Thu,Sep11,2025
ಕನ್ನಡ / English

ಪಕ್ಷದ ಸೋಲಿಗೆ ಕಾರಣರಾದ ನಳಿನ್ ಕುಮಾರ್ ಕಟೀಲ್ ಗೆ ಅಧ್ಯಕ್ಷ ಸ್ಥಾನದಲ್ಲಿ ಮುಂದುವರಿಯುವ ನೈತಿಕ ಹಕ್ಕಿಲ್ಲ | JANATA NEWS

28 Jun 2023

ದಾವಣಗೆರೆ : ಮಾಜಿ ಶಾಸಕ ಎಂಪಿ ರೇಣುಕಾಚಾರ್ಯ ಅವರು ತಮ್ಮ ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಕಟೀಲ್ ನಾಯಕತ್ವದಲ್ಲೇ ಬಿಜೆಪಿ ಗೆ ರಾಜ್ಯದಲ್ಲಿ ಹೀನಾಯ ಸೋಲಾಗಿದ್ದರಿಂದ ಅಧ್ಯಕ್ಷ ಸ್ಥಾನ ಮುಂದುವರಿಯಲು ಅವರಿಗೆ ನೈತಿಕ ಹಕ್ಕಿಲ್ಲ, ಕೂಡಲೇ ರಾಜಿನಾಮೆ ಸಲ್ಲಿಸಬೇಕು ಎಂದು ರೇಣುಕಾಚಾರ್ಯ ಹೇಳಿದರು.

ರಾಜ್ಯಾಧ್ಯಕ್ಷ ಸ್ಥಾನ ಹಾಗು ವಿಪಕ್ಷ ನಾಯಕ ಆಯ್ಕೆ ಬಗ್ಗೆ ಚರ್ಚೆಯಾಗುತ್ತಿದ್ದು, ಈ ವಿಚಾರವಾಗಿ ಯಾವುದೇ ಪಕ್ಷದ ಘನತೆಗೆ ಧಕ್ಕೆ ತರುವಂಥ ಹೇಳಿಕೆಗಳನ್ನು ನೀಡಬಾರದು ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್​ ಖಡಕ್ ಸೂಚನೆ ಕೊಟ್ಟಿದ್ದಾರೆ.

ಆದರೂ ಇಂದು ಮಾತನಾಡಿದ ರೇಣುಕಾಚಾರ್ಯ, ನಳಿನ್ ಕುಮಾರ್ ಕಟೀಲ್ ಅಧ್ಯಕ್ಷತೆಯಲ್ಲಿ ಬಿಜೆಪಿ ಹೀ‌ನಾಯವಾಗಿ ಸೋಲು ಕಂಡಿದೆ. ಇದರಿಂದ ಅವರು ನೈತಿಕ ಹೊಣೆಹೊತ್ತು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಲಿ ಎಂದು ಬಹಿರಂಗಿಯೇ ಆಗ್ರಹಿಸಿದರು.

ಬಿಎಸ್​ವೈ ವಿರುದ್ಧ ಮಾತನಾಡಿದವರ ವಿರುದ್ಧ ಕ್ರಮ ಕೈಗೊಂಡಿದ್ದೀರಾ? ಎಂದು ಪ್ರಶ್ನಿಸಿದ ರೇಣುಕಾಚಾರ್ಯ, ಯಡಿಯೂರಪ್ಪ ವಿರುದ್ಧ ಮಾತಾಡಿದರೆ ಪಕ್ಷ ವಿರೋಧಿ ಅಲ್ಲವಾ? ಚುನಾವಣೆ ಪೂರ್ವದಲ್ಲಿ ಹತ್ತಾರು ಸಲ ಹೇಳಿದೆ. ಆದ್ರೆ ಕ್ರಮ‌ಕೈಗೊಳ್ಳಲಿಲ್ಲ. ಈ ಎಲ್ಲ ಕಾರಣಕ್ಕೆ ಬಿಜೆಪಿ ಹೀನಾಯ ಸೋಲು ಕಂಡಿದೆ ಎಂದು ನಳಿನ್ ಕುಮಾರ್ ಕಟೀಲ್ ವಿರುದ್ಧ ವಾಗ್ದಾಳಿ ನಡೆಸಿದರು.

