Sun,Oct26,2025
ಕನ್ನಡ / English

ನಾವು ಸೋತ ಬಿಜೆಪಿ ಅಭ್ಯರ್ಥಿಗಳನ್ನು ಸೆಳೆಯುತ್ತಿಲ್ಲ. ಅಲ್ಲೇ ಬಿರುಕು, ಅಸಮಾಧಾನ ಸೃಷ್ಟಿ ಆಗುತ್ತಿದೆ! | JANATA NEWS

24 Jun 2023

ಹುಬ್ಬಳ್ಳಿ : ಬಿಜೆಪಿಯಲ್ಲಿ ಬಹಳಷ್ಟು ಅಸಮಾಧಾನ ಇದೆ. ಅದು ಯಾವಾಗ ಸ್ಫೋಟ ಆಗುತ್ತದೆ ಎಂಬುದು ಗೊತ್ತಿಲ್ಲ. ನಾವು ಸೋತ ಬಿಜೆಪಿ ಅಭ್ಯರ್ಥಿಗಳನ್ನು ಸೆಳೆಯುತ್ತಿಲ್ಲ. ಅಲ್ಲೇ ಬಿರುಕು, ಅಸಮಾಧಾನ ಸೃಷ್ಟಿ ಆಗುತ್ತಿದೆ ಎಂದು ನೂತನ ವಿಧಾನ ಪರಿಷತ್‌ ಸದಸ್ಯ ಜಗದೀಶ್‌ ಶೆಟ್ಟರ್‌ ಹೇಳಿದ್ದಾರೆ.

ರಂಟಿಗಳು ಬಡ ಜನತೆಗೆ ಅನುಕೂಲಕರವಾಗಿದ್ದು ಅವುಗಳನ್ನು ಸಹಿಸಿಕೊಳ್ಳುವ ಕೆಲಸ ಬಿಜೆಪಿ ಅವರಿಂದ ಆಗುತ್ತಿಲ್ಲ ಎಂದರು.

ಭಾರತೀಯ ಆಹಾರ ನಿಗಮದ (ಎಫ್ಸಿಐ) ಮೂಲಕ ಕರ್ನಾಟಕ ಅಕ್ಕಿ ಖರೀದಿಗೆ ನಿರಾಕರಿಸಿರುವ ಕೇಂದ್ರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಜಗದೀಶ್ ಶೆಟ್ಟರ್, ಇದು ಅಕ್ಷಮ್ಯ ಅಪರಾಧ' ಎಂದು ಆರೋಪಿಸಿದರು. ಅನ್ನಭಾಗ್ಯ ಯೋಜನೆಗೆ ಕೇಂದ್ರ ಸರ್ಕಾರ ಅಕ್ಕಿ ನೀಡದೆ ರಾಜಕೀಯ ಮಾಡುತ್ತಿರುವುದು ಸರಿಯಲ್ಲ. ಬಡವರ ಊಟದ ವಿಚಾರದಲ್ಲಿ ಯಾರೂ ಸಹ ಇಂತಹ ಕಾರ್ಯ ಮಾಡಬಾರದು ಎಂದರು.

ಬಡವರಿಗೆ 10 ಕೆಜಿ ಅಕ್ಕಿಯನ್ನು ನೀಡುತ್ತೇವೆ ಎಂದು ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಘೋಷಿಸಿದೆ ಬಿಜೆಪಿಯವರ ಹೇಳಿಕೆಯಂತೆ ಮೊದಲು ಕೇಂದ್ರದ ಅಪ್ಪಣೆ ಪಡೆದುಕೊಂಡು ನಾವು ಘೋಷಣೆ ಮಾಡಬೇಕಿತ್ತಾ? ಇದು ಒಕ್ಕೂಟ ವ್ಯವಸ್ಥೆಗೆ ಸರಿಯಾದ ಕ್ರಮವಲ್ಲ ಎಂದು ಶೆಟ್ಟರ ನುಡಿದರು.

ಮೊದಲಿಗೆ ಅಕ್ಕಿ ನೀಡುವುದಾಗಿ ಭರವಸೆ ನೀಡಿ ಈಗ ರಾಜಕೀಯ ಕಾರಣಕ್ಕೆ ಅದನ್ನು ನಿರಾಕರಿಸುತ್ತಿದ್ದಾರೆ. ಕೇಂದ್ರ ಸರ್ಕಾರ ಹೆಚ್ಚುವರಿ ಅಕ್ಕಿಯನ್ನು ರಾಜ್ಯಕ್ಕೆ ನೀಡಬೇಕು ಎಂದು ಒತ್ತಾಯಿಸಿದರು. ಈ ನಡುವೆ ಕೇಂದ್ರ ಸರ್ಕಾರ ರಾಜ್ಯಕ್ಕೆ ಅಕ್ಕಿ ನೀಡಲು ನಿರಾಕರಿಸಿರುವ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಕುರಿತು ಚರ್ಚೆ ನಡೆಸಲು ಸಭೆ ನಡೆಸುತ್ತಿದ್ದಾರೆ.

