ಬಸ್ ಭರ್ತಿ, ಚಲಿಸುತ್ತಿದ್ದ ಬಸ್ನಿಂದ ಬಿದ್ದು ಪ್ರಯಾಣಿಕ ಸಾವು | JANATA NEWS
ಮಂಡ್ಯ : ಬಸ್ ಫುಲ್ ರಶ್ ಇರುವ ಕಾರಣದಿಂದಾಗಿ ಚಲಿಸುತ್ತಿದ್ದ ಬಸ್ನಿಂದ ವ್ಯಕ್ತಿಯೋರ್ವ ಬಿದ್ದು ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಜಕ್ಕನಹಳ್ಳಿ ಕ್ರಾಸ್ ಬಳಿ ನಡೆದಿದೆ.
ಚಲುವೇಗೌಡ (75) ಮೃತ ವ್ಯಕ್ತಿ. ಇವರು ಹರಕನಕೆರೆ ಗ್ರಾಮದ ನಿವಾಸಿಯಾಗಿದ್ದರು. ಚಲುವೇಗೌಡ ಬಸ್ ರಶ್ ಇದ್ದ ಕಾರಣ ಬಾಗಿಲ ಬಳಿ ನಿಂತಿದ್ದರು. ರಸ್ತೆಯಲ್ಲಿನ ಗುಂಡಿಗೆ ಬಸ್ ಇಳಿಯುತ್ತಿದ್ದಂತೆ ಆಯ ತಪ್ಪಿ ಕೆಳಗೆ ಬಿದ್ದಿದ್ದಾರೆ. ಬಸ್ನಿಂದ ಬಿದ್ದ ರಭಸಕ್ಕೆ ವ್ಯಕ್ತಿಯ ತಲೆಗೆ ಪೆಟ್ಟು ಬಿದ್ದಿದೆ. ತೀವ್ರ ರಕ್ತ ಸ್ರಾವದಿಂದ ಚಲುವೇಗೌಡ ಸ್ಥಳದಲ್ಲೇ ಕೊನೆಯುಸಿರೆಳದಿದ್ದಾರೆ.
ಜಕ್ಕನಹಳ್ಳಿ ಕಡೆಯಿಂದ ಮಂಡ್ಯ ಕಡೆ KSRTC ಬಸ್ ಹೊರಟಿದ್ದಾಗ ಅವಘಡ ಸಂಭವಿಸಿದೆ. ಘಟನಾ ಸ್ಥಳಕ್ಕೆ ಮೇಲುಕೋಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.
ದುರ್ಘಟನೆ ನಡೆದಿರೋದಕ್ಕೆ ಬಸ್ನಲ್ಲಿ ಡೋರ್ ಇಲ್ಲದೇ ಕಾರಣ. KSRTC ನಿರ್ಲಕ್ಷ್ಯತೆಯಿಂದ ಪ್ರಾಣ ಹೋಗಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