲಿ ಕರ್ನಾಟಕಕ್ಕೆ ಸೋಲು : I.N.D.I.Alliance ಮೈತ್ರಿಕೂಟ ಉಳಿದುಕೊಳ್ಳಲು ಕಾಂಗ್ರೆಸ್ ಸರ್ಕಾರದ ಢೋಂಗಿ‌ತನ  - ಬಿಜೆಪಿ
ಸುಪ್ರೀಂಕೋರ್ಟ್ ನಲ್ಲಿ ಕರ್ನಾಟಕಕ್ಕೆ ಸೋಲು : I.N.D.I.Alliance ಮೈತ್ರಿಕೂಟ ಉಳಿದುಕೊಳ್ಳಲು ಕಾಂಗ್ರೆಸ್ ಸರ್ಕಾರದ ಢೋಂಗಿ‌ತನ - ಬಿಜೆಪಿ

ನ್ಯೂಸ್ MORE NEWS...