ಬಿಎಸ್ ಯಡಿಯೂರಪ್ಪ ವಿರುದ್ಧ ಇಲ್ಲಸಲ್ಲದ ಆಪಾದನೆಗಳನ್ನು ಮಾಡಿದ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಶಿಸ್ತಿನ ಕ್ರಮ ಜರುಗಿಸುವುದು ಕಟೀಲ್ ಗೆ ಆಗಲಿಲ್ಲ ಎಂದು ಹೇಳಿದ ಮಾಜಿ ಶಾಸಕ, ಯಡಿಯೂರಪ್ಪರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸುವುದು ಬೇಡವೆಂದರೂ ಕಟೀಲ್ ಮತ್ತು ಇತರ ನಾಯಕರು ಕಿವಿಗೆ ಹಾಕಿಕೊಳ್ಳಲಿಲ್ಲ ಎಂದರು.

ರಾಜ್ಯದಲ್ಲಿ ಪಕ್ಷವನ್ನು ಕಟ್ಟಿ ಬೆಳೆಸಿದ ಯಡಿಯೂರಪ್ಪ, ಕೆಎಸ್ ಈಶ್ವರಪ್ಪ, ದಿವಂಗತ ಅನಂತ ಕುಮಾರ್ ಮತ್ತು ಜಗದೀಶ್ ಶೆಟ್ಟರ್ ಅವರನ್ನು ಕಡೆಗಣಿಸಲಾಯಿತು ಎಂದು ರೇಣುಕಾಚಾರ್ಯ ಹೇಳಿದರು.

ಯಡಿಯೂರಪ್ಪ ಅವರನ್ನ ಸಿಎಂ ಸ್ಥಾನದಿಂದ ಕೆಳಗಿಳಿಸಿ ಬಸವರಾಜ ಬೊಮ್ಮಾಯಿ ಅವರನ್ನ ಸಿಎಂ ಮಾಡಿದ್ರಿ. ಆದ್ರೆ ಅವರ ಕೈ ಕಟ್ಟಿ ಹಾಕಿದ್ರಿ. ಅವರಿಗೆ ಸ್ವತಂತ್ರವಾಗಿ ಕೆಲಸ ಮಾಡಲು ಬಿಡಲಿಲ್ಲ ವಿಧಾನಸಭೆ ಚುನಾವಣೆ ಸೋಲಿನ ಬಗ್ಗೆ ಆತ್ಮಾವಲೋಕನ ಅಗತ್ಯವಿದೆ. ಮೊದಲು ನಳಿನ್ ಕುಮಾರ್ ಕಟೀಲು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಮತ್ತೊಮ್ಮೆ ಒತ್ತಾಯಿಸಿದರು.

RELATED TOPICS:
English summary :Nalin Kumar Kateel, who caused the party defeat, has no moral right to continue as president

ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಅಕ್ರಮ ಆನ್‌ಲೈನ್ ಬೆಟ್ಟಿಂಗ್‌ನಲ್ಲಿ ವಂಚಿಸಿದ ಪ್ರಕರಣ : ಇಡಿ ದಾಳಿಯಲ್ಲಿ ರೂ.100 ಕೋಟಿ ಚಿನ್ನ ಬೆಳ್ಳಿ ವಶ
ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಅಕ್ರಮ ಆನ್‌ಲೈನ್ ಬೆಟ್ಟಿಂಗ್‌ನಲ್ಲಿ ವಂಚಿಸಿದ ಪ್ರಕರಣ : ಇಡಿ ದಾಳಿಯಲ್ಲಿ ರೂ.100 ಕೋಟಿ ಚಿನ್ನ ಬೆಳ್ಳಿ ವಶ
ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಗೆಲವು
ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಗೆಲವು
ನೇಪಾಳದಲ್ಲಿ ಕಮ್ಯುನಿಸ್ಟ್ ಪಕ್ಷದ ಸರ್ಕಾರದ ಪತನದ ಬಳಿಕವೂ ಸಂಸತ್ತು, ಸುಪ್ರೀಂ ಕೋರ್ಟ್ ಮೇಲೆ ದಾಳಿ ನಡೆಸಿದ ಪ್ರತಿಭಟನಾಕಾರರು :
ನೇಪಾಳದಲ್ಲಿ ಕಮ್ಯುನಿಸ್ಟ್ ಪಕ್ಷದ ಸರ್ಕಾರದ ಪತನದ ಬಳಿಕವೂ ಸಂಸತ್ತು, ಸುಪ್ರೀಂ ಕೋರ್ಟ್ ಮೇಲೆ ದಾಳಿ ನಡೆಸಿದ ಪ್ರತಿಭಟನಾಕಾರರು :
ನಿಮ್ಮ ನಡವಳಿಕೆಯು ಕಾಂಗ್ರೆಸ್ ಪಕ್ಷದ ಸಾಂಪ್ರದಾಯಿಕ ದುರಹಂಕಾರ ಮತ್ತು ಅಹಂಕಾರಕ್ಕೆ ಸಾಕ್ಷಿಯಾಗಿದೆ - ಖರ್ಗೆ ರನ್ನು ತರಾಟೆಗೆ ತೆಗೆದುಕೊಂಡ ಎಚ್‌ಡಿಕೆ
ನಿಮ್ಮ ನಡವಳಿಕೆಯು ಕಾಂಗ್ರೆಸ್ ಪಕ್ಷದ ಸಾಂಪ್ರದಾಯಿಕ ದುರಹಂಕಾರ ಮತ್ತು ಅಹಂಕಾರಕ್ಕೆ ಸಾಕ್ಷಿಯಾಗಿದೆ - ಖರ್ಗೆ ರನ್ನು ತರಾಟೆಗೆ ತೆಗೆದುಕೊಂಡ ಎಚ್‌ಡಿಕೆ
ಶ್ರೀ ನಾರಾಯಣ ಗುರುಗಳ ಜನ್ಮ ದಿನಾಚರಣೆಯಂದು  ಅವರ ದೃಷ್ಟಿಕೋನ, ಪ್ರಭಾವ ಸ್ಮರಿಸಿದ ಪ್ರಧಾನಿ ಮೋದಿ
ಶ್ರೀ ನಾರಾಯಣ ಗುರುಗಳ ಜನ್ಮ ದಿನಾಚರಣೆಯಂದು ಅವರ ದೃಷ್ಟಿಕೋನ, ಪ್ರಭಾವ ಸ್ಮರಿಸಿದ ಪ್ರಧಾನಿ ಮೋದಿ
ಭಾರತ-ಅಮೆರಿಕ ನಡುವೆ ಜಾಗತಿಕ ಕಾರ್ಯತಂತ್ರದ ಸಹಭಾಗಿತ್ವ ಬಹಳ ಸಕಾರಾತ್ಮಕವಾಗಿದೆ - ಪ್ರಧಾನಿ ಮೋದಿ
