Fri,Dec12,2025
ಕನ್ನಡ / English

ಜು.5ರೊಳಗೆ ಎಲ್ಲ ಭರವಸೆ ಈಡೇರಿಸಬೇಕು, ಈಡೇರಿಸದಿದ್ದಲ್ಲಿ ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ | JANATA NEWS

22 Jun 2023

ದಾವಣಗೆರೆ : ಜು.5ರೊಳಗೆ ಎಲ್ಲ ಭರವಸೆ ಈಡೇರಿಸಬೇಕು, ಈಡೇರಿಸದಿದ್ದಲ್ಲಿ ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸುವುದಾಗಿ ಬಿ.ಎಸ್. ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ.

ದಾವಣಗೆರೆಯಲ್ಲಿ ಮಾತನಾಡಿದ ಅವರು, ಕೇಂದ್ರದವರು ಅಕ್ಕಿ ಕೊಡುವುದಾಗಿ ಹೇಳಿರಲಿಲ್ಲ. ಕೇಂದ್ರ ಸರ್ಕಾರ ನೀಡುತ್ತಿರುವ 5 ಕೆಜಿ ಜೊತೆಗೆ ರಾಜ್ಯ ಸರ್ಕಾರ 10 ಕೆಜಿ ಸೇರಿ ಪ್ರತಿಯೊಬ್ಬರಿಗೆ 15 ಕೆಜಿ ಅಕ್ಕಿ ಕೊಡಬೇಕು ಎಂದು ಒತ್ತಾಯಿಸಿ ಬಜೆಟ್ ಅಧಿವೇಶನ ಪ್ರಾರಂಭದಿಂದ ಮುಗಿಯುವರೆಗೂ ವಿಧಾನ ಸೌಧದ ಆವರಣದಲ್ಲಿರುವ ಗಾಂಧಿ ಪ್ರತಿಮೆ ಎದುರು ತಾವೇ ಧರಣಿ, ಸತ್ಯಾಗ್ರಹ ನಡೆಸುವುದಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದರು.

ಕಾಂಗ್ರೆಸ್ ತನ್ನ ಸುಳ್ಳು ಭರವಸೆಯಿಂದ ಇಷ್ಟು ಸೀಟು ಗೆದ್ದಿದೆ ಎಂದು ತಿಳಿಸಿದರು. ಭರವಸೆ ಈಡೇರಿಸಲು ಯೋಗ್ಯತೆ ಇರದಿದ್ದರೆ ಅಧಿಕಾರ ಬಿಟ್ಟು ತೊಲಗಬೇಕು ಎಂದು ಅವರು ಆಗ್ರಹಿಸಿದರು.

ರಾಜ್ಯ ಸರ್ಕಾರ ಗ್ಯಾರಂಟಿಗಳನ್ನು ಜಾರಿಗೆ ತರದಿದ್ದರೆ ಗಾಂಧಿ ಪ್ರತಿಮೆ ಬಳಿ ಧರಣಿ ನಡೆಸುತ್ತೇವೆ. ಇದರಲ್ಲಿ ಬಿಜೆಪಿ ರಾಜ್ಯ ನಾಯಕರು ಭಾಗವಹಿಸುತ್ತಾರೆ. ಅಧಿವೇಶನದಲ್ಲಿ ರಾಜ್ಯಪಾಲರ ಭಾಷಣದ ನಂತರ ಪ್ರತಿಭಟನೆ ನಡೆಸಲಾಗುವುದು. ರಾಜ್ಯ ಸರ್ಕಾರ ಕೊಟ್ಟ ಭರವಸೆ ಈಡೇರಿಸುವವರೆಗೂ ನಾವು ಪ್ರತಿಭಟನೆ ಕೈ ಬಿಡುವುದಿಲ್ಲ ಎಂದರು.

ರಾಜ್ಯಾದ್ಯಂತ 7 ತಂಡಗಳ ಪ್ರವಾಸ ಶುರುವಾಗಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಪ್ರವಾಸ ಮುಗಿಸಿ ಇಂದು ದಾವಣಗೆರೆ ಜಿಲ್ಲೆಗೆ ಬಂದಿದ್ದೇನೆ. ಕಾಂಗ್ರೆಸ್ ಸರ್ಕಾರ ಮನೆ‌ ಮನೆಗೆ ಹೋಗಿ 5 ಗ್ಯಾರಂಟಿ ಪತ್ರ ಕೊಟ್ಟು ಬಂದಿದ್ದಾರೆ.

