Sat,Dec13,2025
ಕನ್ನಡ / English

ಪ್ರೀತಿಸಿದ ಮಗಳ ಕತ್ತು ಹಿಸುಕಿದ ತಂದೆ, ಪ್ರೇಯಸಿ ಸಾವಿನ ಸುದ್ದಿ ಕೇಳಿ ರೈಲಿಗೆ ತಲೆ ಕೊಟ್ಟ ಪ್ರಿಯಕರ | JANATA NEWS

28 Jun 2023

ಕೋಲಾರ : ಅನ್ಯ ಜಾತಿಯ ಯುವಕನನ್ನು ಪ್ರೀತಿಸಿದ್ದಕ್ಕೆ ತಂದೆಯೇ ಮಗಳನ್ನು ಅಮಾನುಷವಾಗಿ ಹತ್ಯೆ ಮಾಡಿರುವ ಘಟನೆ ಬಂಗಾರಪೇಟೆ ತಾಲೂಕಿನ ಬೋಡಗುರ್ಕಿ ಗ್ರಾಮದಲ್ಲಿ ನಡೆದಿದೆ.

ಈ ಘಟನೆಯಿಂದ ನೊಂದ ಮೃತಳ ಪ್ರಿಯಕರ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತರನ್ನು ಜಿಲ್ಲೆಯ ಬಂಗಾರಪೇಟೆ ತಾಲ್ಲೂಕಿನ ಕಾಮಸಮುದ್ರ ಹೋಬಳಿಯ ಬೋಡಗುರ್ಕಿ ಗ್ರಾಮದ ಕೀರ್ತಿ(20), ಹಾಗೂ ಆತ್ಮಹತ್ಯೆ ಮಾಡಿಕೊಂಡವನನ್ನು ಗಂಗಾಧರ್​(24) ಎಂದು ಗುರುತಿಸಲಾಗಿದೆ.

ಮೃತ ಗಂಗಾಧರ್​ ಹಾಗೂ ಕೀರ್ತಿ ಕಳೆದ ಒಂದು ವರ್ಷದಿಂದ ಪರಸ್ಪರ ಪ್ರೀತಿಸುತ್ತಿದ್ದರು. ಪಿಯುಸಿಯಲ್ಲೇ ಅನುತ್ತೀರ್ಣನಾಗಿದ್ದ ಮೃತ ಪ್ರಿಯಕರ ಗಂಗಾಧರ್​ ಗಾರೆ ಕೆಲಸ ಮಾಡುತ್ತಿದ್ದ. ಇಬ್ಬರ ಮನೆ ಕೂಡ ಒಂದೇ ಕಡೆಯಿದ್ದು, ಪ್ರೀತಿಸಲು ಶುರು ಮಾಡಿದ್ದು, ಮುಂದೆ ಮದುವೆಯಾಗಲೂ ನಿರ್ಧಾರ ಮಾಡಿದ್ದರು. ಈ ಸಂಬಂಧ ಗಂಗಾಧರ್​ ತಮ್ಮ ಪ್ರೀತಿಯ ವಿಚಾರವನ್ನು ಕೀರ್ತಿಯ ತಂದೆ ಕೃಷ್ಣಮೂರ್ತಿ ಬಳಿ ಹೇಳಿದ್ದಾನೆ. ಅಲ್ಲದೆ ಮದುವೆ ಮಾಡಿಕೊಡುವಂತೆಯೂ ಕೇಳಿಕೊಂಡಿದ್ದಾನೆ.

ಪೋಷಕರು ಗಂಗಾಧರ್​ನನ್ನು ಮರೆತುಬಿಡುವಂತೆ ಕೀರ್ತಿಗೆ ಹಲವು ಬಾರಿ ಬುದ್ಧಿವಾದ ಹೇಳಿದ್ದಾರೆ. ಆದರೂ ಇಬ್ಬರೂ ಪ್ರೀತಿಸುತ್ತಿದ್ದರು. ಈ ಸಂಬಂಧ ಮತ್ತೆ ಕೀರ್ತಿ ಮತ್ತು ತಂದೆ ಕೃಷ್ಣಮೂರ್ತಿ ನಡುವೆ ಮಾತುಕತೆ ನಡೆದಿದೆ. ಈ ವೇಳೆ ಕೋಪಗೊಂಡ ಕೃಷ್ಣಮೂರ್ತಿ ಮಗಳನ್ನು ಕತ್ತು ಹಿಸುಕಿ ಸಾಯಿಸಿದ್ದಾರೆ.