ಸಂವಿಧಾನ ಬದ್ಧ ಹಾಗೂ ಒಕ್ಕೂಟ ವ್ಯವಸ್ಥೆಯಡಿ ಕಾಂಗ್ರೆಸ್ ಪಕ್ಷ ಕೇಂದ್ರದಿಂದ ಅಕ್ಕಿಯನ್ನು ಕೇಳುತ್ತಿದೆ. ಅದನ್ನು ಉಚಿತವಾಗಿ ಏನು ಕೇಳುತ್ತಿಲ್ಲ. ಹಣ ನೀಡುತ್ತೇವೆ ಎಂದರೂ ಸಹ ಅಕ್ಕಿ ನೀಡದೆ ರಾಜಕೀಯ ಮಾಡುವುದು ಎಷ್ಟರ ಮಟ್ಟಿಗೆ ಸರಿ ಎಂದು ಪ್ರಶ್ನಿಸಿದರು.

ಕೇಂದ್ರ ಸರ್ಕಾರ ಕನಿಷ್ಠ ಬೆಂಬಲ ಬೆಲೆಯಡಿ ವಿವಿಧ ರಾಜ್ಯಗಳಿಂದ ಆಹಾರ ಧಾನ್ಯಗಳನ್ನು ಪಡೆದುಕೊಂಡು ಎಫ್‌ಸಿಐ ಅಡಿ ಸಂಗ್ರಹಿಸುತ್ತದೆ. ಆ ರೀತಿ ಸಂಗ್ರಹವಾದ ಅಕ್ಕಿಯನ್ನು ನಾವು ಕೇಳುತ್ತಿದ್ದೇವೆ ಇಲ್ಲವಾದರೆ ಕೇಂದ್ರ ಸರ್ಕಾರ ಧಾನ್ಯಗಳ ಸಂಗ್ರಹ ಅಧಿಕಾರವನ್ನು ಆಯಾ ರಾಜ್ಯಗಳಿಗೆ ನೀಡಿ ಬಿಡಲಿ ಎಂದರು

ಉತ್ತರ ಕರ್ನಾಟಕದ ಜ್ವಲಂತ ಸಮಸ್ಯೆಗಳ ಬಗ್ಗೆ ವಿಧಾನ ಪರಿಷತ್‌ನಲ್ಲಿ ಚರ್ಚೆ ಮಾಡುತ್ತೇನೆ. ಈ ಭಾಗದ ಅನೇಕ ಅಭಿವೃದ್ಧಿ ಕೆಲಸ ಕಾರ್ಯಗಳು ನೆನಗುದಿಗೆ ಬಿದ್ದಿವೆ, ಅವುಗಳನ್ನ ಆದಷ್ಟು ಬೇಗ ಪರಿಹಾರ ಮಾಡಲಿಕ್ಕೆ ಸಂಬಂಧಪಟ್ಟ ಸಚಿವರೊಂದಿಗೆ ಚರ್ಚೆ ಮಾಡುತ್ತೇನೆ. ರಾಜಕೀಯದಲ್ಲಿ ಬೇರೆ ಬೇರೆ ಅಧ್ಯಾಯಗಳಿರ್ತಾವೆ, ಇದು ನನ್ನ ಹೊಸ ಅಧ್ಯಾಯ, ಎರಡನೆಯ ಇನ್ನಿಂಗ್ಸ್ ಎಂದು ತಿಳಿಸಿದರು.

ಲೋಕಸಭಾ ಚುನಾವಣೆ ದೃಷ್ಟಿಯಿಂದ ಈಗಾಗಲೇ ನಮ್ಮ ಪಕ್ಷದ ವರಿಷ್ಠರ ಜತೆಗೆ ಚರ್ಚೆ ಮಾಡಿದ್ದೇನೆ. ಲೋಕಸಭಾ ಚುನಾವಣೆಯಲ್ಲಿ ಪಕ್ಷ ಯಾವುದೇ ಜವಾಬ್ದಾರಿ ಕೊಟ್ಟರು ನಾನು ಸಿದ್ದನಿದ್ದೇನೆ. ಎಲ್ಲಿಯೇ ಪ್ರವಾಸ ಮಾಡಿ ಅಂದ್ರು ನಾನು ನನ್ನ‌ ಸಮಯವನ್ನ ಕೊಡುತ್ತೇನೆ. ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸ್ಥಾನ ಗೆಲ್ಲಲು ನಾನೂ ಪ್ರಯತ್ನ ಮಾಡ್ತೇನಿ. ಈ ಚುನಾವಣೆಯಲ್ಲಿ ನಿಮ್ಮ‌ ಉಪಯೋಗ ತೆಗೆದುಕೊಳ್ಳುತ್ತೆವೆ ಎಂದು ನಮ್ಮ‌ ಪಕ್ಷ ಹೇಳಿದೆ ಎಂದರು.