ಕಾಂಗ್ರೆಸ್ ಪಕ್ಷವು 5 ಗ್ಯಾರಂಟಿ ಕೊಟ್ಟಿದ್ದು, ಮಹಿಳೆಯರಿಗೆ ಉಚಿತ ಬಸ್ ಎಂಬುದು ಜಾರಿಯಲ್ಲಿದೆ. ಅದಕ್ಕೂ ಕೆಲವು ಅಡ್ಡಿ ಆತಂಕಗಳಿವೆ. ಉಳಿದ 4 ಗ್ಯಾರಂಟಿಗಳನ್ನು ವಿಧಾನಮಂಡಲ ಅಧಿವೇಶನಕ್ಕೆ ಮೊದಲು ಕಾರ್ಯರೂಪಕ್ಕೆ ತರದೆ ಇದ್ದರೆ ಸದನದ ಒಳಗೆ ಮತ್ತು ಹೊರಗಡೆ ಸತ್ಯಾಗ್ರಹ ಮಾಡಲಿದ್ದೇವೆ ಎಂದು ಎಚ್ಚರಿಸಿದರು.

ಇಂದು ರಾತ್ರಿ 12 ಗಂಟೆಗೆ ಅಮೆರಿಕ ಸಂಸತ್ ಉದ್ದೇಶಿಸಿ ನಮ್ಮ ಪ್ರಧಾನಿ ಮೋದಿ ಭಾಷಣ ಮಾಡಲಿದ್ದಾರೆ. ನರೇಂದ್ರ ಮೋದಿ ಅಂತವರು ಪ್ರಧಾನಿಯಾಗಿ ಸಿಕ್ಕಿರುವುದು ನಮ್ಮ ಸೌಭಾಗ್ಯ ಎಂದರು.

ನರೇಂದ್ರ ಮೋದಿ ಅವರು ಪ್ರಧಾನಿಯಾದ ಮೇಲೆ ಭಾರತ ಜಗತ್ತಿನ 5 ನೇ ಅತಿ ದೊಡ್ಡ ಆರ್ಥಿಕ ಶಕ್ತಿಯ ದೇಶ ವಾಗಿದೆ. ಎಂಟು ವರ್ಷಗಳಲ್ಲಿ 530 ಬಿಲಿಯನ್ ಡಾಲರ್ ಬಂಡವಾಳವನ್ನು ಭಾರತದಲ್ಲಿ ಹೂಡಿಕೆ ಮಾಡಲಾ ಗಿದೆ. ಸ್ಟಾರ್ಟಪ್‌ನಲ್ಲಿ ವಿಶ್ವದ ಮೂರನೇ ರಾಷ್ಟ್ಟವಾಗಿದೆ. 2023ರಲ್ಲಿ ಅಮೆರಿಕಾ, ಚೀನಾಕ್ಕಿಂತಲೂ ಹೆಚ್ಚಿನ ಜಿಡಿಪಿ ಹೊಂದಿದೆ. ಈಗ ಭಾರತದ ಜಿಡಿಪಿ ಶೇ.9.1 ರಷ್ಟಿದೆ. ವಿವಿಧ ಯೋಜನೆಗಳ ಮೂಲಕ ಜನರ ಖಾತೆಗೆ ನೇರ ಹಣ ವರ್ಗಾವಣೆ ಆಗಿದೆ. ಆದರೂ, ಕರ್ನಾಟಕದ ಕಾಂಗ್ರೆಸ್‌ನವರು ಬಾಯಿ ಬಡುಕರಂತೆ ಮೋದಿಯವರ ಬಗ್ಗೆ ಮನ ಬಂದಂತೆ ಮಾತನಾಡುತ್ತಾರೆ ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

RELATED TOPICS:
English summary :All the promises should be fulfilled by June 5, if not fulfilled, protest near the Gandhi statue of Vidhansouda.