ಭಾರತ-ಅಮೆರಿಕ ನಡುವೆ ಜಾಗತಿಕ ಕಾರ್ಯತಂತ್ರದ ಸಹಭಾಗಿತ್ವ ಬಹಳ ಸಕಾರಾತ್ಮಕವಾಗಿದೆ - ಪ್ರಧಾನಿ ಮೋದಿ
ಭಾರತೀಯ ಪೌರತ್ವ ಪಡೆಯುವ ಮೂರು ವರ್ಷಗಳ ಮೊದಲೇ ಮತ ಚಲಾವಣೆ : ಸೋನಿಯಾ ಗಾಂಧಿ ವಿರುದ್ಧ ಕ್ರಿಮಿನಲ್ ದೂರು
ಭಾರತೀಯ ಪೌರತ್ವ ಪಡೆಯುವ ಮೂರು ವರ್ಷಗಳ ಮೊದಲೇ ಮತ ಚಲಾವಣೆ : ಸೋನಿಯಾ ಗಾಂಧಿ ವಿರುದ್ಧ ಕ್ರಿಮಿನಲ್ ದೂರು
11
11
ಭಾರತವನ್ನು ಹೆಸರಿಸುವಾಗ ಹೆಚ್ಚು ಗೌರವಯುತ ವಿಧಾನ ಬಳಸಲು ಅಮೆರಿಕಕ್ಕೆ ನಿರ್ದೇಶಿಸಿದ ಫಿನ್ಲ್ಯಾಂಡ್ ಅಧ್ಯಕ್ಷ
ಭಾರತವನ್ನು ಹೆಸರಿಸುವಾಗ ಹೆಚ್ಚು ಗೌರವಯುತ ವಿಧಾನ ಬಳಸಲು ಅಮೆರಿಕಕ್ಕೆ ನಿರ್ದೇಶಿಸಿದ ಫಿನ್ಲ್ಯಾಂಡ್ ಅಧ್ಯಕ್ಷ
2 ಮತದಾರರ ಗುರುತಿನ ಚೀಟಿಹೊಂದಿದಕ್ಕಾಗಿ ಕಾಂಗ್ರೆಸ್ ವಕ್ತಾರ ಪವನ್ ಖೇರಾಗೆ ಚುನಾವಣಾ ಕಚೇರಿಯ ನೋಟಿಸ್
2 ಮತದಾರರ ಗುರುತಿನ ಚೀಟಿಹೊಂದಿದಕ್ಕಾಗಿ ಕಾಂಗ್ರೆಸ್ ವಕ್ತಾರ ಪವನ್ ಖೇರಾಗೆ ಚುನಾವಣಾ ಕಚೇರಿಯ ನೋಟಿಸ್
ರಾಜಕೀಯಕ್ಕೂ ಯಾವುದೇ ಸಂಬಂಧವಿಲ್ಲದ ನನ್ನ ತಾಯಿ ವಿರುದ್ಧ ಅನುಚಿತ ಭಾಷೆಯನ್ನು ಏಕೆ ಬಳಸಿದ್ದಾರೆ? - ಪ್ರಧಾನಿ ಮೋದಿ
ರಾಜಕೀಯಕ್ಕೂ ಯಾವುದೇ ಸಂಬಂಧವಿಲ್ಲದ ನನ್ನ ತಾಯಿ ವಿರುದ್ಧ ಅನುಚಿತ ಭಾಷೆಯನ್ನು ಏಕೆ ಬಳಸಿದ್ದಾರೆ? - ಪ್ರಧಾನಿ ಮೋದಿ
ಸೆಮಿಕಾನ್ ಇಂಡಿಯಾ 2025 : ವಿಕ್ರಮ್ 32-ಬಿಟ್ ಪ್ರೊಸೆಸರ್  ಸೆಮಿಕಂಡಕ್ಟರ್ ಚಿಪ್ ಬಿಡುಗಡೆ ಮಾಡಿದ ಪ್ರಧಾನಿ ಮೋದಿ
ಸೆಮಿಕಾನ್ ಇಂಡಿಯಾ 2025 : ವಿಕ್ರಮ್ 32-ಬಿಟ್ ಪ್ರೊಸೆಸರ್ ಸೆಮಿಕಂಡಕ್ಟರ್ ಚಿಪ್ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

ನ್ಯೂಸ್ MORE NEWS...