ಕೆರೆಯಲ್ಲಿ ಈಜಲು ಹೋಗಿ ಮೂವರು ಬಾಲಕರು ನೀರುಪಾಲು | JANATA NEWS
ಚಿಕ್ಕಬಳ್ಳಾಪುರ : ಕೆರೆಯಲ್ಲಿ ಈಜಲು ಹೋಗಿ ಕೆರೆಯಲ್ಲಿ ಮೂವರು ಬಾಲಕರು ಸಾವನ್ನಪ್ಪಿರುವ ಘಟನೆ ದೇವನಹಳ್ಳಿ ತಾಲೂಕಿನ ವಿಜಯಪುರ ಪಟ್ಟಣದ ಅಮಾನಿಕೆರೆಯಲ್ಲಿ ನಡೆದಿದೆ.
ಬಸವನಗರದ ಕಾರ್ತಿಕ್ (16), ಧನುಷ್ (15) ಹಾಗೂ ಗುರುಪ್ರಸಾದ್ (8) ಮೃತ ಬಾಲಕರು. ಶನಿವಾರ ಶಾಲೆ ಮುಗಿಸಿ ಕೆರೆಯ ಬಳಿ ಮೀನು ಹಿಡಿಯಲು ಹೋದ ಬಾಲಕರು ಆಕಸ್ಮಿಕ ಕಾಲು ಜಾರಿ ಬಿದ್ದಿದ್ದಾರೆ. ಆದರೆ ಪೋಷಕರಿಗೆ ಇದು ಅರಿವಿಗೆ ಬಂದಿರಲಿಲ್ಲ.
ಮಕ್ಕಳು ರಾತ್ರಿ ಕಳೆದರೂ ಮನೆಗೆ ಬಾರದ ಕಾರಣ, ಪೋಷಕರು ವಿಜಯಪುರ ಪೊಲೀಸ್ ಠಾಣೆಗೆ ತೆರಳಿ ಮಕ್ಕಳ ನಾಪತ್ತೆ ಕೇಸ್ ದಾಖಲಿಸಿದ್ದರು. ಇಂದು ಬೆಳಿಗ್ಗೆ ಚಿಕ್ಕನಹಳ್ಳಿ ಕೆರೆಯ ಬಳಿಯಲ್ಲಿ ಮಕ್ಕಳ ಸೈಕಲ್, ಚಪ್ಪಲಿ ಕಂಡು, ಕೆರೆಯಲ್ಲಿ ಹುಡುಕಾಡಿದಾಗ ಮೂವರು ಬಾಲಕರ ಮೃತದೇಹಗಳು ಪತ್ತೆಯಾಗಿವೆ.
ಘಟನಾ ಸ್ಥಳಕ್ಕೆ ಆಗಮಿಸಿದ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಶೋಧ ಕಾರ್ಯ ನಡೆಸಿದ್ದು, ಮೊದಲು ಕಾರ್ತಿಕ್ನ ಮೃತದೇಹ ಪತ್ತೆಯಾಗಿದೆ. ಇದೀಗ ಇನ್ನಿಬ್ಬರ ಮೃತದೇಹಗಳು ಕೂಡ ಪತ್ತೆಯಾಗಿವೆ. ಘಟನಾ ಸ್ಥಳದಲ್ಲಿ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.