2023 ರಿಂದ ಸಿಎಂ ಸಿದ್ದರಾಮಯ್ಯ ವಿಮಾನ ಪ್ರಯಾಣಕ್ಕಾಗಿ ₹47.38 ಕೋಟಿ ಖರ್ಚು - ಆರ್‌ಟಿಐ ಬಹಿರಂಗ
2023 ರಿಂದ ಸಿಎಂ ಸಿದ್ದರಾಮಯ್ಯ ವಿಮಾನ ಪ್ರಯಾಣಕ್ಕಾಗಿ ₹47.38 ಕೋಟಿ ಖರ್ಚು - ಆರ್‌ಟಿಐ ಬಹಿರಂಗ
₹500 ಕೋಟಿ ಸೂಟ್‌ಕೇಸ್ ಕೊಟ್ಟವರು ಸಿಎಂ ಆಗಲು ಸಾಧ್ಯ - ಹೇಳಿಕೆ ಬೆನ್ನಲ್ಲೇ ಡಾ. ಕೌರ್ ಸಿಧು ಕಾಂಗ್ರೆಸ್ ಪಕ್ಷದಿಂದ ಅಮಾನತು
₹500 ಕೋಟಿ ಸೂಟ್‌ಕೇಸ್ ಕೊಟ್ಟವರು ಸಿಎಂ ಆಗಲು ಸಾಧ್ಯ - ಹೇಳಿಕೆ ಬೆನ್ನಲ್ಲೇ ಡಾ. ಕೌರ್ ಸಿಧು ಕಾಂಗ್ರೆಸ್ ಪಕ್ಷದಿಂದ ಅಮಾನತು
ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರಗೆ ದೆಹಲಿ ಪೊಲೀಸ ನೋಟಿಸ್ ಜಾರಿ
ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರಗೆ ದೆಹಲಿ ಪೊಲೀಸ ನೋಟಿಸ್ ಜಾರಿ
ಕಾರ್ತಿಗೈ ದೀಪ ಬೆಳಗಿಸುವ ಹೈಕೋರ್ಟ್‌ನ ಆದೇಶಗಳನ್ನು ಉದ್ದೇಶಪೂರ್ವಕವಾಗಿ ಉಲ್ಲಂಘಿಸಿದ ಡಿಎಂಕೆ ಸರ್ಕಾರ
ಕಾರ್ತಿಗೈ ದೀಪ ಬೆಳಗಿಸುವ ಹೈಕೋರ್ಟ್‌ನ ಆದೇಶಗಳನ್ನು ಉದ್ದೇಶಪೂರ್ವಕವಾಗಿ ಉಲ್ಲಂಘಿಸಿದ ಡಿಎಂಕೆ ಸರ್ಕಾರ
 ಎರಡು ದಿನಗಳ ಭಾರತ ಭೇಟಿಗಾಗಿ ಪುಟಿನ್ ಆಗಮನ : ವಿಮಾನ ನಿಲ್ದಾಣದಿಂದ ಪ್ರಧಾನಿ ಮೋದಿ ಕಾರಿನಲ್ಲಿ ಪ
ಎರಡು ದಿನಗಳ ಭಾರತ ಭೇಟಿಗಾಗಿ ಪುಟಿನ್ ಆಗಮನ : ವಿಮಾನ ನಿಲ್ದಾಣದಿಂದ ಪ್ರಧಾನಿ ಮೋದಿ ಕಾರಿನಲ್ಲಿ ಪ
ಗುಜರಾತ್ ಎಟಿಎಸ್ ಬೇಹುಗಾರಿಕೆ ಜಾಲವನ್ನು ಭೇದಿಸಿದೆ: 1 ಸೇನಾ ಸುಬೇದಾರ್, 1 ಮಹಿಳೆ ಬಂಧನ
ಗುಜರಾತ್ ಎಟಿಎಸ್ ಬೇಹುಗಾರಿಕೆ ಜಾಲವನ್ನು ಭೇದಿಸಿದೆ: 1 ಸೇನಾ ಸುಬೇದಾರ್, 1 ಮಹಿಳೆ ಬಂಧನ