RELATED TOPICS:
English summary :We are not attracting defeated BJP candidates. There is a rift, resentment is being created

ಭಾರತದ ಸಚಿವರ ಬಲವಾದ ಸಂದೇಶ: ನಮ್ಮ ತಲೆಯ ಮೇಲೆ ಬಂದೂಕು ಹಿಡಿದು ವ್ಯಾಪಾರ ಒಪ್ಪಂದ ಮಾಡಿಕೊಳ್ಳಲ್ಲ
ಭಾರತದ ಸಚಿವರ ಬಲವಾದ ಸಂದೇಶ: ನಮ್ಮ ತಲೆಯ ಮೇಲೆ ಬಂದೂಕು ಹಿಡಿದು ವ್ಯಾಪಾರ ಒಪ್ಪಂದ ಮಾಡಿಕೊಳ್ಳಲ್ಲ
ತಿಂಗಳೊಳಗೆ ಮತ್ತೊಂದು ಸ್ಲೀಪರ್ ಕೋಚ್ ಬಸ್ ಬೆಂಕಿ ದುರಂತ : ಬಾಗಿಲು ಜಾಮ್ ಕಾರಣ 25 ಸಾವು, ಹಲವರಿಗೆ ಗಾಯ
ತಿಂಗಳೊಳಗೆ ಮತ್ತೊಂದು ಸ್ಲೀಪರ್ ಕೋಚ್ ಬಸ್ ಬೆಂಕಿ ದುರಂತ : ಬಾಗಿಲು ಜಾಮ್ ಕಾರಣ 25 ಸಾವು, ಹಲವರಿಗೆ ಗಾಯ
ದೀಪಾವಳಿ ಹಬ್ಬದ ಸಂದರ್ಭದಲ್ಲಿ ಭಾರತದ ನಾಗರಿಕರಿಗೆ ಪ್ರಧಾನಿ ನರೇಂದ್ರ ಮೋದಿ ಪತ್ರ
ದೀಪಾವಳಿ ಹಬ್ಬದ ಸಂದರ್ಭದಲ್ಲಿ ಭಾರತದ ನಾಗರಿಕರಿಗೆ ಪ್ರಧಾನಿ ನರೇಂದ್ರ ಮೋದಿ ಪತ್ರ
ನಗರದ ರಸ್ತೆ ದುರಸ್ತಿಗೆ ಕಿರಣ್ ಮಜುಂದಾರ್ ಶಾ ಅವರೇ ಮಾಡಲಿ, ತುಂಬಾ ಸಂತೋಷ - ಡಿಸಿಎಂ ಶಿವಕುಮಾರ್
ನಗರದ ರಸ್ತೆ ದುರಸ್ತಿಗೆ ಕಿರಣ್ ಮಜುಂದಾರ್ ಶಾ ಅವರೇ ಮಾಡಲಿ, ತುಂಬಾ ಸಂತೋಷ - ಡಿಸಿಎಂ ಶಿವಕುಮಾರ್
ಇಸ್ಲಾಂ ಧರ್ಮದ ನಂಬಿಕೆಯಿಲ್ಲದವರನ್ನು ಗುರಿಯಾಗಿಸಿ ಎಲ್ಇಟಿಯೊಂದಿಗೆ ಸಂಚು ರೂಪಿಸಿದ್ದ ಕಾರ್ಮಿಕನ ಮೇಲೆ ಎನ್ಐಎ ಆರೋಪಪಟ್ಟಿ
ಇಸ್ಲಾಂ ಧರ್ಮದ ನಂಬಿಕೆಯಿಲ್ಲದವರನ್ನು ಗುರಿಯಾಗಿಸಿ ಎಲ್ಇಟಿಯೊಂದಿಗೆ ಸಂಚು ರೂಪಿಸಿದ್ದ ಕಾರ್ಮಿಕನ ಮೇಲೆ ಎನ್ಐಎ ಆರೋಪಪಟ್ಟಿ
ಸರ್ಕಾರಿ ಸ್ಥಳಗಳಲ್ಲಿ ನಮಾಜ್  ಗೆ ಅವಕಾಶ ಕೊಡದಂತೆ ಒತ್ತಾಯಿಸಿ ಶಾಸಕ ಯತ್ನಾಳ್ ಸಿಎಂ ಗೆ ಪತ್ರ
ಸರ್ಕಾರಿ ಸ್ಥಳಗಳಲ್ಲಿ ನಮಾಜ್ ಗೆ ಅವಕಾಶ ಕೊಡದಂತೆ ಒತ್ತಾಯಿಸಿ ಶಾಸಕ ಯತ್ನಾಳ್ ಸಿಎಂ ಗೆ ಪತ್ರ