ತನ್ನ ಪ್ರೇಯಸಿ ಕೊಲೆಯಾಗಿರುವುದು ಗೊತ್ತಾಗುತ್ತಿದ್ದಂತೆ ಮನನೊಂದ ಗಂಗಾಧರ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಘಟನೆ ಸಂಬಂಧ ಕಾಮಸಮುದ್ರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಗಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿರುವ ಕೃಷ್ಣಮೂರ್ತಿಯನ್ನು ಬಂಧಿಸಿದ್ದಾರೆ.

RELATED TOPICS:
English summary :In Kolar, Man kills daughter over affair, lover ends life by jumping in front of train

2023 ರಿಂದ ಸಿಎಂ ಸಿದ್ದರಾಮಯ್ಯ ವಿಮಾನ ಪ್ರಯಾಣಕ್ಕಾಗಿ ₹47.38 ಕೋಟಿ ಖರ್ಚು - ಆರ್‌ಟಿಐ ಬಹಿರಂಗ
2023 ರಿಂದ ಸಿಎಂ ಸಿದ್ದರಾಮಯ್ಯ ವಿಮಾನ ಪ್ರಯಾಣಕ್ಕಾಗಿ ₹47.38 ಕೋಟಿ ಖರ್ಚು - ಆರ್‌ಟಿಐ ಬಹಿರಂಗ
₹500 ಕೋಟಿ ಸೂಟ್‌ಕೇಸ್ ಕೊಟ್ಟವರು ಸಿಎಂ ಆಗಲು ಸಾಧ್ಯ - ಹೇಳಿಕೆ ಬೆನ್ನಲ್ಲೇ ಡಾ. ಕೌರ್ ಸಿಧು ಕಾಂಗ್ರೆಸ್ ಪಕ್ಷದಿಂದ ಅಮಾನತು
₹500 ಕೋಟಿ ಸೂಟ್‌ಕೇಸ್ ಕೊಟ್ಟವರು ಸಿಎಂ ಆಗಲು ಸಾಧ್ಯ - ಹೇಳಿಕೆ ಬೆನ್ನಲ್ಲೇ ಡಾ. ಕೌರ್ ಸಿಧು ಕಾಂಗ್ರೆಸ್ ಪಕ್ಷದಿಂದ ಅಮಾನತು
ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರಗೆ ದೆಹಲಿ ಪೊಲೀಸ ನೋಟಿಸ್ ಜಾರಿ
ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರಗೆ ದೆಹಲಿ ಪೊಲೀಸ ನೋಟಿಸ್ ಜಾರಿ
ಕಾರ್ತಿಗೈ ದೀಪ ಬೆಳಗಿಸುವ ಹೈಕೋರ್ಟ್‌ನ ಆದೇಶಗಳನ್ನು ಉದ್ದೇಶಪೂರ್ವಕವಾಗಿ ಉಲ್ಲಂಘಿಸಿದ ಡಿಎಂಕೆ ಸರ್ಕಾರ
ಕಾರ್ತಿಗೈ ದೀಪ ಬೆಳಗಿಸುವ ಹೈಕೋರ್ಟ್‌ನ ಆದೇಶಗಳನ್ನು ಉದ್ದೇಶಪೂರ್ವಕವಾಗಿ ಉಲ್ಲಂಘಿಸಿದ ಡಿಎಂಕೆ ಸರ್ಕಾರ
 ಎರಡು ದಿನಗಳ ಭಾರತ ಭೇಟಿಗಾಗಿ ಪುಟಿನ್ ಆಗಮನ : ವಿಮಾನ ನಿಲ್ದಾಣದಿಂದ ಪ್ರಧಾನಿ ಮೋದಿ ಕಾರಿನಲ್ಲಿ ಪ
ಎರಡು ದಿನಗಳ ಭಾರತ ಭೇಟಿಗಾಗಿ ಪುಟಿನ್ ಆಗಮನ : ವಿಮಾನ ನಿಲ್ದಾಣದಿಂದ ಪ್ರಧಾನಿ ಮೋದಿ ಕಾರಿನಲ್ಲಿ ಪ