 ಎಸ್ಐಆರ್, ಸಂಚಾರ ಸಾಥಿ -  ಸಂಸತ್ ಚಳಿಗಾಲದ ಅಧಿವೇಶನದ ಇಂದಿನ ಪ್ರಮುಖ ಚರ್ಚೆಗಳು
ಎಸ್ಐಆರ್, ಸಂಚಾರ ಸಾಥಿ - ಸಂಸತ್ ಚಳಿಗಾಲದ ಅಧಿವೇಶನದ ಇಂದಿನ ಪ್ರಮುಖ ಚರ್ಚೆಗಳು
ಭಾರತ ಜಾಗತಿಕ ಶಕ್ತಿಯಾಗಿ ಮುನ್ನಡೆ ಸಾಧಿಸುತ್ತಿದೆ: ಪ್ರಧಾನಿ ಮೋದಿ ನೀತಿ ದೃಷ್ಟಿಕೋನಕ್ಕೆ ಆಸ್ಟ್ರೇಲಿಯಾ ಮ
ಭಾರತ ಜಾಗತಿಕ ಶಕ್ತಿಯಾಗಿ ಮುನ್ನಡೆ ಸಾಧಿಸುತ್ತಿದೆ: ಪ್ರಧಾನಿ ಮೋದಿ ನೀತಿ ದೃಷ್ಟಿಕೋನಕ್ಕೆ ಆಸ್ಟ್ರೇಲಿಯಾ ಮ
ಬಹುಪತ್ನಿತ್ವದ ಮೇಲೆ ಸಂಪೂರ್ಣ ಕಾನೂನು ನಿಷೇಧವನ್ನು ಜಾರಿಗೆ ತಂದ ಮೊದಲ ಭಾರತೀಯ ರಾಜ್ಯ ಅಸ್ಸಾಂ
ಬಹುಪತ್ನಿತ್ವದ ಮೇಲೆ ಸಂಪೂರ್ಣ ಕಾನೂನು ನಿಷೇಧವನ್ನು ಜಾರಿಗೆ ತಂದ ಮೊದಲ ಭಾರತೀಯ ರಾಜ್ಯ ಅಸ್ಸಾಂ
ಕನಕನ ಕಿಂಡಿಗೆ ಚಿನ್ನದ ಕವಚ, 1 ಲಕ್ಷ ಭಕ್ತರಿಂದ ಸಾಮೂಹಿಕ ಭಗವದ್ಗೀತೆ ಪಠಣ : ಪ್ರಧಾನಿ ಮೋದಿ ಉಡುಪಿ ಭೇಟಿ
ಕನಕನ ಕಿಂಡಿಗೆ ಚಿನ್ನದ ಕವಚ, 1 ಲಕ್ಷ ಭಕ್ತರಿಂದ ಸಾಮೂಹಿಕ ಭಗವದ್ಗೀತೆ ಪಠಣ : ಪ್ರಧಾನಿ ಮೋದಿ ಉಡುಪಿ ಭೇಟಿ
ಪ್ರಧಾನಿ ಮೋದಿ ಅವರಿಂದ ಗೋವಾದಲ್ಲಿ ಶ್ರೀರಾಮ ನ 77 ಅಡಿ ಎತ್ತರದ  ಕಂಚಿನ ಪ್ರತಿಮೆ ಅನಾವರಣ : ವಿಶೇಷತೆಗಳು
ಪ್ರಧಾನಿ ಮೋದಿ ಅವರಿಂದ ಗೋವಾದಲ್ಲಿ ಶ್ರೀರಾಮ ನ 77 ಅಡಿ ಎತ್ತರದ ಕಂಚಿನ ಪ್ರತಿಮೆ ಅನಾವರಣ : ವಿಶೇಷತೆಗಳು
ಎಸ್ಐಆರ್ ಕೈಗೊಳ್ಳಲು ಭಾರತೀಯ ಚುನಾವಣಾ ಆಯೋಗ ಸಾಂವಿಧಾನಿಕ, ಶಾಸನಬದ್ಧ ಅಧಿಕಾರ ಹೊಂದಿದೆ - ಸರ್ವೋಚ್ಚ ನ್ಯಾಯಾಲಯ
ಎಸ್ಐಆರ್ ಕೈಗೊಳ್ಳಲು ಭಾರತೀಯ ಚುನಾವಣಾ ಆಯೋಗ ಸಾಂವಿಧಾನಿಕ, ಶಾಸನಬದ್ಧ ಅಧಿಕಾರ ಹೊಂದಿದೆ - ಸರ್ವೋಚ್ಚ ನ್ಯಾಯಾಲಯ

ನ್ಯೂಸ್ MORE NEWS...