33 ಸಾವಿರ ಕೋಟಿ ಬಿಲ್‌ ಬಾಕಿ ತೆರವು ಗೊಳಿಸಲು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಒತ್ತಾಯ
33 ಸಾವಿರ ಕೋಟಿ ಬಿಲ್‌ ಬಾಕಿ ತೆರವು ಗೊಳಿಸಲು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಒತ್ತಾಯ
ಪಂಜಾಬ್‌ ಡಿಐಜಿ ಬಂಧಿಸಿದ ಸಿಬಿಐ : ಹಿರಿಯ ಐಪಿಎಸ್ ಅಧಿಕಾರಿ ಮನೆಯಲ್ಲಿ ಕಂತೆ ಕಂತೆ ಹಣದ ಹೊಳೆ
ಪಂಜಾಬ್‌ ಡಿಐಜಿ ಬಂಧಿಸಿದ ಸಿಬಿಐ : ಹಿರಿಯ ಐಪಿಎಸ್ ಅಧಿಕಾರಿ ಮನೆಯಲ್ಲಿ ಕಂತೆ ಕಂತೆ ಹಣದ ಹೊಳೆ
ಕನ್ನಡ ಬಿಗ್ ಬಾಸ್ ಮನೆಗೆ ಬೀಗ : ರಾಜ್ಯ ಸರ್ಕಾರ ಸ್ಯಾಂಡಲ್ ವುಡ್ ನಟ್ಟು-ಬೋಲ್ಟ್ ಟೈಟ್ ಮಾಡುತ್ತಿದೆ ಎಂದು ಪ್ರತಿಪಕ್ಷದ ವಾಗ್ದಾಳಿ
ಕನ್ನಡ ಬಿಗ್ ಬಾಸ್ ಮನೆಗೆ ಬೀಗ : ರಾಜ್ಯ ಸರ್ಕಾರ ಸ್ಯಾಂಡಲ್ ವುಡ್ ನಟ್ಟು-ಬೋಲ್ಟ್ ಟೈಟ್ ಮಾಡುತ್ತಿದೆ ಎಂದು ಪ್ರತಿಪಕ್ಷದ ವಾಗ್ದಾಳಿ
ವಿಷ್ಣು ವಿಗ್ರಹ ಪ್ರಕರಣದಲ್ಲಿ ಸಿಜೆಐ ವಿವಾದಾತ್ಮಕ ಹೇಳಿಕೆ : ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆದ ವಕೀಲ
ವಿಷ್ಣು ವಿಗ್ರಹ ಪ್ರಕರಣದಲ್ಲಿ ಸಿಜೆಐ ವಿವಾದಾತ್ಮಕ ಹೇಳಿಕೆ : ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆದ ವಕೀಲ
ಅಧಿಕಾರ ಹಂಚಿಕೆ ಹಗ್ಗಜಗ್ಗಾಟ : ಸಿದ್ದರಾಮಯ್ಯ ಬಳಿಕ ಈಗ ಶಿವಕುಮಾರ್ ಹೇಳಿಕೆ ಬಿಡುಗಡೆ
ಅಧಿಕಾರ ಹಂಚಿಕೆ ಹಗ್ಗಜಗ್ಗಾಟ : ಸಿದ್ದರಾಮಯ್ಯ ಬಳಿಕ ಈಗ ಶಿವಕುಮಾರ್ ಹೇಳಿಕೆ ಬಿಡುಗಡೆ
ಅಮೆರಿಕ ಒತ್ತಡಕ್ಕೆ ಮಣಿದು 2008 ರ ಮುಂಬೈ ಭಯೋತ್ಪಾದಕ ದಾಳಿಗೆ ಪ್ರತೀಕಾರ ಕೈಗೊಳ್ಳದ ಯುಪಿಎ ಸರ್ಕಾರ - ಚಿದಂಬರಂ
ಅಮೆರಿಕ ಒತ್ತಡಕ್ಕೆ ಮಣಿದು 2008 ರ ಮುಂಬೈ ಭಯೋತ್ಪಾದಕ ದಾಳಿಗೆ ಪ್ರತೀಕಾರ ಕೈಗೊಳ್ಳದ ಯುಪಿಎ ಸರ್ಕಾರ - ಚಿದಂಬರಂ

ನ್ಯೂಸ್ MORE NEWS...