ಗುಜರಾತ್ ಎಟಿಎಸ್ ಬೇಹುಗಾರಿಕೆ ಜಾಲವನ್ನು ಭೇದಿಸಿದೆ: 1 ಸೇನಾ ಸುಬೇದಾರ್, 1 ಮಹಿಳೆ ಬಂಧನ
ಗುಜರಾತ್ ಎಟಿಎಸ್ ಬೇಹುಗಾರಿಕೆ ಜಾಲವನ್ನು ಭೇದಿಸಿದೆ: 1 ಸೇನಾ ಸುಬೇದಾರ್, 1 ಮಹಿಳೆ ಬಂಧನ
 ಎಸ್ಐಆರ್, ಸಂಚಾರ ಸಾಥಿ -  ಸಂಸತ್ ಚಳಿಗಾಲದ ಅಧಿವೇಶನದ ಇಂದಿನ ಪ್ರಮುಖ ಚರ್ಚೆಗಳು
ಎಸ್ಐಆರ್, ಸಂಚಾರ ಸಾಥಿ - ಸಂಸತ್ ಚಳಿಗಾಲದ ಅಧಿವೇಶನದ ಇಂದಿನ ಪ್ರಮುಖ ಚರ್ಚೆಗಳು
ಭಾರತ ಜಾಗತಿಕ ಶಕ್ತಿಯಾಗಿ ಮುನ್ನಡೆ ಸಾಧಿಸುತ್ತಿದೆ: ಪ್ರಧಾನಿ ಮೋದಿ ನೀತಿ ದೃಷ್ಟಿಕೋನಕ್ಕೆ ಆಸ್ಟ್ರೇಲಿಯಾ ಮ
ಭಾರತ ಜಾಗತಿಕ ಶಕ್ತಿಯಾಗಿ ಮುನ್ನಡೆ ಸಾಧಿಸುತ್ತಿದೆ: ಪ್ರಧಾನಿ ಮೋದಿ ನೀತಿ ದೃಷ್ಟಿಕೋನಕ್ಕೆ ಆಸ್ಟ್ರೇಲಿಯಾ ಮ
ಬಹುಪತ್ನಿತ್ವದ ಮೇಲೆ ಸಂಪೂರ್ಣ ಕಾನೂನು ನಿಷೇಧವನ್ನು ಜಾರಿಗೆ ತಂದ ಮೊದಲ ಭಾರತೀಯ ರಾಜ್ಯ ಅಸ್ಸಾಂ
ಬಹುಪತ್ನಿತ್ವದ ಮೇಲೆ ಸಂಪೂರ್ಣ ಕಾನೂನು ನಿಷೇಧವನ್ನು ಜಾರಿಗೆ ತಂದ ಮೊದಲ ಭಾರತೀಯ ರಾಜ್ಯ ಅಸ್ಸಾಂ
ಕನಕನ ಕಿಂಡಿಗೆ ಚಿನ್ನದ ಕವಚ, 1 ಲಕ್ಷ ಭಕ್ತರಿಂದ ಸಾಮೂಹಿಕ ಭಗವದ್ಗೀತೆ ಪಠಣ : ಪ್ರಧಾನಿ ಮೋದಿ ಉಡುಪಿ ಭೇಟಿ
ಕನಕನ ಕಿಂಡಿಗೆ ಚಿನ್ನದ ಕವಚ, 1 ಲಕ್ಷ ಭಕ್ತರಿಂದ ಸಾಮೂಹಿಕ ಭಗವದ್ಗೀತೆ ಪಠಣ : ಪ್ರಧಾನಿ ಮೋದಿ ಉಡುಪಿ ಭೇಟಿ
ಪ್ರಧಾನಿ ಮೋದಿ ಅವರಿಂದ ಗೋವಾದಲ್ಲಿ ಶ್ರೀರಾಮ ನ 77 ಅಡಿ ಎತ್ತರದ  ಕಂಚಿನ ಪ್ರತಿಮೆ ಅನಾವರಣ : ವಿಶೇಷತೆಗಳು
ಪ್ರಧಾನಿ ಮೋದಿ ಅವರಿಂದ ಗೋವಾದಲ್ಲಿ ಶ್ರೀರಾಮ ನ 77 ಅಡಿ ಎತ್ತರದ ಕಂಚಿನ ಪ್ರತಿಮೆ ಅನಾವರಣ : ವಿಶೇಷತೆಗಳು
ಎಸ್ಐಆರ್ ಕೈಗೊಳ್ಳಲು ಭಾರತೀಯ ಚುನಾವಣಾ ಆಯೋಗ ಸಾಂವಿಧಾನಿಕ, ಶಾಸನಬದ್ಧ ಅಧಿಕಾರ ಹೊಂದಿದೆ - ಸರ್ವೋಚ್ಚ ನ್ಯಾಯಾಲಯ
ಎಸ್ಐಆರ್ ಕೈಗೊಳ್ಳಲು ಭಾರತೀಯ ಚುನಾವಣಾ ಆಯೋಗ ಸಾಂವಿಧಾನಿಕ, ಶಾಸನಬದ್ಧ ಅಧಿಕಾರ ಹೊಂದಿದೆ - ಸರ್ವೋಚ್ಚ ನ್ಯಾಯಾಲಯ

ನ್ಯೂಸ್ MORE NEWS...